Homeಮುಖಪುಟದೆಹಲಿ ಚುನಾವಣೆ: ಸಂವಿಧಾನ ವಿರೋಧಿ ಬಿಜೆಪಿ ವಿರುದ್ಧ ಮತ ಹಾಕಲು ಚಂದ್ರಶೇಖರ್‌ ಆಜಾದ್‌ ಕರೆ..

ದೆಹಲಿ ಚುನಾವಣೆ: ಸಂವಿಧಾನ ವಿರೋಧಿ ಬಿಜೆಪಿ ವಿರುದ್ಧ ಮತ ಹಾಕಲು ಚಂದ್ರಶೇಖರ್‌ ಆಜಾದ್‌ ಕರೆ..

ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಲು ಚಿಂತನಶೀಲವಾಗಿ ಮತ ಚಲಾಯಿಸುವಂತೆ ದೆಹಲಿಯ ಬಹುಜನ ಸಮಾಜದ ಜನರಿಗೆ ಮನವಿ ಮಾಡುತ್ತೇನೆ..

- Advertisement -
- Advertisement -

ಫೆಬ್ರವರಿ 8 ರಂದು ನಡೆಯಲಿರುವ ದೆಹಲಿ ಚುನಾಚಣೆಯಲ್ಲಿ ಸಂವಿಧಾನ ವಿರೋಧಿ ಬಿಜೆಪಿ ಸೋಲಬೇಕು, ಹಾಗಾಗಿ ಬಿಜೆಪಿ ವಿರುದ್ಧ ಮತ ಹಾಕಬೇಕೆಂದು ಜನರಿಗೆ ಚಂದ್ರಶೇಖರ್‌ ಆಜಾದ್‌ ಕರೆ ನೀಡಿದ್ದಾರೆ.

ಈ ಕುರಿತು ಭಾರತದ ಸಂವಿಧಾನದ ಪ್ರತಿಯನ್ನು ಹಿಡಿದು ವಿಡಿಯೋ ಒಂದನ್ನು ಟ್ವಟ್ಟರ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಸಂವಿಧಾನದ ರಕ್ಷಣೆಯಿಂದಲೇ ದೇಶದ ಭದ್ರತೆ ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ. ಹಾಗಾಗಿ ದೇಶದ ಭದ್ರತೆಯ ಹೆಸರಿನಲ್ಲಿ ಮತ ಕೇಳುತ್ತಿರುವ ಬಿಜೆಪಿಗೆ ಯಾವುದೇ ಕಾರಣಕ್ಕು ಮತ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.

ಜೈ ಭೀಮ್ ಸ್ನೇಹಿತರೇ, ಭಾರತದ ಸಂವಿಧಾನವು ಇಂದು ಅಪಾಯದಲ್ಲಿದೆ. ಸಂವಿಧಾನ ಉಳಿದುಕೊಂಡಾಗ ಮಾತ್ರ ನಮ್ಮ ಜನರ ಹಕ್ಕುಗಳು ರಕ್ಷಿಸಲ್ಪಡುತ್ತವೆ, ಆದ್ದರಿಂದ ನಾನು ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಲು ಚಿಂತನಶೀಲವಾಗಿ ಮತ ಚಲಾಯಿಸುವಂತೆ ದೆಹಲಿಯ ಬಹುಜನ ಸಮಾಜದ ಜನರಿಗೆ ಮನವಿ ಮಾಡುತ್ತೇನೆ. ಸಂವಿಧಾನ ರಕ್ಷಣೆ ದೇಶದ ಭದ್ರತೆ. ಜೈ ಭೀಮ್ ಎಂದು ಅವರು ಘೋಷಿಸಿದ್ದಾರೆ.

ಈ ಹಿಂದೆ ಚಂದ್ರಶೇಖರ್‌ ಆಜಾದ್‌ ಸ್ವಂತ ಪಕ್ಷವೊಂದನ್ನು ಕಟ್ಟಿ ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದರು. ಘೋಷಣೆಯನ್ನು ಸಹ ಮಾಡಿದ್ದರು. ಆದರೆ ಸಿಎಎ ವಿರುದ್ಧದ ಹೋರಾಟದ ಕಾರಣಕ್ಕಾಗಿ ಅವರನ್ನು ಪೊಲೀಸರು ಜೈಲಿಗೆ ತಳ್ಳಿದ್ದರು. ಅಲ್ಲದೇ ಜಾಮೀನು ಸಿಕ್ಕರೂ ಸಹ ದೆಹಲಿ ಪ್ರವೇಶಿಸದಂತೆ ನಿರ್ಬಂಧಿಸಲಾಗಿತ್ತು. ಈ ಎಲ್ಲಾ ಕಾರಣಗಳಿಗಾಗಿ ಅವರು ಪಕ್ಷ ಕಟ್ಟಲು ಸಾಧ್ಯವಾಗಿಲ್ಲ. ಹಾಗಾಗಿ ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಅವರು ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...