Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಇಂದು ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ. ಇಡಿ ನೀಡಿರುವ ಸಮನ್ಸ್‌ಗಳು ಕಾನೂನುಬಾಹಿರವಾಗಿದ್ದು, ಕೇಜ್ರಿವಾಲ್ ಅವರನ್ನು ಬಂಧಿಸುವುದೊಂದೇ ಅವರ ಗುರಿ ಎಂದು ಆಪ್ ಆರೋಪಿಸಿದೆ.

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿಯ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು ನವೆಂಬರ್ 2 ಮತ್ತು ಡಿಸೆಂಬರ್ 21ರಂದು ನೀಡಿರುವ ಹಿಂದಿನ ಎರಡು ಸಮನ್ಸ್‌ಗಳಿಗೂ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ನಿರಾಕರಿಸಿದ ನಂತರ ಮೂರನೇ ನೋಟಿಸ್ ಜಾರಿ ಮಾಡಲಾಗಿದೆ.

ಕೇಜ್ರಿವಾಲ್ ಅವರು ತನಿಖಾ ಸಂಸ್ಥೆಯೊಂದಿಗೆ ಸಹಕರಿಸಲು ಸಿದ್ಧರಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರತಿಪಾದಿಸಿದೆ. ಆದರೆ, ಇಡಿ ಸಮನ್ಸ್ ಕಾನೂನುಬಾಹಿರವಾಗಿದ್ದು, ಅವರನ್ನು ಬಂಧಿಸುವ ಉದ್ದೇಶದಿಂದ ಕಳುಹಿಸಲಾಗಿದೆ ಎಂದು ಪ್ರತಿಪಾದಿಸಿದೆ.

‘ಚುನಾವಣೆಗೆ ಮುಂಚೆಯೇ ನೋಟಿಸ್ ಏಕೆ ಕಳುಹಿಸಲಾಗಿದೆ? ಕೇಜ್ರಿವಾಲ್ ಅವರನ್ನು ಚುನಾವಣಾ ಪ್ರಚಾರದಿಂದ ತಡೆಯುವ ಪ್ರಯತ್ನವಾಗಿದೆ’ ಎಂದು ಪಕ್ಷ ಆರೋಪಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯಸ್ಥರನ್ನು ಕೇಂದ್ರ ತನಿಖಾ ದಳವು ಏಪ್ರಿಲ್‌ನಲ್ಲಿ ವಿಚಾರಣೆ ನಡೆಸಿತ್ತು. ಆದರೆ, ಇಡಿ ಅವರನ್ನು ಆರೋಪಿಯನ್ನಾಗಿ ಮಾಡಿರಲಿಲ್ಲ.

ಜಾರಿ ನಿರ್ದೇಶನಾಲಯದಿಂದ ಮೊದಲ ಸಮನ್ಸ್ ಜಾರಿಯಾದಾಗಿನಿಂದಲೂ, ದೆಹಲಿ ಮುಖ್ಯಮಂತ್ರಿಯನ್ನು ಅವರ ವಿಚಾರಣೆಯ ನಂತರ ಸಂಸ್ಥೆಯು ಬಂಧಿಸುತ್ತದೆ ಎಂಬ ತೀವ್ರ ಊಹಾಪೋಹಗಳು ಇದ್ದವು. ಎಎಪಿಯ ಹಲವು ನಾಯಕರು ಕೂಡ ಇದೇ ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ.

