Homeಮುಖಪುಟಬೀದಿ ನಾಯಿ ಎಣಿಕೆ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿಲ್ಲ: ದೆಹಲಿ ಸರ್ಕಾರದ ಸ್ಪಷ್ಟನೆ

ಬೀದಿ ನಾಯಿ ಎಣಿಕೆ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿಲ್ಲ: ದೆಹಲಿ ಸರ್ಕಾರದ ಸ್ಪಷ್ಟನೆ

- Advertisement -
- Advertisement -

ನಗರದಲ್ಲಿ ಬೀದಿ ನಾಯಿಗಳ ಎಣಿಕೆಗೆ ಯಾವುದೇ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿಲ್ಲ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ. ಶಿಕ್ಷಕರಿಗೆ ಜನಗಣತಿ ಸಂಬಂಧಿತ ಕರ್ತವ್ಯಗಳಿಗೆ ಮಾತ್ರ ನಿಯೋಜಿಸಲಾಗಿದೆ.

ಬೀದಿ ನಾಯಿ ಸಂಬಂಧಿತ ವಿಷಯಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಗಳಿಗೆ ಇತ್ತೀಚೆಗೆ ನೀಡಲಾದ ನಿರ್ದೇಶನಗಳ ಬಗ್ಗೆ ಗೊಂದಲದ ನಡುವೆ ಈ ಸ್ಪಷ್ಟೀಕರಣ ಬಂದಿದೆ.

ಬೀದಿ ನಾಯಿಗಳ ಎಣಿಕೆಗೆ ಶಿಕ್ಷಕರನ್ನು ನಿಯೋಜಿಸಲಾಗಿಲ್ಲವಾದರೂ, ಈ ಹಿಂದೆ ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ, ಬೀದಿ ನಾಯಿ ಸಂಬಂಧಿತ ಸಮಸ್ಯೆಗಳ ಕುರಿತು ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ಶಿಕ್ಷಣ ನಿರ್ದೇಶನಾಲಯ ನಿರ್ದೇಶಿಸಿತ್ತು.

ಶಿಕ್ಷಣ ಇಲಾಖೆಯ ಆರೈಕೆ ಶಾಖೆ ಹೊರಡಿಸಿದ ಸುತ್ತೋಲೆಯ ಪ್ರಕಾರ, ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ (ಡಿಇಒ) ತಮ್ಮ ವ್ಯಾಪ್ತಿಯಲ್ಲಿರುವ ಶಾಲೆಗಳು, ಕ್ರೀಡಾಂಗಣಗಳು ಮತ್ತು ಕ್ರೀಡಾ ಸಂಕೀರ್ಣಗಳಿಂದ ನಾಮನಿರ್ದೇಶಿತ ನೋಡಲ್ ಅಧಿಕಾರಿಗಳ ವಿವರಗಳನ್ನು ಸಂಗ್ರಹಿಸಲು ಸೂಚಿಸಲಾಗಿದೆ. ಈ ವಿವರಗಳಲ್ಲಿ ಅಧಿಕಾರಿಯ ಹೆಸರು, ಹುದ್ದೆ, ಸಂಪರ್ಕ ಸಂಖ್ಯೆ ಮತ್ತು ಇಮೇಲ್ ಐಡಿ ಸೇರಿವೆ.

ಶಾಲೆಗಳೇ ಖುದ್ದಾಗಿ ಮಾಹಿತಿ ಸಲ್ಲಿಸುವ ಅಗತ್ಯವಿಲ್ಲ. ಏಕೀಕೃತ ಜಿಲ್ಲಾ ಮಟ್ಟದ ವರದಿಗಳನ್ನು ಮಾತ್ರ ದೆಹಲಿ ಮುಖ್ಯ ಕಾರ್ಯದರ್ಶಿ ಕಚೇರಿಗೆ ಕಳುಹಿಸಬೇಕು ಎಂದು ಇಲಾಖೆ ಸ್ಪಷ್ಟಪಡಿಸಿತ್ತು.

ಪ್ರಕ್ರಿಯೆಯು ಸಾರ್ವಜನಿಕ ಸುರಕ್ಷತಾ ಕಾಳಜಿಗಳಿಗೆ ಸಂಬಂಧಿಸಿದೆ, ನವೆಂಬರ್ 7, 2025 ರ ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಇದನ್ನು ನಡೆಸಲಾಗುತ್ತಿದೆ ಎಂದು ಇಲಾಖೆ ಹೇಳಿತ್ತು. ನವೆಂಬರ್ 20 ರಂದು ನಡೆದ ಪರಿಶೀಲನಾ ಸಭೆಯಲ್ಲಿ ಹೊರಡಿಸಲಾದ ನಿರ್ದೇಶನಗಳೊಂದಿಗೆ ಈ ಕ್ರಮ ಸಂಯೋಜಿಸಲಾಗಿದೆ. ಇದನ್ನು ಆದ್ಯತೆಯ ಕಾರ್ಯವೆಂದು ಗುರುತಿಸಲಾಗಿದೆ.

