Homeಮುಖಪುಟದೆಹಲಿ ಚುನಾವಣಾ ಪ್ರಚಾರಕ್ಕೆ ಪಂಜಾಬ್‌ನ ಸಚಿವರು, ಶಾಸಕರು ಸೇರಿದಂತೆ 300 ಎಎಪಿ ನಾಯಕರು!

ದೆಹಲಿ ಚುನಾವಣಾ ಪ್ರಚಾರಕ್ಕೆ ಪಂಜಾಬ್‌ನ ಸಚಿವರು, ಶಾಸಕರು ಸೇರಿದಂತೆ 300 ಎಎಪಿ ನಾಯಕರು!

- Advertisement -
- Advertisement -

ಫೆಬ್ರವರಿ 5 ರಂದು ನಡೆಯಲಿರುವ ದೆಹಲಿಯ ಚುನಾವಣೆಗೆ ಪಂಜಾಬ್ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕತ್ವವು ಸಂಪೂರ್ಣವಾಗಿ ಸಜ್ಜುಗೊಂಡಿದ್ದು, ರಾಜ್ಯದ ಕ್ಯಾಬಿನೆಟ್ ಸಚಿವರು, ಶಾಸಕರು, ಮಂಡಳಿಗಳು ಮತ್ತು ನಿಗಮಗಳ ಅಧ್ಯಕ್ಷರು, ಹೊಸದಾಗಿ ಆಯ್ಕೆಯಾದ ಕೌನ್ಸಿಲರ್‌ಗಳು, ಸ್ವಯಂಸೇವಕರು ಮತ್ತು ಪಂಜಾಬ್‌ನಿಂದ ಕಾರ್ಯಕರ್ತರು ಸೇರಿದಂತೆ ಸುಮಾರು 300 ಪಕ್ಷದ ನಾಯಕರಿಗೆ ದೆಹಲಿಯಾದ್ಯಂತ ಪ್ರಚಾರದ ಕರ್ತವ್ಯಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ. ಎಲ್ಲರೂ ಹೆಚ್ಚಿನ ಜವಾಬ್ದಾರಿಯೊಂದಿಗೆ ಚುನಾವಣೆಯಲ್ಲಿ ವಾರ್ಡ್ ಮಟ್ಟದಲ್ಲಿ ಕೆಲಸ ಮಾಡಲಿದ್ದಾರೆ ಎಂದು ವರದಿಯಾಗಿದೆ. ದೆಹಲಿ ಚುನಾವಣಾ

ಕಳೆದ ಎರಡೂವರೆ ವರ್ಷಗಳಲ್ಲಿ ಪಂಜಾಬ್‌ನಲ್ಲಿ ಎಎಪಿ ನೇತೃತ್ವದ ಸರ್ಕಾರ ತೆಗೆದುಕೊಂಡ ಉಪಕ್ರಮಗಳು ಮತ್ತು ಈ ಉಪಕ್ರಮಗಳಿಂದ ಸೃಷ್ಟಿಯಾದ 48,000 ಉದ್ಯೋಗಗಳು, ಆಮ್ ಆದ್ಮಿ ಚಿಕಿತ್ಸಾಲಯಗಳ ಸ್ಥಾಪನೆ ಮತ್ತು 300 ಯೂನಿಟ್ ಉಚಿತ ವಿದ್ಯುತ್ ಒದಗಿಸುವುದು ಸೇರಿದಂತೆ ಇದು ಸಾಮಾನ್ಯ ಜನರಿಗೆ ಹೇಗೆ ಪ್ರಯೋಜನವನ್ನು ನೀಡಿವೆ ಎಂಬುದನ್ನು ಅವರು ಈ ವೇಳೆ ಹೈಲೈಟ್ ಮಾಡಲಿದ್ದಾರೆ ಎಂದು ಪಕ್ಷದ ನಾಯಕ ಹೇಳಿದ್ದಾರೆ.

