Homeಮುಖಪುಟದೆಹಲಿ: ಪೊಲೀಸರ ಕ್ರಮ ಖಂಡಿಸಿ ಮಧ್ಯರಾತ್ರಿ ವೈದ್ಯರ ಪ್ರತಿಭಟನೆ

ದೆಹಲಿ: ಪೊಲೀಸರ ಕ್ರಮ ಖಂಡಿಸಿ ಮಧ್ಯರಾತ್ರಿ ವೈದ್ಯರ ಪ್ರತಿಭಟನೆ

ನೀಟ್‌ ಪರೀಕ್ಷೆಯ ನಂತರ ಕಾಲೇಜು ಹಂಚಿಕೆ ವಿಳಂಬವನ್ನು ವಿರೋಧಿಸಿ ವೈದ್ಯರು ಪ್ರತಿಭಟಿಸುತ್ತಿದ್ದು, ಸರ್ಕಾರ ಕ್ರಮ ಜರುಗಿಸದಿದ್ದರೆ ಬುಧವಾರ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ವೈದ್ಯರು ನೀಡಿದ್ದಾರೆ.

- Advertisement -
- Advertisement -

ನವ ದೆಹಲಿ: ನೀಟ್‌ ಸ್ನಾತಕೋತ್ತರ ಪರೀಕ್ಷೆಯ ನಂತರ ಕಾಲೇಜು ಹಂಚಿಕೆ ವಿಳಂಬವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದಾಗ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿರುವ ದೆಹಲಿಯ ನಿವಾಸಿ ವೈದ್ಯರ ಗುಂಪುಗಳು ವೈದ್ಯಕೀಯ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿವೆ.

ಒಂದು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್‌‌ನ ​​(ಎಫ್‌‌ಒಆರ್‌ಡಿಎ) 4,000 ಸದಸ್ಯರು ಸೋಮವಾರ ಮಧ್ಯರಾತ್ರಿ ಸರೋಜಿನಿ ನಗರ ಪೊಲೀಸ್ ಠಾಣೆ ಎದುರು ಧರಣಿಯನ್ನು ನಡೆಸಿದ್ದು, ರಾತ್ರಿ ಕರ್ಫ್ಯೂಗೆ ಬದ್ಧರಾಗಿ ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ. ಹಿಂದಿನ ದಿನ ಆರೋಗ್ಯ ಸಚಿವಾಲಯದ ಕಚೇರಿ ಕಡೆಗೆ ಮೆರವಣಿಗೆ ಹೊರಟಾಗ ತಡೆಯಲಾಗಿದೆ ಎಂದು ವೈದ್ಯರು ಆರೋಪಿಸಿದ್ದಾರೆ.

ಎಲ್ಲಾ ಆರ್‌ಡಿಎ ಸಂಘಗಳು ಮತ್ತು ಭಾರತದಾದ್ಯಂತ ಇರುವ ಇತರ ವೈದ್ಯರ ಸಂಘಗಳು ಬುಧವಾರದಿಂದ ಆರೋಗ್ಯ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್ ​​(ಎಫ್‌ಎಐಎಂಎ) ಕರೆ ನೀಡಿದೆ. ಏಮ್ಸ್‌ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಫೋರ್ಡಾಗೆ ಬೆಂಬಲವಾಗಿ ನಿಂತಿದೆ. 24 ಗಂಟೆಗಳ ಒಳಗೆ ಸರ್ಕಾರದಿಂದ ಯಾವುದೇ ಸಮರ್ಪಕ ಪ್ರತಿಕ್ರಿಯೆ ದೊರೆಯದಿದ್ದರೆ ಬುಧವಾರ ಎಲ್ಲಾ ತುರ್ತು ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ವೈದ್ಯರು ಎಚ್ಚರಿಸಿದ್ದಾರೆ.

ವೈದ್ಯಕೀಯ ಭ್ರಾತೃತ್ವಕ್ಕೆ ಇದು “ಕಪ್ಪು ದಿನ” ಎಂದು ವೈದ್ಯರು ಕರೆದಿದ್ದಾರೆ. ಮೆರವಣಿಗೆ ಸಂದರ್ಭದಲ್ಲಿ ಹಲವು ಮಹಿಳಾ ವೈದ್ಯರು ಹಲ್ಲೆಗೊಳಗಾಗಿದ್ದಾರೆ. ಪೊಲೀಸರು ನಮ್ಮನ್ನು ತಡೆದಿದ್ದಾರೆ ಎಂದು ವೈದ್ಯರು ಬೇಸರ ವ್ಯಕ್ತಪಡಿಸಿದ್ದಾರೆ.