ಶಿಕ್ಷಣ ಇಲಾಖೆ ನಿರ್ದೇಶನದಡಿಯಲ್ಲಿ, ಬೀದಿ ನಾಯಿ ಸಂಬಂಧಿತ ಸಮಸ್ಯೆಗಳಿಗೆ ನೋಡಲ್ ಅಧಿಕಾರಿಗಳು ಸಾರ್ವಜನಿಕರಿಗೆ ಸಂಪರ್ಕವಾಗಿ ಕಾರ್ಯನಿರ್ವಹಿಸಬೇಕಾಗಿತ್ತು. ಶಿಕ್ಷಕರ ವಿವರಗಳನ್ನು ಸಾರ್ವಜನಿಕ ಜಾಗೃತಿ ಮೂಡಿಸಲು ಶಾಲಾ ಆವರಣದ ಹೊರಗೆ ಪ್ರಮುಖವಾಗಿ ಪ್ರದರ್ಶಿಸಬೇಕಾಗಿತ್ತು.

ಕಳವಳ ವ್ಯಕ್ತಪಡಿಸಿದ ಶಿಕ್ಷಕರ ಸಂಘಗಳು

ಈ ಹಿಂದೆ, ಶಿಕ್ಷಕರ ಸಂಘಗಳು ಈ ಕ್ರಮವನ್ನು ವಿರೋಧಿಸಿದ್ದವು. ಶಿಕ್ಷಕರನ್ನು ಶೈಕ್ಷಣಿಕೇತರ ಕರ್ತವ್ಯಗಳ ಕಡೆಗೆ ತಿರುಗಿಸಲಾಗುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದ್ದವು. ಪ್ರಾಣಿ ಕಲ್ಯಾಣಕ್ಕೆ ಜವಾಬ್ದಾರರಾಗಿರುವ ಇಲಾಖೆಗಳು ಇಂತಹ ವಿಷಯಗಳನ್ನು ಏಕೆ ನಿರ್ವಹಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದರು. ಹೆಚ್ಚುವರಿ ಜವಾಬ್ದಾರಿಗಳು ಬೋಧನಾ ಕೆಲಸದ ಮೇಲೆ ಪರಿಣಾಮ ಬೀರಬಹುದು. ವೃತ್ತಿಪರ ಘನತೆಯನ್ನು ಹಾಳುಮಾಡಬಹುದು ಎಂದು ಎಚ್ಚರಿಸಿದ್ದರು.

ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ ಮತ್ತು ಛತ್ತೀಸ್‌ಗಢದಂತಹ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಾಣಿ ಸಂಬಂಧಿತ ನಾಗರಿಕ ಸಮನ್ವಯಕ್ಕಾಗಿ ಶೈಕ್ಷಣಿಕ ಸಿಬ್ಬಂದಿಯನ್ನು ಒಳಗೊಂಡ ಇದೇ ರೀತಿಯ ಆಡಳಿತಾತ್ಮಕ ವ್ಯವಸ್ಥೆಗಳನ್ನು ಈ ಹಿಂದೆ ಜಾರಿಗೆ ತರಲಾಗಿದೆ ಎಂದು ಅಧಿಕಾರಿಗಳು ಗಮನಸೆಳೆದಿದ್ದರು.

ಇತ್ತೀಚಿನ ಸ್ಪಷ್ಟೀಕರಣದೊಂದಿಗೆ, ದೆಹಲಿ ಸರ್ಕಾರವು ಕಳವಳಗಳನ್ನು ಹೋಗಲಾಡಿಸಲು ಪ್ರಯತ್ನಿಸಿದೆ. ಶಿಕ್ಷಕರನ್ನು ಬೀದಿ ನಾಯಿ ಎಣಿಕೆಗೆ ನಿಯೋಜಿಸಲಾಗುತ್ತಿಲ್ಲ, ನಿರ್ದೇಶನವು ನಾಮನಿರ್ದೇಶಿತ ನೋಡಲ್ ಅಧಿಕಾರಿಗಳ ಮೂಲಕ ಆಡಳಿತಾತ್ಮಕ ಸಮನ್ವಯಕ್ಕೆ ಸೀಮಿತವಾಗಿದೆ ಎಂದು ಒತ್ತಿಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...