Homeಮುಖಪುಟಮೆಹ್ರೌಲಿಯಲ್ಲಿ 'ಅಕ್ರಮವೆಂದು' DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

- Advertisement -
- Advertisement -

ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ‘ಅಕ್ರಮ ಕಟ್ಟಡ’ ಎಂದು ಇತಿಹಾಸ ಪ್ರಸಿದ್ಧ ಅಖೂಂಡ್ಜಿ ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿದೆ. ಆದರೆ ASI ದಾಖಲೆಗಳು ಮಸೀದಿ 700ವರ್ಷಗಳಷ್ಟು ಹಳೆಯದು ಎನ್ನುವುದನ್ನು ಬಹಿರಂಗಗೊಳಿಸುತ್ತದೆ.

ಜ.30ರಂದು, ಇಮಾಮ್ ಜಾಕಿರ್ ಹುಸೇನ್ ಎಂದಿನಂತೆ ಮೆಹ್ರೌಲಿಯಲ್ಲಿರುವ 13ನೇ ಶತಮಾನದ ಮಸೀದಿಯಾದ ಅಖೂಂಡ್ಜಿ ಮಸೀದಿಯಲ್ಲಿ ಬೆಳಗಿನ ಪ್ರಾರ್ಥನೆಯನ್ನು ನಡೆಸಲು ತಯಾರಾಗುತ್ತಿದ್ದಾಗ, ಬುಲ್ಡೋಜರ್‌ಗಳು ಬಂದಿದೆ. ಕೆಲವೇ ಗಂಟೆಗಳಲ್ಲಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ)ಅಖೂಂಡ್ಜಿ ಮಸೀದಿ ಮತ್ತು ಬೆಹ್ರುಲ್ ಉಲೂಮ್ ಮದರಸಾ ಸೇರಿದಂತೆ ಸಂಪೂರ್ಣ ಆವರಣವನ್ನು ಮತ್ತು ಸ್ಮಶಾನದಲ್ಲಿನ ಹಲವಾರು ಸಮಾಧಿಗಳನ್ನು ನೆಲಸಮ ಮಾಡಿದೆ.

ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕುತುಬ್ ಮಿನಾರ್‌ನಿಂದ ಸರಿಸುಮಾರು ಅರ್ಧ ಕಿಲೋಮೀಟರ್  ದೂರದಲ್ಲಿ ಈ ಮಸೀದಿ ಇದೆ. ರಜಿಯಾ ಸುಲ್ತಾನ ಆಳ್ವಿಕೆಯಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ. ಈ ಮಸೀದಿಯು 600-700 ವರ್ಷಗಳಷ್ಟು ಹಳೆಯದಾಗಿದೆ ಎಂದು ಕೆಲವರು ಹೇಳುತ್ತಾರೆ. ಮೆಹ್ರಾಲಿಯಲ್ಲಿನ ಅಖೂಂಡ್ಜಿ ಮಸೀದಿಯನ್ನು ಯಾವಾಗ ನಿರ್ಮಿಸಲಾಯಿತು ಎಂಬುವುದರ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ, 1922ರ ಪ್ರಕಟಣೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಅಧಿಕಾರಿಯೊಬ್ಬರು, ಮಸೀದಿಯ ನಿರ್ಮಾಣ ದಿನಾಂಕ ತಿಳಿದಿಲ್ಲವಾದರೂ ಅದನ್ನು 1853ರಲ್ಲಿ ಮಸೀದಿಯನ್ನು ದುರಸ್ತಿ ಮಾಡಲಾಗಿದೆ ಎಂದು ದಾಖಲಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಜನವರಿ 30ರಂದು, ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಅಖೂಂಡ್ಜಿ ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿತು, ಅವುಗಳನ್ನು ಸಂಜಯ್ ವಾನ್, ಮೀಸಲು ಅರಣ್ಯ ಪ್ರದೇಶದಲ್ಲಿದ್ದ “ಅಕ್ರಮ ಕಟ್ಟಡ” ಎಂದು ಹೇಳಿದೆ. ಜನವರಿ 31ರಂದು ದೆಹಲಿ ಹೈಕೋರ್ಟ್, ಮಸೀದಿಯನ್ನು ಕೆಡವಿರುವ ಬಗ್ಗೆ DDAಯಿಂದ ವಿವರಣೆಯನ್ನು ಕೇಳಿದೆ ಮತ್ತು ಮಸೀದಿಯನ್ನು ಕೆಡವುವ ಮೊದಲು ಯಾವುದೇ ಪೂರ್ವ ಸೂಚನೆ ನೀಡಲಾಗಿದೆಯೇ ಎಂದು ಪ್ರಶ್ನಿಸಿದೆ. ಒಂದು ವಾರದೊಳಗೆ ಈ ಬಗ್ಗೆ ಉತ್ತರಿಸುವಂತೆ ಡಿಡಿಎಗೆ ಹೈಕೋರ್ಟ್ ತಿಳಿಸಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ನಿಗದಿಪಡಿಸಲಾಗಿದೆ.

