Homeಮುಖಪುಟದೆಹಲಿ ಚುನಾವಣೆ: 96 ಮಹಿಳಾ ಸ್ಪರ್ಧಿಗಳಲ್ಲಿ ಗೆದ್ದವರೆಷ್ಟು?

ದೆಹಲಿ ಚುನಾವಣೆ: 96 ಮಹಿಳಾ ಸ್ಪರ್ಧಿಗಳಲ್ಲಿ ಗೆದ್ದವರೆಷ್ಟು?

- Advertisement -
- Advertisement -

ದೆಹಲಿಯಲ್ಲಿ ಒಂದು ದಶಕದಲ್ಲಿಯೇ ಅತ್ಯಂತ ಕಡಿಮೆ ಎಂದರೆ 5 ಮಹಿಳಾ ಶಾಸಕರು ಸ್ಥಾನ ಪಡೆದಿದ್ದಾರೆ. 2025ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 699 ಅಭ್ಯರ್ಥಿಗಳಲ್ಲಿ 96 ಮಹಿಳೆಯರು ಸ್ಪರ್ಧಿಸಿದ್ದರು. ಇದರಲ್ಲಿ ಬಿಜೆಪಿ ಮತ್ತು ಎಎಪಿಯಿಂದ ತಲಾ 9 ಮತ್ತು ಕಾಂಗ್ರೆಸ್‌ನಿಂದ 7 ಮಂದಿ ಸ್ಪರ್ಧಿಸಿದ್ದರು.

ನವದೆಹಲಿ: ಈ ವರ್ಷ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 100 ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ ಕೇವಲ ಐವರು ಅಂದರೆ ಬಿಜೆಪಿಯಿಂದ 4 ಮತ್ತು ಎಎಪಿಯಿಂದ ಒಬ್ಬರು ವಿಜೇತರಾಗಿ ಹೊರಹೊಮ್ಮಲು ಸಾಧ್ಯವಾಗಿದೆ. ಕಳೆದ 10 ವರ್ಷಗಳಲ್ಲಿ ಇದು ಅತ್ಯಂತ ಕಡಿಮೆಯಾಗಿದೆ.

ಈ ಬಾರಿ ಗೆದ್ದ ಎಎಪಿಯ ಏಕೈಕ ಮಹಿಳಾ ಅಭ್ಯರ್ಥಿ ನಿರ್ಗಮಿತ ಮುಖ್ಯಮಂತ್ರಿ ಅತಿಶಿ, ಹೊಸದಾಗಿ ಆಯ್ಕೆಯಾದ ಐದು ಮಹಿಳಾ ಶಾಸಕರಲ್ಲಿ ಒಬ್ಬರಾಗಿದ್ದಾರೆ. ಮಹಿಳಾ ಶಾಸಕಿಯರು ಈಗ ದೆಹಲಿಯ 70 ಸದಸ್ಯರ ವಿಧಾನಸಭೆಯಲ್ಲಿ 7%ರಷ್ಟಿದ್ದಾರೆ.

ಈ ವರ್ಷ 699 ಅಭ್ಯರ್ಥಿಗಳಲ್ಲಿ 96 ಮಹಿಳೆಯರು, ಬಿಜೆಪಿ ಮತ್ತು ಎಎಪಿಯಿಂದ ತಲಾ 9 ಮತ್ತು ಕಾಂಗ್ರೆಸ್‌ನಿಂದ 7 ಮಂದಿ ಸೇರಿದಂತೆ ಸ್ಪರ್ಧಿಸಿದ್ದರು. ಮೂರು ಪ್ರಮುಖ ರಾಜಕೀಯ ಪಕ್ಷಗಳು ಈ ಬಾರಿ 2020ರ ವಿಧಾನಸಭಾ ಚುನಾವಣೆಗಿಂತ ಹೆಚ್ಚು ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.

