HomeUncategorizedದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

- Advertisement -
- Advertisement -

ನವದೆಹಲಿ: ‘ಮೋದಿ, ಮಹಿಳಾ (ಮಹಿಳೆ), ಮಧ್ಯಮ ವರ್ಗದ’ ಮಂತ್ರವು ದೆಹಲಿಯಲ್ಲಿ ಬಿಜೆಪಿಯ ಪುನರಾಗಮನಕ್ಕೆ ದಾರಿ ಮಾಡಿಕೊಟ್ಟಿದೆ ಎಂದು 2025ರ ವಿಧಾನಸಭಾ ಚುನಾವಣೆಯ ಮತಗಳ ಎಣಿಕೆಯ ಸಮಯದಲ್ಲಿ ತಜ್ಞರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಮಹಿಳೆಯರು ಮತ್ತು ದೆಹಲಿಯ ಮಧ್ಯಮ ವರ್ಗದ ನಿವಾಸಿಗಳ ದೊಡ್ಡ ವಿಭಾಗವು ಎಎಪಿಯನ್ನು ತಿರಸ್ಕರಿಸಿದೆ ಮತ್ತು ಈ ಬಾರಿ ಮತದಾರರಲ್ಲಿ ಪ್ರಧಾನಿ ನರೇಂದ್ರ ಮೋದಿಯ ನಿರಂತರ ಪ್ರಭಾವವು ಅರವಿಂದ್ ಕೇಜ್ರಿವಾಲ್ ಅವರ ಎಎಪಿಯನ್ನು ದೊಡ್ಡ ಸೋಲಿನ ಅಂಚಿಗೆ ತಳ್ಳಿತು. ಬಿಜೆಪಿ ಗೆಲುವು ಸಾಧಿಸಿದೆ.

ಈ ಚುನಾವಣೆಯಲ್ಲಿ ಎಎಪಿಯ ಪ್ರಭಾವಿಗಳಾದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸೋಲನ್ನನುಭವಿಸಿದ್ದಾರೆ. 2013ರಿಂದ ನವದೆಹಲಿ ಕ್ಷೇತ್ರದಿಂದ  ಕೇಜ್ರಿವಾಲ್ ಮತ್ತು ಜಂಗ್‌ಪುರ ಕ್ಷೇತ್ರದಿಂದ ಸಿಸೋಡಿಯಾ ಗೆಲುವು ಸಾಧಿಸುತ್ತಾ ಬಂದಿದ್ದರು.

2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪ್ರಾಬಲ್ಯ ಸಾಧಿಸಿತ್ತು. ಆಗ ಎಎಪಿಯು 70 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿತು. 2015ರಲ್ಲಿ ಅದು ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಬಹುತೇಕ 67 ಸ್ಥಾನಗಳನ್ನು ಬಾಚಿಕೊಂಡಿತ್ತು.

ಮಾಜಿ ಭ್ರಷ್ಟಾಚಾರ ವಿರೋಧಿ ಕಾರ್ಯಕರ್ತನಾಗಿದ್ದ ಕೇಜ್ರಿವಾಲ್ ಅವರ ಮೇಲೆ ‘ಶೀಶ್‌ಮಹಲ್’ ವಿವಾದದಿಂದ ಹಿಡಿದು ಮದ್ಯ ಅಬಕಾರಿ ನೀತಿ ಹಗರಣದವರೆಗೆ ಆರೋಪಗಳನ್ನು ಹೊರಿಸಲಾಗಿತ್ತು. ಈ ಸೋಲು ದೆಹಲಿ ಮೇಲಿನ ಅವರ ದಶಕದ ನಿಯಂತ್ರಣವನ್ನು ಕೊನೆಗೊಳಿಸಿದಂತಾಗಿದೆ.

ಆದರೆ ಬಿಜೆಪಿಯ (ಎಲ್ಲವೂ ಖಚಿತವಲ್ಲ) ಗೆಲುವಿನ ಹಿಂದಿನ ದೊಡ್ಡ ಅಂಶಗಳು ಮಧ್ಯಮ ವರ್ಗ ಮತ್ತು ಮಹಿಳಾ ಮತದಾರರಾಗಿದ್ದಾರೆ. ಈ ಎರಡು ವರ್ಗ ಈ ಹಿಂದೆ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಎಎಪಿಯ ಬಲವಾದ ಬೆಂಬಲಿಗರಾಗಿದ್ದರು.