1994ರಲ್ಲಿ ಸಂಜಯ್‌ ವ್ಯಾನ್‌ ಪ್ರದೇಶಕ್ಕೆ ಮೀಸಲು ಅರಣ್ಯ ಪ್ರದೇಶವೆಂದು ಅಧಿಸೂಚನೆ ಹೊರಡಿಸಲಾಗಿದ್ದು, ಹಳೆ ಮಸೀದಿ ಹೇಗೆ ಅತಿಕ್ರಮಣವಾಗುತ್ತದೆ ಎಂದು ಇತಿಹಾಸಕಾರರು ಮತ್ತು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಸಂಜಯ್ ವ್ಯಾನ್ ಕುರಿತು DDAಯ ಸ್ವಂತ ದಾಖಲೆಯು, ಸಂಜಯ್ ವ್ಯಾನ್ ದೆಹಲಿಯ ಮೆಹ್ರೌಲಿ/ದಕ್ಷಿಣ ಮಧ್ಯ ಪರ್ವತದ ಒಂದು ಭಾಗವಾಗಿದೆ. ಭಾರತೀಯ ಅರಣ್ಯ ಕಾಯಿದೆ 1927ರ ಸೆಕ್ಷನ್ 4 ರ ಅಡಿಯಲ್ಲಿ 1994 ರ ಅಧಿಸೂಚನೆಯ ಪ್ರಕಾರ ಅಧಿಸೂಚಿತ ಮೀಸಲು ಅರಣ್ಯ ಎಂದು ಘೋಷಿಸಲಾಗಿದೆ. ಆದರೆ ಮಸೀದಿ ಈ ಘೋಷಣೆಗೆ ಮೊದಲೇ ಅಲ್ಲಿ ಇತ್ತು ಎನ್ನುವುದನ್ನು ದಾಖಲೆಗಳು ಬಹಿರಂಗಪಡಿಸುತ್ತಿದೆ.

1922ರಲ್ಲಿ ಪ್ರಕಟವಾದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಸಹಾಯಕ ಅಧೀಕ್ಷಕ ಮೌಲ್ವಿ ಜಾಫರ್ ಹಸನ್ ಅವರ ‘ಮುಹಮ್ಮದನ್ ಮತ್ತು ಹಿಂದೂ ಸ್ಮಾರಕಗಳ ಪಟ್ಟಿ ಸಂಪುಟ III’ ಪ್ರಕಾರ, ಅಖೋಂಡ್ಜಿ ಮಸೀದಿ ಈದ್ಗಾದ ಪಶ್ಚಿಮಕ್ಕೆ ಇದ್ದು, 1398ರಲ್ಲಿ ತೈಮೂರ್ ಭಾರತವನ್ನು ಆಕ್ರಮಿಸಿದಾಗ ಅಸ್ತಿತ್ವದಲ್ಲಿತ್ತು ಎಂದು ಹೇಳುತ್ತದೆ.

ಲೇಖಕ ಸೊಹೈಲ್ ಹಶ್ಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಮಸೀದಿ ಕಾರ್ಯ ನಿರ್ವಹಿಸುತ್ತಿತ್ತು ಮತ್ತು 1994ರಲ್ಲಿ ಸಂಜಯ್ ವಾನ್ ಅರಣ್ಯ ಭೂಮಿ ಅಸ್ತಿತ್ವಕ್ಕೆ ಬರುವ ಮೊದಲು ಇದು ಅಸ್ತಿತ್ವದಲ್ಲಿತ್ತು ಮತ್ತು ಆದ್ದರಿಂದ ಈ ಕಟ್ಟಡಗಳು ಅತಿಕ್ರಮಣವಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...