Homeಚಳವಳಿದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಜೊತೆಗೆ ನಿಮ್ಮನ್ನು ಮತ್ತೆ ಮತ್ತೆ ಆಕರ್ಷಿಸುವುದು ಪೋಸ್ಟರ್‌ಗಳಾಗಿದೆ. ಪ್ರತಿಭಟನಾ ಸ್ಥಳದ ಉದ್ದಕ್ಕೂ ರೈತರು ತಂಗಿರುವ ಟೆಂಟ್‌, ಟ್ರ್ಯಾಲಿಗಳ ಮೇಲೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಕ್ಷಣ ಮಾತ್ರದಲ್ಲಿ ಗಮನ ಸೆಳೆಯುತ್ತವೆ. ಇಲ್ಲಿನ ಪ್ರತಿ ಪೋಸ್ಟರ್‌ಗಳೂ ಪ್ರತಿಭಟನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ.

ದೇಶದ ಐತಿಹಾಸಿಕ ಪ್ರತಿಭಟನೆಯಾಗಿರುವ ರೈತ ಹೋರಾಟ, ಬರೀ ರೈತರಿಗಷ್ಟೇ ಸೀಮಿತವಾಗಿಲ್ಲ ಎಂಬುದು ಪ್ರತಿಭಟನಾ ಸ್ಥಳದಲ್ಲಿ ಇರುವ ಪೋಸ್ಟರ್‍ಸ್‌ಗಳು ಹೇಳುತ್ತಿವೆ. ಸ್ವತಃ ಸ್ವಾತಂತ್ಯ್ರ ಹೋರಾಟಗಾರರೇ ಪ್ರತಿಭಟನೆಯಲ್ಲಿದ್ದಾರೆ ಎಂಬಂತಹ ಅನುಭವವ ಈ ಪೋಸ್ಟರ್‌ಗಳು ನಮಗೆ ನೀಡುತ್ತದೆ. ಯುವಜನತೆ ತಾವು ತಂಗಿರುವ ಡೇರೆಗಳ ಬಳಿ ಭಗತ್ ಸಿಂಗ್ ಚಿತ್ರಗಳನ್ನು, ಘೋಷಣೆಗಳನ್ನು ಹಾಕಿಕೊಂಡಿದ್ದಾರೆ. ಭಗತ್ ಸಿಂಗ್ ಮಾತುಗಳನ್ನು ತಮ್ಮದೇ ಧಾಟಿಯಲ್ಲಿ ರೈತ ಹೋರಾಟಕ್ಕೆ ಹೋಲಿಸಿ, ಭಿತ್ತಿಪತ್ರಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರಲ್ಲಿ ಹುಮ್ಮಸ್ಸು ತುಂಬುವ ಕೆಲಸ ಮಾಡುತ್ತಿದ್ದಾರೆ. ರೈತರು ಭಯೋತ್ಪಾಕದಕರಲ್ಲ, ರೈತರಿಲ್ಲದಿದ್ದರೇ ಊಟವಿಲ್ಲ ಎಂಬಂತಹ ಭಿತ್ತಿಪತ್ರಗಳನ್ನು ಇಲ್ಲಿ ಕಾಣಸಿಗುತ್ತದೆ.

ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ನಾವು ಯುದ್ಧದಲ್ಲಿ ಗುಂಡು ಬೀಳುವುದೆಂದು ಹಿಂದೆ ಸರಿಯುವ ರಕ್ತದವರಲ್ಲ. ನಮ್ಮಲ್ಲಿ ಹರಿಯುತ್ತಿರುವ ರಕ್ತ ಸ್ವಾಭಿಮಾನ ಮತ್ತು ಧೈರ್ಯದ್ದು. ಅನ್ಯಾಯವನ್ನು ಎದುರಿಸಲು ಯಾವ ಕ್ಷಣದಲ್ಲೂ, ಎಲ್ಲಿಯೂ ನಾವು ಸಿದ್ಧ. ಅನ್ಯಾಯ ಯಾರು ಮಾಡಿದರೂ ಅನ್ಯಾಯವೇ, ನ್ಯಾಯ ಸಿಗುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಪೋಸ್ಟರ್‌ ಹಿಡಿದ ಪ್ರತಿಭಟನಾನಿರತ ಯುವಕ ತಿಳಿಸುತ್ತಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವ ಹಲವು ರೈತ ಸಂಘಟನೆಗಳು, ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರಗಳನ್ನು ಪ್ರದರ್ಶಿಸುತ್ತಾ ತಮಗೆ ಸಂವಿಧಾನ ನೀಡಿರುವ ಹಕ್ಕಿನ ಮೂಲಕ ಹೋರಾಟ ನಡೆಸುತ್ತಿದ್ದೇವೆ ಎಂದು ಘೋಷಣೆ ಹಾಕುತ್ತಿದ್ದಾರೆ. ತಮ್ಮ ಬ್ಯಾನರ್‌ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮತ್ತು ಸಂವಿಧಾನದ ಪೀಠಿಕೆಗಳ ಚಿತ್ರಗಳನ್ನು ಸೇರಿಸಿರುವುದು ಗಮನಾರ್ಹವಾಗಿದೆ.

