Homeಮುಖಪುಟಆತ ಮಸಣದ ಅರ್ಚಕ! ಅತ್ಯಾಚಾರ ಮಾಡಿ ಹೆಣ ಸುಟ್ಟುಹಾಕಿದ- ಬಿ. ಪೀರ್ ಬಾಷ

ಆತ ಮಸಣದ ಅರ್ಚಕ! ಅತ್ಯಾಚಾರ ಮಾಡಿ ಹೆಣ ಸುಟ್ಟುಹಾಕಿದ- ಬಿ. ಪೀರ್ ಬಾಷ

- Advertisement -
- Advertisement -

“ಅಮ್ಮಾ…ಕೇರಂ ಆಡ್ತೀನಮ್ಮಾ” ಎಂದ ಮಗಳಿಗೆ ಕರೆದು, “ಒಂದು ಕೊಡ ನೀರು ತಂದಿಟ್ಟು ಆಡುವಂತೆ ಬಾರೆ” ಎಂದು ಹೇಳಿ, ಕೊಡ ಕೊಟ್ಟು ಕಳಿಸಿದ್ದೇ ತಪ್ಪಾಯ್ತು. ನೀರುತರಲು ಹೋದ ಆ 9 ವರ್ಷದ ಕರುಳ ಕುಡಿ, ಹೆಣವಾಗಿಯೂ ಕಾಣದಂತೆ ಸುಟ್ಟು ಬೂದಿಯಾಗುತ್ತಾಳೆಂದು ಆ ತಾಯಿ ಅಂದುಕೊಂಡಿರಲಿಲ್ಲ. ಅಷ್ಟಕ್ಕೂ ನೀರು ತರಲು ಹೋದ ಆ ಹೆಣ್ಣುಮಗುವನ್ನು ಕಚ್ಚಿಕೊಂದದ್ದು ವಿಷದ ಹಾವಾಗಲಿ, ಕ್ರೂರ ಹುಲಿಯಾಗಲಿ ಅಲ್ಲ. ಬದಲಿಗೆ ಗಂಡು- ಗಂಡಸುತನವೆಂಬ ಕೋರೆ ಪಂಜುಗಳು! ಈ ಕೊರೆ ಪಂಜುಗಳಿಗೆ ಜಾತಿ ಎಂಬ ನಂಜುನಶೆಯೇ ರಾಕ್ಷಸ ಶಕ್ತಿಯಾಯಿತೇ…ಗೊತ್ತಿಲ್ಲ. ಆದರೆ ಹಾಗೆ ಆ ಎಳೆಹುಡುಗಿಯ ಮೇಲೆ ಅತ್ಯಾಚಾರಗೈದವನು ಒಬ್ಬ ಅರ್ಚಕ, ಆತನ ಹೆಸರು ರಾಧೇಶ್ಯಾಮ. ಆತನ ದಾಳಿಗೆ ಜೀವ ಬಿಟ್ಟ ಹುಡುಗಿ ಬಡವರ ಮಗಳು, ದಲಿತ ಸಮುದಾಯದ ಜೀವ ಎಂಬುದಂತೂ ಹೌದು.

ಅತ್ಯಾಚಾರಗೈದು ಮಗಳನ್ನು ಹುಡುಕಲು ಬಂದ ತಾಯಿಗೆ “ಆಗಿದ್ದು ಆಗಿ ಹೋಯ್ತು, ಸುಟ್ಟು ಹಾಕು” ಎಂದವನೇ, ತಾಯಿ ಕೈಗೆ ಹೆಣವನ್ನೂ ಒಪ್ಪಿಸದೇ ತಾನಿರುವ ಜಾಗದಲ್ಲಿಯೇ ಆ ಮಗುವಿನ ಹೆಣಕ್ಕೆ ಬೆಂಕಿ ಇಟ್ಟಿದ್ದಾನೆ. ತಾಯಿ ಜೀವ ಜೋರಾಗಿ ಕೂಗಿ ಕೊಂಡರೆ “ಕೂಗಿ ರಂಪಾಟ ಮಾಡಿ ಕೇಸ್ ಮಾಡಿದರೆ, ಗೆಲ್ಲೋ ತಾಕತ್ತು ನಿನ್ನಲ್ಲಿದೆಯಾ, ಬಾಯಿ ಮುಚ್ವಿಕೊಂಡಿರು” ಎಂದು ಅರ್ಚಕ ಗದರಿಸಿದ್ದಾನೆ.

