Homeಚಳವಳಿದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಜೊತೆಗೆ ನಿಮ್ಮನ್ನು ಮತ್ತೆ ಮತ್ತೆ ಆಕರ್ಷಿಸುವುದು ಪೋಸ್ಟರ್‌ಗಳಾಗಿದೆ. ಪ್ರತಿಭಟನಾ ಸ್ಥಳದ ಉದ್ದಕ್ಕೂ ರೈತರು ತಂಗಿರುವ ಟೆಂಟ್‌, ಟ್ರ್ಯಾಲಿಗಳ ಮೇಲೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಕ್ಷಣ ಮಾತ್ರದಲ್ಲಿ ಗಮನ ಸೆಳೆಯುತ್ತವೆ. ಇಲ್ಲಿನ ಪ್ರತಿ ಪೋಸ್ಟರ್‌ಗಳೂ ಪ್ರತಿಭಟನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ.

ದೇಶದ ಐತಿಹಾಸಿಕ ಪ್ರತಿಭಟನೆಯಾಗಿರುವ ರೈತ ಹೋರಾಟ, ಬರೀ ರೈತರಿಗಷ್ಟೇ ಸೀಮಿತವಾಗಿಲ್ಲ ಎಂಬುದು ಪ್ರತಿಭಟನಾ ಸ್ಥಳದಲ್ಲಿ ಇರುವ ಪೋಸ್ಟರ್‍ಸ್‌ಗಳು ಹೇಳುತ್ತಿವೆ. ಸ್ವತಃ ಸ್ವಾತಂತ್ಯ್ರ ಹೋರಾಟಗಾರರೇ ಪ್ರತಿಭಟನೆಯಲ್ಲಿದ್ದಾರೆ ಎಂಬಂತಹ ಅನುಭವವ ಈ ಪೋಸ್ಟರ್‌ಗಳು ನಮಗೆ ನೀಡುತ್ತದೆ. ಯುವಜನತೆ ತಾವು ತಂಗಿರುವ ಡೇರೆಗಳ ಬಳಿ ಭಗತ್ ಸಿಂಗ್ ಚಿತ್ರಗಳನ್ನು, ಘೋಷಣೆಗಳನ್ನು ಹಾಕಿಕೊಂಡಿದ್ದಾರೆ. ಭಗತ್ ಸಿಂಗ್ ಮಾತುಗಳನ್ನು ತಮ್ಮದೇ ಧಾಟಿಯಲ್ಲಿ ರೈತ ಹೋರಾಟಕ್ಕೆ ಹೋಲಿಸಿ, ಭಿತ್ತಿಪತ್ರಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರಲ್ಲಿ ಹುಮ್ಮಸ್ಸು ತುಂಬುವ ಕೆಲಸ ಮಾಡುತ್ತಿದ್ದಾರೆ. ರೈತರು ಭಯೋತ್ಪಾಕದಕರಲ್ಲ, ರೈತರಿಲ್ಲದಿದ್ದರೇ ಊಟವಿಲ್ಲ ಎಂಬಂತಹ ಭಿತ್ತಿಪತ್ರಗಳನ್ನು ಇಲ್ಲಿ ಕಾಣಸಿಗುತ್ತದೆ.

ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ನಾವು ಯುದ್ಧದಲ್ಲಿ ಗುಂಡು ಬೀಳುವುದೆಂದು ಹಿಂದೆ ಸರಿಯುವ ರಕ್ತದವರಲ್ಲ. ನಮ್ಮಲ್ಲಿ ಹರಿಯುತ್ತಿರುವ ರಕ್ತ ಸ್ವಾಭಿಮಾನ ಮತ್ತು ಧೈರ್ಯದ್ದು. ಅನ್ಯಾಯವನ್ನು ಎದುರಿಸಲು ಯಾವ ಕ್ಷಣದಲ್ಲೂ, ಎಲ್ಲಿಯೂ ನಾವು ಸಿದ್ಧ. ಅನ್ಯಾಯ ಯಾರು ಮಾಡಿದರೂ ಅನ್ಯಾಯವೇ, ನ್ಯಾಯ ಸಿಗುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಪೋಸ್ಟರ್‌ ಹಿಡಿದ ಪ್ರತಿಭಟನಾನಿರತ ಯುವಕ ತಿಳಿಸುತ್ತಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವ ಹಲವು ರೈತ ಸಂಘಟನೆಗಳು, ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರಗಳನ್ನು ಪ್ರದರ್ಶಿಸುತ್ತಾ ತಮಗೆ ಸಂವಿಧಾನ ನೀಡಿರುವ ಹಕ್ಕಿನ ಮೂಲಕ ಹೋರಾಟ ನಡೆಸುತ್ತಿದ್ದೇವೆ ಎಂದು ಘೋಷಣೆ ಹಾಕುತ್ತಿದ್ದಾರೆ. ತಮ್ಮ ಬ್ಯಾನರ್‌ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮತ್ತು ಸಂವಿಧಾನದ ಪೀಠಿಕೆಗಳ ಚಿತ್ರಗಳನ್ನು ಸೇರಿಸಿರುವುದು ಗಮನಾರ್ಹವಾಗಿದೆ.

