Homeಮುಖಪುಟದೆಹಲಿ: ಪೊಲೀಸರ ಕ್ರಮ ಖಂಡಿಸಿ ಮಧ್ಯರಾತ್ರಿ ವೈದ್ಯರ ಪ್ರತಿಭಟನೆ

ದೆಹಲಿ: ಪೊಲೀಸರ ಕ್ರಮ ಖಂಡಿಸಿ ಮಧ್ಯರಾತ್ರಿ ವೈದ್ಯರ ಪ್ರತಿಭಟನೆ

ನೀಟ್‌ ಪರೀಕ್ಷೆಯ ನಂತರ ಕಾಲೇಜು ಹಂಚಿಕೆ ವಿಳಂಬವನ್ನು ವಿರೋಧಿಸಿ ವೈದ್ಯರು ಪ್ರತಿಭಟಿಸುತ್ತಿದ್ದು, ಸರ್ಕಾರ ಕ್ರಮ ಜರುಗಿಸದಿದ್ದರೆ ಬುಧವಾರ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ವೈದ್ಯರು ನೀಡಿದ್ದಾರೆ.

- Advertisement -
- Advertisement -

ನವ ದೆಹಲಿ: ನೀಟ್‌ ಸ್ನಾತಕೋತ್ತರ ಪರೀಕ್ಷೆಯ ನಂತರ ಕಾಲೇಜು ಹಂಚಿಕೆ ವಿಳಂಬವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದಾಗ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿರುವ ದೆಹಲಿಯ ನಿವಾಸಿ ವೈದ್ಯರ ಗುಂಪುಗಳು ವೈದ್ಯಕೀಯ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿವೆ.

ಒಂದು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್‌‌ನ ​​(ಎಫ್‌‌ಒಆರ್‌ಡಿಎ) 4,000 ಸದಸ್ಯರು ಸೋಮವಾರ ಮಧ್ಯರಾತ್ರಿ ಸರೋಜಿನಿ ನಗರ ಪೊಲೀಸ್ ಠಾಣೆ ಎದುರು ಧರಣಿಯನ್ನು ನಡೆಸಿದ್ದು, ರಾತ್ರಿ ಕರ್ಫ್ಯೂಗೆ ಬದ್ಧರಾಗಿ ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ. ಹಿಂದಿನ ದಿನ ಆರೋಗ್ಯ ಸಚಿವಾಲಯದ ಕಚೇರಿ ಕಡೆಗೆ ಮೆರವಣಿಗೆ ಹೊರಟಾಗ ತಡೆಯಲಾಗಿದೆ ಎಂದು ವೈದ್ಯರು ಆರೋಪಿಸಿದ್ದಾರೆ.

ಎಲ್ಲಾ ಆರ್‌ಡಿಎ ಸಂಘಗಳು ಮತ್ತು ಭಾರತದಾದ್ಯಂತ ಇರುವ ಇತರ ವೈದ್ಯರ ಸಂಘಗಳು ಬುಧವಾರದಿಂದ ಆರೋಗ್ಯ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್ ​​(ಎಫ್‌ಎಐಎಂಎ) ಕರೆ ನೀಡಿದೆ. ಏಮ್ಸ್‌ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಫೋರ್ಡಾಗೆ ಬೆಂಬಲವಾಗಿ ನಿಂತಿದೆ. 24 ಗಂಟೆಗಳ ಒಳಗೆ ಸರ್ಕಾರದಿಂದ ಯಾವುದೇ ಸಮರ್ಪಕ ಪ್ರತಿಕ್ರಿಯೆ ದೊರೆಯದಿದ್ದರೆ ಬುಧವಾರ ಎಲ್ಲಾ ತುರ್ತು ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ವೈದ್ಯರು ಎಚ್ಚರಿಸಿದ್ದಾರೆ.

ವೈದ್ಯಕೀಯ ಭ್ರಾತೃತ್ವಕ್ಕೆ ಇದು “ಕಪ್ಪು ದಿನ” ಎಂದು ವೈದ್ಯರು ಕರೆದಿದ್ದಾರೆ. ಮೆರವಣಿಗೆ ಸಂದರ್ಭದಲ್ಲಿ ಹಲವು ಮಹಿಳಾ ವೈದ್ಯರು ಹಲ್ಲೆಗೊಳಗಾಗಿದ್ದಾರೆ. ಪೊಲೀಸರು ನಮ್ಮನ್ನು ತಡೆದಿದ್ದಾರೆ ಎಂದು ವೈದ್ಯರು ಬೇಸರ ವ್ಯಕ್ತಪಡಿಸಿದ್ದಾರೆ.

