Homeಮುಖಪುಟಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿಯಿಂದ ದೆಹಲಿ ಸರ್ಕಾರಕ್ಕೆ ₹2,000 ಕೋಟಿ ನಷ್ಟ : ಸಿಎಜಿ ವರದಿ

ಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿಯಿಂದ ದೆಹಲಿ ಸರ್ಕಾರಕ್ಕೆ ₹2,000 ಕೋಟಿ ನಷ್ಟ : ಸಿಎಜಿ ವರದಿ

- Advertisement -
- Advertisement -

ಮಂಗಳವಾರ (ಫೆ.25) ವಿಧಾನಸಭೆಯಲ್ಲಿ ಮಂಡಿಸಲಾದ ಕಂಟ್ರೋಲರ್ ಆ್ಯಂಡ್ ಆಡಿಟರ್ ಜನರಲ್ (ಸಿಎಜಿ) ವರದಿಯ ಪ್ರಕಾರ, ಈಗ ರದ್ದುಗೊಂಡಿರುವ 2021-22 ಅಬಕಾರಿ ನೀತಿಯಿಂದಾಗಿ ದೆಹಲಿ ಸರ್ಕಾರ 2,000 ಕೋಟಿ ರೂಪಾಯಿಗಳಿಗೂ ಹೆಚ್ಚಿನ ನಷ್ಟವನ್ನು ಅನುಭವಿಸಿದೆ. ಇದಕ್ಕೆ ಮುಖ್ಯವಾಗಿ ‘ದುರ್ಬಲ ನೀತಿ ಚೌಕಟ್ಟು ಮತ್ತು ಅಸಮರ್ಪಕ ಅನುಷ್ಠಾನವೇ ಕಾರಣ’ ಎಂದು ವರದಿಗಳು ಹೇಳಿವೆ.

ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ದೆಹಲಿಯ ಹೊಸ ಸರ್ಕಾರ, ಈ ಹಿಂದಿನ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಕಾರ್ಯಕ್ಷಮತೆಯ ಕುರಿತು ಮಂಡಿಸಿದ 14 ಆಡಿಟ್ ರಿವೀವ್‌ಗಳಲ್ಲಿ ಒಂದಾದ ಈ ವರದಿಯು, ಪರವಾನಗಿ ಪ್ರಕ್ರಿಯೆಯಲ್ಲಿನ ಉಲ್ಲಂಘನೆಗಳನ್ನು ಕೂಡ ಉಲ್ಲೇಖಿಸಿದೆ. ನೀತಿ ಸೂತ್ರೀಕರಣದಲ್ಲಿ ಬದಲಾವಣೆಗಳನ್ನು ಸೂಚಿಸಲು ರಚಿಸಲಾದ ತಜ್ಞರ ಸಮಿತಿಯ ಶಿಫಾರಸುಗಳನ್ನು ಆಗಿನ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವ ಮನೀಶ್ ಸಿಸೋಡಿಯಾ ನಿರ್ಲಕ್ಷಿಸಿದ್ದಾರೆ ಎಂದು ಅದು ಹೇಳಿದೆ.

ಈ ಕಾಯ್ದೆಯ ವ್ಯಾಪ್ತಿಗೆ ಒಳಪಡದ ಪುರಸಭೆ ವಾರ್ಡ್‌ಗಳಲ್ಲಿ ಸೂಕ್ತ ಪರವಾನಿಗೆ ಪಡೆಯದೇ ಮದ್ಯದಂಗಡಿಗಳನ್ನು ತೆರೆದಿರುವುದರಿಂದ ಸರ್ಕಾರ ಬೊಕ್ಕಸಕ್ಕೆ 941.53 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ವರದಿ ಪ್ರತಿಪಾದಿಸಿದೆ. ಈ ಪ್ರದೇಶಗಳಲ್ಲಿ ಭೂ ಬಳಕೆಯ ನಿಯಮಗಳ ಆಧಾರದಲ್ಲಿ ಮದ್ಯದಂಗಡಿ ಆರಂಭಕ್ಕೆ ಅವಕಾಶ ನೀಡುವುದಿಲ್ಲ.

