Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಇಂದು ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ. ಇಡಿ ನೀಡಿರುವ ಸಮನ್ಸ್‌ಗಳು ಕಾನೂನುಬಾಹಿರವಾಗಿದ್ದು, ಕೇಜ್ರಿವಾಲ್ ಅವರನ್ನು ಬಂಧಿಸುವುದೊಂದೇ ಅವರ ಗುರಿ ಎಂದು ಆಪ್ ಆರೋಪಿಸಿದೆ.

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿಯ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು ನವೆಂಬರ್ 2 ಮತ್ತು ಡಿಸೆಂಬರ್ 21ರಂದು ನೀಡಿರುವ ಹಿಂದಿನ ಎರಡು ಸಮನ್ಸ್‌ಗಳಿಗೂ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ನಿರಾಕರಿಸಿದ ನಂತರ ಮೂರನೇ ನೋಟಿಸ್ ಜಾರಿ ಮಾಡಲಾಗಿದೆ.

ಕೇಜ್ರಿವಾಲ್ ಅವರು ತನಿಖಾ ಸಂಸ್ಥೆಯೊಂದಿಗೆ ಸಹಕರಿಸಲು ಸಿದ್ಧರಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರತಿಪಾದಿಸಿದೆ. ಆದರೆ, ಇಡಿ ಸಮನ್ಸ್ ಕಾನೂನುಬಾಹಿರವಾಗಿದ್ದು, ಅವರನ್ನು ಬಂಧಿಸುವ ಉದ್ದೇಶದಿಂದ ಕಳುಹಿಸಲಾಗಿದೆ ಎಂದು ಪ್ರತಿಪಾದಿಸಿದೆ.

‘ಚುನಾವಣೆಗೆ ಮುಂಚೆಯೇ ನೋಟಿಸ್ ಏಕೆ ಕಳುಹಿಸಲಾಗಿದೆ? ಕೇಜ್ರಿವಾಲ್ ಅವರನ್ನು ಚುನಾವಣಾ ಪ್ರಚಾರದಿಂದ ತಡೆಯುವ ಪ್ರಯತ್ನವಾಗಿದೆ’ ಎಂದು ಪಕ್ಷ ಆರೋಪಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯಸ್ಥರನ್ನು ಕೇಂದ್ರ ತನಿಖಾ ದಳವು ಏಪ್ರಿಲ್‌ನಲ್ಲಿ ವಿಚಾರಣೆ ನಡೆಸಿತ್ತು. ಆದರೆ, ಇಡಿ ಅವರನ್ನು ಆರೋಪಿಯನ್ನಾಗಿ ಮಾಡಿರಲಿಲ್ಲ.

ಜಾರಿ ನಿರ್ದೇಶನಾಲಯದಿಂದ ಮೊದಲ ಸಮನ್ಸ್ ಜಾರಿಯಾದಾಗಿನಿಂದಲೂ, ದೆಹಲಿ ಮುಖ್ಯಮಂತ್ರಿಯನ್ನು ಅವರ ವಿಚಾರಣೆಯ ನಂತರ ಸಂಸ್ಥೆಯು ಬಂಧಿಸುತ್ತದೆ ಎಂಬ ತೀವ್ರ ಊಹಾಪೋಹಗಳು ಇದ್ದವು. ಎಎಪಿಯ ಹಲವು ನಾಯಕರು ಕೂಡ ಇದೇ ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ.

