Homeಮುಖಪುಟದೆಹಲಿ: ‘ಹಿಂದೂ ರಾಷ್ಟ್ರ ಪಂಚಾಯತ್‌’ ಆಯೋಜಕರ ವಿರುದ್ಧ ಪ್ರಕರಣ ದಾಖಲು

ದೆಹಲಿ: ‘ಹಿಂದೂ ರಾಷ್ಟ್ರ ಪಂಚಾಯತ್‌’ ಆಯೋಜಕರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ರಾಷ್ಟ್ರ ರಾಜಧಾನಿಯ ಈಶಾನ್ಯ ಜಿಲ್ಲೆಯಲ್ಲಿ “ಹಿಂದೂ ರಾಷ್ಟ್ರ ಪಂಚಾಯತ್‌” ನಡೆಸಿದ ಸಂಘಟಕರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾವುದೇ ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸಲಾಗಿದೆ ಎಂದು ಎಫ್‌ಐಆರ್‌ ದಾಖಲಿಸಲಾಗಿದ್ದರೂ, ಕಾರ್ಯಕ್ರಮದಲ್ಲಿ ಮಾಡಲಾಗಿರುವ ದ್ವೇಷ ಭಾಷಣದ ಕುರಿತು ಯಾವುದೇ ಕ್ರಮ ಜರುಗಿಸಿಲ್ಲ.

ಹಿಂದುತ್ವ ಸಂಘಟನೆಯಾದ ಯುನೈಟೆಡ್ ಹಿಂದೂ ಫ್ರಂಟ್‌ನ ಸದಸ್ಯರು “ಹಿಂದೂ ರಾಷ್ಟ್ರ” ಅಥವಾ “ಹಿಂದೂಗಳ ದೇಶ”ವನ್ನು ರಚಿಸುವಂತೆ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಒತ್ತಾಯಿಸಿದರು.

“ಲವ್ ಜಿಹಾದ್” ಅನ್ನು ಮುಂದುವರಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. (ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮುಸ್ಲಿಂ ಯುವಕರು ಪ್ರೇಮ ಪ್ರಕರಣದಲ್ಲಿ ಹಿಂದೂ ಯುವತಿಯರನ್ನು ಬೀಳಿಸುತ್ತಾರೆಂಬ ಕಲ್ಪಿತ ಪಿತೂರಿ ಸಿದ್ಧಾಂತವೇ ‘ಲವ್‌ ಜಿಹಾದ್‌’ ಆಗಿದೆ.)

‘ಹಿಂದೂ ರಾಷ್ಟ್ರ ಪಂಚಾಯತ್‌’ ನಡೆದ ಪ್ರದೇಶವು ಕೋಮುಸೂಕ್ಷ್ಮವಾಗಿದೆ. 2020ರಲ್ಲಿ ಕೋಮು ಗಲಭೆಗಳು ಭುಗಿಲೆದ್ದ ಈ ಪ್ರದೇಶದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡರು. ಸತ್ತವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಹಿಂದೂ ಯುನೈಟೆಡ್ ಫ್ರಂಟ್ ಮುಖ್ಯಸ್ಥ ಜೈ ಭಗವಾನ್ ಗೋಯಲ್ ಅವರು ಕಾರ್ಯಕ್ರಮದ ಸಂಘಟಕರಲ್ಲಿ ಒಬ್ಬರು ಎಂದು ಪಿಟಿಐ ವರದಿ ಮಾಡಿದೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಕೇಂದ್ರದ ಮಾಜಿ ಸಚಿವ ಸತ್ಯನಾರಾಯಣ್ ಜಟಿಯಾ, ಉತ್ತರ ದೆಹಲಿಯ ಮಾಜಿ ಮೇಯರ್ ಅವತಾರ್ ಸಿಂಗ್ ಇತರರು ಭಾಗವಹಿಸಿದ್ದರು.

“ಯಾವುದೇ ಹಿಂದೂಗಳು ತಮ್ಮ ಮನೆ ಅಥವಾ ಅಂಗಡಿಗಳನ್ನು ಇತರ ಧರ್ಮದವರಿಗೆ ಮಾರಾಟ ಮಾಡಬಾರದು ಅಥವಾ ಬಾಡಿಗೆಗೆ ನೀಡಬಾರದು” ಎಂದು ಹಿಂದೂ ರಾಷ್ಟ್ರ ಪಂಚಾಯತ್‌ನಲ್ಲಿ ಗೋಯಲ್ ಅವರು ಪ್ರೇಕ್ಷಕರನ್ನು ಪ್ರಚೋದಿಸಿದರು ಎಂದು ಪಿಟಿಐ ವರದಿ ಮಾಡಿದೆ.

“ನಾವು ಮೊದಲು ಈಶಾನ್ಯ ದೆಹಲಿಯನ್ನು ಹಿಂದೂ ರಾಷ್ಟ್ರ ಜಿಲ್ಲೆಯನ್ನಾಗಿ ಮಾಡುತ್ತೇವೆ ಮತ್ತು ನಂತರ ಇಡೀ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಗೋಯಲ್ ಹೇಳಿದರು ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.“‘ಹಿಂದೂಗಳನ್ನು ರಕ್ಷಿಸಲು ನಾವು ಪಂಚಾಯತ್ ಮತ್ತು ವಿಧಾನಸಭಾ ಮಟ್ಟದಲ್ಲಿ ಘಟಕಗಳನ್ನು ರಚಿಸುತ್ತಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ಸೈದ್ಧಾಂತಿಕ ಅಂಗವಾದ ರಾಷ್ಟ್ರೀಯ ಸ್ವಯಂಸೇವಕ ಸಂಘವು 2025ರಲ್ಲಿ ತನ್ನ ಶತಮಾನೋತ್ಸವವನ್ನು ಆಚರಿಸುವ ಮೊದಲು, ಭಾರತ ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಕನಸನ್ನು ಸಾಧಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಗೋರಕ್ಷಣೆ ಹೆಸರಿನಲ್ಲಿ ಹಾದಿಬೀದಿಯಲ್ಲಿ ರಕ್ತ ಹರಿಸುವ ದಂಧೆಕೋರರು: ಕೊಲ್ಲುವ ಹಂತಕ್ಕೆ ಬೆಳೆದು ನಿಂತದ್ದು ಹೇಗೆ?

ಗೋಯಲ್‌ ಅವರು, 2020 ರ ಗಲಭೆಗಳನ್ನು ಉಲ್ಲೇಖಿಸಿದ್ದಾರೆ. “ಈ ಪ್ರದೇಶವನ್ನು ಮಿನಿ ಪಾಕಿಸ್ತಾನವಾಗಿ ಮಾರ್ಪಡಿಸುವ ಯೋಜನೆಗಳು ನಡೆಯುತ್ತಿವೆ” ಎಂದು ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಸಾರ್ವಜನಿಕ ಸೇವಕರ ಆದೇಶಕ್ಕೆ ಅಸಹಕಾರ) ಅಡಿಯಲ್ಲಿ ದೆಹಲಿ ಪೊಲೀಸರು ಸೋಮವಾರ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಆದರೆ, ದ್ವೇಷಪೂರಿತ ಭಾಷಣ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.

“ಇದು ತನಿಖೆಯ ಭಾಗವಾಗಿದೆ. ಸದ್ಯಕ್ಕೆ, ನಾವು ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಪೊಲೀಸ್ ಉಪ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿಯವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...