HomeUncategorizedದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

- Advertisement -
- Advertisement -

ನವದೆಹಲಿ: ‘ಮೋದಿ, ಮಹಿಳಾ (ಮಹಿಳೆ), ಮಧ್ಯಮ ವರ್ಗದ’ ಮಂತ್ರವು ದೆಹಲಿಯಲ್ಲಿ ಬಿಜೆಪಿಯ ಪುನರಾಗಮನಕ್ಕೆ ದಾರಿ ಮಾಡಿಕೊಟ್ಟಿದೆ ಎಂದು 2025ರ ವಿಧಾನಸಭಾ ಚುನಾವಣೆಯ ಮತಗಳ ಎಣಿಕೆಯ ಸಮಯದಲ್ಲಿ ತಜ್ಞರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಮಹಿಳೆಯರು ಮತ್ತು ದೆಹಲಿಯ ಮಧ್ಯಮ ವರ್ಗದ ನಿವಾಸಿಗಳ ದೊಡ್ಡ ವಿಭಾಗವು ಎಎಪಿಯನ್ನು ತಿರಸ್ಕರಿಸಿದೆ ಮತ್ತು ಈ ಬಾರಿ ಮತದಾರರಲ್ಲಿ ಪ್ರಧಾನಿ ನರೇಂದ್ರ ಮೋದಿಯ ನಿರಂತರ ಪ್ರಭಾವವು ಅರವಿಂದ್ ಕೇಜ್ರಿವಾಲ್ ಅವರ ಎಎಪಿಯನ್ನು ದೊಡ್ಡ ಸೋಲಿನ ಅಂಚಿಗೆ ತಳ್ಳಿತು. ಬಿಜೆಪಿ ಗೆಲುವು ಸಾಧಿಸಿದೆ.

ಈ ಚುನಾವಣೆಯಲ್ಲಿ ಎಎಪಿಯ ಪ್ರಭಾವಿಗಳಾದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸೋಲನ್ನನುಭವಿಸಿದ್ದಾರೆ. 2013ರಿಂದ ನವದೆಹಲಿ ಕ್ಷೇತ್ರದಿಂದ  ಕೇಜ್ರಿವಾಲ್ ಮತ್ತು ಜಂಗ್‌ಪುರ ಕ್ಷೇತ್ರದಿಂದ ಸಿಸೋಡಿಯಾ ಗೆಲುವು ಸಾಧಿಸುತ್ತಾ ಬಂದಿದ್ದರು.

2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪ್ರಾಬಲ್ಯ ಸಾಧಿಸಿತ್ತು. ಆಗ ಎಎಪಿಯು 70 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿತು. 2015ರಲ್ಲಿ ಅದು ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಬಹುತೇಕ 67 ಸ್ಥಾನಗಳನ್ನು ಬಾಚಿಕೊಂಡಿತ್ತು.

ಮಾಜಿ ಭ್ರಷ್ಟಾಚಾರ ವಿರೋಧಿ ಕಾರ್ಯಕರ್ತನಾಗಿದ್ದ ಕೇಜ್ರಿವಾಲ್ ಅವರ ಮೇಲೆ ‘ಶೀಶ್‌ಮಹಲ್’ ವಿವಾದದಿಂದ ಹಿಡಿದು ಮದ್ಯ ಅಬಕಾರಿ ನೀತಿ ಹಗರಣದವರೆಗೆ ಆರೋಪಗಳನ್ನು ಹೊರಿಸಲಾಗಿತ್ತು. ಈ ಸೋಲು ದೆಹಲಿ ಮೇಲಿನ ಅವರ ದಶಕದ ನಿಯಂತ್ರಣವನ್ನು ಕೊನೆಗೊಳಿಸಿದಂತಾಗಿದೆ.

ಆದರೆ ಬಿಜೆಪಿಯ (ಎಲ್ಲವೂ ಖಚಿತವಲ್ಲ) ಗೆಲುವಿನ ಹಿಂದಿನ ದೊಡ್ಡ ಅಂಶಗಳು ಮಧ್ಯಮ ವರ್ಗ ಮತ್ತು ಮಹಿಳಾ ಮತದಾರರಾಗಿದ್ದಾರೆ. ಈ ಎರಡು ವರ್ಗ ಈ ಹಿಂದೆ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಎಎಪಿಯ ಬಲವಾದ ಬೆಂಬಲಿಗರಾಗಿದ್ದರು.

