HomeಮುಖಪುಟDelhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

- Advertisement -
- Advertisement -

ದೆಹಲಿ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ಏರುತ್ತಿದ್ದು, ಆಡಳಿತರೂಢ ಎಎಪಿ ಹೀನಾಯವಾಗಿ ಸೋಲುಂಡಿದೆ. ಚುನಾವಣೆಯಲ್ಲಿ ಎಎಪಿಯ ಘಟಾನುಘಟಿ ನಾಯಕರು ಸೋಲುಂಡಿರುವ ನಡುವೆ ಮುಖ್ಯಮಂತ್ರಿ ಅತಿಶಿ ತಮ್ಮ ಕಲ್ಕಾಜಿ ವಿಧಾನಸಭಾ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಧಿ ರಮೇಶ್ ಬಿಧುರಿ ಅವರನ್ನು 3521 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ ತಿಳಿಸಿದೆ. Delhi Election Results 2025

ಈ ನಡುವೆ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರಂವಿದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಮಾಜಿ ಸಚಿವ ಸತ್ಯೇಂದ್ರ ಜೈನ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರ ಸೋಲಿನ ನಡುವೆ ಅತಿಶಿ ಅವರ ಗೆಲುವು ಪಕ್ಷಕ್ಕೆ ಸಮಾಧಾನ ತಂದಿದೆ. Delhi Election Results 2025

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರತಿಷ್ಠಿತ ನವದೆಹಲಿ ಸ್ಥಾನವನ್ನು ಕೇಜ್ರಿವಾಲ್ ಪರ್ವೇಶ್ ವರ್ಮಾ ವಿರುದ್ಧ ಸೋತರೆ, ಮನೀಶ್ ಸಿಸೋಡಿಯಾ ಅವರನ್ನು ಜಂಗ್‌ಪುರದಿಂದ ಬಿಜೆಪಿಯ ತರ್ವಿಂದರ್ ಸಿಂಗ್ ಮಾರ್ವಾ ಸೋಲಿಸಿದರು. ದೆಹಲಿ ಸಚಿವ ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್ ಕ್ಷೇತ್ರದಿಂದ, ರಾಜಿಂದರ್ ನಗರದಿಂದ ದುರ್ಗೇಶ್ ಪಾಠಕ್, ಮಾಲ್ವಿಯಾ ನಗರದಿಂದ ಸೋಮನಾಥ್ ಭಾರ್ತಿ ಮತ್ತು ಶಕುರ್ ಬಸ್ತಿಯಿಂದ ಸತ್ಯೇಂದರ್ ಜೈನ್ ಸೋತರು.

ಕಲ್ಕಾಜಿಯಲ್ಲಿ ಎಎಪಿ ಮತ್ತು ಬಿಜೆಪಿಯಿಂದ ಭರ್ಜರಿ ಪ್ರಚಾರ ನಡೆದಿತ್ತು. ಚುನಾವಣೆಗೆ ಮುನ್ನ ಅತಿಶಿ ಮತ್ತು ಬಿಧುರಿ ನಡುವಿನ ತೀಕ್ಷ್ಣವಾದ ವಾಕ್ಸಮರ ನಡೆದಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಯಾಗಿ ಅಲ್ಕಾ ಲಂಬಾ ಅವರನ್ನು ಕಣಕ್ಕಿಳಿಸಿತ್ತು. ಚುನಾವಣೆಯಲ್ಲಿ ಅತಿಶಿ ಅವರು 52,154 ಮತಗಳನ್ನು ಪಡೆದರೆ, ಬಿಜೆಪಿಯ ರಮೇಶ್ ಬಿಧುರಿ 48,633 ಪಡೆದು 3,521 ಮತಗಳಿಂದ ಸೋಲುಂಡಿದ್ದಾರೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಅಲ್ಕಾ ಲಂಬಾ 4,392 ಮತಗಳನ್ನು ಪಡೆದಿದ್ದಾರೆ.

ಮೂರು ಬಾರಿ ದೆಹಲಿ ಶಾಸಕರಾಗಿದ್ದ ರಮೇಶ್ ಬಿಧುರಿ, ಮುಖ್ಯಮಂತ್ರಿ ಅತಿಶಿ ತಮ್ಮ “ಮರ್ಲೆನಾ” ಎಂಬ ಉಪನಾಮವನ್ನು ಬಳಸುವುದನ್ನು ನಿಲ್ಲಿಸುವ ನಿರ್ಧಾರವನ್ನು ಟೀಕಿಸಿದ್ದರು. ಇದರ ನಂತರ ಅವರಿಬ್ಬರ ನಡುವೆ ತೀವ್ರ ವಾಕ್ಸಮರ ನಡೆಡಿತ್ತು. ಶಿಕ್ಷಣ ಸಲಹೆಗಾರರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ 43 ವರ್ಷದ ಅತಿಶಿ ಅವರು, ರಾಷ್ಟ್ರ ರಾಜಧಾನಿಯಲ್ಲಿ ಶೈಕ್ಷಣಿಕ ಸುಧಾರಣೆಗಳನ್ನು ತರಲು ಆಗಿನ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

ಈ ನಡುವೆ, ಜಂಗ್‌ಪುರ ಕ್ಷೇತ್ರದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಥಿ ತರ್ವಿಂದರ್ ಸಿಂಗ್ ಮರ್ವಾ ಅವರ ಮುಂದೆ  675 ಮತಗಳ ಅಂತರದಿಂದ ಸೋಲುಂಡಿದ್ದಾರೆ. ಬಿಜೆಪಿಯ ತರ್ವಿಂದರ್ ಸಿಂಗ್‌ಗೆ 38,859 ಮತಗಳು ಲಭಿಸಿದ್ದರೆ, ಮನೀಶ್ ಅವರಿಗೆ 38,184 ಮತಗಳು ಸಿಕ್ಕಿವೆ. ಈ ನಡುವೆ ಕಾಂಗ್ರೆಸ್‌ನ ಫರಾದ್ ಸೂರಿ ಅವರಿಗೆ 7,350 ಮತಗಳು ಲಭಿಸಿದೆ.

ಎಎಪಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರು ಶಕುರ್ ಬಸ್ತಿ ಕ್ಷೇತ್ರದಲ್ಲಿ ಬಿಜೆಪಿಯ ಕರ್ನೈಲ್ ಸಿಂಗ್ ವಿರುದ್ಧ 20,998 ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲುಂಡಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿಗೆ 56,869 ಮತಗಳು ಲಭಿಸಿದ್ದರೆ, ಎಎಪಿಗೆ 35,871 ಹಾಗೂ ಕಾಂಗ್ರೆಸ್‌ನ ಸತೀಶ್ ಕುಮಾರ್ ಲೂತ್ರಾ ಅವರಿಗೆ 5,784 ಮತಗಳು ಲಭ್ಯವಾಗಿದೆ. Delhi Election Results 2025

ಇದನ್ನೂಓದಿ:  ಸಂಭಾಲ್ ಧ್ವಂಸ ಪ್ರಕರಣ | ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ – ಸುಪ್ರೀಂಕೋರ್ಟ್‌

ಸಂಭಾಲ್ ಧ್ವಂಸ ಪ್ರಕರಣ | ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ – ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...