Homeಮುಖಪುಟಮೆಹ್ರೌಲಿಯಲ್ಲಿ 'ಅಕ್ರಮವೆಂದು' DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

- Advertisement -
- Advertisement -

ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ‘ಅಕ್ರಮ ಕಟ್ಟಡ’ ಎಂದು ಇತಿಹಾಸ ಪ್ರಸಿದ್ಧ ಅಖೂಂಡ್ಜಿ ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿದೆ. ಆದರೆ ASI ದಾಖಲೆಗಳು ಮಸೀದಿ 700ವರ್ಷಗಳಷ್ಟು ಹಳೆಯದು ಎನ್ನುವುದನ್ನು ಬಹಿರಂಗಗೊಳಿಸುತ್ತದೆ.

ಜ.30ರಂದು, ಇಮಾಮ್ ಜಾಕಿರ್ ಹುಸೇನ್ ಎಂದಿನಂತೆ ಮೆಹ್ರೌಲಿಯಲ್ಲಿರುವ 13ನೇ ಶತಮಾನದ ಮಸೀದಿಯಾದ ಅಖೂಂಡ್ಜಿ ಮಸೀದಿಯಲ್ಲಿ ಬೆಳಗಿನ ಪ್ರಾರ್ಥನೆಯನ್ನು ನಡೆಸಲು ತಯಾರಾಗುತ್ತಿದ್ದಾಗ, ಬುಲ್ಡೋಜರ್‌ಗಳು ಬಂದಿದೆ. ಕೆಲವೇ ಗಂಟೆಗಳಲ್ಲಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ)ಅಖೂಂಡ್ಜಿ ಮಸೀದಿ ಮತ್ತು ಬೆಹ್ರುಲ್ ಉಲೂಮ್ ಮದರಸಾ ಸೇರಿದಂತೆ ಸಂಪೂರ್ಣ ಆವರಣವನ್ನು ಮತ್ತು ಸ್ಮಶಾನದಲ್ಲಿನ ಹಲವಾರು ಸಮಾಧಿಗಳನ್ನು ನೆಲಸಮ ಮಾಡಿದೆ.

ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕುತುಬ್ ಮಿನಾರ್‌ನಿಂದ ಸರಿಸುಮಾರು ಅರ್ಧ ಕಿಲೋಮೀಟರ್  ದೂರದಲ್ಲಿ ಈ ಮಸೀದಿ ಇದೆ. ರಜಿಯಾ ಸುಲ್ತಾನ ಆಳ್ವಿಕೆಯಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ. ಈ ಮಸೀದಿಯು 600-700 ವರ್ಷಗಳಷ್ಟು ಹಳೆಯದಾಗಿದೆ ಎಂದು ಕೆಲವರು ಹೇಳುತ್ತಾರೆ. ಮೆಹ್ರಾಲಿಯಲ್ಲಿನ ಅಖೂಂಡ್ಜಿ ಮಸೀದಿಯನ್ನು ಯಾವಾಗ ನಿರ್ಮಿಸಲಾಯಿತು ಎಂಬುವುದರ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ, 1922ರ ಪ್ರಕಟಣೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಅಧಿಕಾರಿಯೊಬ್ಬರು, ಮಸೀದಿಯ ನಿರ್ಮಾಣ ದಿನಾಂಕ ತಿಳಿದಿಲ್ಲವಾದರೂ ಅದನ್ನು 1853ರಲ್ಲಿ ಮಸೀದಿಯನ್ನು ದುರಸ್ತಿ ಮಾಡಲಾಗಿದೆ ಎಂದು ದಾಖಲಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಜನವರಿ 30ರಂದು, ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಅಖೂಂಡ್ಜಿ ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿತು, ಅವುಗಳನ್ನು ಸಂಜಯ್ ವಾನ್, ಮೀಸಲು ಅರಣ್ಯ ಪ್ರದೇಶದಲ್ಲಿದ್ದ “ಅಕ್ರಮ ಕಟ್ಟಡ” ಎಂದು ಹೇಳಿದೆ. ಜನವರಿ 31ರಂದು ದೆಹಲಿ ಹೈಕೋರ್ಟ್, ಮಸೀದಿಯನ್ನು ಕೆಡವಿರುವ ಬಗ್ಗೆ DDAಯಿಂದ ವಿವರಣೆಯನ್ನು ಕೇಳಿದೆ ಮತ್ತು ಮಸೀದಿಯನ್ನು ಕೆಡವುವ ಮೊದಲು ಯಾವುದೇ ಪೂರ್ವ ಸೂಚನೆ ನೀಡಲಾಗಿದೆಯೇ ಎಂದು ಪ್ರಶ್ನಿಸಿದೆ. ಒಂದು ವಾರದೊಳಗೆ ಈ ಬಗ್ಗೆ ಉತ್ತರಿಸುವಂತೆ ಡಿಡಿಎಗೆ ಹೈಕೋರ್ಟ್ ತಿಳಿಸಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ನಿಗದಿಪಡಿಸಲಾಗಿದೆ.

