Homeಮುಖಪುಟಆತ ಮಸಣದ ಅರ್ಚಕ! ಅತ್ಯಾಚಾರ ಮಾಡಿ ಹೆಣ ಸುಟ್ಟುಹಾಕಿದ- ಬಿ. ಪೀರ್ ಬಾಷ

ಆತ ಮಸಣದ ಅರ್ಚಕ! ಅತ್ಯಾಚಾರ ಮಾಡಿ ಹೆಣ ಸುಟ್ಟುಹಾಕಿದ- ಬಿ. ಪೀರ್ ಬಾಷ

- Advertisement -
- Advertisement -

“ಅಮ್ಮಾ…ಕೇರಂ ಆಡ್ತೀನಮ್ಮಾ” ಎಂದ ಮಗಳಿಗೆ ಕರೆದು, “ಒಂದು ಕೊಡ ನೀರು ತಂದಿಟ್ಟು ಆಡುವಂತೆ ಬಾರೆ” ಎಂದು ಹೇಳಿ, ಕೊಡ ಕೊಟ್ಟು ಕಳಿಸಿದ್ದೇ ತಪ್ಪಾಯ್ತು. ನೀರುತರಲು ಹೋದ ಆ 9 ವರ್ಷದ ಕರುಳ ಕುಡಿ, ಹೆಣವಾಗಿಯೂ ಕಾಣದಂತೆ ಸುಟ್ಟು ಬೂದಿಯಾಗುತ್ತಾಳೆಂದು ಆ ತಾಯಿ ಅಂದುಕೊಂಡಿರಲಿಲ್ಲ. ಅಷ್ಟಕ್ಕೂ ನೀರು ತರಲು ಹೋದ ಆ ಹೆಣ್ಣುಮಗುವನ್ನು ಕಚ್ಚಿಕೊಂದದ್ದು ವಿಷದ ಹಾವಾಗಲಿ, ಕ್ರೂರ ಹುಲಿಯಾಗಲಿ ಅಲ್ಲ. ಬದಲಿಗೆ ಗಂಡು- ಗಂಡಸುತನವೆಂಬ ಕೋರೆ ಪಂಜುಗಳು! ಈ ಕೊರೆ ಪಂಜುಗಳಿಗೆ ಜಾತಿ ಎಂಬ ನಂಜುನಶೆಯೇ ರಾಕ್ಷಸ ಶಕ್ತಿಯಾಯಿತೇ…ಗೊತ್ತಿಲ್ಲ. ಆದರೆ ಹಾಗೆ ಆ ಎಳೆಹುಡುಗಿಯ ಮೇಲೆ ಅತ್ಯಾಚಾರಗೈದವನು ಒಬ್ಬ ಅರ್ಚಕ, ಆತನ ಹೆಸರು ರಾಧೇಶ್ಯಾಮ. ಆತನ ದಾಳಿಗೆ ಜೀವ ಬಿಟ್ಟ ಹುಡುಗಿ ಬಡವರ ಮಗಳು, ದಲಿತ ಸಮುದಾಯದ ಜೀವ ಎಂಬುದಂತೂ ಹೌದು.

ಅತ್ಯಾಚಾರಗೈದು ಮಗಳನ್ನು ಹುಡುಕಲು ಬಂದ ತಾಯಿಗೆ “ಆಗಿದ್ದು ಆಗಿ ಹೋಯ್ತು, ಸುಟ್ಟು ಹಾಕು” ಎಂದವನೇ, ತಾಯಿ ಕೈಗೆ ಹೆಣವನ್ನೂ ಒಪ್ಪಿಸದೇ ತಾನಿರುವ ಜಾಗದಲ್ಲಿಯೇ ಆ ಮಗುವಿನ ಹೆಣಕ್ಕೆ ಬೆಂಕಿ ಇಟ್ಟಿದ್ದಾನೆ. ತಾಯಿ ಜೀವ ಜೋರಾಗಿ ಕೂಗಿ ಕೊಂಡರೆ “ಕೂಗಿ ರಂಪಾಟ ಮಾಡಿ ಕೇಸ್ ಮಾಡಿದರೆ, ಗೆಲ್ಲೋ ತಾಕತ್ತು ನಿನ್ನಲ್ಲಿದೆಯಾ, ಬಾಯಿ ಮುಚ್ವಿಕೊಂಡಿರು” ಎಂದು ಅರ್ಚಕ ಗದರಿಸಿದ್ದಾನೆ.

