Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಇಂದು ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ. ಇಡಿ ನೀಡಿರುವ ಸಮನ್ಸ್‌ಗಳು ಕಾನೂನುಬಾಹಿರವಾಗಿದ್ದು, ಕೇಜ್ರಿವಾಲ್ ಅವರನ್ನು ಬಂಧಿಸುವುದೊಂದೇ ಅವರ ಗುರಿ ಎಂದು ಆಪ್ ಆರೋಪಿಸಿದೆ.

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿಯ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು ನವೆಂಬರ್ 2 ಮತ್ತು ಡಿಸೆಂಬರ್ 21ರಂದು ನೀಡಿರುವ ಹಿಂದಿನ ಎರಡು ಸಮನ್ಸ್‌ಗಳಿಗೂ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ನಿರಾಕರಿಸಿದ ನಂತರ ಮೂರನೇ ನೋಟಿಸ್ ಜಾರಿ ಮಾಡಲಾಗಿದೆ.

ಕೇಜ್ರಿವಾಲ್ ಅವರು ತನಿಖಾ ಸಂಸ್ಥೆಯೊಂದಿಗೆ ಸಹಕರಿಸಲು ಸಿದ್ಧರಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರತಿಪಾದಿಸಿದೆ. ಆದರೆ, ಇಡಿ ಸಮನ್ಸ್ ಕಾನೂನುಬಾಹಿರವಾಗಿದ್ದು, ಅವರನ್ನು ಬಂಧಿಸುವ ಉದ್ದೇಶದಿಂದ ಕಳುಹಿಸಲಾಗಿದೆ ಎಂದು ಪ್ರತಿಪಾದಿಸಿದೆ.

‘ಚುನಾವಣೆಗೆ ಮುಂಚೆಯೇ ನೋಟಿಸ್ ಏಕೆ ಕಳುಹಿಸಲಾಗಿದೆ? ಕೇಜ್ರಿವಾಲ್ ಅವರನ್ನು ಚುನಾವಣಾ ಪ್ರಚಾರದಿಂದ ತಡೆಯುವ ಪ್ರಯತ್ನವಾಗಿದೆ’ ಎಂದು ಪಕ್ಷ ಆರೋಪಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯಸ್ಥರನ್ನು ಕೇಂದ್ರ ತನಿಖಾ ದಳವು ಏಪ್ರಿಲ್‌ನಲ್ಲಿ ವಿಚಾರಣೆ ನಡೆಸಿತ್ತು. ಆದರೆ, ಇಡಿ ಅವರನ್ನು ಆರೋಪಿಯನ್ನಾಗಿ ಮಾಡಿರಲಿಲ್ಲ.

ಜಾರಿ ನಿರ್ದೇಶನಾಲಯದಿಂದ ಮೊದಲ ಸಮನ್ಸ್ ಜಾರಿಯಾದಾಗಿನಿಂದಲೂ, ದೆಹಲಿ ಮುಖ್ಯಮಂತ್ರಿಯನ್ನು ಅವರ ವಿಚಾರಣೆಯ ನಂತರ ಸಂಸ್ಥೆಯು ಬಂಧಿಸುತ್ತದೆ ಎಂಬ ತೀವ್ರ ಊಹಾಪೋಹಗಳು ಇದ್ದವು. ಎಎಪಿಯ ಹಲವು ನಾಯಕರು ಕೂಡ ಇದೇ ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ.

