Homeಮುಖಪುಟದೆಹಲಿ | ಇಡಿ ಅಧಿಕಾರಿಗಳಂತೆ ಸೋಗು ಹಾಕಿ 5 ಕೋಟಿ ಸುಲಿಗೆಗೆ ಯತ್ನ

ದೆಹಲಿ | ಇಡಿ ಅಧಿಕಾರಿಗಳಂತೆ ಸೋಗು ಹಾಕಿ 5 ಕೋಟಿ ಸುಲಿಗೆಗೆ ಯತ್ನ

- Advertisement -
- Advertisement -

ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳಂತೆ ಸೋಗು ಹಾಕಿ ದೆಹಲಿಯ ವ್ಯಕ್ತಿಯೊಬ್ಬರಿಂದ 5 ಕೋಟಿ ರೂಪಾಯಿ ಸುಲಿಗೆಗೆ ಯತ್ನಿಸಿರುವ ಘಟನೆ ದೆಹಲಿಯ ಚತ್ತರ್‌ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 7 ಜನರ ತಂಡ ಇಡಿ ಅಧಿಕಾರಿಗಳಂತೆ ವ್ಯಕ್ತಿಯ ಮನೆಗೆ ದಾಳಿ ಮಾಡಿದ್ದಾಗಿ ಹೇಳಿದ್ದರು. ಆದಾಗ್ಯೂ, ಸಂತ್ರಸ್ತ ವ್ಯಕ್ತಿಯ ವಕೀಲ ಅಧಿಕಾರಿಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ ನಂತರ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ದೆಹಲಿ

ಅಶೋಕ ಅವೆನ್ಯೂ, ಡಿಎಲ್‌ಎಫ್ ಫಾರ್ಮ್ಸ್‌ನಲ್ಲಿರುವ ನಿವಾಸದಲ್ಲಿ ಇಡಿ ಅಧಿಕಾರಿಗಳ ಸೋಗು ಹಾಕಿದ್ದ ವ್ಯಕ್ತಿಗಳ ಗುಂಪು ಸುಳ್ಳು ಇಡಿ ಹುಡುಕಾಟ ನಡೆಸುತ್ತಿದೆ ಎಂದು ಅಕ್ಟೋಬರ್ 22 ರಂದು ನಮಗೆ ಮಾಹಿತಿ ಸಿಕ್ಕಿತು. ಇಡಿ ದಾಳಿಯ ನೆಪದಲ್ಲಿ ಮನೆ ಮಾಲೀಕರನ್ನು ಹೌಜ್ ಖಾಸ್‌ನಲ್ಲಿರುವ ಕೋಟಕ್ ಮಹೀಂದ್ರಾ ಬ್ಯಾಂಕ್‌ಗೆ ಕರೆದೊಯ್ದು ಆತನ ಬ್ಯಾಂಕ್ ಖಾತೆಯಿಂದ 5 ಕೋಟಿ ರೂ. ಲಪಟಾಯಿಸಲು ಪ್ರಯತ್ನಿಸಿದ್ದರು ಎಂದು ಇಡಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಕ್ಷಣವೇ ಇಡಿ ತಂಡವನ್ನು ಬ್ಯಾಂಕ್‌ಗೆ ಕಳುಹಿಸಲಾಗಿದ್ದು, ಸ್ಥಳೀಯ ಪೊಲೀಸರಿಗೂ ತಿಳಿಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿ ಸಹಾಯ ಮಾಡಿದರು. ಅದಕ್ಕಿಂತ ಮುಂದೆ ಬ್ಯಾಂಕ್ ತಲುಪಿದ್ದ ಸಂತ್ರಸ್ತ ವ್ಯಕ್ತಿಯ ವಕೀಲ, ವಂಚಕರ ಗುರುತಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಅಷ್ಟರಲ್ಲಿ ಅಪಾಯ ಅರಿತ ಅವರು ಬ್ಯಾಂಕ್‌ನಿಂದ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಾಳಿಯ ವೇಳೆ ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಏಳು ವ್ಯಕ್ತಿಗಳು ಎರಡು ಕಾರುಗಳಲ್ಲಿ ಹಿಂದಿನ ರಾತ್ರಿ ಅವರ ಮನೆಗೆ ಬಂದಿದ್ದರು ಎಂದು ಸಂತ್ರಸ್ತ ವ್ಯಕ್ತಿ ಹೇಳಿದ್ದಾರೆ. ಅವರಲ್ಲಿ ಕೆಲವರು ತಮ್ಮ ಗುರುತನ್ನು ಮರೆಮಾಚಲು ಮುಖವಾಡಗಳನ್ನು ಧರಿಸಿದ್ದರು. ಆದರೆ ಮೂವರು ಮುಖವಾಡಗಳಿಲ್ಲದೆ ಸಂವಾದ ನಡೆಸಿದ್ದರು. ಈ ವೇಳೆ ಅವರು ಸಂತ್ರಸ್ತ ವ್ಯಕ್ತಿಯು ಇತ್ತಿಚೆಗೆ ನಡೆಸಿದ್ದ ಬ್ಯಾಂಕ್‌ ವ್ಯವಹಾರಗಳನ್ನು ಪ್ರಶ್ನಿದ್ದರು ಎಂದು ಅವರು ಹೇಳಿದ್ದಾರೆ.

ವಂಚಕರು ಅವರ ಕೆಲವು ಹಳೆಯ ಚೆಕ್‌ಗಳನ್ನು ಮುಂದಿರಿಸಿ, ದೊಡ್ಡ ಮೊತ್ತದ ಹಣ ನೀಡಲು ಒಪ್ಪದಿದ್ದರೆ ಬಂಧಿಸುವ ಬೆದರಿಕೆ ಹಾಕಿದ್ದರು. ಆಗ ಸಂತ್ರಸ್ತ ವ್ಯಕ್ತಿ ಮರುದಿನ ಬೆಳಿಗ್ಗೆ ಬ್ಯಾಂಕ್‌ನಿಂದ ಹಣ ಪಡೆದು ನೀಡುವುದಾಗಿ ಹೇಳಿದ್ದು, ಆಗ ನಕಲಿ ಅಧಿಕಾರಿಗಳು ರಾತ್ರಿಯಿಡೀ ಅವರ ಮನೆಯಲ್ಲಿಯೇ ಕಳೆದಿದ್ದರು. ದೆಹಲಿ

ಸಂತ್ರಸ್ತ ವ್ಯಕ್ತಿಯ ಮನೆಯ ಗೇಟ್‌ಗಳಿಗೆ ಬೀಗ ಹಾಕಿದ್ದರಿಂದ ದುಷ್ಕರ್ಮಿಗಳು ತಮ್ಮ ಕಾರುಗಳನ್ನು ಅವರ ನಿವಾಸದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ಪೊಲೀಸರು ಸಂತ್ರಸ್ತ ವ್ಯಕ್ತಿಯ ಹೇಳಿಕೆಯನ್ನು ಪಡೆದು ಎಫ್‌ಐಆರ್ ದಾಖಲಿಸಿದ್ದಾರೆ. ಅವರು ಬಿಟ್ಟು ಹೋಗಿರುವ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ ಬಿಜೆಪಿ!

ಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...