Homeಮುಖಪುಟದೆಹಲಿ ಚುನಾವಣೆ: 96 ಮಹಿಳಾ ಸ್ಪರ್ಧಿಗಳಲ್ಲಿ ಗೆದ್ದವರೆಷ್ಟು?

ದೆಹಲಿ ಚುನಾವಣೆ: 96 ಮಹಿಳಾ ಸ್ಪರ್ಧಿಗಳಲ್ಲಿ ಗೆದ್ದವರೆಷ್ಟು?

- Advertisement -
- Advertisement -

ದೆಹಲಿಯಲ್ಲಿ ಒಂದು ದಶಕದಲ್ಲಿಯೇ ಅತ್ಯಂತ ಕಡಿಮೆ ಎಂದರೆ 5 ಮಹಿಳಾ ಶಾಸಕರು ಸ್ಥಾನ ಪಡೆದಿದ್ದಾರೆ. 2025ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 699 ಅಭ್ಯರ್ಥಿಗಳಲ್ಲಿ 96 ಮಹಿಳೆಯರು ಸ್ಪರ್ಧಿಸಿದ್ದರು. ಇದರಲ್ಲಿ ಬಿಜೆಪಿ ಮತ್ತು ಎಎಪಿಯಿಂದ ತಲಾ 9 ಮತ್ತು ಕಾಂಗ್ರೆಸ್‌ನಿಂದ 7 ಮಂದಿ ಸ್ಪರ್ಧಿಸಿದ್ದರು.

ನವದೆಹಲಿ: ಈ ವರ್ಷ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 100 ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ ಕೇವಲ ಐವರು ಅಂದರೆ ಬಿಜೆಪಿಯಿಂದ 4 ಮತ್ತು ಎಎಪಿಯಿಂದ ಒಬ್ಬರು ವಿಜೇತರಾಗಿ ಹೊರಹೊಮ್ಮಲು ಸಾಧ್ಯವಾಗಿದೆ. ಕಳೆದ 10 ವರ್ಷಗಳಲ್ಲಿ ಇದು ಅತ್ಯಂತ ಕಡಿಮೆಯಾಗಿದೆ.

ಈ ಬಾರಿ ಗೆದ್ದ ಎಎಪಿಯ ಏಕೈಕ ಮಹಿಳಾ ಅಭ್ಯರ್ಥಿ ನಿರ್ಗಮಿತ ಮುಖ್ಯಮಂತ್ರಿ ಅತಿಶಿ, ಹೊಸದಾಗಿ ಆಯ್ಕೆಯಾದ ಐದು ಮಹಿಳಾ ಶಾಸಕರಲ್ಲಿ ಒಬ್ಬರಾಗಿದ್ದಾರೆ. ಮಹಿಳಾ ಶಾಸಕಿಯರು ಈಗ ದೆಹಲಿಯ 70 ಸದಸ್ಯರ ವಿಧಾನಸಭೆಯಲ್ಲಿ 7%ರಷ್ಟಿದ್ದಾರೆ.

ಈ ವರ್ಷ 699 ಅಭ್ಯರ್ಥಿಗಳಲ್ಲಿ 96 ಮಹಿಳೆಯರು, ಬಿಜೆಪಿ ಮತ್ತು ಎಎಪಿಯಿಂದ ತಲಾ 9 ಮತ್ತು ಕಾಂಗ್ರೆಸ್‌ನಿಂದ 7 ಮಂದಿ ಸೇರಿದಂತೆ ಸ್ಪರ್ಧಿಸಿದ್ದರು. ಮೂರು ಪ್ರಮುಖ ರಾಜಕೀಯ ಪಕ್ಷಗಳು ಈ ಬಾರಿ 2020ರ ವಿಧಾನಸಭಾ ಚುನಾವಣೆಗಿಂತ ಹೆಚ್ಚು ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.