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

 

ರೈತರು ದೆಹಲಿ ಚಲೋ ಹೋರಾಟ ಆರಂಭಿಸಿದ ದಿನದಿಂದಲೂ ಹೇಳುತ್ತಿರುವುದು ನಮ್ಮದು ಶಾಂತಿಯುತ ಪ್ರತಿಭಟನೆ ಎಂದು. ಇದಕ್ಕೆ ಪೂರಕವೆಂಬಂತೆ ಶಾಂತಿದೂತ ಬುದ್ಧನ ಚಿತ್ರಗಳು ಪ್ರತಿಭಟನಾ ಸ್ಥಳದಲ್ಲಿ ಕಾಣಸಿಗುತ್ತವೆ. ದೆಹಲಿಯ ಪ್ರಮುಖ ಗಡಿಗಳಾದ ಸಿಂಘು, ಟಕ್ರಿ ಮತ್ತು ಗಾಜಿಪುರ್‌ಗಳಲ್ಲೂ ಇದೆ ರೀತಿಯ ಪೋಸ್ಟರ್‌ಗಳಿವೆ.

ಪ್ರತಿಭಟನಾ ನಿರತ ರೈತ ಸಂಘಟನೆಗಳು ತಮ್ಮ ಸಂಘಟನೆಯ ಹೆಸರುಗಳ ಜೊತೆಗೆ ಬುದ್ಧ, ಅಂಬೇಡ್ಕರ್, ಏಸುಕ್ರಿಸ್ತ ಮತ್ತು ಭಗತ್ ಸಿಂಗ್, ಬುಡಕಟ್ಟು ನಾಯಕ ಬಿರ್ಸಾ ಮುಂಡಾ ನಾಯಕರ ಚಿತ್ರಗಳ ಪೋಸ್ಟರ್‌ಗಳನ್ನು ಹಿಡಿದು ನಿಂತಿದ್ದಾರೆ. ಇದಲ್ಲದೇ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಈ ಹಿಂದೆ ಹಲವು ಕೃಷಿ ಕಾನೂನುಗಳನ್ನು ವಿರೋಧಿಸಿ, ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿ ಹುತಾತ್ಮರಾಗಿರುವ ರೈತ ನಾಯಕರ ಚಿತ್ರಗಳು ಇವರ ಪೋಸ್ಟರ್‌‌ಗಳಲ್ಲಿದೆ. ಇವರುಗಳೆ ನಮ್ಮ ಪ್ರತಿಭಟನೆಗೆ ಸ್ಫೂರ್ತಿ ಎನ್ನುತ್ತಾರೆ ಇಲ್ಲಿನ ಪ್ರತಿಭಟನಾಕಾರರು.

ಇದನ್ನೂ ಓದಿ: ರೈತ ಹೋರಾಟ – ಒಕ್ಕೂಟ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡಿದ ಸೋನಿಯ ಗಾಂಧಿ

ಇನ್ನೂ ವಿಶೇಷವೇನೆಂದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಘೋಷಣೆಗಳಿರುವ ಹಲವು ಪೋಸ್ಟರ್‌ಗಳನ್ನು ಇಲ್ಲಿ ಕಾಣಬಹುದಾಗಿದೆ.

“ನಿಮ್ಮ ಬೇಜವಾಬ್ದಾರಿ ಕಾರಣದಿಂದ ದೇಶದ ರೈತರು ಬೀದಿಗೆ ಬಿದ್ದಿದ್ದಾರೆ. ಮೊದಲು ನಿಮ್ಮ ಕಪ್ಪು ಕಾನೂನುಗಳನ್ನು ವಾಪಸ್ ಪಡೆಯಿರಿ”, “ದೇಶದ ರೈತರ ಆರ್ಥಿಕ ಸ್ಥಿತಿ ಕೆಳಗಿಳಿಯುತ್ತಿದೆ. ಆದರೆ ಅದಾನಿ, ಅಂಬಾನಿಯವರ ಆರ್ಥಿಕ ಪರಿಸ್ಥಿತಿ ಎತ್ತರಕ್ಕೆ ಏರುತ್ತಿದ್ದೆ, ಇದಕ್ಕೆಲ್ಲಾ ಕಾರಣ ಮೋದಿ ಸರ್ಕಾರ” ಎಂಬ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳಿರುವ ಭಿತ್ತಿಪತ್ರಗಳು ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಸಾಮಾನ್ಯವಾಗಿ ಕಾಣಿಸುತ್ತಿವೆ.

ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...