Homeಮುಖಪುಟದೆಹಲಿ ಚುನಾವಣೆ | ಭರಪೂರ ಭರವಸೆಗಳನ್ನು ನೀಡಿದ ಬಿಜೆಪಿ : ನಮ್ಮದೇ ಕಾಪಿ ಎಂದ ಕಾಂಗ್ರೆಸ್,...

ದೆಹಲಿ ಚುನಾವಣೆ | ಭರಪೂರ ಭರವಸೆಗಳನ್ನು ನೀಡಿದ ಬಿಜೆಪಿ : ನಮ್ಮದೇ ಕಾಪಿ ಎಂದ ಕಾಂಗ್ರೆಸ್, ಎಎಪಿ

- Advertisement -
- Advertisement -

ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ, 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ವಿತರಣೆ ಸೇರಿದಂತೆ ಹಲವು ಭರವಸೆಗಳೊಂದಿಗೆ ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಶುಕ್ರವಾರ (ಜ.17) ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಈ ಕೆಳಗಿನ ಭರವಸೆಗಳನ್ನು ನೀಡಲಾಗಿದೆ.

  • ಮಹಿಳಾ ಸಮೃದ್ದಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ.
  • ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರಿಗೆ 500 ರೂಪಾಯಿಗೆ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್, ಹೋಳಿ ಮತ್ತು ದೀಪಾವಳಿ ಸಮಯದಲ್ಲಿ ತಲಾ ಒಂದು ಉಚಿತ ಸಿಲಿಂಡರ್.
  • ದೆಹಲಿಯ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿಯ ಆರೋಗ್ಯ ವಿಮೆ ಒದಗಿಸುವ ‘ಆಯುಷ್ಮಾನ್ ಭಾರತ್ ಯೋಜನೆ’ಯ ಅನುಷ್ಠಾನ.
  • ದೆಹಲಿಯ ನಿವಾಸಿಗಳಿಗೆ 5 ಲಕ್ಷ ಹೆಚ್ಚುವರಿ ಆರೋಗ್ಯ ವಿಮೆ.
  • 60-70- ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,500 ರೂಪಾಯಿ ಮಾಸಿಕ ಪಿಂಚಣಿ.
  • 70 ವರ್ಷ ಮೇಲ್ಪಟ್ಟವರಿಗೆ 3 ಸಾವಿರ ರೂಪಾಯಿ ಮಾಸಿಕ ಪಿಂಚಣಿ.
  • ಜೆಜೆ ಕ್ಲಸ್ಟರ್‌ಗಳಲ್ಲಿ ‘ಅಟಲ್ ಕ್ಯಾಂಟೀನ್‌’ಗಳ ಸ್ಥಾಪನೆ. ಕೇವಲ 5 ರೂಪಾಯಿಗೆ ಪೌಷ್ಠಿಕ ಊಟ.

ಕರ್ನಾಟಕ, ತೆಲಂಗಾಣ ಸೇರಿದಂತೆ ವಿವಿದೆಡೆ ಕಾಂಗ್ರೆಸ್‌ ಪಕ್ಷ ಚುನಾವಣಾ ಪೂರ್ವ ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೀಕಿಸಿದ್ದರು. ದೇಶ ದಿವಾಳಿಯಾಗುತ್ತದೆ ಎಂದಿದ್ದರು. ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಕೂಡ ಮಹಿಳೆಯರಿಗೆ ಆರ್ಥಿಕ ಸಹಾಯ, ಹಿರಿಯ ನಾಗರಿಕರಿಗೆ ಪಿಂಚಣಿ ಹೆಚ್ಚಳದ ಯೋಜನೆಗಳನ್ನು ಘೋಷಿಸಿದಾಗಲೂ ಬಿಜೆಪಿ ನಾಯಕರು ವಿರೋಧಿಸಿದ್ದರು.

ಆದರೆ, ಈಗ ಬಿಜೆಪಿಯೇ ಚುನಾವಣಾ ಪೂರ್ಣ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವುದಕ್ಕೆ ಕಾಂಗ್ರೆಸ್ ಮತ್ತು ಎಎಪಿ ವ್ಯಂಗ್ಯವಾಡಿದೆ. ‘ನಮ್ಮದೇ ಕಾಪಿ’ ಎಂದಿದೆ.

“ಕೇಜ್ರಿವಾಲ್‌ ಯೋಜನೆಗಳು ಸರಿ ಎಂದು ಮೋದಿ ಒಪ್ಪಿಕೊಳ್ಳಲಿ”

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, “ಎಎಪಿ ಘೋಷಣೆ ಮಾಡಿರುವ ಯೋಜನೆಗಳ ಕುರಿತು ನಾವು ಮಾಡಿರುವ ಟೀಕೆ ತಪ್ಪು ಎಂಬುವುದನ್ನು ಪ್ರಧಾನಿ ಮೋದಿಯವರು ಸಾರ್ವಜನಿಕವಾಗಿ ಒಪ್ಪಿಕೊಳ್ಳಬೇಕು. ಉಚಿತ ವಿದ್ಯುತ್, ನೀರು ಮತ್ತು ಬಸ್‌ ಪ್ರಯಾಣದಂತ ಕಲ್ಯಾಣ ಯೋಜನೆಗಳಿಂದ ಜನರಿಗೆ ಸಹಾಯವಾಗಿದೆ ಎಂಬುವುದನ್ನೂ ಒಪ್ಪಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಪ್ರಣಾಳಿಕೆ ಎಎಪಿಯ ಪ್ರಣಾಳಿಕೆಗಿಂತ ಭಿನ್ನವಾಗಿಲ್ಲ. ನಮ್ಮದೇ ಯೋಜನೆಗಳನ್ನು ಅವರು ನಕಲು ಮಾಡಿದ್ದಾರೆ. ಬಿಜೆಪಿ ಪ್ರಣಾಳಿಕೆಯ ಕುರಿತು ಒಂದೇ ವಾಕ್ಯದಲ್ಲಿ ಹೇಳುವುದಾದರೆ, “ಕೇಜ್ರಿವಾಲ್ ಮಾಡಿರುವ ಕೆಲಸಗಳು ಉತ್ತಮವಾಗಿದೆ. ಅದನ್ನು ನಾವು ಮುಂದುವರೆಸುತ್ತೇವೆ” ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

