Homeಮುಖಪುಟದೆಹಲಿ ಚುನಾವಣೆ | ಎಎಪಿಗೆ ಭಾರಿ ಮುಖಭಂಗ; ಕೇಜ್ರಿವಾಲ್‌ಗೆ ಸೋಲು

ದೆಹಲಿ ಚುನಾವಣೆ | ಎಎಪಿಗೆ ಭಾರಿ ಮುಖಭಂಗ; ಕೇಜ್ರಿವಾಲ್‌ಗೆ ಸೋಲು

- Advertisement -
- Advertisement -

ದೆಹಲಿ ಚುನಾವಣೆಯಲ್ಲಿ ಎಎಪಿಗೆ ಭಾರಿ ಹಿನ್ನಡೆಯಾಗಿದ್ದು, ಪಕ್ಷದ ಮುಖ್ಯಸ್ಥ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 4,089 ಮತಗಳಿಂದ ಸೋಲು ಕಂಡಿದ್ದಾರೆ. ದೆಹಲಿ ಮಾಜಿ ಮುಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಅವರ ಮಗ ಪರ್ವೇಶ್ ವರ್ಮಾ ಅವರ ವಿರುದ್ಧ ಕೇಜ್ರಿವಾಲ್ ಸೋಲುಂಡಿದ್ದಾರೆ. ಈ ಮೂಲಕ ಬಿಜೆಪಿಯು ಸುಮಾರು 27 ವರ್ಷಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಮರಳಲು ಸಜ್ಜಾಗಿದೆ. ದೆಹಲಿ ಚುನಾವಣೆ

2013 ರಲ್ಲಿ ಮೊದಲ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿದ್ದ ಕೇಜ್ರಿವಾಲ್ ಅವರು ಹಿರಿಯ ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಅವರನ್ನು ಸೋಲಿಸಿ ಈ ಸ್ಥಾನವನ್ನು ಗೆದ್ದಿದ್ದರು. 2015 ಮತ್ತು 2020 ರ ಚುನಾವಣೆಯಲ್ಲಿ ಕೂಡಾ ಅವರು ಭಾರಿ ಅಂತರದಿಂದ ಈ ಕ್ಷೇತ್ರವನ್ನು ಅವರು ಗೆದ್ದಿದ್ದರು. ದೆಹಲಿ ಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚುನಾವಣಾ ಆಯೋಗದ ವೆಬ್‌ಸೈಟ್‌ ನೀಡಿದ ಮಾಹಿತಿಯಂತೆ ಕ್ಷೇತ್ರದ ಒಟ್ಟು 14 ಸುತ್ತಿನ ಎಣಿಕೆಯಲ್ಲಿ 13ನೇ ಸುತ್ತಿನಲ್ಲಿ ಕೇಜ್ರಿವಾಲ್ ಅವರಿಗೆ 25,999 ಮತಗಳು ಲಭಿಸಿದ್ದು, ಬಿಜೆಪಿಯ ಪರ್ವೇಶ್ ವರ್ಮಾ ಅವರಿಗೆ 30,088 ಮತಗಳು ಲಭ್ಯವಾಗಿದೆ. ಈ ನಡುವೆ ಕಾಂಗ್ರೆಸ್‌ನ ಸಂದೀಪ್ ದೀಕ್ಷಿತ್ ಅವರಿಗೆ 4,568 ಮತಗಳು ಲಭ್ಯವಾಗಿದೆ.

ನವದೆಹಲಿಯಂತಹ ಪ್ರಮುಖ ಕ್ಷೇತ್ರದಲ್ಲಿ ಕೇಜ್ರಿವಾಲ್ ವಿರುದ್ಧದ ಗೆಲುವು ಕಂಡ ಪರ್ವೇಶ್ ವರ್ಮಾ ಅವರು ಎರಡು ಬಾರಿ ಪಶ್ಚಿಮ ದೆಹಲಿ ಸಂಸದರಾಗಿ ಆಯ್ಕೆಯಾಗಿದ್ದರು. ‘ಶಾಖ ಪ್ರಮುಖ್’ ಆಗಿ ಆರ್‌ಎಸ್‌ಎಸ್‌ನೊಂದಿಗೆ ದೀರ್ಘಕಾಲದ ಸಂಬಂಧ ಹೊಂದಿರುವ ಪರ್ವೇಶ್ ಅವರು, ನಂತರ ಬಿಜೆಪಿಯಲ್ಲಿ ನೆಲೆ ಕಂಡಿದ್ದರು.

ಪ್ರಚಾರದ ಸಮಯದಲ್ಲಿ ಕೇಜ್ರಿವಾಲ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದ ಅವರು, ಕ್ಷೇತ್ರದ ನಾಗರಿಕ ಸಮಸ್ಯೆಗಳನ್ನು ಮಾಜಿ ಮುಖ್ಯಮಂತ್ರಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದರು. ನದಿಯ ಮಾಲಿನ್ಯ ಮತ್ತು ಅದನ್ನು ಸ್ವಚ್ಛಗೊಳಿಸುವಲ್ಲಿ ಕೇಜ್ರಿವಾಲ್ ಅವರ ವೈಫಲ್ಯವನ್ನು ಎತ್ತಿ ತೋರಿಸಲು ಅವರು ಯಮುನಾದಲ್ಲಿ ಕೇಜ್ರಿವಾಲ್ ಅವರ ಪ್ರತಿಮೆಯನ್ನು ಮುಳುಗಿಸಿದ್ದರು.

ಈ ನಡುವೆ, ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಆರಂಭಿಕ ಎಣಿಕೆಯಿಂದಲೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತರೂಢ ಎಎಪಿ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಕಾಂಗ್ರೆಸ್‌ ಕಳೆದ ಬಾರಿಯಂತೆ ಶೂನ್ಯ ಸಾಧನೆಯಲ್ಲೆ ಇದೆ.

ಮಧ್ಯಾಹ್ನ 1.30ರ ಸಮಯದಲ್ಲಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಮಾಹಿತಿಯಂತೆ 70 ಕ್ಷೇತ್ರಗಳಿರುವ ದೆಹಲಿ ಚುನಾವಣೆಯಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತರೂಢ ಎಎಪಿ ಕೇವಲ 22 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂಓದಿ:  ಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

ಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...