HomeಮುಖಪುಟDelhi Election Results - ಎಎಪಿ 22; ಬಿಜೆಪಿ 48; ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ ಸಾಧನೆ!

Delhi Election Results – ಎಎಪಿ 22; ಬಿಜೆಪಿ 48; ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ ಸಾಧನೆ!

- Advertisement -
- Advertisement -

ರಾಷ್ಟ್ರ ರಾಜಧಾನಿಯ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸುವ ಮೂಲಕ ದೆಹಲಿ ಗದ್ದುಗೆಯನ್ನು 27 ವರ್ಷಗಳ ನಂತರ ಏರುತ್ತಿದೆ. ವಿಧಾನಸಭೆಯ ಒಟ್ಟು 70 ಕ್ಷೇತ್ರಗಳಲ್ಲಿ ಪಕ್ಷವು 48 ಸ್ಥಾನಗಳನ್ನು ಗಳಿಸಿದ್ದು, ಆಡಳಿತರೂಢ ಎಎಪಿಯ ಸಂಖ್ಯೆ 22 ಕ್ಕೆ ಇಳಿದಿದೆ. ಪಕ್ಷದ ಪ್ರಮುಖ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಮುಖ ವ್ಯಕ್ತಿಗಳು ಚುನಾವಣೆಯಲ್ಲಿ ಸೋಲುಂಡಿದ್ದು ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ. ಅದಾಗ್ಯೂ, ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಕಲ್ಕಾಜಿ ಕ್ಷೇತ್ರವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. Delhi Election Results

2020ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 62 ಸ್ಥಾನಗಳನ್ನು ಗೆದ್ದು, ಬಿಜೆಪಿಗೆ 8 ಸ್ಥಾನಗಳಲ್ಲಿ ಸಮಾಧಾನ ಪಡುವಂತೆ ಮಾಡಿತ್ತು. ಅದಕ್ಕೂ ಮುಂಚಿನ 2015ರ ಚುನಾವಣೆಯಲ್ಲಿ ಎಎಪಿ ವಿಧಾನಸಭೆಯ 70 ಕ್ಷೇತ್ರಗಳಲ್ಲಿ 67 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು, ಬಿಜೆಪಿಗೆ 3 ಸ್ಥಾನಗಳಷ್ಟೆ ದಕ್ಕಿತ್ತು. ಅದಾಗ್ಯೂ, ಕಾಂಗ್ರೆಸ್ ಸಸತ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಶೂನ್ಯ ಸಾಧನೆ ಮಾಡಿದೆ. Delhi Election Results

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಧಿ ರಮೇಶ್ ಬಿಧುರಿ ಅವರನ್ನು 3521 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ ತಿಳಿಸಿದೆ. ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರಂವಿದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಮಾಜಿ ಸಚಿವ ಸತ್ಯೇಂದ್ರ ಜೈನ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರ ಸೋಲಿನ ನಡುವೆ ಅತಿಶಿ ಅವರ ಗೆಲುವು ಪಕ್ಷಕ್ಕೆ ಸಮಾಧಾನ ತಂದಿದೆ.

ಪ್ರತಿಷ್ಠಿತ ನವದೆಹಲಿ ಸ್ಥಾನವನ್ನು ಕೇಜ್ರಿವಾಲ್ ಪರ್ವೇಶ್ ವರ್ಮಾ ವಿರುದ್ಧ ಸೋತರೆ, ಮನೀಶ್ ಸಿಸೋಡಿಯಾ ಅವರನ್ನು ಜಂಗ್‌ಪುರದಿಂದ ಬಿಜೆಪಿಯ ತರ್ವಿಂದರ್ ಸಿಂಗ್ ಮಾರ್ವಾ ಸೋಲಿಸಿದರು. ದೆಹಲಿ ಸಚಿವ ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್ ಕ್ಷೇತ್ರದಿಂದ, ರಾಜಿಂದರ್ ನಗರದಿಂದ ದುರ್ಗೇಶ್ ಪಾಠಕ್, ಮಾಲ್ವಿಯಾ ನಗರದಿಂದ ಸೋಮನಾಥ್ ಭಾರ್ತಿ ಮತ್ತು ಶಕುರ್ ಬಸ್ತಿಯಿಂದ ಸತ್ಯೇಂದರ್ ಜೈನ್ ಸೋತರು.

