Homeಚಳವಳಿದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಜೊತೆಗೆ ನಿಮ್ಮನ್ನು ಮತ್ತೆ ಮತ್ತೆ ಆಕರ್ಷಿಸುವುದು ಪೋಸ್ಟರ್‌ಗಳಾಗಿದೆ. ಪ್ರತಿಭಟನಾ ಸ್ಥಳದ ಉದ್ದಕ್ಕೂ ರೈತರು ತಂಗಿರುವ ಟೆಂಟ್‌, ಟ್ರ್ಯಾಲಿಗಳ ಮೇಲೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಕ್ಷಣ ಮಾತ್ರದಲ್ಲಿ ಗಮನ ಸೆಳೆಯುತ್ತವೆ. ಇಲ್ಲಿನ ಪ್ರತಿ ಪೋಸ್ಟರ್‌ಗಳೂ ಪ್ರತಿಭಟನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ.

ದೇಶದ ಐತಿಹಾಸಿಕ ಪ್ರತಿಭಟನೆಯಾಗಿರುವ ರೈತ ಹೋರಾಟ, ಬರೀ ರೈತರಿಗಷ್ಟೇ ಸೀಮಿತವಾಗಿಲ್ಲ ಎಂಬುದು ಪ್ರತಿಭಟನಾ ಸ್ಥಳದಲ್ಲಿ ಇರುವ ಪೋಸ್ಟರ್‍ಸ್‌ಗಳು ಹೇಳುತ್ತಿವೆ. ಸ್ವತಃ ಸ್ವಾತಂತ್ಯ್ರ ಹೋರಾಟಗಾರರೇ ಪ್ರತಿಭಟನೆಯಲ್ಲಿದ್ದಾರೆ ಎಂಬಂತಹ ಅನುಭವವ ಈ ಪೋಸ್ಟರ್‌ಗಳು ನಮಗೆ ನೀಡುತ್ತದೆ. ಯುವಜನತೆ ತಾವು ತಂಗಿರುವ ಡೇರೆಗಳ ಬಳಿ ಭಗತ್ ಸಿಂಗ್ ಚಿತ್ರಗಳನ್ನು, ಘೋಷಣೆಗಳನ್ನು ಹಾಕಿಕೊಂಡಿದ್ದಾರೆ. ಭಗತ್ ಸಿಂಗ್ ಮಾತುಗಳನ್ನು ತಮ್ಮದೇ ಧಾಟಿಯಲ್ಲಿ ರೈತ ಹೋರಾಟಕ್ಕೆ ಹೋಲಿಸಿ, ಭಿತ್ತಿಪತ್ರಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರಲ್ಲಿ ಹುಮ್ಮಸ್ಸು ತುಂಬುವ ಕೆಲಸ ಮಾಡುತ್ತಿದ್ದಾರೆ. ರೈತರು ಭಯೋತ್ಪಾಕದಕರಲ್ಲ, ರೈತರಿಲ್ಲದಿದ್ದರೇ ಊಟವಿಲ್ಲ ಎಂಬಂತಹ ಭಿತ್ತಿಪತ್ರಗಳನ್ನು ಇಲ್ಲಿ ಕಾಣಸಿಗುತ್ತದೆ.

ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ನಾವು ಯುದ್ಧದಲ್ಲಿ ಗುಂಡು ಬೀಳುವುದೆಂದು ಹಿಂದೆ ಸರಿಯುವ ರಕ್ತದವರಲ್ಲ. ನಮ್ಮಲ್ಲಿ ಹರಿಯುತ್ತಿರುವ ರಕ್ತ ಸ್ವಾಭಿಮಾನ ಮತ್ತು ಧೈರ್ಯದ್ದು. ಅನ್ಯಾಯವನ್ನು ಎದುರಿಸಲು ಯಾವ ಕ್ಷಣದಲ್ಲೂ, ಎಲ್ಲಿಯೂ ನಾವು ಸಿದ್ಧ. ಅನ್ಯಾಯ ಯಾರು ಮಾಡಿದರೂ ಅನ್ಯಾಯವೇ, ನ್ಯಾಯ ಸಿಗುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಪೋಸ್ಟರ್‌ ಹಿಡಿದ ಪ್ರತಿಭಟನಾನಿರತ ಯುವಕ ತಿಳಿಸುತ್ತಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವ ಹಲವು ರೈತ ಸಂಘಟನೆಗಳು, ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರಗಳನ್ನು ಪ್ರದರ್ಶಿಸುತ್ತಾ ತಮಗೆ ಸಂವಿಧಾನ ನೀಡಿರುವ ಹಕ್ಕಿನ ಮೂಲಕ ಹೋರಾಟ ನಡೆಸುತ್ತಿದ್ದೇವೆ ಎಂದು ಘೋಷಣೆ ಹಾಕುತ್ತಿದ್ದಾರೆ. ತಮ್ಮ ಬ್ಯಾನರ್‌ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮತ್ತು ಸಂವಿಧಾನದ ಪೀಠಿಕೆಗಳ ಚಿತ್ರಗಳನ್ನು ಸೇರಿಸಿರುವುದು ಗಮನಾರ್ಹವಾಗಿದೆ.

