Homeಮುಖಪುಟಅಬಕಾರಿ ನೀತಿ ಅಕ್ರಮ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್

ಅಬಕಾರಿ ನೀತಿ ಅಕ್ರಮ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್

- Advertisement -
- Advertisement -

ದೆಹಲಿಯಲ್ಲಿ ಈಗ ರದ್ದಾದ ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ. ಇದೇ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರು, ”ಕೇಜ್ರಿವಾಲ್ ಅವರು ಏಪ್ರಿಲ್ 16 ರಂದು ಸಿಬಿಐ ಮುಂದೆ ಹಾಜರಾಗಲಿದ್ದಾರೆ. ಈ ದಬ್ಬಾಳಿಕೆಯು ಖಂಡಿತವಾಗಿಯೂ ಕೊನೆಗೊಳ್ಳುತ್ತದೆ” ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧದ ಬಗ್ಗೆ  ಕೇಜ್ರಿವಾಲ್ ಅವರು ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡಿದ್ದರಿಂದ ಸಿಬಿಐ ಅವರನ್ನು ಕರೆಸಿದೆ ಎಂದು ಸಿಂಗ್ ಆರೋಪಿಸಿದ್ದಾರೆ.

”ನೀವು [ಮೋದಿ] ಮತ್ತು ನಿಮ್ಮ ಸರ್ಕಾರವು ಅಡಿಯಿಂದ ಮುಡಿವರೆಗೂ ಭ್ರಷ್ಟಾಚಾರದಲ್ಲಿದೆ. ಸಿಬಿಐ ಸಮನ್ಸ್‌ನಿಂದ ಅರವಿಂದ್ ಕೇಜ್ರಿವಾಲ್ ಅವರ ಹೋರಾಟ ನಿಲ್ಲುವುದಿಲ್ಲ” ಎಂದು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ.

ಇದನ್ನೂ ಓದಿ: ”ಪ್ರಧಾನಿ ಪದವಿ ನಕಲಿಯೇ?”: ಮೋದಿ ಶೈಕ್ಷಣಿಕ ದಾಖಲೆ ಕುರಿತು ಮತ್ತೆ ಪ್ರಶ್ನಿಸಿದ ಕೇಜ್ರಿವಾಲ್

ಸಿಬಿಐ ಪ್ರಕರಣವು ನವೆಂಬರ್ 2021ರಲ್ಲಿ ಜಾರಿಗೆ ಬಂದ ದೆಹಲಿ ಸರ್ಕಾರದ ಅಬಕಾರಿ ನೀತಿಗೆ ಸಂಬಂಧಿಸಿದೆ. ಅದರ ಅಡಿಯಲ್ಲಿ, 849 ಮದ್ಯದ ಅಂಗಡಿಗಳ ಪರವಾನಗಿಗಳನ್ನು ಖಾಸಗಿ ಸಂಸ್ಥೆಗಳಿಗೆ ಮುಕ್ತ ಬಿಡ್ಡಿಂಗ್ ಮೂಲಕ ನೀಡಲಾಯಿತು. ಈ ಹಿಂದೆ ನಾಲ್ಕು ಸರ್ಕಾರಿ ನಿಗಮಗಳು 475 ಮದ್ಯದಂಗಡಿಗಳನ್ನು ನಡೆಸುತ್ತಿದ್ದು, ಉಳಿದ 389 ಅಂಗಡಿಗಳು ಖಾಸಗಿಯಾಗಿ ನಡೆಯುತ್ತಿದ್ದವು.

ಇದರಲ್ಲಿ ಅಕ್ರಮ ನಡೆಸಿದೆ ಎಂಬ ಆರೋಪದ ಮೇಲೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿ 26ರಂದು ಕೇಂದ್ರ ತನಿಖಾ ದಳ ಬಂಧಿಸಿತ್ತು.

ಸಿಸೋಡಿಯಾ ಅವರು ಅಕ್ರಮ ಹಣ ವರ್ಗಾವಣೆಯ ಪ್ರತ್ಯೇಕ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರೊಂದಿಗೆ ದೆಹಲಿ ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ್ದರು.

ಫೆಬ್ರವರಿ 26ರಂದು, ಕೇಜ್ರಿವಾಲ್ ಅವರು ಸಿಸೋಡಿಯಾ ನಿರಪರಾಧಿ ಮತ್ತು ಅವರ ವಿರುದ್ಧ ಸಿಬಿಐ ಕ್ರಮವು ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರದ ”ಕೊಳಕು ರಾಜಕೀಯ”ದ ಭಾಗವಾಗಿದೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...