ಡಿಸೆಂಬರ್ 22ರಂದು ಇಡಿಗೆ ಪತ್ರ ಬರೆದಿದ್ದ ಕೇಜ್ರಿವಾಲ್, ‘ಕಾನೂನಿಗೆ ಅನುಸಾರವಾಗಿ ನೀಡಲಾದ ಯಾವುದೇ ಸಮನ್ಸ್‌ಗಳನ್ನು ಅನುಸರಿಸುವುದರಿಂದ ನಾನು ದೂರ ಸರಿಯುವುದಿಲ್ಲ. ಆದರೆ, ನಿಮ್ಮ ಸಮನ್ಸ್‌ಗಳು ಕಾನೂನಿಗೆ ಅನುಗುಣವಾಗಿಲ್ಲ. ನೀವು ಉದ್ದೇಶಪೂರ್ವಕವಾಗಿ, ಯಾವುದೇ ಕಾರಣ ಮತ್ತು ತನಿಖೆಯ ಅಗತ್ಯವನ್ನು ನಿರ್ದಿಷ್ಟಪಡಿಸದೆ ವೈಯಕ್ತಿಕವಾಗಿ ನನ್ನ ಪಾತ್ರವನ್ನು ಮಾತ್ರ ಹುಡುಕಿದ್ದೀರಿ. ನಿಮ್ಮ ಸಮನ್ಸ್‌ ನನಗೆ ಕಿರುಕುಳ ಮತ್ತು ಮುಜುಗರವನ್ನು ಉಂಟುಮಾಡುವ ಉದ್ದೇಶವನ್ನು ಸೂಚಿಸುತ್ತದೆ’ ಎಂದು ಹೇಳಿದ್ದರು.

ಅಬಕಾರಿ ನೀತಿಯನ್ನು ಅಂತಿಮಗೊಳಿಸಲು ಎಎಪಿ ₹100 ಕೋಟಿ ಕಿಕ್‌ಬ್ಯಾಕ್ ಪಡೆದಿದೆ ಮತ್ತು ಇದರ ಭಾಗವನ್ನು ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ. ಹಣವನ್ನು “ಸೌತ್ ಗ್ರೂಪ್” ನಿಂದ ಸ್ವೀಕರಿಸಲಾಗಿದ್ದು, ಆರೋಪಿಗಳಾದ ಅಭಿಷೇಕ್ ಬೋಯಿನ್‌ಪಲ್ಲಿ ಮತ್ತು ದಿನೇಶ್ ಅರೋರಾ ಅವರ ಸಹಾಯದಿಂದ ಮಾಜಿ ಎಎಪಿ ಸಂವಹನ ಉಸ್ತುವಾರಿ ವಿಜಯ್ ನಾಯರ್‌ಗೆ ವರ್ಗಾಯಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಪ್ರಚಾರದ ಸಮಯದಲ್ಲಿ ಎಎಪಿ ಸ್ವಯಂಸೇವಕರಿಗೆ ನಗದು ರೂಪದಲ್ಲಿ ಹಣ ನೀಡಿದೆ ಎಂದು ಇಡಿ ಆರೋಪಿಸಿದೆ.

ಕೇಜ್ರಿವಾಲ್ ಅವರನ್ನು ಬಂಧಿಸಿದರೆ ರಾಜೀನಾಮೆ ನೀಡಬೇಕೆ ಅಥವಾ ಜೈಲಿನಿಂದ ಸರ್ಕಾರವನ್ನು ಮುಂದುವರಿಸಬೇಕೇ ಎಂಬ ಬಗ್ಗೆ ಎಎಪಿ ಸಾರ್ವಜನಿಕ ಪ್ರತಿಕ್ರಿಯೆಯನ್ನು ಕೇಳುತ್ತಿದೆ. ಎಎಪಿಯನ್ನು ದುರ್ಬಲಗೊಳಿಸಲು ಕೇಜ್ರಿವಾಲ್ ಅವರನ್ನು ಪ್ರಕರಣದಲ್ಲಿ ಸಿಲುಕಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಪಿತೂರಿ ನಡೆಸುತ್ತಿದೆ ಎಂದು ಆಪ್ ಆರೋಪಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿಯಲ್ಲಿ ಬಂಧಿಸಲಾಯಿತು. ನಂತರ, ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಅಕ್ಟೋಬರ್‌ನಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ; ಗ್ಯಾರಂಟಿ ಪ್ರಶ್ನಿಸಿ ಅರ್ಜಿ: ವಿಚಾರಣೆ 3 ತಿಂಗಳು ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...