Homeಮುಖಪುಟಆತ ಮಸಣದ ಅರ್ಚಕ! ಅತ್ಯಾಚಾರ ಮಾಡಿ ಹೆಣ ಸುಟ್ಟುಹಾಕಿದ- ಬಿ. ಪೀರ್ ಬಾಷ

ಆತ ಮಸಣದ ಅರ್ಚಕ! ಅತ್ಯಾಚಾರ ಮಾಡಿ ಹೆಣ ಸುಟ್ಟುಹಾಕಿದ- ಬಿ. ಪೀರ್ ಬಾಷ

- Advertisement -
- Advertisement -

“ಅಮ್ಮಾ…ಕೇರಂ ಆಡ್ತೀನಮ್ಮಾ” ಎಂದ ಮಗಳಿಗೆ ಕರೆದು, “ಒಂದು ಕೊಡ ನೀರು ತಂದಿಟ್ಟು ಆಡುವಂತೆ ಬಾರೆ” ಎಂದು ಹೇಳಿ, ಕೊಡ ಕೊಟ್ಟು ಕಳಿಸಿದ್ದೇ ತಪ್ಪಾಯ್ತು. ನೀರುತರಲು ಹೋದ ಆ 9 ವರ್ಷದ ಕರುಳ ಕುಡಿ, ಹೆಣವಾಗಿಯೂ ಕಾಣದಂತೆ ಸುಟ್ಟು ಬೂದಿಯಾಗುತ್ತಾಳೆಂದು ಆ ತಾಯಿ ಅಂದುಕೊಂಡಿರಲಿಲ್ಲ. ಅಷ್ಟಕ್ಕೂ ನೀರು ತರಲು ಹೋದ ಆ ಹೆಣ್ಣುಮಗುವನ್ನು ಕಚ್ಚಿಕೊಂದದ್ದು ವಿಷದ ಹಾವಾಗಲಿ, ಕ್ರೂರ ಹುಲಿಯಾಗಲಿ ಅಲ್ಲ. ಬದಲಿಗೆ ಗಂಡು- ಗಂಡಸುತನವೆಂಬ ಕೋರೆ ಪಂಜುಗಳು! ಈ ಕೊರೆ ಪಂಜುಗಳಿಗೆ ಜಾತಿ ಎಂಬ ನಂಜುನಶೆಯೇ ರಾಕ್ಷಸ ಶಕ್ತಿಯಾಯಿತೇ…ಗೊತ್ತಿಲ್ಲ. ಆದರೆ ಹಾಗೆ ಆ ಎಳೆಹುಡುಗಿಯ ಮೇಲೆ ಅತ್ಯಾಚಾರಗೈದವನು ಒಬ್ಬ ಅರ್ಚಕ, ಆತನ ಹೆಸರು ರಾಧೇಶ್ಯಾಮ. ಆತನ ದಾಳಿಗೆ ಜೀವ ಬಿಟ್ಟ ಹುಡುಗಿ ಬಡವರ ಮಗಳು, ದಲಿತ ಸಮುದಾಯದ ಜೀವ ಎಂಬುದಂತೂ ಹೌದು.

ಅತ್ಯಾಚಾರಗೈದು ಮಗಳನ್ನು ಹುಡುಕಲು ಬಂದ ತಾಯಿಗೆ “ಆಗಿದ್ದು ಆಗಿ ಹೋಯ್ತು, ಸುಟ್ಟು ಹಾಕು” ಎಂದವನೇ, ತಾಯಿ ಕೈಗೆ ಹೆಣವನ್ನೂ ಒಪ್ಪಿಸದೇ ತಾನಿರುವ ಜಾಗದಲ್ಲಿಯೇ ಆ ಮಗುವಿನ ಹೆಣಕ್ಕೆ ಬೆಂಕಿ ಇಟ್ಟಿದ್ದಾನೆ. ತಾಯಿ ಜೀವ ಜೋರಾಗಿ ಕೂಗಿ ಕೊಂಡರೆ “ಕೂಗಿ ರಂಪಾಟ ಮಾಡಿ ಕೇಸ್ ಮಾಡಿದರೆ, ಗೆಲ್ಲೋ ತಾಕತ್ತು ನಿನ್ನಲ್ಲಿದೆಯಾ, ಬಾಯಿ ಮುಚ್ವಿಕೊಂಡಿರು” ಎಂದು ಅರ್ಚಕ ಗದರಿಸಿದ್ದಾನೆ.

