Homeಮುಖಪುಟಬೀದಿ ನಾಯಿ ಎಣಿಕೆ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿಲ್ಲ: ದೆಹಲಿ ಸರ್ಕಾರದ ಸ್ಪಷ್ಟನೆ

ಬೀದಿ ನಾಯಿ ಎಣಿಕೆ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿಲ್ಲ: ದೆಹಲಿ ಸರ್ಕಾರದ ಸ್ಪಷ್ಟನೆ

- Advertisement -
- Advertisement -

ನಗರದಲ್ಲಿ ಬೀದಿ ನಾಯಿಗಳ ಎಣಿಕೆಗೆ ಯಾವುದೇ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿಲ್ಲ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ. ಶಿಕ್ಷಕರಿಗೆ ಜನಗಣತಿ ಸಂಬಂಧಿತ ಕರ್ತವ್ಯಗಳಿಗೆ ಮಾತ್ರ ನಿಯೋಜಿಸಲಾಗಿದೆ.

ಬೀದಿ ನಾಯಿ ಸಂಬಂಧಿತ ವಿಷಯಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಗಳಿಗೆ ಇತ್ತೀಚೆಗೆ ನೀಡಲಾದ ನಿರ್ದೇಶನಗಳ ಬಗ್ಗೆ ಗೊಂದಲದ ನಡುವೆ ಈ ಸ್ಪಷ್ಟೀಕರಣ ಬಂದಿದೆ.

ಬೀದಿ ನಾಯಿಗಳ ಎಣಿಕೆಗೆ ಶಿಕ್ಷಕರನ್ನು ನಿಯೋಜಿಸಲಾಗಿಲ್ಲವಾದರೂ, ಈ ಹಿಂದೆ ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ, ಬೀದಿ ನಾಯಿ ಸಂಬಂಧಿತ ಸಮಸ್ಯೆಗಳ ಕುರಿತು ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ಶಿಕ್ಷಣ ನಿರ್ದೇಶನಾಲಯ ನಿರ್ದೇಶಿಸಿತ್ತು.

ಶಿಕ್ಷಣ ಇಲಾಖೆಯ ಆರೈಕೆ ಶಾಖೆ ಹೊರಡಿಸಿದ ಸುತ್ತೋಲೆಯ ಪ್ರಕಾರ, ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ (ಡಿಇಒ) ತಮ್ಮ ವ್ಯಾಪ್ತಿಯಲ್ಲಿರುವ ಶಾಲೆಗಳು, ಕ್ರೀಡಾಂಗಣಗಳು ಮತ್ತು ಕ್ರೀಡಾ ಸಂಕೀರ್ಣಗಳಿಂದ ನಾಮನಿರ್ದೇಶಿತ ನೋಡಲ್ ಅಧಿಕಾರಿಗಳ ವಿವರಗಳನ್ನು ಸಂಗ್ರಹಿಸಲು ಸೂಚಿಸಲಾಗಿದೆ. ಈ ವಿವರಗಳಲ್ಲಿ ಅಧಿಕಾರಿಯ ಹೆಸರು, ಹುದ್ದೆ, ಸಂಪರ್ಕ ಸಂಖ್ಯೆ ಮತ್ತು ಇಮೇಲ್ ಐಡಿ ಸೇರಿವೆ.

ಶಾಲೆಗಳೇ ಖುದ್ದಾಗಿ ಮಾಹಿತಿ ಸಲ್ಲಿಸುವ ಅಗತ್ಯವಿಲ್ಲ. ಏಕೀಕೃತ ಜಿಲ್ಲಾ ಮಟ್ಟದ ವರದಿಗಳನ್ನು ಮಾತ್ರ ದೆಹಲಿ ಮುಖ್ಯ ಕಾರ್ಯದರ್ಶಿ ಕಚೇರಿಗೆ ಕಳುಹಿಸಬೇಕು ಎಂದು ಇಲಾಖೆ ಸ್ಪಷ್ಟಪಡಿಸಿತ್ತು.

ಪ್ರಕ್ರಿಯೆಯು ಸಾರ್ವಜನಿಕ ಸುರಕ್ಷತಾ ಕಾಳಜಿಗಳಿಗೆ ಸಂಬಂಧಿಸಿದೆ, ನವೆಂಬರ್ 7, 2025 ರ ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಇದನ್ನು ನಡೆಸಲಾಗುತ್ತಿದೆ ಎಂದು ಇಲಾಖೆ ಹೇಳಿತ್ತು. ನವೆಂಬರ್ 20 ರಂದು ನಡೆದ ಪರಿಶೀಲನಾ ಸಭೆಯಲ್ಲಿ ಹೊರಡಿಸಲಾದ ನಿರ್ದೇಶನಗಳೊಂದಿಗೆ ಈ ಕ್ರಮ ಸಂಯೋಜಿಸಲಾಗಿದೆ. ಇದನ್ನು ಆದ್ಯತೆಯ ಕಾರ್ಯವೆಂದು ಗುರುತಿಸಲಾಗಿದೆ.