‘ಮಹಿಳಾ’ ಮತದಾರರು

ಈ ಚುನಾವಣೆಯ ಆರಂಭದಲ್ಲಿಯೇ ಮಹಿಳೆಯರನ್ನು ಸಂಭಾವ್ಯ ಪ್ರಮುಖ ಮತಗಳ ನೆಲೆಯಾಗಿ ಗುರುತಿಸಿ ಬಿಜೆಪಿ, ಎಎಪಿ ಮತ್ತು ಕಾಂಗ್ರೆಸ್ ಎಲ್ಲರೂ ತಮ್ಮ ಪ್ರಣಾಳಿಕೆಗಳಲ್ಲಿ ಅವರಿಗಾಗಿ ವಿಶೇಷ ಭರವಸೆಗಳನ್ನು ನೀಡಿದ್ದರು. ದೆಹಲಿಯ ನೋಂದಾಯಿತ ಮತದಾರರಲ್ಲಿ ಶೇ.46ಕ್ಕಿಂತ ಹೆಚ್ಚು ಮಹಿಳಾ ಮತದಾರರಿದ್ದಾರೆ. ಅಂದರೆ ಸುಮಾರು 71 ಲಕ್ಷ ಮಹಿಳಾ ಮತದಾರನ್ನು ದೆಹಲಿ ವಿಧಾನಸಭಾ ಕ್ಷೇತ್ರವು ಹೊಂದಿದೆ.

ಮತದಾನದ ಹಿಂದಿನ ದಿನಗಳಲ್ಲಿ (ಅದು ಬುಧವಾರ), ಹೆಚ್ಚಿನ ಮಹಿಳೆಯರು ಮತ ಚಲಾಯಿಸಲು ಸಹಿ ಹಾಕುತ್ತಿದ್ದರು ಮತ್ತು ಅದು ಹೆಚ್ಚಿನ ಮತಗಳಾಗಿ ಬದಲಾಯಿತು. ಇದರಿಂದಾಗಿ ಈ ಚುನಾವಣಾ ಸಂದರ್ಭ ಮಹಿಳಾ ಮತದಾರರ ಸಂಖ್ಯೆ ಸುಮಾರು ಎರಡು ಪ್ರತಿಶತದಷ್ಟು ಏರಿಕೆ ಕಂಡಿತ್ತು.

2020ರ  ಚುನಾವಣೆಯಲ್ಲಿ ಎಎಪಿಯು ಸುಮಾರು ಶೇ. 60ರಷ್ಟು ಮಹಿಳಾ ಮತಗಳನ್ನು ಗಳಿಸಿತ್ತು ಎಂದು ರಾಜಕೀಯ ವಿಶ್ಲೇಷಕರು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಆಗ ಬಿಜೆಪಿಯು ಕೇವಲ ಶೇ.35 ರಷ್ಟು ಮಾತ್ರ ಮಹಿಳಾ ಮತಗಳನ್ನು ಗಳಿಸಿತ್ತು. ಈ ಬಾರಿ ಎಲ್ಲವೂ ತಲೆಕೆಳಗಾಗಿರುವಂತೆ ಕಾಣುತ್ತಿದೆ. ತಿಂಗಳಿಗೆ ರೂ. 2,500 ನೇರ ನಗದು ವರ್ಗಾವಣೆಯ ಭರವಸೆ ನೀಡಿದ ಕೇಸರಿ ಪಕ್ಷದ ಕಡೆ ಮಹಿಳೆಯರು ತಿರುಗಿರುವುದು ಕಾಣುತ್ತಿದೆ.

ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದಂತಹ ಇತರ ಭರವಸೆಗಳನ್ನು ಬಿಜೆಪಿ ಮತ್ತು ಎಎಪಿಗಳೆರಡರಿಂದ ನೀಡಲಾಗಿತ್ತು. ಇದರ ಜೊತೆ ಬಿಜೆಪಿಯು ಗರ್ಭಿಣಿ ಮಹಿಳೆಯರಿಗೆ ನಗದು ಸಹಾಯ ನೀಡುವ ಎರಡನೇ ವಿಶೇಷ ಪ್ರತಿಜ್ಞೆ ಮಾಡಿತ್ತು. ಎಎಪಿ ಇದೇ ರೀತಿಯ ತಿಂಗಳಿಗೆ ರೂ. 2,100 ನೀಡುವ ಭರವಸೆ ನೀಡಿತ್ತು. ಆದರೆ ಇದು ನಿಷ್ಪರಿಣಾಮಕಾರಿಯಾಗಿತ್ತು. ಅಧಿಕಾರದಲ್ಲಿದ್ದ ಪಕ್ಷವು ಇದರ ಅನುಷ್ಠಾನ ವಿಳಂಬದ ತಪ್ಪು ಕಾರ್ಯತಂತ್ರ ಇದಕ್ಕೆ ಕಾರಣವೆಂದು  ತಜ್ಞರು ಎನ್‌ಡಿಟಿವಿಗೆ  ಎಂದು ಹೇಳಿದ್ದಾರೆ.

ಈ ಸಂಬಂಧ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಎಎಪಿ ನಡುವೆ ಹಲವಾರು ಪೈಪೋಟಿಗಳು ನಡೆದವು. ಆಗಲೂ ಕೇಜ್ರಿವಾಲ್ ಇದನ್ನು ಕಾರ್ಯರೂಪಕ್ಕೆ ತರಬೇಕಿತ್ತು ಎಂದು ತಜ್ಞರು ಹೇಳಿದ್ದಾರೆ.