ನಮ್ಮದೇ ಕಾಪಿ : ವಿನೇಶ್ ಪೋಗಟ್

ಬಿಜೆಪಿ ದೆಹಲಿ ವಿಧಾನಸಭಾ ಚುನಾವಣೆಗೆ ‘ಸಂಕಲ್ಪ ಪತ್ರ’ ಎಂಬ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ನಮ್ಮ ಪಕ್ಷದ ಯೋಜನೆಗಳಿಂದ ನಕಲು ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮತ್ತು ಲೋಕಸಭೆ ಚುನಾವಣೆಗೆ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನೇ ಬಿಜೆಪಿ ನಕಲು ಮಾಡಿದೆ ಎಂದು ಹರಿಯಾಣದ ಕಾಂಗ್ರೆಸ್ ಶಾಸಕಿ ಹಾಗೂ ಮಾಜಿ ಕುಸ್ತಿಪಟು ವಿನೇಶ್ ಪೋಗಟ್ ಹೇಳಿದ್ದಾರೆ.

ಇಂದು ಭರವಸೆಗಳನ್ನು ನೀಡುವ ಮೂಲಕ ದೆಹಲಿಯ ಅಭಿವೃದ್ದಿಗೆ ಬಿಜೆಪಿ ಅಡಿಪಾಯ ಹಾಕಿದೆ. ಭರವಸೆಗಳನ್ನು ಈಡೇರಿಸುವ ಕೆಲಸ ಬಿಜೆಪಿ ಮಾಡಲಿದೆ. ಬಿಜೆಪಿಯ ಸಾಧನೆಯೆಂದರೆ, ಅದು ಹೇಳಿದ್ದನ್ನು ಮಾಡುತ್ತದೆ. ಹೇಳದಿರುವುದನ್ನೂ ಮಾಡುತ್ತದೆ. ‘ಮೋದಿಯವರ ಗ್ಯಾರಂಟಿ ಎಂದರೆ, ಅದು ಈಡೇರುವ ಭರವಸೆಯಿದೆ” ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಜೆ.ಪಿ ನಡ್ಡಾ ಹೇಳಿದ್ದಾರೆ.

“ದೆಹಲಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಎಲ್ಲಾ ಕಲ್ಯಾಣ ಯೋಜನೆಗಳು ಬಿಜೆಪಿ ಸರ್ಕಾರ ಬಂದರೆ ಮುಂದುವರೆಸಲಾಗುವುದು. ಈ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲಾಗುವುದು ಮತ್ತು ಜನರಿಗೆ ಅನುಕೂಲವಾಗುವಂತೆ ಮತ್ತಷ್ಟು ಬಲಪಡಿಸಲಾಗುವುದು. ಎಎಪಿ ಆಡಳಿತದ ವಿಶಿಷ್ಟ ಲಕ್ಷಣವಾಗಿರುವ ಭ್ರಷ್ಟಾಚಾರದ ಪ್ರತಿಯೊಂದು ಮಾರ್ಗಗಳನ್ನೂ ನಮ್ಮ ಸರ್ಕಾರ ಬಂದರೆ ಬಂದ್ ಮಾಡುತ್ತೇವೆ. ಈ ವಿಷಯದಲ್ಲಿ ನಾವು ಬದ್ದರಾಗಿದ್ದೇವೆ” ಎಂದು ನಡ್ಡಾ ತಿಳಿಸಿದ್ದಾರೆ.

ದೊಡ್ಡ ಮತ್ತು ಸಣ್ಣ ಮಟ್ಟದ 12 ಸಾವಿರ ಸಭೆಗಳು, 41 ಎಲ್‌ಇಡಿ ವ್ಯಾನ್‌ಗಳ ಮೂಲಕ ಸುಮಾರು 1.8 ಲಕ್ಷ ಜನರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿ ಬಿಜೆಪಿ ಪ್ರಣಾಳಿಕೆ ತಯಾರಿಸಿದೆ. ಇದು ದೆಹಲಿಗೆ ಸಂಬಂಧಿಸಿದಂತೆ ಬಿಜೆಪಿಯ ಬದ್ದತೆಯ ಮೊದಲ ಹಂತವಾಗಿದೆ. ಇನ್ನೂ ಎರಡು ಕಾರ್ಯಕ್ರಮಗಳನ್ನು ಬಿಜೆಪಿ ಘೋಷಣೆ ಮಾಡಲಿದೆ ಎಂದು ನಡ್ಡಾ ಹೇಳಿದ್ದಾರೆ.

ಎಎಪಿ ನಾಯಕನನ್ನು ನಿಂದಿಸಿ, ನಂತರ ಕ್ಷಮೆ ಕೇಳಿದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...