Homeಮುಖಪುಟದೆಹಲಿ ಚುನಾವಣೆ | ಜಿಲ್ಲಾಧಿಕಾರಿಯಿಂದ ಪಕ್ಷದ ಅಭ್ಯರ್ಥಿ ಮೇಲೆ ಹಲ್ಲೆ - ಕಾಂಗ್ರೆಸ್ ಆರೋಪ

ದೆಹಲಿ ಚುನಾವಣೆ | ಜಿಲ್ಲಾಧಿಕಾರಿಯಿಂದ ಪಕ್ಷದ ಅಭ್ಯರ್ಥಿ ಮೇಲೆ ಹಲ್ಲೆ – ಕಾಂಗ್ರೆಸ್ ಆರೋಪ

- Advertisement -
- Advertisement -

ದೆಹಲಿಯ ರಿಥಾಲಾ ವಿಧಾನಸಭಾ ಕ್ಷೇತ್ರದ ತನ್ನ ಅಭ್ಯರ್ಥಿ ಸುಶಾಂತ್ ಮಿಶ್ರಾ ಅವರ ಮೇಲೆ ಶನಿವಾರ ಸಂಜೆ ಚುನಾವಣಾ ಆಯೋಗ ನೇಮಿಸಿದ ಅಧಿಕಾರಿಯೊಬ್ಬರು ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಕಾಂಗ್ರೆಸ್ ಭಾನುವಾರ ಆರೋಪಿಸಿದೆ. ಆದಾಗ್ಯೂ, ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ಈ ಆರೋಪವನ್ನು ನಿರಾಕರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ದೆಹಲಿ ಚುನಾವಣೆ

ಇದು ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯ ಅಧಿಕಾರಿಯ ಪಕ್ಷಪಾತದ ವರ್ತನೆಯ ಪ್ರಕರಣವಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 5 ರಂದು ನಿಗದಿಯಾಗಿದ್ದು, ಮತಗಳ ಎಣಿಕೆ ಫೆಬ್ರವರಿ 8 ರಂದು ನಡೆಯಲಿದೆ. ದೆಹಲಿ ಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಪಕ್ಷದ ನಾಯಕ ಜೈರಾಮ್ ರಮೇಶ್ “ಸುಶಾಂತ್ ಮಿಶ್ರಾ ಅವರು ಪಾದಯಾತ್ರೆ ನಡೆಸುವುದನ್ನು ತಡೆಯಲು ಅಧಿಕಾರಿ ಪ್ರಯತ್ನಿಸಿದರು, ಇದಕ್ಕಾಗಿ ದೆಹಲಿ ಪೊಲೀಸರು ಈಗಾಗಲೇ ಅನುಮತಿ ನೀಡಿದ್ದರು. ಅವರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಇತರ ಅಭ್ಯರ್ಥಿಗಳಿಂದ ನೀತಿ ಸಂಹಿತೆಯ ಉಲ್ಲಂಘನೆಯ ಪ್ರಕರಣಗಳ ಬಗ್ಗೆ ಸಕ್ರಿಯವಾಗಿ ಧ್ವನಿ ಎತ್ತುತ್ತಿದ್ದಾರೆ” ಎಂದು ಹೇಳಿದ್ದಾರೆ.

ಸುಶಾಂತ್ ಅವರ ಉಮೇದುವಾರಿಕೆ ಮತ್ತು ಬೆಳೆಯುತ್ತಿರುವ ಬೆಂಬಲವನ್ನು ತಡೆಯಲು ಆಮ್ ಆದ್ಮಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷವು ನಡೆಸಿದ ಹತಾಶ ಪ್ರಯತ್ನ ಇದಾಗಿದೆ ಎಂದು ಆಪಾದಿತ ದಾಳಿಯ ಬಗ್ಗೆ ಜೈರಾಮ್ ರಮೇಶ್ ಅವರು ಕರೆದಿದ್ದಾರೆ.

“ಚುನಾವಣಾ ಪ್ರಕ್ರಿಯೆಯ ಸಮಗ್ರತೆ ಮತ್ತು ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು, ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಮತ್ತು ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ತಕ್ಷಣದ ಸರಿಪಡಿಸುವ ಕ್ರಮ ಕೈಗೊಳ್ಳಬೇಕೆಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಒತ್ತಾಯಿಸುತ್ತದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಆದಾಗ್ಯೂ, ಜಿಲ್ಲಾ ಚುನಾವಣಾ ಅಧಿಕಾರಿಯೊಬ್ಬರು ಸಂಜೆ 5 ಗಂಟೆ ಸುಮಾರಿಗೆ ದೂರು ಸ್ವೀಕರಿಸಿದ್ದು, ಇದರ ನಂತರ ರಿಥಾಲಾಗೆ ಕಣ್ಗಾವಲು ತಂಡ(flying surveillance team) ಆಗಮಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅದೇ ಸಮಯದಲ್ಲಿ, ಬುದ್ಧ ವಿಹಾರ್ ಹಂತ -2 ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಚಾರವೂ ನಡೆಯುತ್ತಿತ್ತು” ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಎಫ್‌ಎಸ್‌ಟಿ ಮುಖ್ಯಸ್ಥರು ಅನುಮತಿಯ ಪ್ರತಿಯನ್ನು ಪ್ರದರ್ಶಿಸಲು ಸಂಘಟಕರನ್ನು ವಿನಂತಿಸಿದರು. ಪಕ್ಷದ ಪ್ರಚಾರಕರು ಅನುಮತಿಯ ಪ್ರತಿಯನ್ನು ಪ್ರದರ್ಶಿಸಲಿಲ್ಲ. ಹಾಗಾಗಿ ತಂಡವು ಸಂಘಟಕರನ್ನು ಚದುರಿ ಹೋಗುವಂತೆ ವಿನಂತಿಸಿತು. ಎಫ್‌ಎಸ್‌ಟಿ ತಂಡದ ಸದಸ್ಯರು ಪ್ರಚಾರ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪಗಳಲ್ಲಿ ಹುರುಳಿಲ್ಲ, ಅವರ ಆರೋಪವನ್ನು ಸಂಪೂರ್ಣವಾಗಿ ನಿರಾಕರಿಸಲಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂಓದಿ:  ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...