Homeಮುಖಪುಟಮೆಹ್ರೌಲಿಯಲ್ಲಿ 'ಅಕ್ರಮವೆಂದು' DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

- Advertisement -
- Advertisement -

ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ‘ಅಕ್ರಮ ಕಟ್ಟಡ’ ಎಂದು ಇತಿಹಾಸ ಪ್ರಸಿದ್ಧ ಅಖೂಂಡ್ಜಿ ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿದೆ. ಆದರೆ ASI ದಾಖಲೆಗಳು ಮಸೀದಿ 700ವರ್ಷಗಳಷ್ಟು ಹಳೆಯದು ಎನ್ನುವುದನ್ನು ಬಹಿರಂಗಗೊಳಿಸುತ್ತದೆ.

ಜ.30ರಂದು, ಇಮಾಮ್ ಜಾಕಿರ್ ಹುಸೇನ್ ಎಂದಿನಂತೆ ಮೆಹ್ರೌಲಿಯಲ್ಲಿರುವ 13ನೇ ಶತಮಾನದ ಮಸೀದಿಯಾದ ಅಖೂಂಡ್ಜಿ ಮಸೀದಿಯಲ್ಲಿ ಬೆಳಗಿನ ಪ್ರಾರ್ಥನೆಯನ್ನು ನಡೆಸಲು ತಯಾರಾಗುತ್ತಿದ್ದಾಗ, ಬುಲ್ಡೋಜರ್‌ಗಳು ಬಂದಿದೆ. ಕೆಲವೇ ಗಂಟೆಗಳಲ್ಲಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ)ಅಖೂಂಡ್ಜಿ ಮಸೀದಿ ಮತ್ತು ಬೆಹ್ರುಲ್ ಉಲೂಮ್ ಮದರಸಾ ಸೇರಿದಂತೆ ಸಂಪೂರ್ಣ ಆವರಣವನ್ನು ಮತ್ತು ಸ್ಮಶಾನದಲ್ಲಿನ ಹಲವಾರು ಸಮಾಧಿಗಳನ್ನು ನೆಲಸಮ ಮಾಡಿದೆ.

ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕುತುಬ್ ಮಿನಾರ್‌ನಿಂದ ಸರಿಸುಮಾರು ಅರ್ಧ ಕಿಲೋಮೀಟರ್  ದೂರದಲ್ಲಿ ಈ ಮಸೀದಿ ಇದೆ. ರಜಿಯಾ ಸುಲ್ತಾನ ಆಳ್ವಿಕೆಯಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ. ಈ ಮಸೀದಿಯು 600-700 ವರ್ಷಗಳಷ್ಟು ಹಳೆಯದಾಗಿದೆ ಎಂದು ಕೆಲವರು ಹೇಳುತ್ತಾರೆ. ಮೆಹ್ರಾಲಿಯಲ್ಲಿನ ಅಖೂಂಡ್ಜಿ ಮಸೀದಿಯನ್ನು ಯಾವಾಗ ನಿರ್ಮಿಸಲಾಯಿತು ಎಂಬುವುದರ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ, 1922ರ ಪ್ರಕಟಣೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಅಧಿಕಾರಿಯೊಬ್ಬರು, ಮಸೀದಿಯ ನಿರ್ಮಾಣ ದಿನಾಂಕ ತಿಳಿದಿಲ್ಲವಾದರೂ ಅದನ್ನು 1853ರಲ್ಲಿ ಮಸೀದಿಯನ್ನು ದುರಸ್ತಿ ಮಾಡಲಾಗಿದೆ ಎಂದು ದಾಖಲಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಜನವರಿ 30ರಂದು, ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಅಖೂಂಡ್ಜಿ ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿತು, ಅವುಗಳನ್ನು ಸಂಜಯ್ ವಾನ್, ಮೀಸಲು ಅರಣ್ಯ ಪ್ರದೇಶದಲ್ಲಿದ್ದ “ಅಕ್ರಮ ಕಟ್ಟಡ” ಎಂದು ಹೇಳಿದೆ. ಜನವರಿ 31ರಂದು ದೆಹಲಿ ಹೈಕೋರ್ಟ್, ಮಸೀದಿಯನ್ನು ಕೆಡವಿರುವ ಬಗ್ಗೆ DDAಯಿಂದ ವಿವರಣೆಯನ್ನು ಕೇಳಿದೆ ಮತ್ತು ಮಸೀದಿಯನ್ನು ಕೆಡವುವ ಮೊದಲು ಯಾವುದೇ ಪೂರ್ವ ಸೂಚನೆ ನೀಡಲಾಗಿದೆಯೇ ಎಂದು ಪ್ರಶ್ನಿಸಿದೆ. ಒಂದು ವಾರದೊಳಗೆ ಈ ಬಗ್ಗೆ ಉತ್ತರಿಸುವಂತೆ ಡಿಡಿಎಗೆ ಹೈಕೋರ್ಟ್ ತಿಳಿಸಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ನಿಗದಿಪಡಿಸಲಾಗಿದೆ.

