Homeಮುಖಪುಟದೆಹಲಿ | ಇಡಿ ಅಧಿಕಾರಿಗಳಂತೆ ಸೋಗು ಹಾಕಿ 5 ಕೋಟಿ ಸುಲಿಗೆಗೆ ಯತ್ನ

ದೆಹಲಿ | ಇಡಿ ಅಧಿಕಾರಿಗಳಂತೆ ಸೋಗು ಹಾಕಿ 5 ಕೋಟಿ ಸುಲಿಗೆಗೆ ಯತ್ನ

- Advertisement -
- Advertisement -

ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳಂತೆ ಸೋಗು ಹಾಕಿ ದೆಹಲಿಯ ವ್ಯಕ್ತಿಯೊಬ್ಬರಿಂದ 5 ಕೋಟಿ ರೂಪಾಯಿ ಸುಲಿಗೆಗೆ ಯತ್ನಿಸಿರುವ ಘಟನೆ ದೆಹಲಿಯ ಚತ್ತರ್‌ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 7 ಜನರ ತಂಡ ಇಡಿ ಅಧಿಕಾರಿಗಳಂತೆ ವ್ಯಕ್ತಿಯ ಮನೆಗೆ ದಾಳಿ ಮಾಡಿದ್ದಾಗಿ ಹೇಳಿದ್ದರು. ಆದಾಗ್ಯೂ, ಸಂತ್ರಸ್ತ ವ್ಯಕ್ತಿಯ ವಕೀಲ ಅಧಿಕಾರಿಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ ನಂತರ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ದೆಹಲಿ

ಅಶೋಕ ಅವೆನ್ಯೂ, ಡಿಎಲ್‌ಎಫ್ ಫಾರ್ಮ್ಸ್‌ನಲ್ಲಿರುವ ನಿವಾಸದಲ್ಲಿ ಇಡಿ ಅಧಿಕಾರಿಗಳ ಸೋಗು ಹಾಕಿದ್ದ ವ್ಯಕ್ತಿಗಳ ಗುಂಪು ಸುಳ್ಳು ಇಡಿ ಹುಡುಕಾಟ ನಡೆಸುತ್ತಿದೆ ಎಂದು ಅಕ್ಟೋಬರ್ 22 ರಂದು ನಮಗೆ ಮಾಹಿತಿ ಸಿಕ್ಕಿತು. ಇಡಿ ದಾಳಿಯ ನೆಪದಲ್ಲಿ ಮನೆ ಮಾಲೀಕರನ್ನು ಹೌಜ್ ಖಾಸ್‌ನಲ್ಲಿರುವ ಕೋಟಕ್ ಮಹೀಂದ್ರಾ ಬ್ಯಾಂಕ್‌ಗೆ ಕರೆದೊಯ್ದು ಆತನ ಬ್ಯಾಂಕ್ ಖಾತೆಯಿಂದ 5 ಕೋಟಿ ರೂ. ಲಪಟಾಯಿಸಲು ಪ್ರಯತ್ನಿಸಿದ್ದರು ಎಂದು ಇಡಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಕ್ಷಣವೇ ಇಡಿ ತಂಡವನ್ನು ಬ್ಯಾಂಕ್‌ಗೆ ಕಳುಹಿಸಲಾಗಿದ್ದು, ಸ್ಥಳೀಯ ಪೊಲೀಸರಿಗೂ ತಿಳಿಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿ ಸಹಾಯ ಮಾಡಿದರು. ಅದಕ್ಕಿಂತ ಮುಂದೆ ಬ್ಯಾಂಕ್ ತಲುಪಿದ್ದ ಸಂತ್ರಸ್ತ ವ್ಯಕ್ತಿಯ ವಕೀಲ, ವಂಚಕರ ಗುರುತಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಅಷ್ಟರಲ್ಲಿ ಅಪಾಯ ಅರಿತ ಅವರು ಬ್ಯಾಂಕ್‌ನಿಂದ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಾಳಿಯ ವೇಳೆ ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಏಳು ವ್ಯಕ್ತಿಗಳು ಎರಡು ಕಾರುಗಳಲ್ಲಿ ಹಿಂದಿನ ರಾತ್ರಿ ಅವರ ಮನೆಗೆ ಬಂದಿದ್ದರು ಎಂದು ಸಂತ್ರಸ್ತ ವ್ಯಕ್ತಿ ಹೇಳಿದ್ದಾರೆ. ಅವರಲ್ಲಿ ಕೆಲವರು ತಮ್ಮ ಗುರುತನ್ನು ಮರೆಮಾಚಲು ಮುಖವಾಡಗಳನ್ನು ಧರಿಸಿದ್ದರು. ಆದರೆ ಮೂವರು ಮುಖವಾಡಗಳಿಲ್ಲದೆ ಸಂವಾದ ನಡೆಸಿದ್ದರು. ಈ ವೇಳೆ ಅವರು ಸಂತ್ರಸ್ತ ವ್ಯಕ್ತಿಯು ಇತ್ತಿಚೆಗೆ ನಡೆಸಿದ್ದ ಬ್ಯಾಂಕ್‌ ವ್ಯವಹಾರಗಳನ್ನು ಪ್ರಶ್ನಿದ್ದರು ಎಂದು ಅವರು ಹೇಳಿದ್ದಾರೆ.

ವಂಚಕರು ಅವರ ಕೆಲವು ಹಳೆಯ ಚೆಕ್‌ಗಳನ್ನು ಮುಂದಿರಿಸಿ, ದೊಡ್ಡ ಮೊತ್ತದ ಹಣ ನೀಡಲು ಒಪ್ಪದಿದ್ದರೆ ಬಂಧಿಸುವ ಬೆದರಿಕೆ ಹಾಕಿದ್ದರು. ಆಗ ಸಂತ್ರಸ್ತ ವ್ಯಕ್ತಿ ಮರುದಿನ ಬೆಳಿಗ್ಗೆ ಬ್ಯಾಂಕ್‌ನಿಂದ ಹಣ ಪಡೆದು ನೀಡುವುದಾಗಿ ಹೇಳಿದ್ದು, ಆಗ ನಕಲಿ ಅಧಿಕಾರಿಗಳು ರಾತ್ರಿಯಿಡೀ ಅವರ ಮನೆಯಲ್ಲಿಯೇ ಕಳೆದಿದ್ದರು. ದೆಹಲಿ

ಸಂತ್ರಸ್ತ ವ್ಯಕ್ತಿಯ ಮನೆಯ ಗೇಟ್‌ಗಳಿಗೆ ಬೀಗ ಹಾಕಿದ್ದರಿಂದ ದುಷ್ಕರ್ಮಿಗಳು ತಮ್ಮ ಕಾರುಗಳನ್ನು ಅವರ ನಿವಾಸದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ಪೊಲೀಸರು ಸಂತ್ರಸ್ತ ವ್ಯಕ್ತಿಯ ಹೇಳಿಕೆಯನ್ನು ಪಡೆದು ಎಫ್‌ಐಆರ್ ದಾಖಲಿಸಿದ್ದಾರೆ. ಅವರು ಬಿಟ್ಟು ಹೋಗಿರುವ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ ಬಿಜೆಪಿ!

ಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....