Homeಮುಖಪುಟಆತ ಮಸಣದ ಅರ್ಚಕ! ಅತ್ಯಾಚಾರ ಮಾಡಿ ಹೆಣ ಸುಟ್ಟುಹಾಕಿದ- ಬಿ. ಪೀರ್ ಬಾಷ

ಆತ ಮಸಣದ ಅರ್ಚಕ! ಅತ್ಯಾಚಾರ ಮಾಡಿ ಹೆಣ ಸುಟ್ಟುಹಾಕಿದ- ಬಿ. ಪೀರ್ ಬಾಷ

- Advertisement -
- Advertisement -

“ಅಮ್ಮಾ…ಕೇರಂ ಆಡ್ತೀನಮ್ಮಾ” ಎಂದ ಮಗಳಿಗೆ ಕರೆದು, “ಒಂದು ಕೊಡ ನೀರು ತಂದಿಟ್ಟು ಆಡುವಂತೆ ಬಾರೆ” ಎಂದು ಹೇಳಿ, ಕೊಡ ಕೊಟ್ಟು ಕಳಿಸಿದ್ದೇ ತಪ್ಪಾಯ್ತು. ನೀರುತರಲು ಹೋದ ಆ 9 ವರ್ಷದ ಕರುಳ ಕುಡಿ, ಹೆಣವಾಗಿಯೂ ಕಾಣದಂತೆ ಸುಟ್ಟು ಬೂದಿಯಾಗುತ್ತಾಳೆಂದು ಆ ತಾಯಿ ಅಂದುಕೊಂಡಿರಲಿಲ್ಲ. ಅಷ್ಟಕ್ಕೂ ನೀರು ತರಲು ಹೋದ ಆ ಹೆಣ್ಣುಮಗುವನ್ನು ಕಚ್ಚಿಕೊಂದದ್ದು ವಿಷದ ಹಾವಾಗಲಿ, ಕ್ರೂರ ಹುಲಿಯಾಗಲಿ ಅಲ್ಲ. ಬದಲಿಗೆ ಗಂಡು- ಗಂಡಸುತನವೆಂಬ ಕೋರೆ ಪಂಜುಗಳು! ಈ ಕೊರೆ ಪಂಜುಗಳಿಗೆ ಜಾತಿ ಎಂಬ ನಂಜುನಶೆಯೇ ರಾಕ್ಷಸ ಶಕ್ತಿಯಾಯಿತೇ…ಗೊತ್ತಿಲ್ಲ. ಆದರೆ ಹಾಗೆ ಆ ಎಳೆಹುಡುಗಿಯ ಮೇಲೆ ಅತ್ಯಾಚಾರಗೈದವನು ಒಬ್ಬ ಅರ್ಚಕ, ಆತನ ಹೆಸರು ರಾಧೇಶ್ಯಾಮ. ಆತನ ದಾಳಿಗೆ ಜೀವ ಬಿಟ್ಟ ಹುಡುಗಿ ಬಡವರ ಮಗಳು, ದಲಿತ ಸಮುದಾಯದ ಜೀವ ಎಂಬುದಂತೂ ಹೌದು.

ಅತ್ಯಾಚಾರಗೈದು ಮಗಳನ್ನು ಹುಡುಕಲು ಬಂದ ತಾಯಿಗೆ “ಆಗಿದ್ದು ಆಗಿ ಹೋಯ್ತು, ಸುಟ್ಟು ಹಾಕು” ಎಂದವನೇ, ತಾಯಿ ಕೈಗೆ ಹೆಣವನ್ನೂ ಒಪ್ಪಿಸದೇ ತಾನಿರುವ ಜಾಗದಲ್ಲಿಯೇ ಆ ಮಗುವಿನ ಹೆಣಕ್ಕೆ ಬೆಂಕಿ ಇಟ್ಟಿದ್ದಾನೆ. ತಾಯಿ ಜೀವ ಜೋರಾಗಿ ಕೂಗಿ ಕೊಂಡರೆ “ಕೂಗಿ ರಂಪಾಟ ಮಾಡಿ ಕೇಸ್ ಮಾಡಿದರೆ, ಗೆಲ್ಲೋ ತಾಕತ್ತು ನಿನ್ನಲ್ಲಿದೆಯಾ, ಬಾಯಿ ಮುಚ್ವಿಕೊಂಡಿರು” ಎಂದು ಅರ್ಚಕ ಗದರಿಸಿದ್ದಾನೆ.