ಈ ವಲಯಗಳ ಪರವಾನಿಗೆಯನ್ನು ಶರಣಾಗತಿ ಮಾಡಿರುವುದರಿಂದ ಹಾಗೂ ಅವುಗಳಿಗೆ ಮರು ಟೆಂಡರ್ ಕರೆಯಲು ಇಲಾಖೆ ವಿಫಲವಾಗಿರುವುದರಿಂದ ಅಬಕಾರಿ ಇಲಾಖೆಗೆ 890.15 ಕೋಟಿ ರೂ. ಪರವಾನಿಗೆ ಶುಲ್ಕ ನಷ್ಟವಾಗಿದೆ ಎಂದು ವರದಿ ಹೇಳಿದೆ. ಸಾಂಕ್ರಾಮಿಕ ರೋಗ ಕೋವಿಡ್ ಸಂದರ್ಭ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಈ ಹಿನ್ನೆಲೆಯಲ್ಲಿ ಪರವಾನಿಗೆದಾರರಿಗೆ ಶುಲ್ಕದಿಂದ ಮನ್ನಾ ಮಾಡಲಾಗಿದೆ. ಇದರಿಂದ 144 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ವರದಿ ಹೇಳಿದೆ.

ನಿಯಮಕ್ಕೆ ಅನುಗುಣವಾಗಿ ಇಲ್ಲದ ಪ್ರದೇಶಗಳಲ್ಲಿ ಮಧ್ಯದಂಗಡಿಗಳನ್ನು ತೆರೆಯುವುದಕ್ಕೆ ಮಾಸ್ಟರ್ ಪ್ಲ್ಯಾನ್ ದಿಲ್ಲಿ-2021 ನಿಷೇಧ ವಿಧಿಸಿತ್ತು. ಆದರೆ, ಅಬಕಾರಿ ನೀತಿ 2021-22 ಪ್ರತಿ ವಾರ್ಡ್‌ಗಳಲ್ಲಿ ಕನಿಷ್ಠ ಎರಡು ಚಿಲ್ಲರೆ ಮದ್ಯದ ಅಂಗಡಿಗಳನ್ನು ತೆರೆಯುವುದನ್ನು ಕಡ್ಡಾಯಗೊಳಿಸಿತ್ತು ಎಂದು ವರದಿ ಹೇಳಿದೆ. ಸರ್ಕಾರದ ಅನುಮತಿ ಇಲ್ಲದೆ, ನಿಯಮಕ್ಕೆ ಅನುಗುಣವಾಗಿ ಇಲ್ಲದ ಪ್ರದೇಶಗಳಲ್ಲಿ ಮದ್ಯದಂಗಡಿಗಳು ಇರುವಂತಿಲ್ಲ ಎಂದು ಟೆಂಡರ್ ದಾಖಲೆ ಹೇಳಿದ್ದವು.

ಆದರೆ, 2021 ಜೂನ್ 28ರಂದು ಟೆಂಡರ್ ಜಾರಿಗೊಳಿಸುವ ಮುನ್ನ ಅಬಕಾರಿ ಇಲಾಖೆ ಅಗತ್ಯವಿರುವ ಅನುಮತಿಯನ್ನು ಕೋರಿರಲಿಲ್ಲ. 2021 ಆಗಸ್ಟ್‌ನಲ್ಲಿ ಪರವಾನಿಗೆ ಮಂಜೂರು ಮಾಡಲಾಗಿತ್ತು. 2021 ನವೆಂಬರ್ 17ರಿಂದ ಮದ್ಯದಂಗಡಿಗಳು ಕಾರ್ಯಾಚರಿಸಲು ಆರಂಭವಾಗಿದ್ದವು. ಆದರೆ, ಈ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) 2021 ನವೆಂಬರ್ 16ರಂದು ಆದೇಶ ಜಾರಿ ಮಾಡಿತ್ತು. ಪರವಾನಿಗೆದಾರರು ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ನ್ಯಾಯಾಲಯ 67 ಸಂತ್ರಸ್ತ ವಾರ್ಡ್‌ಗಳಲ್ಲಿ ಪರವಾನಿ ಶುಲ್ಕ ಪಾವತಿಸುವುದರಿಂದ ಅವರಿಗೆ ವಿನಾಯತಿ ನೀಡಿತ್ತು. ಇದು ದೆಹಲಿ ಸರ್ಕಾರದ ಬೊಕ್ಕಸಕ್ಕೆ 941.53 ಕೋಟಿ ರೂ. ನಷ್ಟವಾಗಲು ಕಾರಣವಾಯಿತು ಎಂದು ವರದಿ ಹೇಳಿದೆ.

ಜುಲೈ 2022ರಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅಬಕಾರಿ ನೀತಿ ಹಗರಣದ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ, ಬಿಜೆಪಿ ಎಎಪಿ ಸರ್ಕಾರದ ಮೇಲೆ ಪದೇ ಪದೇ ಮುಗಿ ಬಿದ್ದಿತ್ತು. ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಸೇರಿದಂತೆ ಹಲವಾರು ಉನ್ನತ ಎಎಪಿ ನಾಯಕರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ತಿಂಗಳುಗಟ್ಟಲೆ ಜೈಲಿನಲ್ಲಿ ಇಡಲಾಗಿತ್ತು.

ಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...