ಶಿಕ್ಷಣ ಇಲಾಖೆ ನಿರ್ದೇಶನದಡಿಯಲ್ಲಿ, ಬೀದಿ ನಾಯಿ ಸಂಬಂಧಿತ ಸಮಸ್ಯೆಗಳಿಗೆ ನೋಡಲ್ ಅಧಿಕಾರಿಗಳು ಸಾರ್ವಜನಿಕರಿಗೆ ಸಂಪರ್ಕವಾಗಿ ಕಾರ್ಯನಿರ್ವಹಿಸಬೇಕಾಗಿತ್ತು. ಶಿಕ್ಷಕರ ವಿವರಗಳನ್ನು ಸಾರ್ವಜನಿಕ ಜಾಗೃತಿ ಮೂಡಿಸಲು ಶಾಲಾ ಆವರಣದ ಹೊರಗೆ ಪ್ರಮುಖವಾಗಿ ಪ್ರದರ್ಶಿಸಬೇಕಾಗಿತ್ತು.

ಕಳವಳ ವ್ಯಕ್ತಪಡಿಸಿದ ಶಿಕ್ಷಕರ ಸಂಘಗಳು

ಈ ಹಿಂದೆ, ಶಿಕ್ಷಕರ ಸಂಘಗಳು ಈ ಕ್ರಮವನ್ನು ವಿರೋಧಿಸಿದ್ದವು. ಶಿಕ್ಷಕರನ್ನು ಶೈಕ್ಷಣಿಕೇತರ ಕರ್ತವ್ಯಗಳ ಕಡೆಗೆ ತಿರುಗಿಸಲಾಗುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದ್ದವು. ಪ್ರಾಣಿ ಕಲ್ಯಾಣಕ್ಕೆ ಜವಾಬ್ದಾರರಾಗಿರುವ ಇಲಾಖೆಗಳು ಇಂತಹ ವಿಷಯಗಳನ್ನು ಏಕೆ ನಿರ್ವಹಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದರು. ಹೆಚ್ಚುವರಿ ಜವಾಬ್ದಾರಿಗಳು ಬೋಧನಾ ಕೆಲಸದ ಮೇಲೆ ಪರಿಣಾಮ ಬೀರಬಹುದು. ವೃತ್ತಿಪರ ಘನತೆಯನ್ನು ಹಾಳುಮಾಡಬಹುದು ಎಂದು ಎಚ್ಚರಿಸಿದ್ದರು.

ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ ಮತ್ತು ಛತ್ತೀಸ್‌ಗಢದಂತಹ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಾಣಿ ಸಂಬಂಧಿತ ನಾಗರಿಕ ಸಮನ್ವಯಕ್ಕಾಗಿ ಶೈಕ್ಷಣಿಕ ಸಿಬ್ಬಂದಿಯನ್ನು ಒಳಗೊಂಡ ಇದೇ ರೀತಿಯ ಆಡಳಿತಾತ್ಮಕ ವ್ಯವಸ್ಥೆಗಳನ್ನು ಈ ಹಿಂದೆ ಜಾರಿಗೆ ತರಲಾಗಿದೆ ಎಂದು ಅಧಿಕಾರಿಗಳು ಗಮನಸೆಳೆದಿದ್ದರು.

ಇತ್ತೀಚಿನ ಸ್ಪಷ್ಟೀಕರಣದೊಂದಿಗೆ, ದೆಹಲಿ ಸರ್ಕಾರವು ಕಳವಳಗಳನ್ನು ಹೋಗಲಾಡಿಸಲು ಪ್ರಯತ್ನಿಸಿದೆ. ಶಿಕ್ಷಕರನ್ನು ಬೀದಿ ನಾಯಿ ಎಣಿಕೆಗೆ ನಿಯೋಜಿಸಲಾಗುತ್ತಿಲ್ಲ, ನಿರ್ದೇಶನವು ನಾಮನಿರ್ದೇಶಿತ ನೋಡಲ್ ಅಧಿಕಾರಿಗಳ ಮೂಲಕ ಆಡಳಿತಾತ್ಮಕ ಸಮನ್ವಯಕ್ಕೆ ಸೀಮಿತವಾಗಿದೆ ಎಂದು ಒತ್ತಿಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...