Homeಮುಖಪುಟದೆಹಲಿ ಚುನಾವಣೆ | ಭರಪೂರ ಭರವಸೆಗಳನ್ನು ನೀಡಿದ ಬಿಜೆಪಿ : ನಮ್ಮದೇ ಕಾಪಿ ಎಂದ ಕಾಂಗ್ರೆಸ್,...

ದೆಹಲಿ ಚುನಾವಣೆ | ಭರಪೂರ ಭರವಸೆಗಳನ್ನು ನೀಡಿದ ಬಿಜೆಪಿ : ನಮ್ಮದೇ ಕಾಪಿ ಎಂದ ಕಾಂಗ್ರೆಸ್, ಎಎಪಿ

- Advertisement -
- Advertisement -

ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ, 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ವಿತರಣೆ ಸೇರಿದಂತೆ ಹಲವು ಭರವಸೆಗಳೊಂದಿಗೆ ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಶುಕ್ರವಾರ (ಜ.17) ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಈ ಕೆಳಗಿನ ಭರವಸೆಗಳನ್ನು ನೀಡಲಾಗಿದೆ.

  • ಮಹಿಳಾ ಸಮೃದ್ದಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ.
  • ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರಿಗೆ 500 ರೂಪಾಯಿಗೆ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್, ಹೋಳಿ ಮತ್ತು ದೀಪಾವಳಿ ಸಮಯದಲ್ಲಿ ತಲಾ ಒಂದು ಉಚಿತ ಸಿಲಿಂಡರ್.
  • ದೆಹಲಿಯ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿಯ ಆರೋಗ್ಯ ವಿಮೆ ಒದಗಿಸುವ ‘ಆಯುಷ್ಮಾನ್ ಭಾರತ್ ಯೋಜನೆ’ಯ ಅನುಷ್ಠಾನ.
  • ದೆಹಲಿಯ ನಿವಾಸಿಗಳಿಗೆ 5 ಲಕ್ಷ ಹೆಚ್ಚುವರಿ ಆರೋಗ್ಯ ವಿಮೆ.
  • 60-70- ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,500 ರೂಪಾಯಿ ಮಾಸಿಕ ಪಿಂಚಣಿ.
  • 70 ವರ್ಷ ಮೇಲ್ಪಟ್ಟವರಿಗೆ 3 ಸಾವಿರ ರೂಪಾಯಿ ಮಾಸಿಕ ಪಿಂಚಣಿ.
  • ಜೆಜೆ ಕ್ಲಸ್ಟರ್‌ಗಳಲ್ಲಿ ‘ಅಟಲ್ ಕ್ಯಾಂಟೀನ್‌’ಗಳ ಸ್ಥಾಪನೆ. ಕೇವಲ 5 ರೂಪಾಯಿಗೆ ಪೌಷ್ಠಿಕ ಊಟ.

ಕರ್ನಾಟಕ, ತೆಲಂಗಾಣ ಸೇರಿದಂತೆ ವಿವಿದೆಡೆ ಕಾಂಗ್ರೆಸ್‌ ಪಕ್ಷ ಚುನಾವಣಾ ಪೂರ್ವ ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೀಕಿಸಿದ್ದರು. ದೇಶ ದಿವಾಳಿಯಾಗುತ್ತದೆ ಎಂದಿದ್ದರು. ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಕೂಡ ಮಹಿಳೆಯರಿಗೆ ಆರ್ಥಿಕ ಸಹಾಯ, ಹಿರಿಯ ನಾಗರಿಕರಿಗೆ ಪಿಂಚಣಿ ಹೆಚ್ಚಳದ ಯೋಜನೆಗಳನ್ನು ಘೋಷಿಸಿದಾಗಲೂ ಬಿಜೆಪಿ ನಾಯಕರು ವಿರೋಧಿಸಿದ್ದರು.

ಆದರೆ, ಈಗ ಬಿಜೆಪಿಯೇ ಚುನಾವಣಾ ಪೂರ್ಣ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವುದಕ್ಕೆ ಕಾಂಗ್ರೆಸ್ ಮತ್ತು ಎಎಪಿ ವ್ಯಂಗ್ಯವಾಡಿದೆ. ‘ನಮ್ಮದೇ ಕಾಪಿ’ ಎಂದಿದೆ.

“ಕೇಜ್ರಿವಾಲ್‌ ಯೋಜನೆಗಳು ಸರಿ ಎಂದು ಮೋದಿ ಒಪ್ಪಿಕೊಳ್ಳಲಿ”

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, “ಎಎಪಿ ಘೋಷಣೆ ಮಾಡಿರುವ ಯೋಜನೆಗಳ ಕುರಿತು ನಾವು ಮಾಡಿರುವ ಟೀಕೆ ತಪ್ಪು ಎಂಬುವುದನ್ನು ಪ್ರಧಾನಿ ಮೋದಿಯವರು ಸಾರ್ವಜನಿಕವಾಗಿ ಒಪ್ಪಿಕೊಳ್ಳಬೇಕು. ಉಚಿತ ವಿದ್ಯುತ್, ನೀರು ಮತ್ತು ಬಸ್‌ ಪ್ರಯಾಣದಂತ ಕಲ್ಯಾಣ ಯೋಜನೆಗಳಿಂದ ಜನರಿಗೆ ಸಹಾಯವಾಗಿದೆ ಎಂಬುವುದನ್ನೂ ಒಪ್ಪಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಪ್ರಣಾಳಿಕೆ ಎಎಪಿಯ ಪ್ರಣಾಳಿಕೆಗಿಂತ ಭಿನ್ನವಾಗಿಲ್ಲ. ನಮ್ಮದೇ ಯೋಜನೆಗಳನ್ನು ಅವರು ನಕಲು ಮಾಡಿದ್ದಾರೆ. ಬಿಜೆಪಿ ಪ್ರಣಾಳಿಕೆಯ ಕುರಿತು ಒಂದೇ ವಾಕ್ಯದಲ್ಲಿ ಹೇಳುವುದಾದರೆ, “ಕೇಜ್ರಿವಾಲ್ ಮಾಡಿರುವ ಕೆಲಸಗಳು ಉತ್ತಮವಾಗಿದೆ. ಅದನ್ನು ನಾವು ಮುಂದುವರೆಸುತ್ತೇವೆ” ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