ಹೆತ್ತ ತಾಯಿಯ ಸಂಕಟದ ಚೀರಾಟಕ್ಕೆ ಕಿಂಚಿತ್ತೂ ಅಳುಕದ, ಮನಕರಗದ ಆ ನೀಚ, ಮುಕ್ಕಾಲು ಪಾಲು ದೇಹವನ್ನು ಬೆಂಕಿಯಲ್ಲಿ‌ ಕರಗಿಸಿದ್ದಾನೆ. ನಂತರ ಸೇರಿದ ಜನ, ಚಿತೆಗೆ ನೀರು ಚೆಲ್ಲಿ ಬೆಂಕಿ ನಂದಿಸಿದಾಗ ಸಿಕ್ಕಿದ್ದು ಆ ಮಗುವಿನ ಪಾದಗಳು ಮತ್ತು ಎಲುಬುಗಳಷ್ಟೆ. ಎಲ್ಲ ಮುಗಿದ ನಂತರ ಬಂದ ಪೊಲೀಸರು ಆ ಸುಟ್ಟ ಮಾಂಸದ ಚೂರುಗಳನ್ನು ವಶಪಡಿಸಿಕೊಂಡು ತನಿಖೆಯ ಮಾತು ‘ಆಡಿದ್ದಾರೆ’.

ಇದನ್ನೂ ಓದಿ: ದೆಹಲಿ: ದಲಿತ ಅಪ್ರಾಪ್ತೆ ಅತ್ಯಾಚಾರ, ಕೊಲೆ ಪ್ರಕರಣ, ಮ್ಯಾಜಿಸ್ಟೀರಿಯಲ್ ತನಿಖೆಗೆ ಕೇಜ್ರಿವಾಲ್ ಆದೇಶ

ದೇಶದ ರಾಜಧಾನಿಯಲ್ಲಿ, ಕೊಡ ನೀರಿಗೆಂದು ಕಳಿಸಿದ ಮಗಳು ಹೆಣವಾಗಿ ಬೆಂಕಿಯಲ್ಲಿ ಸುಡುತ್ತಿರುವುದನ್ನು ಕಂಡು‌ ಸಂಕಟ ಪಟ್ಟ ಆ ತಾಯಿಯನ್ನು, ಮತ್ತು ತಂದೆಯನ್ನೂ ಕರೆದೊಯ್ದು ಆ ಇಡೀರಾತ್ರಿ ಬೇರೆಬೇರೆ ಕೋಣೆಗಳಲ್ಲಿ ಕೂಡಿ ಹಾಕಿ ವಿಚಾರಣೆ ಮಾಡಿದ ಘನಂದಾರಿ ಕಾರ್ಯ ಈ ಪೊಲೀಸರದ್ದು. ಸಿಟ್ಟಿಗೆದ್ದ ಜನರಿಂದ ಬಚಾವು ಮಾಡಲೆಂಬಂತೇನೋ ಅತ್ಯಾಚಾರಿಯೊಂದಿಗೆ ಇನ್ನು ಕೆಲವರನ್ನು ಬಂಧಿಸಿದ್ದಾರೆ ಎಂಬುದೇನೋ ನಿಜ. ಆದರೆ ಇವರ ಮೇಲೆ ಹಾಕಲಾದ ಕೇಸುಗಳು, ಬಂಧನ ಇವೆಲ್ಲಾ ಜನರ ಆಕ್ರೋಶ ತಡೆಯಲು ಮಾಡಿದ ಕ್ರಮಗಳು ಎಂಬ ಬಗ್ಗೆ ಅನುಮಾನ ಪಡಬೇಕಿಲ್ಲ.

ಅದೇ ದೆಹಲಿಯಲ್ಲಿ ನಿರ್ಭಯಾಳಿಗೆ ಹೀಗಾದಾಗ, ಹೈದ್ರಾಬಾದಿನಲ್ಲಿ ಹೀಗಾದಾಗ ಬಂದ ಈ ಮಧ್ಯಮವರ್ಗದ ರೋಷಾವೇಶ, ಸಂಸ್ಕೃತಿ ಸಭ್ಯತೆಗಳು ಈಗ ಯಾವ ಗುಹೆ ಸೇರಿವೆ..? ಈಗೇಕೇ ಮೇಣದ ಬತ್ತಿಗಳು ಹೊತ್ತಿಕೊಳ್ಳುತ್ತಿಲ್ಲ..? ಎಲ್ಲಕ್ಕೂ ಹೆಚ್ಚಾಗಿ ದೇಶದ ವಿದ್ಯಮಾನವನ್ನು “ನಿರ್ಧರಿಸುವ” ಈ ಬಗಲಕುನ್ನಿ ಮಾಧ್ಯಮಗಳ ಗಂಟಲಲ್ಲಿ ಯಾವ ಅಮೇಧ್ಯ ಸಿಕ್ಕಿಕೊಂಡಿದೆ..?

ಅತ್ಯಾಚಾರವನ್ನು ಖಂಡಿಸಲೂ ಜಾತಿ ನೋಡುವಷ್ಟು ಹೇಸಿಗೆಯಾಗಿಬಿಟ್ಟಿದೆಯಾ ಮನಸ್ಸು. ದಲಿತ ಹೆಣ್ಣು ಮಕ್ಕಳಮೇಲೆ ಅತ್ಯಾಚಾರವಾದರೆ ಅದು ಸುದ್ದಿಯೇ ಅಲ್ಲವೇ..? ಏನಾಗಿದೆ ನಮ್ಮ ವಿವೇಕಕ್ಕೆ..? ಈ ದೇಶಕ್ಕೆ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...