Homeಮುಖಪುಟ15 ಹಾಲಿ ಶಾಸಕರಿಗೆ ಗೇಟ್‌ಪಾಸ್‌, 23 ಹೊಸಮುಖಗಳಿಗೆ ಟಿಕೆಟ್‌: ಏನಿದು ಕೇಜ್ರಿವಾಲ್‌ ತಂತ್ರ?

15 ಹಾಲಿ ಶಾಸಕರಿಗೆ ಗೇಟ್‌ಪಾಸ್‌, 23 ಹೊಸಮುಖಗಳಿಗೆ ಟಿಕೆಟ್‌: ಏನಿದು ಕೇಜ್ರಿವಾಲ್‌ ತಂತ್ರ?

- Advertisement -
- Advertisement -

ಫೆಬ್ರವರಿ 8 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಎಲ್ಲಾ 70 ಸ್ಥಾನಗಳ ಅಭ್ಯರ್ಥಿಗಳ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಬಿಡುಗಡೆ ಮಾಡಿದೆ.

ಆಶ್ಚರ್‍ಯಕರ ರೀತಿಯಲ್ಲಿ 15 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿರುವ ಆಮ್‌ ಆದ್ಮಿ ಪಕ್ಷವು ಹೊಸದಾಗಿ 23 ಹೊಸಮುಖಗಳಿಗೆ ಮಣೆ ಹಾಕುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದೆ.

ಕಳೆದ ಬಾರಿ 67 ಸ್ಥಾನಗಳನ್ನು ಗೆದ್ದಿದ್ದ ಆಪ್‌ ಪಕ್ಷದಿಂದ ಕೆಲವು ಶಾಸಕರು ಪಕ್ಷ ಬಿಟ್ಟು ಹೋದರೆ ಮತ್ತೆ ಕೆಲವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹಾಗಾಗಿ 23 ಹೊಸಮುಖಗಳು ಸ್ಪರ್ಧಿಸಲು ಅವಕಾಶವಾಗಿದ್ದು 15 ಹಾಲಿ ಶಾಸಕರಿಗೆ ಕೋಕ್‌ ನೀಡಲಾಗಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನವದೆಹಲಿಯಿಂದ ಸ್ಪರ್ಧಿಸಲಿದ್ದರೆ, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಪಟ್ಪರ್ಗಂಜ್ ನಿಂದ ಸ್ಪರ್ಧಿಸಲಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಯುವ ನಾಯಕರಾದ ಮತ್ತು ರಾಘವ್ ಚಡ್ಡಾ ಮತ್ತು ಅತಿಶಿ ಕೂಡ ಈ ಬಾರಿ ವಿಧಾನಸಭೆಯಲ್ಲಿ ಕಣಕ್ಕಿಳಿದಿದ್ದಾರೆ.

ರಾಜೇಂದರ್ ನಗರದಿಂದ ರಾಘವ್ ಚಡ್ಡಾ ಸ್ಪರ್ಧಿಸಲಿದ್ದರೆ, ಅತೀಶಿ ಕಲ್ಕಾಜಿಯಿಂದ ಹೋರಾಡಲಿದ್ದಾರೆ. ಪೂರ್ವ ದೆಹಲಿ ಕ್ಷೇತ್ರದಿಂದ ಕಳೆದ ವರ್ಷ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅತಿಶಿ ಬಿಜೆಪಿಯ ಗೌತಮ್ ಗಂಭೀರ್ ವಿರುದ್ಧ ಸೋತಿದ್ದರೆ, ರಾಘವ್ ಚಡ್ಡಾ ದಕ್ಷಿಣ ದೆಹಲಿಯ ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಸೋತಿದ್ದರು.

ದೆಹಲಿ ವಿಧಾನಸಭಾ ಚುನಾವಣೆಗೆ ಎಲ್ಲಾ 70 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ಅನುಮೋದಿಸಿದೆ. ಹಾಲಿ ಶಾಸಕರು 46 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ. 70 ಜನರಲ್ಲಿ 8 ಮಹಿಳೆಯರು ಇದ್ದಾರೆ. 2015 ರಲ್ಲಿ 6 ಮಹಿಳೆಯರು ಇದ್ದರು ಎಂದು ಸಿಸೋಡಿಯಾ ಹೇಳಿದರು ..

ಮಾಟಿಯಾ ಮಹಲ್ ಕ್ಷೇತ್ರದಿಂದ ಐದು ಅವಧಿಗೆ ಶಾಸಕರಾಗಿದ್ದ, ಕಳೆದ ವಾರ ಕಾಂಗ್ರೆಸ್ ನಿಂದ ಎಎಪಿಗೆ ಸೇರ್ಪಡೆಯಾದ ಶೋಯೆಬ್ ಇಕ್ಬಾಲ್ ಕೂಡ ಇದೇ ಕ್ಷೇತ್ರದಿಂದ ಸ್ಪರ್ಧಿಸುವ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ..

2015 ರಲ್ಲಿ 67 ಸ್ಥಾನಗಳನ್ನು ಎಎಪಿ ಗೆದ್ದರೆ, ಕೇವಲ ಮೂರು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಮತ್ತು ಕಾಂಗ್ರೆಸ್‌ ಶೂನ್ಯ ಸಂಪಾದನೆ ಮಾಡಿತ್ತು.

ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನಾಯಕತ್ವದಲ್ಲಿ ಹೋರಾಡುತ್ತಿರುವ ಎಎಪಿ, ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸಲು ಬಿಜೆಪಿಗೆ ಸವಾಲು ಹಾಕಿದೆ. ಬಿಜೆಪಿ ಸಂಸದ ಮನೋಜ್ ತಿವಾರಿ ಕೇಜ್ರಿವಾಲ್ ಅವರು ಕೇಸರಿ ಪಕ್ಷದ ಪ್ರತಿಸ್ಪರ್ಧಿ ಎಂದು ವ್ಯಾಪಕವಾಗಿ ನಂಬಲಾಗಿದ್ದರೂ, ಬಿಜೆಪಿ ಅವರನ್ನು ಇನ್ನೂ ಸಿಎಂ ಅಭ್ಯರ್ಥಿಗಳೆಂದು ಹೆಸರಿಸಿಲ್ಲ.

ಫೆಬ್ರವರಿ 11 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...