ಡಿಸೆಂಬರ್ 22ರಂದು ಇಡಿಗೆ ಪತ್ರ ಬರೆದಿದ್ದ ಕೇಜ್ರಿವಾಲ್, ‘ಕಾನೂನಿಗೆ ಅನುಸಾರವಾಗಿ ನೀಡಲಾದ ಯಾವುದೇ ಸಮನ್ಸ್‌ಗಳನ್ನು ಅನುಸರಿಸುವುದರಿಂದ ನಾನು ದೂರ ಸರಿಯುವುದಿಲ್ಲ. ಆದರೆ, ನಿಮ್ಮ ಸಮನ್ಸ್‌ಗಳು ಕಾನೂನಿಗೆ ಅನುಗುಣವಾಗಿಲ್ಲ. ನೀವು ಉದ್ದೇಶಪೂರ್ವಕವಾಗಿ, ಯಾವುದೇ ಕಾರಣ ಮತ್ತು ತನಿಖೆಯ ಅಗತ್ಯವನ್ನು ನಿರ್ದಿಷ್ಟಪಡಿಸದೆ ವೈಯಕ್ತಿಕವಾಗಿ ನನ್ನ ಪಾತ್ರವನ್ನು ಮಾತ್ರ ಹುಡುಕಿದ್ದೀರಿ. ನಿಮ್ಮ ಸಮನ್ಸ್‌ ನನಗೆ ಕಿರುಕುಳ ಮತ್ತು ಮುಜುಗರವನ್ನು ಉಂಟುಮಾಡುವ ಉದ್ದೇಶವನ್ನು ಸೂಚಿಸುತ್ತದೆ’ ಎಂದು ಹೇಳಿದ್ದರು.

ಅಬಕಾರಿ ನೀತಿಯನ್ನು ಅಂತಿಮಗೊಳಿಸಲು ಎಎಪಿ ₹100 ಕೋಟಿ ಕಿಕ್‌ಬ್ಯಾಕ್ ಪಡೆದಿದೆ ಮತ್ತು ಇದರ ಭಾಗವನ್ನು ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ. ಹಣವನ್ನು “ಸೌತ್ ಗ್ರೂಪ್” ನಿಂದ ಸ್ವೀಕರಿಸಲಾಗಿದ್ದು, ಆರೋಪಿಗಳಾದ ಅಭಿಷೇಕ್ ಬೋಯಿನ್‌ಪಲ್ಲಿ ಮತ್ತು ದಿನೇಶ್ ಅರೋರಾ ಅವರ ಸಹಾಯದಿಂದ ಮಾಜಿ ಎಎಪಿ ಸಂವಹನ ಉಸ್ತುವಾರಿ ವಿಜಯ್ ನಾಯರ್‌ಗೆ ವರ್ಗಾಯಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಪ್ರಚಾರದ ಸಮಯದಲ್ಲಿ ಎಎಪಿ ಸ್ವಯಂಸೇವಕರಿಗೆ ನಗದು ರೂಪದಲ್ಲಿ ಹಣ ನೀಡಿದೆ ಎಂದು ಇಡಿ ಆರೋಪಿಸಿದೆ.

ಕೇಜ್ರಿವಾಲ್ ಅವರನ್ನು ಬಂಧಿಸಿದರೆ ರಾಜೀನಾಮೆ ನೀಡಬೇಕೆ ಅಥವಾ ಜೈಲಿನಿಂದ ಸರ್ಕಾರವನ್ನು ಮುಂದುವರಿಸಬೇಕೇ ಎಂಬ ಬಗ್ಗೆ ಎಎಪಿ ಸಾರ್ವಜನಿಕ ಪ್ರತಿಕ್ರಿಯೆಯನ್ನು ಕೇಳುತ್ತಿದೆ. ಎಎಪಿಯನ್ನು ದುರ್ಬಲಗೊಳಿಸಲು ಕೇಜ್ರಿವಾಲ್ ಅವರನ್ನು ಪ್ರಕರಣದಲ್ಲಿ ಸಿಲುಕಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಪಿತೂರಿ ನಡೆಸುತ್ತಿದೆ ಎಂದು ಆಪ್ ಆರೋಪಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿಯಲ್ಲಿ ಬಂಧಿಸಲಾಯಿತು. ನಂತರ, ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಅಕ್ಟೋಬರ್‌ನಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ; ಗ್ಯಾರಂಟಿ ಪ್ರಶ್ನಿಸಿ ಅರ್ಜಿ: ವಿಚಾರಣೆ 3 ತಿಂಗಳು ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...