ಕಲ್ಕಾಜಿಯಲ್ಲಿ ಎಎಪಿ ಮತ್ತು ಬಿಜೆಪಿಯಿಂದ ಭರ್ಜರಿ ಪ್ರಚಾರ ನಡೆದಿತ್ತು. ಚುನಾವಣೆಗೆ ಮುನ್ನ ಅತಿಶಿ ಮತ್ತು ಬಿಧುರಿ ನಡುವಿನ ತೀಕ್ಷ್ಣವಾದ ವಾಕ್ಸಮರ ನಡೆದಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಯಾಗಿ ಅಲ್ಕಾ ಲಂಬಾ ಅವರನ್ನು ಕಣಕ್ಕಿಳಿಸಿತ್ತು. ಚುನಾವಣೆಯಲ್ಲಿ ಅತಿಶಿ ಅವರು 52,154 ಮತಗಳನ್ನು ಪಡೆದರೆ, ಬಿಜೆಪಿಯ ರಮೇಶ್ ಬಿಧುರಿ 48,633 ಪಡೆದು 3,521 ಮತಗಳಿಂದ ಸೋಲುಂಡಿದ್ದಾರೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಅಲ್ಕಾ ಲಂಬಾ 4,392 ಮತಗಳನ್ನು ಪಡೆದಿದ್ದಾರೆ.

ಮೂರು ಬಾರಿ ದೆಹಲಿ ಶಾಸಕರಾಗಿದ್ದ ರಮೇಶ್ ಬಿಧುರಿ, ಮುಖ್ಯಮಂತ್ರಿ ಅತಿಶಿ ತಮ್ಮ “ಮರ್ಲೆನಾ” ಎಂಬ ಉಪನಾಮವನ್ನು ಬಳಸುವುದನ್ನು ನಿಲ್ಲಿಸುವ ನಿರ್ಧಾರವನ್ನು ಟೀಕಿಸಿದ್ದರು. ಇದರ ನಂತರ ಅವರಿಬ್ಬರ ನಡುವೆ ತೀವ್ರ ವಾಕ್ಸಮರ ನಡೆಡಿತ್ತು. ಶಿಕ್ಷಣ ಸಲಹೆಗಾರರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ 43 ವರ್ಷದ ಅತಿಶಿ ಅವರು, ರಾಷ್ಟ್ರ ರಾಜಧಾನಿಯಲ್ಲಿ ಶೈಕ್ಷಣಿಕ ಸುಧಾರಣೆಗಳನ್ನು ತರಲು ಆಗಿನ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

ಈ ನಡುವೆ, ಜಂಗ್‌ಪುರ ಕ್ಷೇತ್ರದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಥಿ ತರ್ವಿಂದರ್ ಸಿಂಗ್ ಮರ್ವಾ ಅವರ ಮುಂದೆ 675 ಮತಗಳ ಅಂತರದಿಂದ ಸೋಲುಂಡಿದ್ದಾರೆ. ಬಿಜೆಪಿಯ ತರ್ವಿಂದರ್ ಸಿಂಗ್‌ಗೆ 38,859 ಮತಗಳು ಲಭಿಸಿದ್ದರೆ, ಮನೀಶ್ ಅವರಿಗೆ 38,184 ಮತಗಳು ಸಿಕ್ಕಿವೆ. ಈ ನಡುವೆ ಕಾಂಗ್ರೆಸ್‌ನ ಫರಾದ್ ಸೂರಿ ಅವರಿಗೆ 7,350 ಮತಗಳು ಲಭಿಸಿದೆ.

ಎಎಪಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರು ಶಕುರ್ ಬಸ್ತಿ ಕ್ಷೇತ್ರದಲ್ಲಿ ಬಿಜೆಪಿಯ ಕರ್ನೈಲ್ ಸಿಂಗ್ ವಿರುದ್ಧ 20,998 ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲುಂಡಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿಗೆ 56,869 ಮತಗಳು ಲಭಿಸಿದ್ದರೆ, ಎಎಪಿಗೆ 35,871 ಹಾಗೂ ಕಾಂಗ್ರೆಸ್‌ನ ಸತೀಶ್ ಕುಮಾರ್ ಲೂತ್ರಾ ಅವರಿಗೆ 5,784 ಮತಗಳು ಲಭ್ಯವಾಗಿದೆ.

ಇದನ್ನೂಓದಿ:  Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...