ಸಫ್ದರ್‌ಜಂಗ್, ಆರ್‌ಎಂಎಲ್ ಮತ್ತು ಲೇಡಿ ಹಾರ್ಡಿಂಜ್ – ಇತರ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಯ ಮೇಲೆ ವೈದ್ಯರ ಪ್ರತಿಭಟನೆ ಪರಿಣಾಮ ಬೀರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಶೇ. 66ರಷ್ಟು ಸಾಮರ್ಥ್ಯದಲ್ಲಿ ವೈದ್ಯರು ಕೆಲಸ ಮಾಡುತ್ತಿದ್ದಾರೆ. ಹೊಸ ವೈದ್ಯರ ನೇಮಕ ತುರ್ತಾಗಿ ಆಗಬೇಕಿದೆ. ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ ಒಂದು ವರ್ಷದಿಂದ ನೇಮಕಾತಿ ತಡೆಹಿಡಿಯಲಾಗಿದೆ ಎಂದು ಆರೋಪಿಸಿದ್ದಾರೆ.

“ನಾವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು (ಎಂಎಎಂಸಿ) ಕ್ಯಾಂಪಸ್‌ನಿಂದ ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದೇವೆ. ಆದರೆ ನಾವು ಮೆರವಣಿಗೆ ಪ್ರಾರಂಭಿಸಿದ ಕೂಡಲೇ, ಭದ್ರತಾ ಸಿಬ್ಬಂದಿ ನಮ್ಮನ್ನು ತಡೆದರು. ಪೊಲೀಸರ ಕ್ರಮದಿಂದಾಗಿ ಕೆಲವು ಕಿರಿಯ ವೈದ್ಯರು ಗಾಯಗೊಂಡಿದ್ದಾರೆ” ಎಂದು ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸರು, “ಯಾವುದೇ ಬಲ ಪ್ರಯೋಗ ಮಾಡಿಲ್ಲ, ನಿಂದನೀಯ ಭಾಷೆ ಬಳಸಿಲ್ಲ. ಕೇವಲ 12 ಮಂದಿ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು” ಎಂದಿದ್ದಾರೆ.

ಆರರಿಂದ ಎಂಟು ಗಂಟೆಗಳ ಕಾಲ ಪ್ರತಿಭಟನಾಕಾರರು ದೆಹಲಿಯ ಆರ್ಟಿರಿಯಲ್ ಐಟಿಒ ರಸ್ತೆಯ ಒಂದು ಭಾಗವನ್ನು ಸ್ಥಗಿತಗೊಳಿಸಿದರು. ಸ್ಥಳದಿಂದ ದೂರ ಸರಿಯುವಂತೆ ಅವರಿಗೆ ಪದೇ ಪದೇ ಮನವಿ ಮಾಡಲಾಗಿದ್ದರೂ ಅವರು ರಸ್ತೆ ಜಾಮ್ ಮಾಡುವುದನ್ನು ಮುಂದುವರೆಸಿದರು. ನಂತರ, ಐಟಿಒ ಮಾರ್ಗದ ಎರಡೂ ಮಾರ್ಗಗಳನ್ನು ಪ್ರತಿಭಟನಾಕಾರರು ನಿರ್ಬಂಧಿಸಿದರು ಎಂದು ಪೊಲೀಸರು ಆರೋಪಿಸಿದ್ದಾರೆ.

“ನಾವು ಸಂಘದ ಸದಸ್ಯರೊಂದಿಗೆ ಮಾತನಾಡಿದ್ದೇವೆ ಮತ್ತು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಆದರೆ ಅವರು ರಸ್ತೆಗಳನ್ನು ನಿರ್ಬಂಧಿಸುವುದನ್ನು ಮುಂದುವರೆಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಪ್ರತಿಭಟನಾಕಾರರನ್ನು ರಸ್ತೆಯಿಂದ ತೆರೆವುಗೊಳಿಸಲು ಯತ್ನಿಸಿದಾಗ ಅವರು ಪೊಲೀಸ್ ಸಿಬ್ಬಂದಿಯ ಸಮವಸ್ತ್ರವನ್ನು ಹರಿದು ಹಾಕಲು ಯತ್ನಿಸಲಾಯಿತು. ಪೊಲೀಸ್ ವಾಹನಗಳ ಗಾಜು ಒಡೆದು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಪೊಲೀಸರು ದೂರಿದ್ದಾರೆ.

ತಮ್ಮ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸದಿದ್ದಲ್ಲಿ ಸೇವೆಯನ್ನು ತ್ಯಜಿಸಿ “ಸಾಮೂಹಿಕ ರಾಜೀನಾಮೆ” ನೀಡಲು ಸಂಘದ ಸದಸ್ಯರಲ್ಲಿ ಕೋರಲಾಗುವುದು ಎಂದು ನಿವಾಸಿ ವೈದ್ಯರ ಸಂಘ ಎಚ್ಚರಿಸಿದೆ.


ಇದನ್ನೂ ಓದಿರಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...