ಸಫ್ದರ್‌ಜಂಗ್, ಆರ್‌ಎಂಎಲ್ ಮತ್ತು ಲೇಡಿ ಹಾರ್ಡಿಂಜ್ – ಇತರ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಯ ಮೇಲೆ ವೈದ್ಯರ ಪ್ರತಿಭಟನೆ ಪರಿಣಾಮ ಬೀರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಶೇ. 66ರಷ್ಟು ಸಾಮರ್ಥ್ಯದಲ್ಲಿ ವೈದ್ಯರು ಕೆಲಸ ಮಾಡುತ್ತಿದ್ದಾರೆ. ಹೊಸ ವೈದ್ಯರ ನೇಮಕ ತುರ್ತಾಗಿ ಆಗಬೇಕಿದೆ. ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ ಒಂದು ವರ್ಷದಿಂದ ನೇಮಕಾತಿ ತಡೆಹಿಡಿಯಲಾಗಿದೆ ಎಂದು ಆರೋಪಿಸಿದ್ದಾರೆ.

“ನಾವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು (ಎಂಎಎಂಸಿ) ಕ್ಯಾಂಪಸ್‌ನಿಂದ ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದೇವೆ. ಆದರೆ ನಾವು ಮೆರವಣಿಗೆ ಪ್ರಾರಂಭಿಸಿದ ಕೂಡಲೇ, ಭದ್ರತಾ ಸಿಬ್ಬಂದಿ ನಮ್ಮನ್ನು ತಡೆದರು. ಪೊಲೀಸರ ಕ್ರಮದಿಂದಾಗಿ ಕೆಲವು ಕಿರಿಯ ವೈದ್ಯರು ಗಾಯಗೊಂಡಿದ್ದಾರೆ” ಎಂದು ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸರು, “ಯಾವುದೇ ಬಲ ಪ್ರಯೋಗ ಮಾಡಿಲ್ಲ, ನಿಂದನೀಯ ಭಾಷೆ ಬಳಸಿಲ್ಲ. ಕೇವಲ 12 ಮಂದಿ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು” ಎಂದಿದ್ದಾರೆ.

ಆರರಿಂದ ಎಂಟು ಗಂಟೆಗಳ ಕಾಲ ಪ್ರತಿಭಟನಾಕಾರರು ದೆಹಲಿಯ ಆರ್ಟಿರಿಯಲ್ ಐಟಿಒ ರಸ್ತೆಯ ಒಂದು ಭಾಗವನ್ನು ಸ್ಥಗಿತಗೊಳಿಸಿದರು. ಸ್ಥಳದಿಂದ ದೂರ ಸರಿಯುವಂತೆ ಅವರಿಗೆ ಪದೇ ಪದೇ ಮನವಿ ಮಾಡಲಾಗಿದ್ದರೂ ಅವರು ರಸ್ತೆ ಜಾಮ್ ಮಾಡುವುದನ್ನು ಮುಂದುವರೆಸಿದರು. ನಂತರ, ಐಟಿಒ ಮಾರ್ಗದ ಎರಡೂ ಮಾರ್ಗಗಳನ್ನು ಪ್ರತಿಭಟನಾಕಾರರು ನಿರ್ಬಂಧಿಸಿದರು ಎಂದು ಪೊಲೀಸರು ಆರೋಪಿಸಿದ್ದಾರೆ.

“ನಾವು ಸಂಘದ ಸದಸ್ಯರೊಂದಿಗೆ ಮಾತನಾಡಿದ್ದೇವೆ ಮತ್ತು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಆದರೆ ಅವರು ರಸ್ತೆಗಳನ್ನು ನಿರ್ಬಂಧಿಸುವುದನ್ನು ಮುಂದುವರೆಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಪ್ರತಿಭಟನಾಕಾರರನ್ನು ರಸ್ತೆಯಿಂದ ತೆರೆವುಗೊಳಿಸಲು ಯತ್ನಿಸಿದಾಗ ಅವರು ಪೊಲೀಸ್ ಸಿಬ್ಬಂದಿಯ ಸಮವಸ್ತ್ರವನ್ನು ಹರಿದು ಹಾಕಲು ಯತ್ನಿಸಲಾಯಿತು. ಪೊಲೀಸ್ ವಾಹನಗಳ ಗಾಜು ಒಡೆದು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಪೊಲೀಸರು ದೂರಿದ್ದಾರೆ.

ತಮ್ಮ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸದಿದ್ದಲ್ಲಿ ಸೇವೆಯನ್ನು ತ್ಯಜಿಸಿ “ಸಾಮೂಹಿಕ ರಾಜೀನಾಮೆ” ನೀಡಲು ಸಂಘದ ಸದಸ್ಯರಲ್ಲಿ ಕೋರಲಾಗುವುದು ಎಂದು ನಿವಾಸಿ ವೈದ್ಯರ ಸಂಘ ಎಚ್ಚರಿಸಿದೆ.


ಇದನ್ನೂ ಓದಿರಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...