Homeಮುಖಪುಟದೆಹಲಿ: ‘ಹಿಂದೂ ರಾಷ್ಟ್ರ ಪಂಚಾಯತ್‌’ ಆಯೋಜಕರ ವಿರುದ್ಧ ಪ್ರಕರಣ ದಾಖಲು

ದೆಹಲಿ: ‘ಹಿಂದೂ ರಾಷ್ಟ್ರ ಪಂಚಾಯತ್‌’ ಆಯೋಜಕರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ರಾಷ್ಟ್ರ ರಾಜಧಾನಿಯ ಈಶಾನ್ಯ ಜಿಲ್ಲೆಯಲ್ಲಿ “ಹಿಂದೂ ರಾಷ್ಟ್ರ ಪಂಚಾಯತ್‌” ನಡೆಸಿದ ಸಂಘಟಕರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾವುದೇ ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸಲಾಗಿದೆ ಎಂದು ಎಫ್‌ಐಆರ್‌ ದಾಖಲಿಸಲಾಗಿದ್ದರೂ, ಕಾರ್ಯಕ್ರಮದಲ್ಲಿ ಮಾಡಲಾಗಿರುವ ದ್ವೇಷ ಭಾಷಣದ ಕುರಿತು ಯಾವುದೇ ಕ್ರಮ ಜರುಗಿಸಿಲ್ಲ.

ಹಿಂದುತ್ವ ಸಂಘಟನೆಯಾದ ಯುನೈಟೆಡ್ ಹಿಂದೂ ಫ್ರಂಟ್‌ನ ಸದಸ್ಯರು “ಹಿಂದೂ ರಾಷ್ಟ್ರ” ಅಥವಾ “ಹಿಂದೂಗಳ ದೇಶ”ವನ್ನು ರಚಿಸುವಂತೆ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಒತ್ತಾಯಿಸಿದರು.

“ಲವ್ ಜಿಹಾದ್” ಅನ್ನು ಮುಂದುವರಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. (ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮುಸ್ಲಿಂ ಯುವಕರು ಪ್ರೇಮ ಪ್ರಕರಣದಲ್ಲಿ ಹಿಂದೂ ಯುವತಿಯರನ್ನು ಬೀಳಿಸುತ್ತಾರೆಂಬ ಕಲ್ಪಿತ ಪಿತೂರಿ ಸಿದ್ಧಾಂತವೇ ‘ಲವ್‌ ಜಿಹಾದ್‌’ ಆಗಿದೆ.)

‘ಹಿಂದೂ ರಾಷ್ಟ್ರ ಪಂಚಾಯತ್‌’ ನಡೆದ ಪ್ರದೇಶವು ಕೋಮುಸೂಕ್ಷ್ಮವಾಗಿದೆ. 2020ರಲ್ಲಿ ಕೋಮು ಗಲಭೆಗಳು ಭುಗಿಲೆದ್ದ ಈ ಪ್ರದೇಶದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡರು. ಸತ್ತವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಹಿಂದೂ ಯುನೈಟೆಡ್ ಫ್ರಂಟ್ ಮುಖ್ಯಸ್ಥ ಜೈ ಭಗವಾನ್ ಗೋಯಲ್ ಅವರು ಕಾರ್ಯಕ್ರಮದ ಸಂಘಟಕರಲ್ಲಿ ಒಬ್ಬರು ಎಂದು ಪಿಟಿಐ ವರದಿ ಮಾಡಿದೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಕೇಂದ್ರದ ಮಾಜಿ ಸಚಿವ ಸತ್ಯನಾರಾಯಣ್ ಜಟಿಯಾ, ಉತ್ತರ ದೆಹಲಿಯ ಮಾಜಿ ಮೇಯರ್ ಅವತಾರ್ ಸಿಂಗ್ ಇತರರು ಭಾಗವಹಿಸಿದ್ದರು.

“ಯಾವುದೇ ಹಿಂದೂಗಳು ತಮ್ಮ ಮನೆ ಅಥವಾ ಅಂಗಡಿಗಳನ್ನು ಇತರ ಧರ್ಮದವರಿಗೆ ಮಾರಾಟ ಮಾಡಬಾರದು ಅಥವಾ ಬಾಡಿಗೆಗೆ ನೀಡಬಾರದು” ಎಂದು ಹಿಂದೂ ರಾಷ್ಟ್ರ ಪಂಚಾಯತ್‌ನಲ್ಲಿ ಗೋಯಲ್ ಅವರು ಪ್ರೇಕ್ಷಕರನ್ನು ಪ್ರಚೋದಿಸಿದರು ಎಂದು ಪಿಟಿಐ ವರದಿ ಮಾಡಿದೆ.

“ನಾವು ಮೊದಲು ಈಶಾನ್ಯ ದೆಹಲಿಯನ್ನು ಹಿಂದೂ ರಾಷ್ಟ್ರ ಜಿಲ್ಲೆಯನ್ನಾಗಿ ಮಾಡುತ್ತೇವೆ ಮತ್ತು ನಂತರ ಇಡೀ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಗೋಯಲ್ ಹೇಳಿದರು ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.“‘ಹಿಂದೂಗಳನ್ನು ರಕ್ಷಿಸಲು ನಾವು ಪಂಚಾಯತ್ ಮತ್ತು ವಿಧಾನಸಭಾ ಮಟ್ಟದಲ್ಲಿ ಘಟಕಗಳನ್ನು ರಚಿಸುತ್ತಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ಸೈದ್ಧಾಂತಿಕ ಅಂಗವಾದ ರಾಷ್ಟ್ರೀಯ ಸ್ವಯಂಸೇವಕ ಸಂಘವು 2025ರಲ್ಲಿ ತನ್ನ ಶತಮಾನೋತ್ಸವವನ್ನು ಆಚರಿಸುವ ಮೊದಲು, ಭಾರತ ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಕನಸನ್ನು ಸಾಧಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಗೋರಕ್ಷಣೆ ಹೆಸರಿನಲ್ಲಿ ಹಾದಿಬೀದಿಯಲ್ಲಿ ರಕ್ತ ಹರಿಸುವ ದಂಧೆಕೋರರು: ಕೊಲ್ಲುವ ಹಂತಕ್ಕೆ ಬೆಳೆದು ನಿಂತದ್ದು ಹೇಗೆ?

ಗೋಯಲ್‌ ಅವರು, 2020 ರ ಗಲಭೆಗಳನ್ನು ಉಲ್ಲೇಖಿಸಿದ್ದಾರೆ. “ಈ ಪ್ರದೇಶವನ್ನು ಮಿನಿ ಪಾಕಿಸ್ತಾನವಾಗಿ ಮಾರ್ಪಡಿಸುವ ಯೋಜನೆಗಳು ನಡೆಯುತ್ತಿವೆ” ಎಂದು ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಸಾರ್ವಜನಿಕ ಸೇವಕರ ಆದೇಶಕ್ಕೆ ಅಸಹಕಾರ) ಅಡಿಯಲ್ಲಿ ದೆಹಲಿ ಪೊಲೀಸರು ಸೋಮವಾರ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಆದರೆ, ದ್ವೇಷಪೂರಿತ ಭಾಷಣ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.

“ಇದು ತನಿಖೆಯ ಭಾಗವಾಗಿದೆ. ಸದ್ಯಕ್ಕೆ, ನಾವು ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಪೊಲೀಸ್ ಉಪ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿಯವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...