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

 

ರೈತರು ದೆಹಲಿ ಚಲೋ ಹೋರಾಟ ಆರಂಭಿಸಿದ ದಿನದಿಂದಲೂ ಹೇಳುತ್ತಿರುವುದು ನಮ್ಮದು ಶಾಂತಿಯುತ ಪ್ರತಿಭಟನೆ ಎಂದು. ಇದಕ್ಕೆ ಪೂರಕವೆಂಬಂತೆ ಶಾಂತಿದೂತ ಬುದ್ಧನ ಚಿತ್ರಗಳು ಪ್ರತಿಭಟನಾ ಸ್ಥಳದಲ್ಲಿ ಕಾಣಸಿಗುತ್ತವೆ. ದೆಹಲಿಯ ಪ್ರಮುಖ ಗಡಿಗಳಾದ ಸಿಂಘು, ಟಕ್ರಿ ಮತ್ತು ಗಾಜಿಪುರ್‌ಗಳಲ್ಲೂ ಇದೆ ರೀತಿಯ ಪೋಸ್ಟರ್‌ಗಳಿವೆ.

ಪ್ರತಿಭಟನಾ ನಿರತ ರೈತ ಸಂಘಟನೆಗಳು ತಮ್ಮ ಸಂಘಟನೆಯ ಹೆಸರುಗಳ ಜೊತೆಗೆ ಬುದ್ಧ, ಅಂಬೇಡ್ಕರ್, ಏಸುಕ್ರಿಸ್ತ ಮತ್ತು ಭಗತ್ ಸಿಂಗ್, ಬುಡಕಟ್ಟು ನಾಯಕ ಬಿರ್ಸಾ ಮುಂಡಾ ನಾಯಕರ ಚಿತ್ರಗಳ ಪೋಸ್ಟರ್‌ಗಳನ್ನು ಹಿಡಿದು ನಿಂತಿದ್ದಾರೆ. ಇದಲ್ಲದೇ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಈ ಹಿಂದೆ ಹಲವು ಕೃಷಿ ಕಾನೂನುಗಳನ್ನು ವಿರೋಧಿಸಿ, ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿ ಹುತಾತ್ಮರಾಗಿರುವ ರೈತ ನಾಯಕರ ಚಿತ್ರಗಳು ಇವರ ಪೋಸ್ಟರ್‌‌ಗಳಲ್ಲಿದೆ. ಇವರುಗಳೆ ನಮ್ಮ ಪ್ರತಿಭಟನೆಗೆ ಸ್ಫೂರ್ತಿ ಎನ್ನುತ್ತಾರೆ ಇಲ್ಲಿನ ಪ್ರತಿಭಟನಾಕಾರರು.

ಇದನ್ನೂ ಓದಿ: ರೈತ ಹೋರಾಟ – ಒಕ್ಕೂಟ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡಿದ ಸೋನಿಯ ಗಾಂಧಿ

ಇನ್ನೂ ವಿಶೇಷವೇನೆಂದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಘೋಷಣೆಗಳಿರುವ ಹಲವು ಪೋಸ್ಟರ್‌ಗಳನ್ನು ಇಲ್ಲಿ ಕಾಣಬಹುದಾಗಿದೆ.

“ನಿಮ್ಮ ಬೇಜವಾಬ್ದಾರಿ ಕಾರಣದಿಂದ ದೇಶದ ರೈತರು ಬೀದಿಗೆ ಬಿದ್ದಿದ್ದಾರೆ. ಮೊದಲು ನಿಮ್ಮ ಕಪ್ಪು ಕಾನೂನುಗಳನ್ನು ವಾಪಸ್ ಪಡೆಯಿರಿ”, “ದೇಶದ ರೈತರ ಆರ್ಥಿಕ ಸ್ಥಿತಿ ಕೆಳಗಿಳಿಯುತ್ತಿದೆ. ಆದರೆ ಅದಾನಿ, ಅಂಬಾನಿಯವರ ಆರ್ಥಿಕ ಪರಿಸ್ಥಿತಿ ಎತ್ತರಕ್ಕೆ ಏರುತ್ತಿದ್ದೆ, ಇದಕ್ಕೆಲ್ಲಾ ಕಾರಣ ಮೋದಿ ಸರ್ಕಾರ” ಎಂಬ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳಿರುವ ಭಿತ್ತಿಪತ್ರಗಳು ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಸಾಮಾನ್ಯವಾಗಿ ಕಾಣಿಸುತ್ತಿವೆ.

ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...