‘ಮಹಿಳಾ’ ಮತದಾರರು

ಈ ಚುನಾವಣೆಯ ಆರಂಭದಲ್ಲಿಯೇ ಮಹಿಳೆಯರನ್ನು ಸಂಭಾವ್ಯ ಪ್ರಮುಖ ಮತಗಳ ನೆಲೆಯಾಗಿ ಗುರುತಿಸಿ ಬಿಜೆಪಿ, ಎಎಪಿ ಮತ್ತು ಕಾಂಗ್ರೆಸ್ ಎಲ್ಲರೂ ತಮ್ಮ ಪ್ರಣಾಳಿಕೆಗಳಲ್ಲಿ ಅವರಿಗಾಗಿ ವಿಶೇಷ ಭರವಸೆಗಳನ್ನು ನೀಡಿದ್ದರು. ದೆಹಲಿಯ ನೋಂದಾಯಿತ ಮತದಾರರಲ್ಲಿ ಶೇ.46ಕ್ಕಿಂತ ಹೆಚ್ಚು ಮಹಿಳಾ ಮತದಾರರಿದ್ದಾರೆ. ಅಂದರೆ ಸುಮಾರು 71 ಲಕ್ಷ ಮಹಿಳಾ ಮತದಾರನ್ನು ದೆಹಲಿ ವಿಧಾನಸಭಾ ಕ್ಷೇತ್ರವು ಹೊಂದಿದೆ.

ಮತದಾನದ ಹಿಂದಿನ ದಿನಗಳಲ್ಲಿ (ಅದು ಬುಧವಾರ), ಹೆಚ್ಚಿನ ಮಹಿಳೆಯರು ಮತ ಚಲಾಯಿಸಲು ಸಹಿ ಹಾಕುತ್ತಿದ್ದರು ಮತ್ತು ಅದು ಹೆಚ್ಚಿನ ಮತಗಳಾಗಿ ಬದಲಾಯಿತು. ಇದರಿಂದಾಗಿ ಈ ಚುನಾವಣಾ ಸಂದರ್ಭ ಮಹಿಳಾ ಮತದಾರರ ಸಂಖ್ಯೆ ಸುಮಾರು ಎರಡು ಪ್ರತಿಶತದಷ್ಟು ಏರಿಕೆ ಕಂಡಿತ್ತು.

2020ರ  ಚುನಾವಣೆಯಲ್ಲಿ ಎಎಪಿಯು ಸುಮಾರು ಶೇ. 60ರಷ್ಟು ಮಹಿಳಾ ಮತಗಳನ್ನು ಗಳಿಸಿತ್ತು ಎಂದು ರಾಜಕೀಯ ವಿಶ್ಲೇಷಕರು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಆಗ ಬಿಜೆಪಿಯು ಕೇವಲ ಶೇ.35 ರಷ್ಟು ಮಾತ್ರ ಮಹಿಳಾ ಮತಗಳನ್ನು ಗಳಿಸಿತ್ತು. ಈ ಬಾರಿ ಎಲ್ಲವೂ ತಲೆಕೆಳಗಾಗಿರುವಂತೆ ಕಾಣುತ್ತಿದೆ. ತಿಂಗಳಿಗೆ ರೂ. 2,500 ನೇರ ನಗದು ವರ್ಗಾವಣೆಯ ಭರವಸೆ ನೀಡಿದ ಕೇಸರಿ ಪಕ್ಷದ ಕಡೆ ಮಹಿಳೆಯರು ತಿರುಗಿರುವುದು ಕಾಣುತ್ತಿದೆ.

ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದಂತಹ ಇತರ ಭರವಸೆಗಳನ್ನು ಬಿಜೆಪಿ ಮತ್ತು ಎಎಪಿಗಳೆರಡರಿಂದ ನೀಡಲಾಗಿತ್ತು. ಇದರ ಜೊತೆ ಬಿಜೆಪಿಯು ಗರ್ಭಿಣಿ ಮಹಿಳೆಯರಿಗೆ ನಗದು ಸಹಾಯ ನೀಡುವ ಎರಡನೇ ವಿಶೇಷ ಪ್ರತಿಜ್ಞೆ ಮಾಡಿತ್ತು. ಎಎಪಿ ಇದೇ ರೀತಿಯ ತಿಂಗಳಿಗೆ ರೂ. 2,100 ನೀಡುವ ಭರವಸೆ ನೀಡಿತ್ತು. ಆದರೆ ಇದು ನಿಷ್ಪರಿಣಾಮಕಾರಿಯಾಗಿತ್ತು. ಅಧಿಕಾರದಲ್ಲಿದ್ದ ಪಕ್ಷವು ಇದರ ಅನುಷ್ಠಾನ ವಿಳಂಬದ ತಪ್ಪು ಕಾರ್ಯತಂತ್ರ ಇದಕ್ಕೆ ಕಾರಣವೆಂದು  ತಜ್ಞರು ಎನ್‌ಡಿಟಿವಿಗೆ  ಎಂದು ಹೇಳಿದ್ದಾರೆ.

ಈ ಸಂಬಂಧ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಎಎಪಿ ನಡುವೆ ಹಲವಾರು ಪೈಪೋಟಿಗಳು ನಡೆದವು. ಆಗಲೂ ಕೇಜ್ರಿವಾಲ್ ಇದನ್ನು ಕಾರ್ಯರೂಪಕ್ಕೆ ತರಬೇಕಿತ್ತು ಎಂದು ತಜ್ಞರು ಹೇಳಿದ್ದಾರೆ.