1994ರಲ್ಲಿ ಸಂಜಯ್‌ ವ್ಯಾನ್‌ ಪ್ರದೇಶಕ್ಕೆ ಮೀಸಲು ಅರಣ್ಯ ಪ್ರದೇಶವೆಂದು ಅಧಿಸೂಚನೆ ಹೊರಡಿಸಲಾಗಿದ್ದು, ಹಳೆ ಮಸೀದಿ ಹೇಗೆ ಅತಿಕ್ರಮಣವಾಗುತ್ತದೆ ಎಂದು ಇತಿಹಾಸಕಾರರು ಮತ್ತು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಸಂಜಯ್ ವ್ಯಾನ್ ಕುರಿತು DDAಯ ಸ್ವಂತ ದಾಖಲೆಯು, ಸಂಜಯ್ ವ್ಯಾನ್ ದೆಹಲಿಯ ಮೆಹ್ರೌಲಿ/ದಕ್ಷಿಣ ಮಧ್ಯ ಪರ್ವತದ ಒಂದು ಭಾಗವಾಗಿದೆ. ಭಾರತೀಯ ಅರಣ್ಯ ಕಾಯಿದೆ 1927ರ ಸೆಕ್ಷನ್ 4 ರ ಅಡಿಯಲ್ಲಿ 1994 ರ ಅಧಿಸೂಚನೆಯ ಪ್ರಕಾರ ಅಧಿಸೂಚಿತ ಮೀಸಲು ಅರಣ್ಯ ಎಂದು ಘೋಷಿಸಲಾಗಿದೆ. ಆದರೆ ಮಸೀದಿ ಈ ಘೋಷಣೆಗೆ ಮೊದಲೇ ಅಲ್ಲಿ ಇತ್ತು ಎನ್ನುವುದನ್ನು ದಾಖಲೆಗಳು ಬಹಿರಂಗಪಡಿಸುತ್ತಿದೆ.

1922ರಲ್ಲಿ ಪ್ರಕಟವಾದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಸಹಾಯಕ ಅಧೀಕ್ಷಕ ಮೌಲ್ವಿ ಜಾಫರ್ ಹಸನ್ ಅವರ ‘ಮುಹಮ್ಮದನ್ ಮತ್ತು ಹಿಂದೂ ಸ್ಮಾರಕಗಳ ಪಟ್ಟಿ ಸಂಪುಟ III’ ಪ್ರಕಾರ, ಅಖೋಂಡ್ಜಿ ಮಸೀದಿ ಈದ್ಗಾದ ಪಶ್ಚಿಮಕ್ಕೆ ಇದ್ದು, 1398ರಲ್ಲಿ ತೈಮೂರ್ ಭಾರತವನ್ನು ಆಕ್ರಮಿಸಿದಾಗ ಅಸ್ತಿತ್ವದಲ್ಲಿತ್ತು ಎಂದು ಹೇಳುತ್ತದೆ.

ಲೇಖಕ ಸೊಹೈಲ್ ಹಶ್ಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಮಸೀದಿ ಕಾರ್ಯ ನಿರ್ವಹಿಸುತ್ತಿತ್ತು ಮತ್ತು 1994ರಲ್ಲಿ ಸಂಜಯ್ ವಾನ್ ಅರಣ್ಯ ಭೂಮಿ ಅಸ್ತಿತ್ವಕ್ಕೆ ಬರುವ ಮೊದಲು ಇದು ಅಸ್ತಿತ್ವದಲ್ಲಿತ್ತು ಮತ್ತು ಆದ್ದರಿಂದ ಈ ಕಟ್ಟಡಗಳು ಅತಿಕ್ರಮಣವಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...