Homeಮುಖಪುಟದೆಹಲಿ: ಪೊಲೀಸರ ಕ್ರಮ ಖಂಡಿಸಿ ಮಧ್ಯರಾತ್ರಿ ವೈದ್ಯರ ಪ್ರತಿಭಟನೆ

ದೆಹಲಿ: ಪೊಲೀಸರ ಕ್ರಮ ಖಂಡಿಸಿ ಮಧ್ಯರಾತ್ರಿ ವೈದ್ಯರ ಪ್ರತಿಭಟನೆ

ನೀಟ್‌ ಪರೀಕ್ಷೆಯ ನಂತರ ಕಾಲೇಜು ಹಂಚಿಕೆ ವಿಳಂಬವನ್ನು ವಿರೋಧಿಸಿ ವೈದ್ಯರು ಪ್ರತಿಭಟಿಸುತ್ತಿದ್ದು, ಸರ್ಕಾರ ಕ್ರಮ ಜರುಗಿಸದಿದ್ದರೆ ಬುಧವಾರ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ವೈದ್ಯರು ನೀಡಿದ್ದಾರೆ.

- Advertisement -
- Advertisement -

ನವ ದೆಹಲಿ: ನೀಟ್‌ ಸ್ನಾತಕೋತ್ತರ ಪರೀಕ್ಷೆಯ ನಂತರ ಕಾಲೇಜು ಹಂಚಿಕೆ ವಿಳಂಬವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದಾಗ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿರುವ ದೆಹಲಿಯ ನಿವಾಸಿ ವೈದ್ಯರ ಗುಂಪುಗಳು ವೈದ್ಯಕೀಯ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿವೆ.

ಒಂದು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್‌‌ನ ​​(ಎಫ್‌‌ಒಆರ್‌ಡಿಎ) 4,000 ಸದಸ್ಯರು ಸೋಮವಾರ ಮಧ್ಯರಾತ್ರಿ ಸರೋಜಿನಿ ನಗರ ಪೊಲೀಸ್ ಠಾಣೆ ಎದುರು ಧರಣಿಯನ್ನು ನಡೆಸಿದ್ದು, ರಾತ್ರಿ ಕರ್ಫ್ಯೂಗೆ ಬದ್ಧರಾಗಿ ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ. ಹಿಂದಿನ ದಿನ ಆರೋಗ್ಯ ಸಚಿವಾಲಯದ ಕಚೇರಿ ಕಡೆಗೆ ಮೆರವಣಿಗೆ ಹೊರಟಾಗ ತಡೆಯಲಾಗಿದೆ ಎಂದು ವೈದ್ಯರು ಆರೋಪಿಸಿದ್ದಾರೆ.

ಎಲ್ಲಾ ಆರ್‌ಡಿಎ ಸಂಘಗಳು ಮತ್ತು ಭಾರತದಾದ್ಯಂತ ಇರುವ ಇತರ ವೈದ್ಯರ ಸಂಘಗಳು ಬುಧವಾರದಿಂದ ಆರೋಗ್ಯ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್ ​​(ಎಫ್‌ಎಐಎಂಎ) ಕರೆ ನೀಡಿದೆ. ಏಮ್ಸ್‌ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಫೋರ್ಡಾಗೆ ಬೆಂಬಲವಾಗಿ ನಿಂತಿದೆ. 24 ಗಂಟೆಗಳ ಒಳಗೆ ಸರ್ಕಾರದಿಂದ ಯಾವುದೇ ಸಮರ್ಪಕ ಪ್ರತಿಕ್ರಿಯೆ ದೊರೆಯದಿದ್ದರೆ ಬುಧವಾರ ಎಲ್ಲಾ ತುರ್ತು ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ವೈದ್ಯರು ಎಚ್ಚರಿಸಿದ್ದಾರೆ.

ವೈದ್ಯಕೀಯ ಭ್ರಾತೃತ್ವಕ್ಕೆ ಇದು “ಕಪ್ಪು ದಿನ” ಎಂದು ವೈದ್ಯರು ಕರೆದಿದ್ದಾರೆ. ಮೆರವಣಿಗೆ ಸಂದರ್ಭದಲ್ಲಿ ಹಲವು ಮಹಿಳಾ ವೈದ್ಯರು ಹಲ್ಲೆಗೊಳಗಾಗಿದ್ದಾರೆ. ಪೊಲೀಸರು ನಮ್ಮನ್ನು ತಡೆದಿದ್ದಾರೆ ಎಂದು ವೈದ್ಯರು ಬೇಸರ ವ್ಯಕ್ತಪಡಿಸಿದ್ದಾರೆ.

