Homeಮುಖಪುಟದೆಹಲಿ | ಇಡಿ ಅಧಿಕಾರಿಗಳಂತೆ ಸೋಗು ಹಾಕಿ 5 ಕೋಟಿ ಸುಲಿಗೆಗೆ ಯತ್ನ

ದೆಹಲಿ | ಇಡಿ ಅಧಿಕಾರಿಗಳಂತೆ ಸೋಗು ಹಾಕಿ 5 ಕೋಟಿ ಸುಲಿಗೆಗೆ ಯತ್ನ

- Advertisement -
- Advertisement -

ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳಂತೆ ಸೋಗು ಹಾಕಿ ದೆಹಲಿಯ ವ್ಯಕ್ತಿಯೊಬ್ಬರಿಂದ 5 ಕೋಟಿ ರೂಪಾಯಿ ಸುಲಿಗೆಗೆ ಯತ್ನಿಸಿರುವ ಘಟನೆ ದೆಹಲಿಯ ಚತ್ತರ್‌ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 7 ಜನರ ತಂಡ ಇಡಿ ಅಧಿಕಾರಿಗಳಂತೆ ವ್ಯಕ್ತಿಯ ಮನೆಗೆ ದಾಳಿ ಮಾಡಿದ್ದಾಗಿ ಹೇಳಿದ್ದರು. ಆದಾಗ್ಯೂ, ಸಂತ್ರಸ್ತ ವ್ಯಕ್ತಿಯ ವಕೀಲ ಅಧಿಕಾರಿಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ ನಂತರ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ದೆಹಲಿ

ಅಶೋಕ ಅವೆನ್ಯೂ, ಡಿಎಲ್‌ಎಫ್ ಫಾರ್ಮ್ಸ್‌ನಲ್ಲಿರುವ ನಿವಾಸದಲ್ಲಿ ಇಡಿ ಅಧಿಕಾರಿಗಳ ಸೋಗು ಹಾಕಿದ್ದ ವ್ಯಕ್ತಿಗಳ ಗುಂಪು ಸುಳ್ಳು ಇಡಿ ಹುಡುಕಾಟ ನಡೆಸುತ್ತಿದೆ ಎಂದು ಅಕ್ಟೋಬರ್ 22 ರಂದು ನಮಗೆ ಮಾಹಿತಿ ಸಿಕ್ಕಿತು. ಇಡಿ ದಾಳಿಯ ನೆಪದಲ್ಲಿ ಮನೆ ಮಾಲೀಕರನ್ನು ಹೌಜ್ ಖಾಸ್‌ನಲ್ಲಿರುವ ಕೋಟಕ್ ಮಹೀಂದ್ರಾ ಬ್ಯಾಂಕ್‌ಗೆ ಕರೆದೊಯ್ದು ಆತನ ಬ್ಯಾಂಕ್ ಖಾತೆಯಿಂದ 5 ಕೋಟಿ ರೂ. ಲಪಟಾಯಿಸಲು ಪ್ರಯತ್ನಿಸಿದ್ದರು ಎಂದು ಇಡಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಕ್ಷಣವೇ ಇಡಿ ತಂಡವನ್ನು ಬ್ಯಾಂಕ್‌ಗೆ ಕಳುಹಿಸಲಾಗಿದ್ದು, ಸ್ಥಳೀಯ ಪೊಲೀಸರಿಗೂ ತಿಳಿಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿ ಸಹಾಯ ಮಾಡಿದರು. ಅದಕ್ಕಿಂತ ಮುಂದೆ ಬ್ಯಾಂಕ್ ತಲುಪಿದ್ದ ಸಂತ್ರಸ್ತ ವ್ಯಕ್ತಿಯ ವಕೀಲ, ವಂಚಕರ ಗುರುತಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಅಷ್ಟರಲ್ಲಿ ಅಪಾಯ ಅರಿತ ಅವರು ಬ್ಯಾಂಕ್‌ನಿಂದ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಾಳಿಯ ವೇಳೆ ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಏಳು ವ್ಯಕ್ತಿಗಳು ಎರಡು ಕಾರುಗಳಲ್ಲಿ ಹಿಂದಿನ ರಾತ್ರಿ ಅವರ ಮನೆಗೆ ಬಂದಿದ್ದರು ಎಂದು ಸಂತ್ರಸ್ತ ವ್ಯಕ್ತಿ ಹೇಳಿದ್ದಾರೆ. ಅವರಲ್ಲಿ ಕೆಲವರು ತಮ್ಮ ಗುರುತನ್ನು ಮರೆಮಾಚಲು ಮುಖವಾಡಗಳನ್ನು ಧರಿಸಿದ್ದರು. ಆದರೆ ಮೂವರು ಮುಖವಾಡಗಳಿಲ್ಲದೆ ಸಂವಾದ ನಡೆಸಿದ್ದರು. ಈ ವೇಳೆ ಅವರು ಸಂತ್ರಸ್ತ ವ್ಯಕ್ತಿಯು ಇತ್ತಿಚೆಗೆ ನಡೆಸಿದ್ದ ಬ್ಯಾಂಕ್‌ ವ್ಯವಹಾರಗಳನ್ನು ಪ್ರಶ್ನಿದ್ದರು ಎಂದು ಅವರು ಹೇಳಿದ್ದಾರೆ.

ವಂಚಕರು ಅವರ ಕೆಲವು ಹಳೆಯ ಚೆಕ್‌ಗಳನ್ನು ಮುಂದಿರಿಸಿ, ದೊಡ್ಡ ಮೊತ್ತದ ಹಣ ನೀಡಲು ಒಪ್ಪದಿದ್ದರೆ ಬಂಧಿಸುವ ಬೆದರಿಕೆ ಹಾಕಿದ್ದರು. ಆಗ ಸಂತ್ರಸ್ತ ವ್ಯಕ್ತಿ ಮರುದಿನ ಬೆಳಿಗ್ಗೆ ಬ್ಯಾಂಕ್‌ನಿಂದ ಹಣ ಪಡೆದು ನೀಡುವುದಾಗಿ ಹೇಳಿದ್ದು, ಆಗ ನಕಲಿ ಅಧಿಕಾರಿಗಳು ರಾತ್ರಿಯಿಡೀ ಅವರ ಮನೆಯಲ್ಲಿಯೇ ಕಳೆದಿದ್ದರು. ದೆಹಲಿ

ಸಂತ್ರಸ್ತ ವ್ಯಕ್ತಿಯ ಮನೆಯ ಗೇಟ್‌ಗಳಿಗೆ ಬೀಗ ಹಾಕಿದ್ದರಿಂದ ದುಷ್ಕರ್ಮಿಗಳು ತಮ್ಮ ಕಾರುಗಳನ್ನು ಅವರ ನಿವಾಸದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ಪೊಲೀಸರು ಸಂತ್ರಸ್ತ ವ್ಯಕ್ತಿಯ ಹೇಳಿಕೆಯನ್ನು ಪಡೆದು ಎಫ್‌ಐಆರ್ ದಾಖಲಿಸಿದ್ದಾರೆ. ಅವರು ಬಿಟ್ಟು ಹೋಗಿರುವ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ ಬಿಜೆಪಿ!

ಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...