ಹೆತ್ತ ತಾಯಿಯ ಸಂಕಟದ ಚೀರಾಟಕ್ಕೆ ಕಿಂಚಿತ್ತೂ ಅಳುಕದ, ಮನಕರಗದ ಆ ನೀಚ, ಮುಕ್ಕಾಲು ಪಾಲು ದೇಹವನ್ನು ಬೆಂಕಿಯಲ್ಲಿ‌ ಕರಗಿಸಿದ್ದಾನೆ. ನಂತರ ಸೇರಿದ ಜನ, ಚಿತೆಗೆ ನೀರು ಚೆಲ್ಲಿ ಬೆಂಕಿ ನಂದಿಸಿದಾಗ ಸಿಕ್ಕಿದ್ದು ಆ ಮಗುವಿನ ಪಾದಗಳು ಮತ್ತು ಎಲುಬುಗಳಷ್ಟೆ. ಎಲ್ಲ ಮುಗಿದ ನಂತರ ಬಂದ ಪೊಲೀಸರು ಆ ಸುಟ್ಟ ಮಾಂಸದ ಚೂರುಗಳನ್ನು ವಶಪಡಿಸಿಕೊಂಡು ತನಿಖೆಯ ಮಾತು ‘ಆಡಿದ್ದಾರೆ’.

ಇದನ್ನೂ ಓದಿ: ದೆಹಲಿ: ದಲಿತ ಅಪ್ರಾಪ್ತೆ ಅತ್ಯಾಚಾರ, ಕೊಲೆ ಪ್ರಕರಣ, ಮ್ಯಾಜಿಸ್ಟೀರಿಯಲ್ ತನಿಖೆಗೆ ಕೇಜ್ರಿವಾಲ್ ಆದೇಶ

ದೇಶದ ರಾಜಧಾನಿಯಲ್ಲಿ, ಕೊಡ ನೀರಿಗೆಂದು ಕಳಿಸಿದ ಮಗಳು ಹೆಣವಾಗಿ ಬೆಂಕಿಯಲ್ಲಿ ಸುಡುತ್ತಿರುವುದನ್ನು ಕಂಡು‌ ಸಂಕಟ ಪಟ್ಟ ಆ ತಾಯಿಯನ್ನು, ಮತ್ತು ತಂದೆಯನ್ನೂ ಕರೆದೊಯ್ದು ಆ ಇಡೀರಾತ್ರಿ ಬೇರೆಬೇರೆ ಕೋಣೆಗಳಲ್ಲಿ ಕೂಡಿ ಹಾಕಿ ವಿಚಾರಣೆ ಮಾಡಿದ ಘನಂದಾರಿ ಕಾರ್ಯ ಈ ಪೊಲೀಸರದ್ದು. ಸಿಟ್ಟಿಗೆದ್ದ ಜನರಿಂದ ಬಚಾವು ಮಾಡಲೆಂಬಂತೇನೋ ಅತ್ಯಾಚಾರಿಯೊಂದಿಗೆ ಇನ್ನು ಕೆಲವರನ್ನು ಬಂಧಿಸಿದ್ದಾರೆ ಎಂಬುದೇನೋ ನಿಜ. ಆದರೆ ಇವರ ಮೇಲೆ ಹಾಕಲಾದ ಕೇಸುಗಳು, ಬಂಧನ ಇವೆಲ್ಲಾ ಜನರ ಆಕ್ರೋಶ ತಡೆಯಲು ಮಾಡಿದ ಕ್ರಮಗಳು ಎಂಬ ಬಗ್ಗೆ ಅನುಮಾನ ಪಡಬೇಕಿಲ್ಲ.

ಅದೇ ದೆಹಲಿಯಲ್ಲಿ ನಿರ್ಭಯಾಳಿಗೆ ಹೀಗಾದಾಗ, ಹೈದ್ರಾಬಾದಿನಲ್ಲಿ ಹೀಗಾದಾಗ ಬಂದ ಈ ಮಧ್ಯಮವರ್ಗದ ರೋಷಾವೇಶ, ಸಂಸ್ಕೃತಿ ಸಭ್ಯತೆಗಳು ಈಗ ಯಾವ ಗುಹೆ ಸೇರಿವೆ..? ಈಗೇಕೇ ಮೇಣದ ಬತ್ತಿಗಳು ಹೊತ್ತಿಕೊಳ್ಳುತ್ತಿಲ್ಲ..? ಎಲ್ಲಕ್ಕೂ ಹೆಚ್ಚಾಗಿ ದೇಶದ ವಿದ್ಯಮಾನವನ್ನು “ನಿರ್ಧರಿಸುವ” ಈ ಬಗಲಕುನ್ನಿ ಮಾಧ್ಯಮಗಳ ಗಂಟಲಲ್ಲಿ ಯಾವ ಅಮೇಧ್ಯ ಸಿಕ್ಕಿಕೊಂಡಿದೆ..?

ಅತ್ಯಾಚಾರವನ್ನು ಖಂಡಿಸಲೂ ಜಾತಿ ನೋಡುವಷ್ಟು ಹೇಸಿಗೆಯಾಗಿಬಿಟ್ಟಿದೆಯಾ ಮನಸ್ಸು. ದಲಿತ ಹೆಣ್ಣು ಮಕ್ಕಳಮೇಲೆ ಅತ್ಯಾಚಾರವಾದರೆ ಅದು ಸುದ್ದಿಯೇ ಅಲ್ಲವೇ..? ಏನಾಗಿದೆ ನಮ್ಮ ವಿವೇಕಕ್ಕೆ..? ಈ ದೇಶಕ್ಕೆ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...