1993ರಲ್ಲಿ ದೆಹಲಿ ವಿಧಾನಸಭೆಯನ್ನು ಪುನರ್ ರಚಿಸಿದ ನಂತರ ಈ ವರ್ಷ ಇದೇ ಮೊದಲ ಬಾರಿಗೆ ಹೆಚ್ಚಿನ ಮಹಿಳಾ ಮತದಾರರು ಅಂದರೆ 60.9% ರಷ್ಟು ಮತದಾನವನ್ನು ಚಲಾಯಿಸಿದ್ದು ದಾಖಲಾಗಿದೆ. ಫೆಬ್ರವರಿ 5ರಂದು ನಡೆದ ಒಂದೇ ಹಂತದ ಚುನಾವಣೆಯಲ್ಲಿ 72.36 ಲಕ್ಷ ನೋಂದಾಯಿತ ಮಹಿಳಾ ಮತದಾರರಲ್ಲಿ ಸುಮಾರು 44.08 ಲಕ್ಷ ಜನರಿಗೆ ಸಹಿ ಹಾಕಲಾಗಿದೆ.

2025ರ ದೆಹಲಿ ಚುನಾವಣೆಯಲ್ಲಿ ಗೆದ್ದ ಮಹಿಳೆಯರು

ಅತಿಶಿ: ಅವರು ತಮ್ಮ ಕಲ್ಕಾಜಿ ಸ್ಥಾನವನ್ನು ಉಳಿಸಿಕೊಂಡಿದ್ದಾರೆ ಮತ್ತು ಬಿಜೆಪಿಯ ರಮೇಶ್ ಬಿಧುರಿ ಅವರನ್ನು ಸೋಲಿಸಿ 3,521 ಮತಗಳ ಅಂತರದಿಂದ ಚುನಾವಣೆಯಲ್ಲಿ ಗೆದಿದ್ದಾರೆ. ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸೌರಭ್ ಭಾರದ್ವಾಜ್ ಮತ್ತು ಸತ್ಯೇಂದರ್ ಜೈನ್ ಸೇರಿದಂತೆ ಪಕ್ಷದ ಹೆಚ್ಚಿನ ಪ್ರಮುಖ ನಾಯಕರು ಸೋತಿದ್ದರಿಂದ ಚುನಾವಣೆಯಲ್ಲಿ ಗೆದ್ದ ಕೆಲವು ಎಎಪಿ ಸಚಿವರು ಮತ್ತು ಹಿರಿಯ ನಾಯಕರಲ್ಲಿ ಅತಿಶಿ ಕೂಡ ಒಬ್ಬರಾಗಿದ್ದಾರೆ.

ನೀಲಂ ಪಹೇಲ್ವಾನ್: ನಜಾಫ್‌ಗಢದ ಬಿಜೆಪಿ ಅಭ್ಯರ್ಥಿ ನೀಲಂ ಪಹೇಲ್ವಾನ್ ತಮ್ಮ ಹತ್ತಿರದ ಪ್ರತಿಸ್ಪರ್ಧಿ ಎಎಪಿಯ ತರುಣ್ ಕುಮಾರ್ ಅವರನ್ನು ಸುಮಾರು 30,000 ಮತಗಳಿಂದ ಸೋಲಿಸಿದ್ದಾರೆ.

ರೇಖಾ ಗುಪ್ತಾ: ಶಾಲಿಮಾರ್ ಬಾಗ್ ಸ್ಥಾನದಿಂದ ಬಿಜೆಪಿಯಿಂದ ಸ್ಪರ್ಧಿಸಿ, ಎಎಪಿಯ ಬಂದಾನ ಕುಮಾರಿ ಅವರನ್ನು 29,595 ಮತಗಳಿಂದ ಸೋಲಿಸಿದ್ದಾರೆ.