ಡಿಸೆಂಬರ್ 22ರಂದು ಇಡಿಗೆ ಪತ್ರ ಬರೆದಿದ್ದ ಕೇಜ್ರಿವಾಲ್, ‘ಕಾನೂನಿಗೆ ಅನುಸಾರವಾಗಿ ನೀಡಲಾದ ಯಾವುದೇ ಸಮನ್ಸ್‌ಗಳನ್ನು ಅನುಸರಿಸುವುದರಿಂದ ನಾನು ದೂರ ಸರಿಯುವುದಿಲ್ಲ. ಆದರೆ, ನಿಮ್ಮ ಸಮನ್ಸ್‌ಗಳು ಕಾನೂನಿಗೆ ಅನುಗುಣವಾಗಿಲ್ಲ. ನೀವು ಉದ್ದೇಶಪೂರ್ವಕವಾಗಿ, ಯಾವುದೇ ಕಾರಣ ಮತ್ತು ತನಿಖೆಯ ಅಗತ್ಯವನ್ನು ನಿರ್ದಿಷ್ಟಪಡಿಸದೆ ವೈಯಕ್ತಿಕವಾಗಿ ನನ್ನ ಪಾತ್ರವನ್ನು ಮಾತ್ರ ಹುಡುಕಿದ್ದೀರಿ. ನಿಮ್ಮ ಸಮನ್ಸ್‌ ನನಗೆ ಕಿರುಕುಳ ಮತ್ತು ಮುಜುಗರವನ್ನು ಉಂಟುಮಾಡುವ ಉದ್ದೇಶವನ್ನು ಸೂಚಿಸುತ್ತದೆ’ ಎಂದು ಹೇಳಿದ್ದರು.

ಅಬಕಾರಿ ನೀತಿಯನ್ನು ಅಂತಿಮಗೊಳಿಸಲು ಎಎಪಿ ₹100 ಕೋಟಿ ಕಿಕ್‌ಬ್ಯಾಕ್ ಪಡೆದಿದೆ ಮತ್ತು ಇದರ ಭಾಗವನ್ನು ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ. ಹಣವನ್ನು “ಸೌತ್ ಗ್ರೂಪ್” ನಿಂದ ಸ್ವೀಕರಿಸಲಾಗಿದ್ದು, ಆರೋಪಿಗಳಾದ ಅಭಿಷೇಕ್ ಬೋಯಿನ್‌ಪಲ್ಲಿ ಮತ್ತು ದಿನೇಶ್ ಅರೋರಾ ಅವರ ಸಹಾಯದಿಂದ ಮಾಜಿ ಎಎಪಿ ಸಂವಹನ ಉಸ್ತುವಾರಿ ವಿಜಯ್ ನಾಯರ್‌ಗೆ ವರ್ಗಾಯಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಪ್ರಚಾರದ ಸಮಯದಲ್ಲಿ ಎಎಪಿ ಸ್ವಯಂಸೇವಕರಿಗೆ ನಗದು ರೂಪದಲ್ಲಿ ಹಣ ನೀಡಿದೆ ಎಂದು ಇಡಿ ಆರೋಪಿಸಿದೆ.

ಕೇಜ್ರಿವಾಲ್ ಅವರನ್ನು ಬಂಧಿಸಿದರೆ ರಾಜೀನಾಮೆ ನೀಡಬೇಕೆ ಅಥವಾ ಜೈಲಿನಿಂದ ಸರ್ಕಾರವನ್ನು ಮುಂದುವರಿಸಬೇಕೇ ಎಂಬ ಬಗ್ಗೆ ಎಎಪಿ ಸಾರ್ವಜನಿಕ ಪ್ರತಿಕ್ರಿಯೆಯನ್ನು ಕೇಳುತ್ತಿದೆ. ಎಎಪಿಯನ್ನು ದುರ್ಬಲಗೊಳಿಸಲು ಕೇಜ್ರಿವಾಲ್ ಅವರನ್ನು ಪ್ರಕರಣದಲ್ಲಿ ಸಿಲುಕಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಪಿತೂರಿ ನಡೆಸುತ್ತಿದೆ ಎಂದು ಆಪ್ ಆರೋಪಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿಯಲ್ಲಿ ಬಂಧಿಸಲಾಯಿತು. ನಂತರ, ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಅಕ್ಟೋಬರ್‌ನಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ; ಗ್ಯಾರಂಟಿ ಪ್ರಶ್ನಿಸಿ ಅರ್ಜಿ: ವಿಚಾರಣೆ 3 ತಿಂಗಳು ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...