ನಮ್ಮದೇ ಕಾಪಿ : ವಿನೇಶ್ ಪೋಗಟ್

ಬಿಜೆಪಿ ದೆಹಲಿ ವಿಧಾನಸಭಾ ಚುನಾವಣೆಗೆ ‘ಸಂಕಲ್ಪ ಪತ್ರ’ ಎಂಬ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ನಮ್ಮ ಪಕ್ಷದ ಯೋಜನೆಗಳಿಂದ ನಕಲು ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮತ್ತು ಲೋಕಸಭೆ ಚುನಾವಣೆಗೆ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನೇ ಬಿಜೆಪಿ ನಕಲು ಮಾಡಿದೆ ಎಂದು ಹರಿಯಾಣದ ಕಾಂಗ್ರೆಸ್ ಶಾಸಕಿ ಹಾಗೂ ಮಾಜಿ ಕುಸ್ತಿಪಟು ವಿನೇಶ್ ಪೋಗಟ್ ಹೇಳಿದ್ದಾರೆ.

ಇಂದು ಭರವಸೆಗಳನ್ನು ನೀಡುವ ಮೂಲಕ ದೆಹಲಿಯ ಅಭಿವೃದ್ದಿಗೆ ಬಿಜೆಪಿ ಅಡಿಪಾಯ ಹಾಕಿದೆ. ಭರವಸೆಗಳನ್ನು ಈಡೇರಿಸುವ ಕೆಲಸ ಬಿಜೆಪಿ ಮಾಡಲಿದೆ. ಬಿಜೆಪಿಯ ಸಾಧನೆಯೆಂದರೆ, ಅದು ಹೇಳಿದ್ದನ್ನು ಮಾಡುತ್ತದೆ. ಹೇಳದಿರುವುದನ್ನೂ ಮಾಡುತ್ತದೆ. ‘ಮೋದಿಯವರ ಗ್ಯಾರಂಟಿ ಎಂದರೆ, ಅದು ಈಡೇರುವ ಭರವಸೆಯಿದೆ” ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಜೆ.ಪಿ ನಡ್ಡಾ ಹೇಳಿದ್ದಾರೆ.

“ದೆಹಲಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಎಲ್ಲಾ ಕಲ್ಯಾಣ ಯೋಜನೆಗಳು ಬಿಜೆಪಿ ಸರ್ಕಾರ ಬಂದರೆ ಮುಂದುವರೆಸಲಾಗುವುದು. ಈ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲಾಗುವುದು ಮತ್ತು ಜನರಿಗೆ ಅನುಕೂಲವಾಗುವಂತೆ ಮತ್ತಷ್ಟು ಬಲಪಡಿಸಲಾಗುವುದು. ಎಎಪಿ ಆಡಳಿತದ ವಿಶಿಷ್ಟ ಲಕ್ಷಣವಾಗಿರುವ ಭ್ರಷ್ಟಾಚಾರದ ಪ್ರತಿಯೊಂದು ಮಾರ್ಗಗಳನ್ನೂ ನಮ್ಮ ಸರ್ಕಾರ ಬಂದರೆ ಬಂದ್ ಮಾಡುತ್ತೇವೆ. ಈ ವಿಷಯದಲ್ಲಿ ನಾವು ಬದ್ದರಾಗಿದ್ದೇವೆ” ಎಂದು ನಡ್ಡಾ ತಿಳಿಸಿದ್ದಾರೆ.

ದೊಡ್ಡ ಮತ್ತು ಸಣ್ಣ ಮಟ್ಟದ 12 ಸಾವಿರ ಸಭೆಗಳು, 41 ಎಲ್‌ಇಡಿ ವ್ಯಾನ್‌ಗಳ ಮೂಲಕ ಸುಮಾರು 1.8 ಲಕ್ಷ ಜನರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿ ಬಿಜೆಪಿ ಪ್ರಣಾಳಿಕೆ ತಯಾರಿಸಿದೆ. ಇದು ದೆಹಲಿಗೆ ಸಂಬಂಧಿಸಿದಂತೆ ಬಿಜೆಪಿಯ ಬದ್ದತೆಯ ಮೊದಲ ಹಂತವಾಗಿದೆ. ಇನ್ನೂ ಎರಡು ಕಾರ್ಯಕ್ರಮಗಳನ್ನು ಬಿಜೆಪಿ ಘೋಷಣೆ ಮಾಡಲಿದೆ ಎಂದು ನಡ್ಡಾ ಹೇಳಿದ್ದಾರೆ.

ಎಎಪಿ ನಾಯಕನನ್ನು ನಿಂದಿಸಿ, ನಂತರ ಕ್ಷಮೆ ಕೇಳಿದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...