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

 

ರೈತರು ದೆಹಲಿ ಚಲೋ ಹೋರಾಟ ಆರಂಭಿಸಿದ ದಿನದಿಂದಲೂ ಹೇಳುತ್ತಿರುವುದು ನಮ್ಮದು ಶಾಂತಿಯುತ ಪ್ರತಿಭಟನೆ ಎಂದು. ಇದಕ್ಕೆ ಪೂರಕವೆಂಬಂತೆ ಶಾಂತಿದೂತ ಬುದ್ಧನ ಚಿತ್ರಗಳು ಪ್ರತಿಭಟನಾ ಸ್ಥಳದಲ್ಲಿ ಕಾಣಸಿಗುತ್ತವೆ. ದೆಹಲಿಯ ಪ್ರಮುಖ ಗಡಿಗಳಾದ ಸಿಂಘು, ಟಕ್ರಿ ಮತ್ತು ಗಾಜಿಪುರ್‌ಗಳಲ್ಲೂ ಇದೆ ರೀತಿಯ ಪೋಸ್ಟರ್‌ಗಳಿವೆ.

ಪ್ರತಿಭಟನಾ ನಿರತ ರೈತ ಸಂಘಟನೆಗಳು ತಮ್ಮ ಸಂಘಟನೆಯ ಹೆಸರುಗಳ ಜೊತೆಗೆ ಬುದ್ಧ, ಅಂಬೇಡ್ಕರ್, ಏಸುಕ್ರಿಸ್ತ ಮತ್ತು ಭಗತ್ ಸಿಂಗ್, ಬುಡಕಟ್ಟು ನಾಯಕ ಬಿರ್ಸಾ ಮುಂಡಾ ನಾಯಕರ ಚಿತ್ರಗಳ ಪೋಸ್ಟರ್‌ಗಳನ್ನು ಹಿಡಿದು ನಿಂತಿದ್ದಾರೆ. ಇದಲ್ಲದೇ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಈ ಹಿಂದೆ ಹಲವು ಕೃಷಿ ಕಾನೂನುಗಳನ್ನು ವಿರೋಧಿಸಿ, ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿ ಹುತಾತ್ಮರಾಗಿರುವ ರೈತ ನಾಯಕರ ಚಿತ್ರಗಳು ಇವರ ಪೋಸ್ಟರ್‌‌ಗಳಲ್ಲಿದೆ. ಇವರುಗಳೆ ನಮ್ಮ ಪ್ರತಿಭಟನೆಗೆ ಸ್ಫೂರ್ತಿ ಎನ್ನುತ್ತಾರೆ ಇಲ್ಲಿನ ಪ್ರತಿಭಟನಾಕಾರರು.

ಇದನ್ನೂ ಓದಿ: ರೈತ ಹೋರಾಟ – ಒಕ್ಕೂಟ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡಿದ ಸೋನಿಯ ಗಾಂಧಿ

ಇನ್ನೂ ವಿಶೇಷವೇನೆಂದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಘೋಷಣೆಗಳಿರುವ ಹಲವು ಪೋಸ್ಟರ್‌ಗಳನ್ನು ಇಲ್ಲಿ ಕಾಣಬಹುದಾಗಿದೆ.

“ನಿಮ್ಮ ಬೇಜವಾಬ್ದಾರಿ ಕಾರಣದಿಂದ ದೇಶದ ರೈತರು ಬೀದಿಗೆ ಬಿದ್ದಿದ್ದಾರೆ. ಮೊದಲು ನಿಮ್ಮ ಕಪ್ಪು ಕಾನೂನುಗಳನ್ನು ವಾಪಸ್ ಪಡೆಯಿರಿ”, “ದೇಶದ ರೈತರ ಆರ್ಥಿಕ ಸ್ಥಿತಿ ಕೆಳಗಿಳಿಯುತ್ತಿದೆ. ಆದರೆ ಅದಾನಿ, ಅಂಬಾನಿಯವರ ಆರ್ಥಿಕ ಪರಿಸ್ಥಿತಿ ಎತ್ತರಕ್ಕೆ ಏರುತ್ತಿದ್ದೆ, ಇದಕ್ಕೆಲ್ಲಾ ಕಾರಣ ಮೋದಿ ಸರ್ಕಾರ” ಎಂಬ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳಿರುವ ಭಿತ್ತಿಪತ್ರಗಳು ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಸಾಮಾನ್ಯವಾಗಿ ಕಾಣಿಸುತ್ತಿವೆ.

ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...