ಹೆತ್ತ ತಾಯಿಯ ಸಂಕಟದ ಚೀರಾಟಕ್ಕೆ ಕಿಂಚಿತ್ತೂ ಅಳುಕದ, ಮನಕರಗದ ಆ ನೀಚ, ಮುಕ್ಕಾಲು ಪಾಲು ದೇಹವನ್ನು ಬೆಂಕಿಯಲ್ಲಿ‌ ಕರಗಿಸಿದ್ದಾನೆ. ನಂತರ ಸೇರಿದ ಜನ, ಚಿತೆಗೆ ನೀರು ಚೆಲ್ಲಿ ಬೆಂಕಿ ನಂದಿಸಿದಾಗ ಸಿಕ್ಕಿದ್ದು ಆ ಮಗುವಿನ ಪಾದಗಳು ಮತ್ತು ಎಲುಬುಗಳಷ್ಟೆ. ಎಲ್ಲ ಮುಗಿದ ನಂತರ ಬಂದ ಪೊಲೀಸರು ಆ ಸುಟ್ಟ ಮಾಂಸದ ಚೂರುಗಳನ್ನು ವಶಪಡಿಸಿಕೊಂಡು ತನಿಖೆಯ ಮಾತು ‘ಆಡಿದ್ದಾರೆ’.

ಇದನ್ನೂ ಓದಿ: ದೆಹಲಿ: ದಲಿತ ಅಪ್ರಾಪ್ತೆ ಅತ್ಯಾಚಾರ, ಕೊಲೆ ಪ್ರಕರಣ, ಮ್ಯಾಜಿಸ್ಟೀರಿಯಲ್ ತನಿಖೆಗೆ ಕೇಜ್ರಿವಾಲ್ ಆದೇಶ

ದೇಶದ ರಾಜಧಾನಿಯಲ್ಲಿ, ಕೊಡ ನೀರಿಗೆಂದು ಕಳಿಸಿದ ಮಗಳು ಹೆಣವಾಗಿ ಬೆಂಕಿಯಲ್ಲಿ ಸುಡುತ್ತಿರುವುದನ್ನು ಕಂಡು‌ ಸಂಕಟ ಪಟ್ಟ ಆ ತಾಯಿಯನ್ನು, ಮತ್ತು ತಂದೆಯನ್ನೂ ಕರೆದೊಯ್ದು ಆ ಇಡೀರಾತ್ರಿ ಬೇರೆಬೇರೆ ಕೋಣೆಗಳಲ್ಲಿ ಕೂಡಿ ಹಾಕಿ ವಿಚಾರಣೆ ಮಾಡಿದ ಘನಂದಾರಿ ಕಾರ್ಯ ಈ ಪೊಲೀಸರದ್ದು. ಸಿಟ್ಟಿಗೆದ್ದ ಜನರಿಂದ ಬಚಾವು ಮಾಡಲೆಂಬಂತೇನೋ ಅತ್ಯಾಚಾರಿಯೊಂದಿಗೆ ಇನ್ನು ಕೆಲವರನ್ನು ಬಂಧಿಸಿದ್ದಾರೆ ಎಂಬುದೇನೋ ನಿಜ. ಆದರೆ ಇವರ ಮೇಲೆ ಹಾಕಲಾದ ಕೇಸುಗಳು, ಬಂಧನ ಇವೆಲ್ಲಾ ಜನರ ಆಕ್ರೋಶ ತಡೆಯಲು ಮಾಡಿದ ಕ್ರಮಗಳು ಎಂಬ ಬಗ್ಗೆ ಅನುಮಾನ ಪಡಬೇಕಿಲ್ಲ.

ಅದೇ ದೆಹಲಿಯಲ್ಲಿ ನಿರ್ಭಯಾಳಿಗೆ ಹೀಗಾದಾಗ, ಹೈದ್ರಾಬಾದಿನಲ್ಲಿ ಹೀಗಾದಾಗ ಬಂದ ಈ ಮಧ್ಯಮವರ್ಗದ ರೋಷಾವೇಶ, ಸಂಸ್ಕೃತಿ ಸಭ್ಯತೆಗಳು ಈಗ ಯಾವ ಗುಹೆ ಸೇರಿವೆ..? ಈಗೇಕೇ ಮೇಣದ ಬತ್ತಿಗಳು ಹೊತ್ತಿಕೊಳ್ಳುತ್ತಿಲ್ಲ..? ಎಲ್ಲಕ್ಕೂ ಹೆಚ್ಚಾಗಿ ದೇಶದ ವಿದ್ಯಮಾನವನ್ನು “ನಿರ್ಧರಿಸುವ” ಈ ಬಗಲಕುನ್ನಿ ಮಾಧ್ಯಮಗಳ ಗಂಟಲಲ್ಲಿ ಯಾವ ಅಮೇಧ್ಯ ಸಿಕ್ಕಿಕೊಂಡಿದೆ..?

ಅತ್ಯಾಚಾರವನ್ನು ಖಂಡಿಸಲೂ ಜಾತಿ ನೋಡುವಷ್ಟು ಹೇಸಿಗೆಯಾಗಿಬಿಟ್ಟಿದೆಯಾ ಮನಸ್ಸು. ದಲಿತ ಹೆಣ್ಣು ಮಕ್ಕಳಮೇಲೆ ಅತ್ಯಾಚಾರವಾದರೆ ಅದು ಸುದ್ದಿಯೇ ಅಲ್ಲವೇ..? ಏನಾಗಿದೆ ನಮ್ಮ ವಿವೇಕಕ್ಕೆ..? ಈ ದೇಶಕ್ಕೆ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...