ಇದರರ್ಥ ಮಹಿಳಾ ಮತದಾರರು ಒಂದು ಕಾಲದಲ್ಲಿ ಎಎಪಿಗೆ ಪ್ರಮುಖವಾಗಿದ್ದರು. ಈಗ ವಿಶೇಷವಾಗಿ ಮಹಿಳಾ ಮಧ್ಯಮ ವರ್ಗದ ಮತದಾರರು ತಮ್ಮ ನಿಷ್ಠೆಯನ್ನು ಬದಲಾಯಿಸಿದ್ದಾರೆ.

ಮಧ್ಯಮ ವರ್ಗ

2025ರ ಕೇಂದ್ರ ಬಜೆಟ್ ನಂತರ ಮಧ್ಯಮ ವರ್ಗದವರು ಬಿಜೆಪಿ ಪಾಳಯಕ್ಕೆ ಜಿಗಿದಿರುವುದು ಕಂಡು ಬರುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಯಕ್ತಿಕ ಆದಾಯ ತೆರಿಗೆ ರಿಯಾಯಿತಿ ಮಿತಿಯಲ್ಲಿ ಭಾರಿ ಹೆಚ್ಚಳವನ್ನು ಘೋಷಿಸಿದರು. ರೂ. 12 ಲಕ್ಷ  ಹೊಂದಿರುವ ಜನರು ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲವೆಂಬುದು ಈ ಘೋಷಣೆಯಾಗಿದೆ. ಈ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಈ ಕ್ರಮವನ್ನು ಶ್ಲಾಘಿಸಿ ಮಾತನಾಡಿದರು. ದಕ್ಷಿಣ ದೆಹಲಿಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು ಆ ಅಂಶವನ್ನು ಮಂಡಿಸಿದರು.

ಭ್ರಷ್ಟಾಚಾರ ಹಗರಣಗಳಲ್ಲಿ ಎಎಪಿ ಸಿಲುಕಿದ ನಂತರ ಮಧ್ಯಮ ವರ್ಗದ ಮತಗಳು ಬಿಜೆಪಿಯತ್ತ ತಿರುಗಿದವು ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ. ಕೇಜ್ರಿವಾಲ್ ಮೇಲಿನ ಮದ್ಯ ನೀತಿ ವಿವಾದದ ಆರೋಪವು ಪ್ರಮುಖವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಮತ್ತು ಅವರ ಆಪ್ತ ಮನೀಶ್ ಸಿಸೋಡಿಯಾ ಇಬ್ಬರೂ ಹಲವಾರು ತಿಂಗಳುಗಳ ಕಾಲ ಜೈಲಿನಲ್ಲಿದ್ದರು.

ಮಧ್ಯಮ ವರ್ಗದವರು ದೆಹಲಿಯ ಮತದಾರರಲ್ಲಿ ಸುಮಾರು 40 ಪ್ರತಿಶತದಷ್ಟಿದ್ದಾರೆ. ಇದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಯಾವುದೇ ಚುನಾವಣೆಗೂ ಇವರು ನಿರ್ಣಾಯಕವಾಗಿದ್ದಾರೆ. ಬಿಜೆಪಿಯು ಇವರನ್ನು ತನ್ನ ಕಡೆಗೆ ಸೆಳೆಯಲು ಸಹಾಯ ಮಾಡಿದ್ದು ಆದಾಯ ತೆರಿಗೆ ವಿನಾಯಿತಿಯಾಗಿದೆ. ಇಷ್ಟು ಮಾತ್ರವಲ್ಲ ಕುಸಿಯುತ್ತಿರುವ ಮೂಲಸೌಕರ್ಯ ಮತ್ತು ವಾರ್ಷಿಕ ವಾಯು ಗುಣಮಟ್ಟದ ಬಿಕ್ಕಟ್ಟು ಕೂಡ ಕಾರಣವಾಗಿದೆ.

ಬಿಜೆಪಿ ಕಡೆ ಮತದಾರರು ಒಲವು ತೋರಿಸಲು ಮತ್ತೊಂದು ಪ್ರಮುಖ ‘ಆಕರ್ಷಕ’ವೆಂದರೆ 8ನೇ ವೇತನ ಆಯೋಗವಾಗಿದೆ. ಈ ಆಯೋಗವು ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿಗಳಿಗೆ ದೊಡ್ಡ ಪರಿಷ್ಕರಣೆಯನ್ನು ಶಿಫಾರಸು ಮಾಡಿತು. ಅವರಲ್ಲಿ ಹೆಚ್ಚಿನವರು ದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ಒಟ್ಟಾರೆಯಾಗಿ ಈ ಚುನಾವಣೆಯ ಫಲಿತಾಂಶದ ಹೊರತಾಗಿಯೂ, ಕೇಜ್ರಿವಾಲ್ ಅವರ ‘ಸ್ವಚ್ಛ’ ಮತ್ತು ‘ಭ್ರಷ್ಟಾಚಾರ ರಹಿತ’ ಇಮೇಜ್ ಕುಸಿದಿರುವಂತೆ ತೋರುತ್ತಿದೆ.

Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...