Homeಮುಖಪುಟದೆಹಲಿ ಚುನಾವಣೆ: ಹೈ-ವೋಲ್ಟೇಜ್ ಪ್ರಚಾರ ಇಂದು ಅಂತ್ಯ; ರಾಜಧಾನಿಯ ಗದ್ದುಗೆ ಯಾರಿಗೆ?

ದೆಹಲಿ ಚುನಾವಣೆ: ಹೈ-ವೋಲ್ಟೇಜ್ ಪ್ರಚಾರ ಇಂದು ಅಂತ್ಯ; ರಾಜಧಾನಿಯ ಗದ್ದುಗೆ ಯಾರಿಗೆ?

- Advertisement -
- Advertisement -

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಹೈ-ವೋಲ್ಟೇಜ್ ಪ್ರಚಾರ ಸೋಮವಾರ (ಇಂದು ಸಂಜೆ) 5 ಗಂಟೆಗೆ ಕೊನೆಗೊಳ್ಳಲಿದ್ದು, ಫೆಬ್ರವರಿ 5ರ ಮತದಾನಕ್ಕೆ ದೆಹಲಿ ಸಜ್ಜಾಗಲಿದೆ.

ಪ್ರಚಾರದ ಕೊನೆಯ ದಿನವಾದ ಇಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ದೆಹಲಿಯಾದ್ಯಂತ 22 ರೋಡ್ ಶೋಗಳು ಮತ್ತು ರ್ಯಾಲಿಗಳನ್ನು ನಿಗದಿಪಡಿಸಿದೆ. 25 ವರ್ಷಗಳಿಗೂ ಹೆಚ್ಚು ಕಾಲದ ನಂತರ ರಾಜಧಾನಿಯಲ್ಲಿ ಅಧಿಕಾರವನ್ನು ಮರಳಿ ಪಡೆಯುವ ಪ್ರಯತ್ನವನ್ನು ಅದು ತೀವ್ರಗೊಳಿಸಿದೆ.

ಮತ್ತೊಂದೆಡೆ, ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಉಚಿತ ಕಲ್ಯಾಣ ಯೋಜನೆಗಳ ಆಡಳಿತ ಮಾದರಿಯನ್ನು ಆಧರಿಸಿ ಮೂರನೇ ಸತತ ಅವಧಿಗೆ ಅಧಿಕಾರ ಪಡೆಯುವ ವಿಶ್ವಾಸವನ್ನು ಹೊಂದಿದೆ.

2013ರವರೆಗೆ 15 ವರ್ಷಗಳ ಕಾಲ ರಾಜಧಾನಿಯನ್ನು ಆಳಿದ ಕಾಂಗ್ರೆಸ್, ಕಳೆದ ಎರಡು ಚುನಾವಣೆಗಳಲ್ಲಿ ಶೂನ್ಯ ಸಾಧನೆ ಮಾಡಿದ ನಂತರ ಕಳೆದುಕೊಂಡ ತನ್ನ ನೆಲೆಯನ್ನು ಮರಳಿ ಪಡೆಯಲು ಶ್ರಮಿಸುತ್ತಿದೆ.

ತೀವ್ರ ಪೈಪೋಟಿಯಿಂದ ಕೂಡಿರುವ ಚುನಾವಣಾ ಯುದ್ಧವನ್ನು AI-ರಚಿತ ವಂಚನೆಗಳು, ತೀಕ್ಷ್ಣವಾದ ರಾಜಕೀಯ ಟೀಕೆಗಳು ಮತ್ತು ಭಾರೀ ರೋಡ್‌ಶೋಗಳನ್ನು ಅಭೂತಪೂರ್ವವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ವ್ಯಾಖ್ಯಾನಿಸಲಾಗಿದೆ. ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆ (MCC) ಮತದಾನ ಮುಗಿಯುವ 48 ಗಂಟೆಗಳ ಮೊದಲು ಎಲ್ಲಾ ಸಾರ್ವಜನಿಕ ಸಭೆಗಳು, ಚುನಾವಣೆಗೆ ಸಂಬಂಧಿಸಿದ ಕಾರ್ಯಗಳು ಮತ್ತು ಪ್ರಚಾರವನ್ನು ನಿಲ್ಲಿಸಬೇಕು ಎಂದು ಆದೇಶಿಸುತ್ತದೆ.

ಚುನಾವಣಾ ಆಯೋಗದ ಪ್ರಕಾರ, ಈ ಅವಧಿಯಲ್ಲಿ ಸಿನಿಮಾ, ಟಿವಿ ಮತ್ತು ಮುದ್ರಣ ಮಾಧ್ಯಮಗಳ ಮೂಲಕ ಪ್ರಚಾರ ಸಾಮಗ್ರಿಗಳ ಯಾವುದೇ ಪ್ರಸಾರವನ್ನು ಸಹ ನಿಷೇಧಿಸಲಾಗಿದೆ. ಚುನಾವಣೆಗಳು ತೀವ್ರ ವಾಗ್ದಾಳಿಯ ಯುದ್ಧವಾಗಿ ಮಾರ್ಪಟ್ಟಿವೆ. ಪಕ್ಷಗಳು ಆಕರ್ಷಕ ಘೋಷಣೆಗಳನ್ನು ನೀಡುತ್ತಿವೆ.