ಹೆತ್ತ ತಾಯಿಯ ಸಂಕಟದ ಚೀರಾಟಕ್ಕೆ ಕಿಂಚಿತ್ತೂ ಅಳುಕದ, ಮನಕರಗದ ಆ ನೀಚ, ಮುಕ್ಕಾಲು ಪಾಲು ದೇಹವನ್ನು ಬೆಂಕಿಯಲ್ಲಿ‌ ಕರಗಿಸಿದ್ದಾನೆ. ನಂತರ ಸೇರಿದ ಜನ, ಚಿತೆಗೆ ನೀರು ಚೆಲ್ಲಿ ಬೆಂಕಿ ನಂದಿಸಿದಾಗ ಸಿಕ್ಕಿದ್ದು ಆ ಮಗುವಿನ ಪಾದಗಳು ಮತ್ತು ಎಲುಬುಗಳಷ್ಟೆ. ಎಲ್ಲ ಮುಗಿದ ನಂತರ ಬಂದ ಪೊಲೀಸರು ಆ ಸುಟ್ಟ ಮಾಂಸದ ಚೂರುಗಳನ್ನು ವಶಪಡಿಸಿಕೊಂಡು ತನಿಖೆಯ ಮಾತು ‘ಆಡಿದ್ದಾರೆ’.

ಇದನ್ನೂ ಓದಿ: ದೆಹಲಿ: ದಲಿತ ಅಪ್ರಾಪ್ತೆ ಅತ್ಯಾಚಾರ, ಕೊಲೆ ಪ್ರಕರಣ, ಮ್ಯಾಜಿಸ್ಟೀರಿಯಲ್ ತನಿಖೆಗೆ ಕೇಜ್ರಿವಾಲ್ ಆದೇಶ

ದೇಶದ ರಾಜಧಾನಿಯಲ್ಲಿ, ಕೊಡ ನೀರಿಗೆಂದು ಕಳಿಸಿದ ಮಗಳು ಹೆಣವಾಗಿ ಬೆಂಕಿಯಲ್ಲಿ ಸುಡುತ್ತಿರುವುದನ್ನು ಕಂಡು‌ ಸಂಕಟ ಪಟ್ಟ ಆ ತಾಯಿಯನ್ನು, ಮತ್ತು ತಂದೆಯನ್ನೂ ಕರೆದೊಯ್ದು ಆ ಇಡೀರಾತ್ರಿ ಬೇರೆಬೇರೆ ಕೋಣೆಗಳಲ್ಲಿ ಕೂಡಿ ಹಾಕಿ ವಿಚಾರಣೆ ಮಾಡಿದ ಘನಂದಾರಿ ಕಾರ್ಯ ಈ ಪೊಲೀಸರದ್ದು. ಸಿಟ್ಟಿಗೆದ್ದ ಜನರಿಂದ ಬಚಾವು ಮಾಡಲೆಂಬಂತೇನೋ ಅತ್ಯಾಚಾರಿಯೊಂದಿಗೆ ಇನ್ನು ಕೆಲವರನ್ನು ಬಂಧಿಸಿದ್ದಾರೆ ಎಂಬುದೇನೋ ನಿಜ. ಆದರೆ ಇವರ ಮೇಲೆ ಹಾಕಲಾದ ಕೇಸುಗಳು, ಬಂಧನ ಇವೆಲ್ಲಾ ಜನರ ಆಕ್ರೋಶ ತಡೆಯಲು ಮಾಡಿದ ಕ್ರಮಗಳು ಎಂಬ ಬಗ್ಗೆ ಅನುಮಾನ ಪಡಬೇಕಿಲ್ಲ.

ಅದೇ ದೆಹಲಿಯಲ್ಲಿ ನಿರ್ಭಯಾಳಿಗೆ ಹೀಗಾದಾಗ, ಹೈದ್ರಾಬಾದಿನಲ್ಲಿ ಹೀಗಾದಾಗ ಬಂದ ಈ ಮಧ್ಯಮವರ್ಗದ ರೋಷಾವೇಶ, ಸಂಸ್ಕೃತಿ ಸಭ್ಯತೆಗಳು ಈಗ ಯಾವ ಗುಹೆ ಸೇರಿವೆ..? ಈಗೇಕೇ ಮೇಣದ ಬತ್ತಿಗಳು ಹೊತ್ತಿಕೊಳ್ಳುತ್ತಿಲ್ಲ..? ಎಲ್ಲಕ್ಕೂ ಹೆಚ್ಚಾಗಿ ದೇಶದ ವಿದ್ಯಮಾನವನ್ನು “ನಿರ್ಧರಿಸುವ” ಈ ಬಗಲಕುನ್ನಿ ಮಾಧ್ಯಮಗಳ ಗಂಟಲಲ್ಲಿ ಯಾವ ಅಮೇಧ್ಯ ಸಿಕ್ಕಿಕೊಂಡಿದೆ..?

ಅತ್ಯಾಚಾರವನ್ನು ಖಂಡಿಸಲೂ ಜಾತಿ ನೋಡುವಷ್ಟು ಹೇಸಿಗೆಯಾಗಿಬಿಟ್ಟಿದೆಯಾ ಮನಸ್ಸು. ದಲಿತ ಹೆಣ್ಣು ಮಕ್ಕಳಮೇಲೆ ಅತ್ಯಾಚಾರವಾದರೆ ಅದು ಸುದ್ದಿಯೇ ಅಲ್ಲವೇ..? ಏನಾಗಿದೆ ನಮ್ಮ ವಿವೇಕಕ್ಕೆ..? ಈ ದೇಶಕ್ಕೆ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...