Homeಮುಖಪುಟದೆಹಲಿ ಚುನಾವಣೆ-2025| ಕಾಂಗ್ರೆಸ್‌ನಿಂದ 'ಯುವ ಉಡಾನ್ ಯೋಜನೆ', ನಿರುದ್ಯೋಗಿ ಯುವಕರಿಗೆ ₹8,500 ಭರವಸೆ

ದೆಹಲಿ ಚುನಾವಣೆ-2025| ಕಾಂಗ್ರೆಸ್‌ನಿಂದ ‘ಯುವ ಉಡಾನ್ ಯೋಜನೆ’, ನಿರುದ್ಯೋಗಿ ಯುವಕರಿಗೆ ₹8,500 ಭರವಸೆ

- Advertisement -
- Advertisement -

ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಬಂದರೆ ‘ಯುವ ಉಡಾನ್ ಯೋಜನೆ’ ಅಡಿಯಲ್ಲಿ ಪ್ರತಿ ವಿದ್ಯಾವಂತ ನಿರುದ್ಯೋಗಿ ಯುವಕನಿಗೆ ಒಂದು ವರ್ಷದವರೆಗೆ ₹8,500ಗಳನ್ನು ನೀಡುವುದಾಗಿ ಕಾಂಗ್ರೆಸ್ ಭಾನುವಾರ ಭರವಸೆ ನೀಡಿದೆ.

ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಪತ್ರಿಕಾಗೋಷ್ಠಿಯಲ್ಲಿ ಈ ಯೋಜನೆಯನ್ನು ಘೋಷಿಸಿದರು.

“ಕಂಪನಿ, ಕಾರ್ಖಾನೆ ಅಥವಾ ಸಂಸ್ಥೆಯಲ್ಲಿ ತಮ್ಮ ಕೌಶಲ್ಯವನ್ನು ತೋರಿಸಬಲ್ಲ ಯುವಕರಿಗೆ ನಾವು ಆರ್ಥಿಕ ನೆರವು ನೀಡುತ್ತೇವೆ. ಅವರು ಈ ಕಂಪನಿಗಳ ಮೂಲಕ ಹಣವನ್ನು ಪಡೆಯುತ್ತಾರೆ. ಇದು ಮನೆಯಲ್ಲಿ ಕುಳಿತು ಹಣ ಪಡೆಯುವ ಯೋಜನೆಯಲ್ಲ” ಎಂದು ಪೈಲಟ್ ಹೇಳಿದರು.

“ಜನರು ತಮ್ಮ ಕೌಶಲ್ಯವನ್ನು ಸುಧಾರಿಸಲು ತರಬೇತಿ ಪಡೆದ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ನಾವು ಪ್ರಯತ್ನಿಸುತ್ತೇವೆ” ಎಂದು ಅವರು ಹೇಳಿದರು.

ಜನವರಿ 6 ರಂದು, ಕಾಂಗ್ರೆಸ್ ‘ಪ್ಯಾರಿ ದೀದಿ ಯೋಜನೆ’ಯನ್ನು ಘೋಷಿಸಿತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ ₹2,500ಗಳ ಆರ್ಥಿಕ ನೆರವು ನೀಡುವ ಭರವಸೆ ನೀಡಿತು. ಜನವರಿ 8 ರಂದು, ಪಕ್ಷವು ‘ಜೀವನ್ ರಕ್ಷಾ ಯೋಜನೆ’ಯನ್ನು ಘೋಷಿಸಿತು. ಇದರ ಅಡಿಯಲ್ಲಿ ₹25 ಲಕ್ಷಗಳವರೆಗೆ ಉಚಿತ ಆರೋಗ್ಯ ವಿಮೆಯನ್ನು ಒದಗಿಸುವುದಾಗಿ ಭರವಸೆ ನೀಡಿತು. 70 ಸದಸ್ಯರ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದೆ ಮತ್ತು ಫೆಬ್ರವರಿ 8 ರಂದು ಮತಗಳ ಎಣಿಕೆ ನಡೆಯಲಿದೆ.

ದೆಹಲಿಯ ಎಲ್ಲಾ 70 ವಿಧಾನಸಭಾ ಸ್ಥಾನಗಳಿಗೆ ಮತದಾನ ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಫೆಬ್ರವರಿ 8 ರಂದು ಮತ ಎಣಿಕೆಯ ನಂತರ ಚುನಾವಣಾ ಫಲಿತಾಂಶಗಳನ್ನು ಘೋಷಿಸಲಾಗುತ್ತದೆ.

2015 ರಿಂದ ದೆಹಲಿಯಲ್ಲಿ ಅಧಿಕಾರದಿಂದ ಹೊರಗಿರುವ ಕಾಂಗ್ರೆಸ್, ದೆಹಲಿ ಚುನಾವಣಾ ಕಣಕ್ಕೆ ಪಾದಾರ್ಪಣೆ ಮಾಡಿದಾಗಿನಿಂದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಬಲ್ಯ ಹೊಂದಿರುವ ಆಡಳಿತಾರೂಢ ಎಎಪಿಯನ್ನು ಸೋಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. 2015 ಮತ್ತು 2020 ರಲ್ಲಿ ನಡೆದ ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಎಎಪಿ ಕ್ರಮವಾಗಿ 67 ಮತ್ತು 62 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ, ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ ಕಳೆದ ಎರಡು ಚುನಾವಣೆಗಳಲ್ಲಿ ಶೂನ್ಯವನ್ನು ಗಳಿಸಿತು.

ಇದನ್ನೂ ಓದಿ; ಇಂಡಿಯಾ ಬಣ ವಿಸರ್ಜನೆಯಾಗಬೇಕೆಂದು ಎಂದಿಗೂ ಬಯಸಿರಲಿಲ್ಲ: ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...