ಅನೇಕ ನಾಯಕರು ಮತ್ತು ಸ್ವಯಂಸೇವಕರು ದೆಹಲಿಯಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ನೆಲೆಸಿದ್ದು, ಮತದಾರರೊಂದಿಗೆ ತೊಡಗಿಸಿಕೊಳ್ಳಲು ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಶಾಸಕರಿಗೆ ನಿರ್ದಿಷ್ಟ ಕ್ಷೇತ್ರಗಳನ್ನು ನಿಯೋಜಿಸಲಾಗಿದ್ದು, ಸಚಿವರುಗಳು ಸ್ಥಳೀಯ ಎಎಪಿ ನಾಯಕತ್ವದೊಂದಿಗೆ ಸಮನ್ವಯದೊಂದಿಗೆ ತಲಾ ಎರಡರಿಂದ ಮೂರು ಕ್ಷೇತ್ರಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಷ್ಟೆ ಅಲ್ಲದೆ, ಮುಂದಿನ ದಿನಗಳಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ದೆಹಲಿಯಲ್ಲಿ ಹಲವಾರು ರೋಡ್ ಶೋಗಳು ಮತ್ತು ಸಾರ್ವಜನಿಕ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ.ದೆಹಲಿ ಚುನಾವಣಾ

ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಅವರು ಮಾತನಾಡಿ, “ಚುನಾವಣಾ ಪ್ರಚಾರದ ಸಮಯದಲ್ಲಿ ಪಂಜಾಬ್‌ನಲ್ಲಿ ನಮ್ಮ ಸರ್ಕಾರ ಮಾಡಿದ ಕೆಲಸ ಮತ್ತು ದೆಹಲಿಗೆ ಅರವಿಂದ್ ಕೇಜ್ರಿವಾಲ್ ಅವರ ಆಡಳಿತ ಮಾದರಿಯನ್ನು ನಾವು ಪ್ರದರ್ಶಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಪ್ರತಿಯೊಬ್ಬ ನಾಯಕರಿಗೂ ನಿರ್ದಿಷ್ಟ ಕರ್ತವ್ಯಗಳನ್ನು ನೀಡಲಾಗಿದೆ. ಕೇಜ್ರಿವಾಲ್ ಅವರ ಆಡಳಿತ ಮಾದರಿ ಪಂಜಾಬ್‌ಗೆ ಪ್ರಯೋಜನವನ್ನು ನೀಡಿದೆ. ಹೀಗಾಗಿ ಪಂಜಾಬ್‌ನಲ್ಲಿ ಸಾಮಾನ್ಯ ಜನರು ಅದರಿಂದ ಹೇಗೆ ಪ್ರಯೋಜನ ಪಡೆದಿದ್ದಾರೆ ಎಂಬುದನ್ನು ನಾವು ಎತ್ತಿ ತೋರಿಸುತ್ತಿದ್ದೇವೆ. ಇದು ನಮಗೆ ಪ್ರಮುಖ ಚುನಾವಣೆಯಾಗಿದ್ದು, ಹೆಚ್ಚಿನ ಜವಾಬ್ದಾರಿಯ ಯುದ್ಧಕಣವಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪಂಜಾಬ್ ಎಎಪಿ ಅಧ್ಯಕ್ಷ ಅಮನ್ ಅರೋರಾ ನೇತೃತ್ವದ ಶಾಸಕರು ಮತ್ತು ಇತರ ನಾಯಕರನ್ನು ಹೊರತುಪಡಿಸಿ ಪಂಜಾಬ್‌ನ ಎಲ್ಲಾ ಕ್ಯಾಬಿನೆಟ್ ಸಚಿವರು ರಾಷ್ಟ್ರ ರಾಜಧಾನಿಯಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಚುನಾವಣೆಯು ಎಎಪಿಯ ನೀತಿಗಳು ಮತ್ತು ಉಪಕ್ರಮಗಳ ಅನುಮೋದನೆಯ ಮುದ್ರೆಯಾಗಲಿದೆ ಎಂದು ಚೀಮಾ ಪ್ರತಿಪಾದಿಸಿದ್ದಾರೆ.