ಇದರರ್ಥ ಮಹಿಳಾ ಮತದಾರರು ಒಂದು ಕಾಲದಲ್ಲಿ ಎಎಪಿಗೆ ಪ್ರಮುಖವಾಗಿದ್ದರು. ಈಗ ವಿಶೇಷವಾಗಿ ಮಹಿಳಾ ಮಧ್ಯಮ ವರ್ಗದ ಮತದಾರರು ತಮ್ಮ ನಿಷ್ಠೆಯನ್ನು ಬದಲಾಯಿಸಿದ್ದಾರೆ.

ಮಧ್ಯಮ ವರ್ಗ

2025ರ ಕೇಂದ್ರ ಬಜೆಟ್ ನಂತರ ಮಧ್ಯಮ ವರ್ಗದವರು ಬಿಜೆಪಿ ಪಾಳಯಕ್ಕೆ ಜಿಗಿದಿರುವುದು ಕಂಡು ಬರುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಯಕ್ತಿಕ ಆದಾಯ ತೆರಿಗೆ ರಿಯಾಯಿತಿ ಮಿತಿಯಲ್ಲಿ ಭಾರಿ ಹೆಚ್ಚಳವನ್ನು ಘೋಷಿಸಿದರು. ರೂ. 12 ಲಕ್ಷ  ಹೊಂದಿರುವ ಜನರು ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲವೆಂಬುದು ಈ ಘೋಷಣೆಯಾಗಿದೆ. ಈ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಈ ಕ್ರಮವನ್ನು ಶ್ಲಾಘಿಸಿ ಮಾತನಾಡಿದರು. ದಕ್ಷಿಣ ದೆಹಲಿಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು ಆ ಅಂಶವನ್ನು ಮಂಡಿಸಿದರು.

ಭ್ರಷ್ಟಾಚಾರ ಹಗರಣಗಳಲ್ಲಿ ಎಎಪಿ ಸಿಲುಕಿದ ನಂತರ ಮಧ್ಯಮ ವರ್ಗದ ಮತಗಳು ಬಿಜೆಪಿಯತ್ತ ತಿರುಗಿದವು ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ. ಕೇಜ್ರಿವಾಲ್ ಮೇಲಿನ ಮದ್ಯ ನೀತಿ ವಿವಾದದ ಆರೋಪವು ಪ್ರಮುಖವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಮತ್ತು ಅವರ ಆಪ್ತ ಮನೀಶ್ ಸಿಸೋಡಿಯಾ ಇಬ್ಬರೂ ಹಲವಾರು ತಿಂಗಳುಗಳ ಕಾಲ ಜೈಲಿನಲ್ಲಿದ್ದರು.

ಮಧ್ಯಮ ವರ್ಗದವರು ದೆಹಲಿಯ ಮತದಾರರಲ್ಲಿ ಸುಮಾರು 40 ಪ್ರತಿಶತದಷ್ಟಿದ್ದಾರೆ. ಇದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಯಾವುದೇ ಚುನಾವಣೆಗೂ ಇವರು ನಿರ್ಣಾಯಕವಾಗಿದ್ದಾರೆ. ಬಿಜೆಪಿಯು ಇವರನ್ನು ತನ್ನ ಕಡೆಗೆ ಸೆಳೆಯಲು ಸಹಾಯ ಮಾಡಿದ್ದು ಆದಾಯ ತೆರಿಗೆ ವಿನಾಯಿತಿಯಾಗಿದೆ. ಇಷ್ಟು ಮಾತ್ರವಲ್ಲ ಕುಸಿಯುತ್ತಿರುವ ಮೂಲಸೌಕರ್ಯ ಮತ್ತು ವಾರ್ಷಿಕ ವಾಯು ಗುಣಮಟ್ಟದ ಬಿಕ್ಕಟ್ಟು ಕೂಡ ಕಾರಣವಾಗಿದೆ.

ಬಿಜೆಪಿ ಕಡೆ ಮತದಾರರು ಒಲವು ತೋರಿಸಲು ಮತ್ತೊಂದು ಪ್ರಮುಖ ‘ಆಕರ್ಷಕ’ವೆಂದರೆ 8ನೇ ವೇತನ ಆಯೋಗವಾಗಿದೆ. ಈ ಆಯೋಗವು ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿಗಳಿಗೆ ದೊಡ್ಡ ಪರಿಷ್ಕರಣೆಯನ್ನು ಶಿಫಾರಸು ಮಾಡಿತು. ಅವರಲ್ಲಿ ಹೆಚ್ಚಿನವರು ದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ಒಟ್ಟಾರೆಯಾಗಿ ಈ ಚುನಾವಣೆಯ ಫಲಿತಾಂಶದ ಹೊರತಾಗಿಯೂ, ಕೇಜ್ರಿವಾಲ್ ಅವರ ‘ಸ್ವಚ್ಛ’ ಮತ್ತು ‘ಭ್ರಷ್ಟಾಚಾರ ರಹಿತ’ ಇಮೇಜ್ ಕುಸಿದಿರುವಂತೆ ತೋರುತ್ತಿದೆ.

Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...