1993ರಲ್ಲಿ ದೆಹಲಿ ವಿಧಾನಸಭೆಯನ್ನು ಪುನರ್ ರಚಿಸಿದ ನಂತರ ಈ ವರ್ಷ ಇದೇ ಮೊದಲ ಬಾರಿಗೆ ಹೆಚ್ಚಿನ ಮಹಿಳಾ ಮತದಾರರು ಅಂದರೆ 60.9% ರಷ್ಟು ಮತದಾನವನ್ನು ಚಲಾಯಿಸಿದ್ದು ದಾಖಲಾಗಿದೆ. ಫೆಬ್ರವರಿ 5ರಂದು ನಡೆದ ಒಂದೇ ಹಂತದ ಚುನಾವಣೆಯಲ್ಲಿ 72.36 ಲಕ್ಷ ನೋಂದಾಯಿತ ಮಹಿಳಾ ಮತದಾರರಲ್ಲಿ ಸುಮಾರು 44.08 ಲಕ್ಷ ಜನರಿಗೆ ಸಹಿ ಹಾಕಲಾಗಿದೆ.

2025ರ ದೆಹಲಿ ಚುನಾವಣೆಯಲ್ಲಿ ಗೆದ್ದ ಮಹಿಳೆಯರು

ಅತಿಶಿ: ಅವರು ತಮ್ಮ ಕಲ್ಕಾಜಿ ಸ್ಥಾನವನ್ನು ಉಳಿಸಿಕೊಂಡಿದ್ದಾರೆ ಮತ್ತು ಬಿಜೆಪಿಯ ರಮೇಶ್ ಬಿಧುರಿ ಅವರನ್ನು ಸೋಲಿಸಿ 3,521 ಮತಗಳ ಅಂತರದಿಂದ ಚುನಾವಣೆಯಲ್ಲಿ ಗೆದಿದ್ದಾರೆ. ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸೌರಭ್ ಭಾರದ್ವಾಜ್ ಮತ್ತು ಸತ್ಯೇಂದರ್ ಜೈನ್ ಸೇರಿದಂತೆ ಪಕ್ಷದ ಹೆಚ್ಚಿನ ಪ್ರಮುಖ ನಾಯಕರು ಸೋತಿದ್ದರಿಂದ ಚುನಾವಣೆಯಲ್ಲಿ ಗೆದ್ದ ಕೆಲವು ಎಎಪಿ ಸಚಿವರು ಮತ್ತು ಹಿರಿಯ ನಾಯಕರಲ್ಲಿ ಅತಿಶಿ ಕೂಡ ಒಬ್ಬರಾಗಿದ್ದಾರೆ.

ನೀಲಂ ಪಹೇಲ್ವಾನ್: ನಜಾಫ್‌ಗಢದ ಬಿಜೆಪಿ ಅಭ್ಯರ್ಥಿ ನೀಲಂ ಪಹೇಲ್ವಾನ್ ತಮ್ಮ ಹತ್ತಿರದ ಪ್ರತಿಸ್ಪರ್ಧಿ ಎಎಪಿಯ ತರುಣ್ ಕುಮಾರ್ ಅವರನ್ನು ಸುಮಾರು 30,000 ಮತಗಳಿಂದ ಸೋಲಿಸಿದ್ದಾರೆ.

ರೇಖಾ ಗುಪ್ತಾ: ಶಾಲಿಮಾರ್ ಬಾಗ್ ಸ್ಥಾನದಿಂದ ಬಿಜೆಪಿಯಿಂದ ಸ್ಪರ್ಧಿಸಿ, ಎಎಪಿಯ ಬಂದಾನ ಕುಮಾರಿ ಅವರನ್ನು 29,595 ಮತಗಳಿಂದ ಸೋಲಿಸಿದ್ದಾರೆ.

