Homeಮುಖಪುಟದೆಹಲಿ: ‘ಹಿಂದೂ ರಾಷ್ಟ್ರ ಪಂಚಾಯತ್‌’ ಆಯೋಜಕರ ವಿರುದ್ಧ ಪ್ರಕರಣ ದಾಖಲು

ದೆಹಲಿ: ‘ಹಿಂದೂ ರಾಷ್ಟ್ರ ಪಂಚಾಯತ್‌’ ಆಯೋಜಕರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ರಾಷ್ಟ್ರ ರಾಜಧಾನಿಯ ಈಶಾನ್ಯ ಜಿಲ್ಲೆಯಲ್ಲಿ “ಹಿಂದೂ ರಾಷ್ಟ್ರ ಪಂಚಾಯತ್‌” ನಡೆಸಿದ ಸಂಘಟಕರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾವುದೇ ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸಲಾಗಿದೆ ಎಂದು ಎಫ್‌ಐಆರ್‌ ದಾಖಲಿಸಲಾಗಿದ್ದರೂ, ಕಾರ್ಯಕ್ರಮದಲ್ಲಿ ಮಾಡಲಾಗಿರುವ ದ್ವೇಷ ಭಾಷಣದ ಕುರಿತು ಯಾವುದೇ ಕ್ರಮ ಜರುಗಿಸಿಲ್ಲ.

ಹಿಂದುತ್ವ ಸಂಘಟನೆಯಾದ ಯುನೈಟೆಡ್ ಹಿಂದೂ ಫ್ರಂಟ್‌ನ ಸದಸ್ಯರು “ಹಿಂದೂ ರಾಷ್ಟ್ರ” ಅಥವಾ “ಹಿಂದೂಗಳ ದೇಶ”ವನ್ನು ರಚಿಸುವಂತೆ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಒತ್ತಾಯಿಸಿದರು.

“ಲವ್ ಜಿಹಾದ್” ಅನ್ನು ಮುಂದುವರಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. (ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮುಸ್ಲಿಂ ಯುವಕರು ಪ್ರೇಮ ಪ್ರಕರಣದಲ್ಲಿ ಹಿಂದೂ ಯುವತಿಯರನ್ನು ಬೀಳಿಸುತ್ತಾರೆಂಬ ಕಲ್ಪಿತ ಪಿತೂರಿ ಸಿದ್ಧಾಂತವೇ ‘ಲವ್‌ ಜಿಹಾದ್‌’ ಆಗಿದೆ.)

‘ಹಿಂದೂ ರಾಷ್ಟ್ರ ಪಂಚಾಯತ್‌’ ನಡೆದ ಪ್ರದೇಶವು ಕೋಮುಸೂಕ್ಷ್ಮವಾಗಿದೆ. 2020ರಲ್ಲಿ ಕೋಮು ಗಲಭೆಗಳು ಭುಗಿಲೆದ್ದ ಈ ಪ್ರದೇಶದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡರು. ಸತ್ತವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಹಿಂದೂ ಯುನೈಟೆಡ್ ಫ್ರಂಟ್ ಮುಖ್ಯಸ್ಥ ಜೈ ಭಗವಾನ್ ಗೋಯಲ್ ಅವರು ಕಾರ್ಯಕ್ರಮದ ಸಂಘಟಕರಲ್ಲಿ ಒಬ್ಬರು ಎಂದು ಪಿಟಿಐ ವರದಿ ಮಾಡಿದೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಕೇಂದ್ರದ ಮಾಜಿ ಸಚಿವ ಸತ್ಯನಾರಾಯಣ್ ಜಟಿಯಾ, ಉತ್ತರ ದೆಹಲಿಯ ಮಾಜಿ ಮೇಯರ್ ಅವತಾರ್ ಸಿಂಗ್ ಇತರರು ಭಾಗವಹಿಸಿದ್ದರು.

“ಯಾವುದೇ ಹಿಂದೂಗಳು ತಮ್ಮ ಮನೆ ಅಥವಾ ಅಂಗಡಿಗಳನ್ನು ಇತರ ಧರ್ಮದವರಿಗೆ ಮಾರಾಟ ಮಾಡಬಾರದು ಅಥವಾ ಬಾಡಿಗೆಗೆ ನೀಡಬಾರದು” ಎಂದು ಹಿಂದೂ ರಾಷ್ಟ್ರ ಪಂಚಾಯತ್‌ನಲ್ಲಿ ಗೋಯಲ್ ಅವರು ಪ್ರೇಕ್ಷಕರನ್ನು ಪ್ರಚೋದಿಸಿದರು ಎಂದು ಪಿಟಿಐ ವರದಿ ಮಾಡಿದೆ.

“ನಾವು ಮೊದಲು ಈಶಾನ್ಯ ದೆಹಲಿಯನ್ನು ಹಿಂದೂ ರಾಷ್ಟ್ರ ಜಿಲ್ಲೆಯನ್ನಾಗಿ ಮಾಡುತ್ತೇವೆ ಮತ್ತು ನಂತರ ಇಡೀ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಗೋಯಲ್ ಹೇಳಿದರು ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.“‘ಹಿಂದೂಗಳನ್ನು ರಕ್ಷಿಸಲು ನಾವು ಪಂಚಾಯತ್ ಮತ್ತು ವಿಧಾನಸಭಾ ಮಟ್ಟದಲ್ಲಿ ಘಟಕಗಳನ್ನು ರಚಿಸುತ್ತಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ಸೈದ್ಧಾಂತಿಕ ಅಂಗವಾದ ರಾಷ್ಟ್ರೀಯ ಸ್ವಯಂಸೇವಕ ಸಂಘವು 2025ರಲ್ಲಿ ತನ್ನ ಶತಮಾನೋತ್ಸವವನ್ನು ಆಚರಿಸುವ ಮೊದಲು, ಭಾರತ ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಕನಸನ್ನು ಸಾಧಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಗೋರಕ್ಷಣೆ ಹೆಸರಿನಲ್ಲಿ ಹಾದಿಬೀದಿಯಲ್ಲಿ ರಕ್ತ ಹರಿಸುವ ದಂಧೆಕೋರರು: ಕೊಲ್ಲುವ ಹಂತಕ್ಕೆ ಬೆಳೆದು ನಿಂತದ್ದು ಹೇಗೆ?

ಗೋಯಲ್‌ ಅವರು, 2020 ರ ಗಲಭೆಗಳನ್ನು ಉಲ್ಲೇಖಿಸಿದ್ದಾರೆ. “ಈ ಪ್ರದೇಶವನ್ನು ಮಿನಿ ಪಾಕಿಸ್ತಾನವಾಗಿ ಮಾರ್ಪಡಿಸುವ ಯೋಜನೆಗಳು ನಡೆಯುತ್ತಿವೆ” ಎಂದು ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಸಾರ್ವಜನಿಕ ಸೇವಕರ ಆದೇಶಕ್ಕೆ ಅಸಹಕಾರ) ಅಡಿಯಲ್ಲಿ ದೆಹಲಿ ಪೊಲೀಸರು ಸೋಮವಾರ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಆದರೆ, ದ್ವೇಷಪೂರಿತ ಭಾಷಣ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.

“ಇದು ತನಿಖೆಯ ಭಾಗವಾಗಿದೆ. ಸದ್ಯಕ್ಕೆ, ನಾವು ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಪೊಲೀಸ್ ಉಪ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿಯವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...