1994ರಲ್ಲಿ ಸಂಜಯ್‌ ವ್ಯಾನ್‌ ಪ್ರದೇಶಕ್ಕೆ ಮೀಸಲು ಅರಣ್ಯ ಪ್ರದೇಶವೆಂದು ಅಧಿಸೂಚನೆ ಹೊರಡಿಸಲಾಗಿದ್ದು, ಹಳೆ ಮಸೀದಿ ಹೇಗೆ ಅತಿಕ್ರಮಣವಾಗುತ್ತದೆ ಎಂದು ಇತಿಹಾಸಕಾರರು ಮತ್ತು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಸಂಜಯ್ ವ್ಯಾನ್ ಕುರಿತು DDAಯ ಸ್ವಂತ ದಾಖಲೆಯು, ಸಂಜಯ್ ವ್ಯಾನ್ ದೆಹಲಿಯ ಮೆಹ್ರೌಲಿ/ದಕ್ಷಿಣ ಮಧ್ಯ ಪರ್ವತದ ಒಂದು ಭಾಗವಾಗಿದೆ. ಭಾರತೀಯ ಅರಣ್ಯ ಕಾಯಿದೆ 1927ರ ಸೆಕ್ಷನ್ 4 ರ ಅಡಿಯಲ್ಲಿ 1994 ರ ಅಧಿಸೂಚನೆಯ ಪ್ರಕಾರ ಅಧಿಸೂಚಿತ ಮೀಸಲು ಅರಣ್ಯ ಎಂದು ಘೋಷಿಸಲಾಗಿದೆ. ಆದರೆ ಮಸೀದಿ ಈ ಘೋಷಣೆಗೆ ಮೊದಲೇ ಅಲ್ಲಿ ಇತ್ತು ಎನ್ನುವುದನ್ನು ದಾಖಲೆಗಳು ಬಹಿರಂಗಪಡಿಸುತ್ತಿದೆ.

1922ರಲ್ಲಿ ಪ್ರಕಟವಾದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಸಹಾಯಕ ಅಧೀಕ್ಷಕ ಮೌಲ್ವಿ ಜಾಫರ್ ಹಸನ್ ಅವರ ‘ಮುಹಮ್ಮದನ್ ಮತ್ತು ಹಿಂದೂ ಸ್ಮಾರಕಗಳ ಪಟ್ಟಿ ಸಂಪುಟ III’ ಪ್ರಕಾರ, ಅಖೋಂಡ್ಜಿ ಮಸೀದಿ ಈದ್ಗಾದ ಪಶ್ಚಿಮಕ್ಕೆ ಇದ್ದು, 1398ರಲ್ಲಿ ತೈಮೂರ್ ಭಾರತವನ್ನು ಆಕ್ರಮಿಸಿದಾಗ ಅಸ್ತಿತ್ವದಲ್ಲಿತ್ತು ಎಂದು ಹೇಳುತ್ತದೆ.

ಲೇಖಕ ಸೊಹೈಲ್ ಹಶ್ಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಮಸೀದಿ ಕಾರ್ಯ ನಿರ್ವಹಿಸುತ್ತಿತ್ತು ಮತ್ತು 1994ರಲ್ಲಿ ಸಂಜಯ್ ವಾನ್ ಅರಣ್ಯ ಭೂಮಿ ಅಸ್ತಿತ್ವಕ್ಕೆ ಬರುವ ಮೊದಲು ಇದು ಅಸ್ತಿತ್ವದಲ್ಲಿತ್ತು ಮತ್ತು ಆದ್ದರಿಂದ ಈ ಕಟ್ಟಡಗಳು ಅತಿಕ್ರಮಣವಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...