ಪೂನಂ ಶರ್ಮಾ: ಬಿಜೆಪಿ ಅಭ್ಯರ್ಥಿಯಾದ ಇವರು ವಜೀರ್‌ಪುರ ಕ್ಷೇತ್ರದಲ್ಲಿ ಎಎಪಿಯ ರಾಜೇಶ್ ಗುಪ್ತಾ ಅವರನ್ನು 11,425 ಮತಗಳಿಂದ ಸೋಲಿಸಿದ್ದಾರೆ.

ಶಿಖಾ ರಾಯ್: ಗ್ರೇಟರ್ ಕೈಲಾಶ್‌ನಿಂದ ಹಾಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಅವರನ್ನು 3,188 ಮತಗಳ ಅಂತರದಿಂದ ಸೋಲಿಸುವ ಮೂಲಕ ಬಿಜೆಪಿ ನಾಯಕಿ ವಿಜಯಶಾಲಿಯಾಗಿದ್ದಾರೆ.

ಈ ಹಿಂದಿನ ದೆಹಲಿಯ ಮಹಿಳಾ ಶಾಸಕರತ್ತ ಒಂದು ನೋಟ
1993ರಿಂದ ಇಲ್ಲಿಯವರೆಗೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕೇವಲ 44 ಮಹಿಳಾ ಅಭ್ಯರ್ಥಿಗಳು ಮಾತ್ರ ಗೆದ್ದಿದ್ದಾರೆ. 1998ರಲ್ಲಿ 9 ಮಹಿಳೆಯರು ಗೆದ್ದಿದ್ದರು. 1993ರಲ್ಲಿ ಕೇವಲ 3 ಮಹಿಳೆಯರು ಆಯ್ಕೆಯಾಗಿದ್ದರು. ಇದು ವಿಧಾನಸಭೆಯ ಶೇಕಡಾ 4.3ರಷ್ಟಿತ್ತು.

2003ರಲ್ಲಿ ಏಳು ಮಹಿಳೆಯರು ಆಯ್ಕೆಯಾಗಿದ್ದರು ಮತ್ತು 2008 ಮತ್ತು 2013ರ ಎರಡೂ ಚುನಾವಣೆಗಳಲ್ಲಿ ಈ ಸಂಖ್ಯೆ ಮೂರಕ್ಕೆ ಇಳಿಯಿತು. 2015ರಲ್ಲಿ, ಒಟ್ಟು 63 ಮಹಿಳೆಯರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಮತ್ತು ಅವರಲ್ಲಿ 6 ಮಂದಿ ಗೆದ್ದರು.

2020ರ ಚುನಾವಣೆಯಲ್ಲಿ ಸ್ಪರ್ಧಿಸಿದ 672 ನಾಮನಿರ್ದೇಶಿತರಲ್ಲಿ 76 ಮಹಿಳೆಯರು ಸೇರಿದ್ದರು. ಅವರಲ್ಲಿ 8 ಮಹಿಳೆಯರು ಗೆದ್ದಿದ್ದರು.

ದೆಹಲಿ ಇಲ್ಲಿಯವರೆಗೆ ಕೇವಲ ಮೂವರು ಮಹಿಳಾ ಮುಖ್ಯಮಂತ್ರಿಗಳನ್ನು ಮಾತ್ರ ಕಂಡಿದೆ. 1998ರಲ್ಲಿ ಬಿಜೆಪಿಯ ಸುಷ್ಮಾ ಸ್ವರಾಜ್, 1998ರಿಂದ 2013ರವರೆಗೆ 15 ವರ್ಷಗಳ ಕಾಲ ರಾಜಧಾನಿಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಮತ್ತು ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ ನಂತರ ಉನ್ನತ ಹುದ್ದೆಯನ್ನು ಅಲಂಕರಿಸಿದ ನಗರದ ಕಿರಿಯ ಮುಖ್ಯಮಂತ್ರಿ ಎಎಪಿಯ ಅತಿಶಿಯಾಗಿದ್ದಾರೆ.

ಎಎಪಿ ಸೋಲಿಗೆ ದಲಿತ ಮತದಾರರು ಕಾರಣವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....