Homeಮುಖಪುಟದೆಹಲಿ ಅಬಕಾರಿ ಪ್ರಕರಣ: ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಅರವಿಂದ್ ಕೇಜ್ರಿವಾಲ್

ದೆಹಲಿ ಅಬಕಾರಿ ಪ್ರಕರಣ: ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜುಲೈ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ರೋಸ್ ಅವೆನ್ಯೂ ಕೋರ್ಟ್ ಶನಿವಾರ ಕಳುಹಿಸಿದೆ. ಮುಖ್ಯಮಂತ್ರಿಯ ನ್ಯಾಯಾಂಗ ಬಂಧನಕ್ಕೆ ಕೋರಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ ಅರ್ಜಿಯ ಆದೇಶವನ್ನು ನ್ಯಾಯಾಲಯವು ಈ ಹಿಂದೆ ಕಾಯ್ದಿರಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ನ್ಯಾಯಾಂಗ ಬಂಧನಕ್ಕೆ ಕೋರಿ ರೌಸ್ ಅವೆನ್ಯೂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಅರವಿಂದ್ ಕೇಜ್ರಿವಾಲ್ ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ಉದ್ದೇಶಪೂರ್ವಕವಾಗಿ ಪ್ರಶ್ನೆಗಳಿಗೆ ನೇರ ಉತ್ತರ ನೀಡುವುದನ್ನು ತಪ್ಪಿಸುತ್ತಿದ್ದಾರೆ ಎಂದು ಸಿಬಿಐ ಹೇಳಿದೆ.

ನ್ಯಾಯಾಲಯದಲ್ಲಿ ಸಿಬಿಐ ಹೇಳಿದ್ದೇನು?

“ಕೇಜ್ರಿವಾಲ್ ಅವರು ತನಿಖೆಯ ಮೇಲೆ ಪ್ರಭಾವ ಬೀರುವ ಪ್ರಮುಖ ರಾಜಕೀಯ ವ್ಯಕ್ತಿಯಾಗಿದ್ದಾರೆ. ಸಿಎಂ ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ಪ್ರಶ್ನೆಗಳಿಗೆ ಸರಿಯಾದ ಮತ್ತು ನೇರ ಉತ್ತರವನ್ನು ನೀಡಲಿಲ್ಲ” ಎಂದು ಆರೋಪಿಸಿದೆ.

ಕೋವಿಡ್‌ನ ಎರಡನೇ ಅಲೆಯ ಸಂದರ್ಭದಲ್ಲಿ, ದಕ್ಷಿಣ ಗುಂಪಿನ ಆರೋಪಿಗಳು ದೆಹಲಿಯಲ್ಲಿ ಮೊಕ್ಕಾಂ ಹೂಡಿರುವ ಸಂದರ್ಭದಲ್ಲಿ, ಕೇವಲ ಒಂದು ದಿನದೊಳಗೆ ಪರಿಷ್ಕೃತ ಅಬಕಾರಿ ಸುಂಕ ನೀತಿಗೆ ಕ್ಯಾಬಿನೆಟ್ ಅನುಮೋದನೆಯನ್ನು ತರಾತುರಿಯಲ್ಲಿ ಏಕೆ ಪಡೆಯಲಾಯಿತು ಎಂಬುದನ್ನು ವಿವರಿಸಲು ಕೇಜ್ರಿವಾಲ್‌ಗೆ ಸಾಧ್ಯವಾಗಲಿಲ್ಲ ಎಂದು ಸಿಬಿಐ ಹೇಳಿದೆ. ಅದೂ ಸಹ ಅವರ ನಿಕಟವರ್ತಿ ವಿಜಯ್ ನಾಯರ್ ಜೊತೆಗಿನ ಸಭೆಗಳನ್ನು ನಡೆಸುವುದು, ನಾಯರ್ ಮತ್ತು ವಿವಿಧ ಪಾಲುದಾರರೊಂದಿಗಿನ ಅವರ ಸಭೆಗಳ ಬಗ್ಗೆ ಪ್ರಶ್ನೆಗಳನ್ನು ತಪ್ಪಿಸಿದರು ಎಂದು ಹೇಳಿದೆ.

ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಏಜೆನ್ಸಿ ಅವರನ್ನು ಬಂಧಿಸಿದ ನಂತರ ದೆಹಲಿ ನ್ಯಾಯಾಲಯವು ಬುಧವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಕಳುಹಿಸಿದೆ. ದೆಹಲಿ ಸರ್ಕಾರದ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಮಾರ್ಚ್ 21 ರಂದು, ಈಗ ರದ್ದಾದ ನೀತಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿತು. ಅವರಿಗೆ ವಿಚಾರಣಾ ನ್ಯಾಯಾಲಯ ಜಾಮೀನು ನೀಡಿದ್ದು, ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ಎರಡೂ ಪ್ರಕರಣಗಳಲ್ಲಿ ಕೇಜ್ರಿವಾಲ್ ಅವರು ಜಾಮೀನು ಪಡೆಯಲು ವಿಫಲರಾದರೆ, ಪ್ರಸ್ತುತ ಪ್ರಕರಣದಲ್ಲಿ ಅವರ ಪೊಲೀಸ್ ಕಸ್ಟಡಿ ಮುಗಿದ ನಂತರ ಅವರು ನ್ಯಾಯಾಂಗ ಬಂಧನಕ್ಕೆ ಹಿಂತಿರುಗುತ್ತಾರೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜೂನ್ 19 ರಂದು ನ್ಯಾಯಾಲಯ ಜುಲೈ 3 ರವರೆಗೆ ವಿಸ್ತರಿಸಿತ್ತು.

ಇದನ್ನೂ ಓದಿ; ಇಂದಿರಾ ಗಾಂಧಿ ನಮ್ಮನ್ನು ಜೈಲಿಗೆ ಹಾಕಿದರು, ಆದರೆ ಎಂದಿಗೂ ನಿಂದಿಸಲಿಲ್ಲ: ಲಾಲು ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...