Homeಮುಖಪುಟದೆಹಲಿ: ‘ಹಿಂದೂ ರಾಷ್ಟ್ರ ಪಂಚಾಯತ್‌’ ಆಯೋಜಕರ ವಿರುದ್ಧ ಪ್ರಕರಣ ದಾಖಲು

ದೆಹಲಿ: ‘ಹಿಂದೂ ರಾಷ್ಟ್ರ ಪಂಚಾಯತ್‌’ ಆಯೋಜಕರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ರಾಷ್ಟ್ರ ರಾಜಧಾನಿಯ ಈಶಾನ್ಯ ಜಿಲ್ಲೆಯಲ್ಲಿ “ಹಿಂದೂ ರಾಷ್ಟ್ರ ಪಂಚಾಯತ್‌” ನಡೆಸಿದ ಸಂಘಟಕರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾವುದೇ ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸಲಾಗಿದೆ ಎಂದು ಎಫ್‌ಐಆರ್‌ ದಾಖಲಿಸಲಾಗಿದ್ದರೂ, ಕಾರ್ಯಕ್ರಮದಲ್ಲಿ ಮಾಡಲಾಗಿರುವ ದ್ವೇಷ ಭಾಷಣದ ಕುರಿತು ಯಾವುದೇ ಕ್ರಮ ಜರುಗಿಸಿಲ್ಲ.

ಹಿಂದುತ್ವ ಸಂಘಟನೆಯಾದ ಯುನೈಟೆಡ್ ಹಿಂದೂ ಫ್ರಂಟ್‌ನ ಸದಸ್ಯರು “ಹಿಂದೂ ರಾಷ್ಟ್ರ” ಅಥವಾ “ಹಿಂದೂಗಳ ದೇಶ”ವನ್ನು ರಚಿಸುವಂತೆ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಒತ್ತಾಯಿಸಿದರು.

“ಲವ್ ಜಿಹಾದ್” ಅನ್ನು ಮುಂದುವರಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. (ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮುಸ್ಲಿಂ ಯುವಕರು ಪ್ರೇಮ ಪ್ರಕರಣದಲ್ಲಿ ಹಿಂದೂ ಯುವತಿಯರನ್ನು ಬೀಳಿಸುತ್ತಾರೆಂಬ ಕಲ್ಪಿತ ಪಿತೂರಿ ಸಿದ್ಧಾಂತವೇ ‘ಲವ್‌ ಜಿಹಾದ್‌’ ಆಗಿದೆ.)

‘ಹಿಂದೂ ರಾಷ್ಟ್ರ ಪಂಚಾಯತ್‌’ ನಡೆದ ಪ್ರದೇಶವು ಕೋಮುಸೂಕ್ಷ್ಮವಾಗಿದೆ. 2020ರಲ್ಲಿ ಕೋಮು ಗಲಭೆಗಳು ಭುಗಿಲೆದ್ದ ಈ ಪ್ರದೇಶದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡರು. ಸತ್ತವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಹಿಂದೂ ಯುನೈಟೆಡ್ ಫ್ರಂಟ್ ಮುಖ್ಯಸ್ಥ ಜೈ ಭಗವಾನ್ ಗೋಯಲ್ ಅವರು ಕಾರ್ಯಕ್ರಮದ ಸಂಘಟಕರಲ್ಲಿ ಒಬ್ಬರು ಎಂದು ಪಿಟಿಐ ವರದಿ ಮಾಡಿದೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಕೇಂದ್ರದ ಮಾಜಿ ಸಚಿವ ಸತ್ಯನಾರಾಯಣ್ ಜಟಿಯಾ, ಉತ್ತರ ದೆಹಲಿಯ ಮಾಜಿ ಮೇಯರ್ ಅವತಾರ್ ಸಿಂಗ್ ಇತರರು ಭಾಗವಹಿಸಿದ್ದರು.

“ಯಾವುದೇ ಹಿಂದೂಗಳು ತಮ್ಮ ಮನೆ ಅಥವಾ ಅಂಗಡಿಗಳನ್ನು ಇತರ ಧರ್ಮದವರಿಗೆ ಮಾರಾಟ ಮಾಡಬಾರದು ಅಥವಾ ಬಾಡಿಗೆಗೆ ನೀಡಬಾರದು” ಎಂದು ಹಿಂದೂ ರಾಷ್ಟ್ರ ಪಂಚಾಯತ್‌ನಲ್ಲಿ ಗೋಯಲ್ ಅವರು ಪ್ರೇಕ್ಷಕರನ್ನು ಪ್ರಚೋದಿಸಿದರು ಎಂದು ಪಿಟಿಐ ವರದಿ ಮಾಡಿದೆ.

“ನಾವು ಮೊದಲು ಈಶಾನ್ಯ ದೆಹಲಿಯನ್ನು ಹಿಂದೂ ರಾಷ್ಟ್ರ ಜಿಲ್ಲೆಯನ್ನಾಗಿ ಮಾಡುತ್ತೇವೆ ಮತ್ತು ನಂತರ ಇಡೀ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಗೋಯಲ್ ಹೇಳಿದರು ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.“‘ಹಿಂದೂಗಳನ್ನು ರಕ್ಷಿಸಲು ನಾವು ಪಂಚಾಯತ್ ಮತ್ತು ವಿಧಾನಸಭಾ ಮಟ್ಟದಲ್ಲಿ ಘಟಕಗಳನ್ನು ರಚಿಸುತ್ತಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ಸೈದ್ಧಾಂತಿಕ ಅಂಗವಾದ ರಾಷ್ಟ್ರೀಯ ಸ್ವಯಂಸೇವಕ ಸಂಘವು 2025ರಲ್ಲಿ ತನ್ನ ಶತಮಾನೋತ್ಸವವನ್ನು ಆಚರಿಸುವ ಮೊದಲು, ಭಾರತ ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಕನಸನ್ನು ಸಾಧಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಗೋರಕ್ಷಣೆ ಹೆಸರಿನಲ್ಲಿ ಹಾದಿಬೀದಿಯಲ್ಲಿ ರಕ್ತ ಹರಿಸುವ ದಂಧೆಕೋರರು: ಕೊಲ್ಲುವ ಹಂತಕ್ಕೆ ಬೆಳೆದು ನಿಂತದ್ದು ಹೇಗೆ?

ಗೋಯಲ್‌ ಅವರು, 2020 ರ ಗಲಭೆಗಳನ್ನು ಉಲ್ಲೇಖಿಸಿದ್ದಾರೆ. “ಈ ಪ್ರದೇಶವನ್ನು ಮಿನಿ ಪಾಕಿಸ್ತಾನವಾಗಿ ಮಾರ್ಪಡಿಸುವ ಯೋಜನೆಗಳು ನಡೆಯುತ್ತಿವೆ” ಎಂದು ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಸಾರ್ವಜನಿಕ ಸೇವಕರ ಆದೇಶಕ್ಕೆ ಅಸಹಕಾರ) ಅಡಿಯಲ್ಲಿ ದೆಹಲಿ ಪೊಲೀಸರು ಸೋಮವಾರ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಆದರೆ, ದ್ವೇಷಪೂರಿತ ಭಾಷಣ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.

“ಇದು ತನಿಖೆಯ ಭಾಗವಾಗಿದೆ. ಸದ್ಯಕ್ಕೆ, ನಾವು ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಪೊಲೀಸ್ ಉಪ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿಯವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...