ಎಎಪಿಯ ಪಂಜಾಬ್ ಘಟಕದ ವಕ್ತಾರ ನೀಲ್ ಗರ್ಗ್ ಅವರು ಮಾತನಾಡಿ, “ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ, ಪಕ್ಷದ ನಾಯಕತ್ವಕ್ಕೆ ಈಗಾಗಲೇ ರಾಷ್ಟ್ರ ರಾಜಧಾನಿಯಲ್ಲಿ ಕರ್ತವ್ಯಗಳನ್ನು ನಿಯೋಜಿಸಲಾಗಿದೆ. ಪಕ್ಷದ ಸುಮಾರು 300 ನಾಯಕರು, ಎಲ್ಲಾ ರಾಜ್ಯ ಸಂಪುಟ ಸಚಿವರು, ಶಾಸಕರು, ಮಂಡಳಿಗಳು ಮತ್ತು ನಿಗಮಗಳ ಅಧ್ಯಕ್ಷರು ಮತ್ತು ಇತರರಿಗೆ ಕೆಲಸಗಳನ್ನು ನೀಡಲಾಗಿದೆ. ಪ್ರತಿಯೊಬ್ಬ ಸಂಪುಟ ಸಚಿವರನ್ನು ಕನಿಷ್ಠ ಎರಡರಿಂದ ಮೂರು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ವಹಿಸಲಾಗಿದೆ ಮತ್ತು ಸ್ಥಳೀಯ ಎಎಪಿ ನಾಯಕತ್ವದೊಂದಿಗೆ ಸಮನ್ವಯದೊಂದಿಗೆ ಅವುಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ” ಎಂದು ತಿಳಿಸಿದ್ದಾರೆ.

“ಪ್ರತಿಯೊಬ್ಬ ಶಾಸಕರು ಒಂದು ವಿಧಾನಸಭಾ ಸ್ಥಾನಕ್ಕೆ ಜವಾಬ್ದಾರರಾಗಿರುತ್ತಾರೆ. ಮಂಡಳಿಗಳು ಮತ್ತು ನಿಗಮಗಳ ಅಧ್ಯಕ್ಷರಿಗೆ ಪ್ರತಿ ವಾರ್ಡ್‌ಗೆ ಕರ್ತವ್ಯಗಳನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ, ಸಂಸತ್ ಸದಸ್ಯರಿಗೆ ಸಹ ಜವಾಬ್ದಾರಿಗಳನ್ನು ನೀಡಲಾಗಿದೆ” ಎಂದು ಅವರು ಹೇಳಿದ್ದಾರೆ.

“ಈ ಚುನಾವಣೆಗಳಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಮನೆ-ಮನೆ ಪ್ರಚಾರ, ಸಾಮಾನ್ಯ ಪ್ರಚಾರ ಮತ್ತು ಸಂಪರ್ಕ ಕಾರ್ಯಕ್ರಮದ ಜವಾಬ್ದಾರಿಯನ್ನು ಪಂಜಾಬ್‌ನ ನಾಯಕರು ವಹಿಸಿಕೊಳ್ಳುತ್ತಾರೆ. ನಾವು ಸಾರ್ವಜನಿಕರಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೇವೆ. ದೆಹಲಿಯಲ್ಲಿ ಎಎಪಿ ಸರ್ಕಾರದ ದೂರದೃಷ್ಟಿಯ ಬಗ್ಗೆ ಜನರಿಗೆ ಹೇಳುತ್ತಿದ್ದೇವೆ ಮತ್ತು ಹೊಸ ಯೋಜನೆಗಳ ನಮೂನೆಗಳನ್ನು ಭರ್ತಿ ಮಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...