ಎಎಪಿ ಬಿಜೆಪಿಯನ್ನು “ಭಾರತೀಯ ಜೂಥ ಪಕ್ಷ” (ಭಾರತೀಯ ಸುಳ್ಳುಗಾರರ ಪಕ್ಷ) ಮತ್ತು “ಗಾಲಿ ಗಲೋಚ್ ಪಕ್ಷ” (ನಿಂದನಾತ್ಮಕ ಪಕ್ಷ) ಎಂದು ಬ್ರಾಂಡ್ ಮಾಡಿದ್ದರೂ, ಪ್ರಧಾನಿ ನರೇಂದ್ರ ಮೋದಿ AAP ಅನ್ನು “AAP-Daa” (ವಿಪತ್ತು) ಮತ್ತು ಅದರ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು “ಘೋಷ್ಣ ಮಂತ್ರಿ” (ಘೋಷಣೆ ಮಂತ್ರಿ) ಎಂದು ಕರೆಯುವ ಮೂಲಕ ಪ್ರತಿದಾಳಿ ನಡೆಸಿದರು.

ದೆಹಲಿಯ ರಾಜಕೀಯ ಕಾರಿಡಾರ್‌ಗೆ ಮತ್ತೆ ಕೈ ಹಾಕಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್, ಕೇಜ್ರಿವಾಲ್ ಅವರನ್ನು “ಫರ್ಜಿವಾಲ್” (ನಕಲಿ) ಮತ್ತು “ಛೋಟಾ ರೀಚಾರ್ಜ್” (ಮೋದಿಯ ಸಣ್ಣ ರೀಚಾರ್ಜ್) ಎಂದು ಹಣೆಪಟ್ಟಿ ಕಟ್ಟಿದೆ. AI- ರಚಿತವಾದ ಮೀಮ್‌ಗಳು ಮತ್ತು ಡಿಜಿಟಲ್ ಅಭಿಯಾನಗಳು ಪ್ರಾಬಲ್ಯ ಸಾಧಿಸುತ್ತಿರುವುದರಿಂದ ದೆಹಲಿಯ ಯುದ್ಧವು ಈ ಬಾರಿ ರಾಜಕೀಯ ಚರ್ಚೆಯ ಹೊಸ ಹಂತಗಳನ್ನು ತಲುಪಿದೆ.

ದೆಹಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಒ) ಅವರ ಮಾಹಿತಿಯ ಪ್ರಕಾರ, ಫೆಬ್ರವರಿ 5ರಂದು 13,766 ಮತಗಟ್ಟೆಗಳಲ್ಲಿ 1.56 ಕೋಟಿ ಮತದಾರರು ತಮ್ಮ ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದಿದ್ದಾರೆ.

ಅವರಲ್ಲಿ, 83.76 ಲಕ್ಷ ಪುರುಷರು, 72.36 ಲಕ್ಷ ಮಹಿಳೆಯರು ಮತ್ತು 1,267 ತೃತೀಯ ಲಿಂಗಿ ಮತದಾರರು.  ಮತದಾನ ಪ್ರಕ್ರಿಯೆಯನ್ನು ಸುಗಮಗೊಳಿಸಲು, 733 ಮತಗಟ್ಟೆಗಳನ್ನು ವಿಕಲಚೇತನರಿಗೆ ಗೊತ್ತುಪಡಿಸಲಾಗಿದೆ.

ಚುನಾವಣಾ ಆಯೋಗವು ಭಾರತದಲ್ಲಿ ಮೊದಲ ಬಾರಿಗೆ ಕ್ಯೂ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಕ್ಯೂಎಂಎಸ್) ಅಪ್ಲಿಕೇಶನ್ ಅನ್ನು ಪರಿಚಯಿಸಿದೆ. ಮತದಾರರು ದೆಹಲಿ ಚುನಾವಣೆ-2025 ಕ್ಯೂಎಂಎಸ್ ಅಪ್ಲಿಕೇಶನ್ ಮೂಲಕ ಮತದಾನ ಕೇಂದ್ರಗಳಲ್ಲಿ ನೈಜ ಸಮಯದ ಜನಸಂದಣಿಯ ಮಟ್ಟವನ್ನು ಪರಿಶೀಲಿಸಲು ಅನುವು ಮಾಡಿಕೊಡುತ್ತದೆ. ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಮನೆ ಮತದಾನ ಸೌಲಭ್ಯದಡಿಯಲ್ಲಿ 7,553 ಅರ್ಹ ಮತದಾರರಲ್ಲಿ 6,980 ಜನರು ಈಗಾಗಲೇ ತಮ್ಮ ಮತ ಚಲಾಯಿಸಿದ್ದಾರೆ. ಜನವರಿ 24ರಂದು ಪ್ರಾರಂಭವಾದ ಈ ಸೇವೆ ಫೆಬ್ರವರಿ 4ರವರೆಗೆ ಮುಂದುವರಿಯುತ್ತದೆ.

ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಅರೆಸೈನಿಕ ಪಡೆಗಳ 220 ಕಂಪನಿಗಳು, 19,000 ಗೃಹರಕ್ಷಕ ದಳ ಮತ್ತು 35,626 ದೆಹಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ಡಮ್ಮಿ ಮತ್ತು ಬ್ರೈಲ್ ಬ್ಯಾಲೆಟ್ ಪೇಪರ್‌ಗಳಿಗೆ ನಿಬಂಧನೆಗಳು ಸೇರಿದಂತೆ 21,584 ಬ್ಯಾಲೆಟ್ ಯೂನಿಟ್‌ಗಳು 20,692 ನಿಯಂತ್ರಣ ಘಟಕಗಳು ಮತ್ತು 18,943 ವಿವಿಪ್ಯಾಟ್‌ಗಳನ್ನು ಸಿದ್ಧಪಡಿಸಲಾಗಿದೆ.

2015ರಲ್ಲಿ ಎಎಪಿ 70 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಗೆದ್ದುಕೊಂಡಿತು. ಬಿಜೆಪಿಗೆ ಕೇವಲ ಮೂರು ಸ್ಥಾನಗಳಲ್ಲಿ ಜಯಗಳಿಸಿದ್ದರೆ ಕಾಂಗ್ರೆಸ್‌ ಶೂನ್ಯ ಸಾಧನೆ ಗೈದಿತ್ತು. 2020ರಲ್ಲಿ ಎಎಪಿ 62 ಸ್ಥಾನಗಳೊಂದಿಗೆ ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿತು. ಆದರೆ ಬಿಜೆಪಿ ಎಂಟು ಸ್ಥಾನಗಳನ್ನು ಗೆದ್ದಿತು ಮತ್ತು ಕಾಂಗ್ರೆಸ್ ಮತ್ತೊಮ್ಮೆ ತನ್ನ ಖಾತೆಯನ್ನು ತೆರೆಯಲು ವಿಫಲವಾಯಿತು.

ಪುನರುಜ್ಜೀವನಗೊಂಡ ಬಿಜೆಪಿಯು ಎಎಪಿಯ ಪರಂಪರೆಯನ್ನು ಮುರಿಯುವ ವಿಶ್ವಾಸದೊಂದಿಗೆ ಇದೆ ಮತ್ತು ಕಾಂಗ್ರೆಸ್ ಪುನರುಜ್ಜೀವನವನ್ನು ಎದುರು ನೋಡುತ್ತಿರುವುದರಿಂದ, ದೆಹಲಿಯು ಇದುವರೆಗಿನ ಚುನಾವಣಾ ಇತಿಹಾಸದಲ್ಲೇ ಅತ್ಯಂತ ತೀವ್ರವಾದ ಚುನಾವಣಾ ಯುದ್ಧಗಳಲ್ಲಿಯೇ ಒಂದು ವಿಶಿಷ್ಟ ರೀತಿಯಲ್ಲಿ ಸಜ್ಜಾಗಿದೆ.

ಅಂತಿಮ ತೀರ್ಪು ಮತದಾರರಲ್ಲಿ ಈ ಪಕ್ಷಗಳ ವಾಕ್ಚಾತುರ್ಯ ಮತ್ತು ಘೋಷಣೆಗಳು ಪ್ರತಿಧ್ವನಿಸುತ್ತವೆಯೇ ಅಥವಾ ರಾಜಧಾನಿಯ ರಾಜಕೀಯ ಭೂದೃಶ್ಯವು ಬದಲಾಗದೆ ಉಳಿಯುತ್ತದೆಯೇ ಎಂಬುದನ್ನು ಬಹಿರಂಗಪಡಿಸಲಿದೆ.

ಎಎಪಿ ದೆಹಲಿಯ ಮೇಲೆ ತನ್ನ ಹಿಡಿತವನ್ನು ಉಳಿಸಿಕೊಳ್ಳುತ್ತದೆಯೇ? ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆಯೇ? ಅಥವಾ ಕಾಂಗ್ರೆಸ್ ಅಚ್ಚರಿಯನ್ನುಂಟು ಮಾಡುತ್ತದೆಯೇ? ಎಂಬುದನ್ನು ಫೆಬ್ರವರಿ 8ಕ್ಕೆ ಹೊರಬೀಳುವ ಫಲಿತಾಂಶ ಹೊರಬಂದ ನಂತರ ಚಿತ್ರ ಸ್ಪಷ್ಟವಾಗುತ್ತದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಮಹಾ ಕುಂಭ ಮೇಳದ ಬಗ್ಗೆ ವದಂತಿ ಹರಡಿದವರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...