ಪೂನಂ ಶರ್ಮಾ: ಬಿಜೆಪಿ ಅಭ್ಯರ್ಥಿಯಾದ ಇವರು ವಜೀರ್‌ಪುರ ಕ್ಷೇತ್ರದಲ್ಲಿ ಎಎಪಿಯ ರಾಜೇಶ್ ಗುಪ್ತಾ ಅವರನ್ನು 11,425 ಮತಗಳಿಂದ ಸೋಲಿಸಿದ್ದಾರೆ.

ಶಿಖಾ ರಾಯ್: ಗ್ರೇಟರ್ ಕೈಲಾಶ್‌ನಿಂದ ಹಾಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಅವರನ್ನು 3,188 ಮತಗಳ ಅಂತರದಿಂದ ಸೋಲಿಸುವ ಮೂಲಕ ಬಿಜೆಪಿ ನಾಯಕಿ ವಿಜಯಶಾಲಿಯಾಗಿದ್ದಾರೆ.

ಈ ಹಿಂದಿನ ದೆಹಲಿಯ ಮಹಿಳಾ ಶಾಸಕರತ್ತ ಒಂದು ನೋಟ
1993ರಿಂದ ಇಲ್ಲಿಯವರೆಗೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕೇವಲ 44 ಮಹಿಳಾ ಅಭ್ಯರ್ಥಿಗಳು ಮಾತ್ರ ಗೆದ್ದಿದ್ದಾರೆ. 1998ರಲ್ಲಿ 9 ಮಹಿಳೆಯರು ಗೆದ್ದಿದ್ದರು. 1993ರಲ್ಲಿ ಕೇವಲ 3 ಮಹಿಳೆಯರು ಆಯ್ಕೆಯಾಗಿದ್ದರು. ಇದು ವಿಧಾನಸಭೆಯ ಶೇಕಡಾ 4.3ರಷ್ಟಿತ್ತು.

2003ರಲ್ಲಿ ಏಳು ಮಹಿಳೆಯರು ಆಯ್ಕೆಯಾಗಿದ್ದರು ಮತ್ತು 2008 ಮತ್ತು 2013ರ ಎರಡೂ ಚುನಾವಣೆಗಳಲ್ಲಿ ಈ ಸಂಖ್ಯೆ ಮೂರಕ್ಕೆ ಇಳಿಯಿತು. 2015ರಲ್ಲಿ, ಒಟ್ಟು 63 ಮಹಿಳೆಯರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಮತ್ತು ಅವರಲ್ಲಿ 6 ಮಂದಿ ಗೆದ್ದರು.

2020ರ ಚುನಾವಣೆಯಲ್ಲಿ ಸ್ಪರ್ಧಿಸಿದ 672 ನಾಮನಿರ್ದೇಶಿತರಲ್ಲಿ 76 ಮಹಿಳೆಯರು ಸೇರಿದ್ದರು. ಅವರಲ್ಲಿ 8 ಮಹಿಳೆಯರು ಗೆದ್ದಿದ್ದರು.

ದೆಹಲಿ ಇಲ್ಲಿಯವರೆಗೆ ಕೇವಲ ಮೂವರು ಮಹಿಳಾ ಮುಖ್ಯಮಂತ್ರಿಗಳನ್ನು ಮಾತ್ರ ಕಂಡಿದೆ. 1998ರಲ್ಲಿ ಬಿಜೆಪಿಯ ಸುಷ್ಮಾ ಸ್ವರಾಜ್, 1998ರಿಂದ 2013ರವರೆಗೆ 15 ವರ್ಷಗಳ ಕಾಲ ರಾಜಧಾನಿಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಮತ್ತು ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ ನಂತರ ಉನ್ನತ ಹುದ್ದೆಯನ್ನು ಅಲಂಕರಿಸಿದ ನಗರದ ಕಿರಿಯ ಮುಖ್ಯಮಂತ್ರಿ ಎಎಪಿಯ ಅತಿಶಿಯಾಗಿದ್ದಾರೆ.

ಎಎಪಿ ಸೋಲಿಗೆ ದಲಿತ ಮತದಾರರು ಕಾರಣವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...