ಸಫ್ದರ್‌ಜಂಗ್, ಆರ್‌ಎಂಎಲ್ ಮತ್ತು ಲೇಡಿ ಹಾರ್ಡಿಂಜ್ – ಇತರ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಯ ಮೇಲೆ ವೈದ್ಯರ ಪ್ರತಿಭಟನೆ ಪರಿಣಾಮ ಬೀರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಶೇ. 66ರಷ್ಟು ಸಾಮರ್ಥ್ಯದಲ್ಲಿ ವೈದ್ಯರು ಕೆಲಸ ಮಾಡುತ್ತಿದ್ದಾರೆ. ಹೊಸ ವೈದ್ಯರ ನೇಮಕ ತುರ್ತಾಗಿ ಆಗಬೇಕಿದೆ. ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ ಒಂದು ವರ್ಷದಿಂದ ನೇಮಕಾತಿ ತಡೆಹಿಡಿಯಲಾಗಿದೆ ಎಂದು ಆರೋಪಿಸಿದ್ದಾರೆ.

“ನಾವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು (ಎಂಎಎಂಸಿ) ಕ್ಯಾಂಪಸ್‌ನಿಂದ ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದೇವೆ. ಆದರೆ ನಾವು ಮೆರವಣಿಗೆ ಪ್ರಾರಂಭಿಸಿದ ಕೂಡಲೇ, ಭದ್ರತಾ ಸಿಬ್ಬಂದಿ ನಮ್ಮನ್ನು ತಡೆದರು. ಪೊಲೀಸರ ಕ್ರಮದಿಂದಾಗಿ ಕೆಲವು ಕಿರಿಯ ವೈದ್ಯರು ಗಾಯಗೊಂಡಿದ್ದಾರೆ” ಎಂದು ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸರು, “ಯಾವುದೇ ಬಲ ಪ್ರಯೋಗ ಮಾಡಿಲ್ಲ, ನಿಂದನೀಯ ಭಾಷೆ ಬಳಸಿಲ್ಲ. ಕೇವಲ 12 ಮಂದಿ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು” ಎಂದಿದ್ದಾರೆ.

ಆರರಿಂದ ಎಂಟು ಗಂಟೆಗಳ ಕಾಲ ಪ್ರತಿಭಟನಾಕಾರರು ದೆಹಲಿಯ ಆರ್ಟಿರಿಯಲ್ ಐಟಿಒ ರಸ್ತೆಯ ಒಂದು ಭಾಗವನ್ನು ಸ್ಥಗಿತಗೊಳಿಸಿದರು. ಸ್ಥಳದಿಂದ ದೂರ ಸರಿಯುವಂತೆ ಅವರಿಗೆ ಪದೇ ಪದೇ ಮನವಿ ಮಾಡಲಾಗಿದ್ದರೂ ಅವರು ರಸ್ತೆ ಜಾಮ್ ಮಾಡುವುದನ್ನು ಮುಂದುವರೆಸಿದರು. ನಂತರ, ಐಟಿಒ ಮಾರ್ಗದ ಎರಡೂ ಮಾರ್ಗಗಳನ್ನು ಪ್ರತಿಭಟನಾಕಾರರು ನಿರ್ಬಂಧಿಸಿದರು ಎಂದು ಪೊಲೀಸರು ಆರೋಪಿಸಿದ್ದಾರೆ.

“ನಾವು ಸಂಘದ ಸದಸ್ಯರೊಂದಿಗೆ ಮಾತನಾಡಿದ್ದೇವೆ ಮತ್ತು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಆದರೆ ಅವರು ರಸ್ತೆಗಳನ್ನು ನಿರ್ಬಂಧಿಸುವುದನ್ನು ಮುಂದುವರೆಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಪ್ರತಿಭಟನಾಕಾರರನ್ನು ರಸ್ತೆಯಿಂದ ತೆರೆವುಗೊಳಿಸಲು ಯತ್ನಿಸಿದಾಗ ಅವರು ಪೊಲೀಸ್ ಸಿಬ್ಬಂದಿಯ ಸಮವಸ್ತ್ರವನ್ನು ಹರಿದು ಹಾಕಲು ಯತ್ನಿಸಲಾಯಿತು. ಪೊಲೀಸ್ ವಾಹನಗಳ ಗಾಜು ಒಡೆದು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಪೊಲೀಸರು ದೂರಿದ್ದಾರೆ.

ತಮ್ಮ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸದಿದ್ದಲ್ಲಿ ಸೇವೆಯನ್ನು ತ್ಯಜಿಸಿ “ಸಾಮೂಹಿಕ ರಾಜೀನಾಮೆ” ನೀಡಲು ಸಂಘದ ಸದಸ್ಯರಲ್ಲಿ ಕೋರಲಾಗುವುದು ಎಂದು ನಿವಾಸಿ ವೈದ್ಯರ ಸಂಘ ಎಚ್ಚರಿಸಿದೆ.


ಇದನ್ನೂ ಓದಿರಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...