Homeಮುಖಪುಟಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿಯಿಂದ ದೆಹಲಿ ಸರ್ಕಾರಕ್ಕೆ ₹2,000 ಕೋಟಿ ನಷ್ಟ : ಸಿಎಜಿ ವರದಿ

ಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿಯಿಂದ ದೆಹಲಿ ಸರ್ಕಾರಕ್ಕೆ ₹2,000 ಕೋಟಿ ನಷ್ಟ : ಸಿಎಜಿ ವರದಿ

- Advertisement -
- Advertisement -

ಮಂಗಳವಾರ (ಫೆ.25) ವಿಧಾನಸಭೆಯಲ್ಲಿ ಮಂಡಿಸಲಾದ ಕಂಟ್ರೋಲರ್ ಆ್ಯಂಡ್ ಆಡಿಟರ್ ಜನರಲ್ (ಸಿಎಜಿ) ವರದಿಯ ಪ್ರಕಾರ, ಈಗ ರದ್ದುಗೊಂಡಿರುವ 2021-22 ಅಬಕಾರಿ ನೀತಿಯಿಂದಾಗಿ ದೆಹಲಿ ಸರ್ಕಾರ 2,000 ಕೋಟಿ ರೂಪಾಯಿಗಳಿಗೂ ಹೆಚ್ಚಿನ ನಷ್ಟವನ್ನು ಅನುಭವಿಸಿದೆ. ಇದಕ್ಕೆ ಮುಖ್ಯವಾಗಿ ‘ದುರ್ಬಲ ನೀತಿ ಚೌಕಟ್ಟು ಮತ್ತು ಅಸಮರ್ಪಕ ಅನುಷ್ಠಾನವೇ ಕಾರಣ’ ಎಂದು ವರದಿಗಳು ಹೇಳಿವೆ.

ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ದೆಹಲಿಯ ಹೊಸ ಸರ್ಕಾರ, ಈ ಹಿಂದಿನ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಕಾರ್ಯಕ್ಷಮತೆಯ ಕುರಿತು ಮಂಡಿಸಿದ 14 ಆಡಿಟ್ ರಿವೀವ್‌ಗಳಲ್ಲಿ ಒಂದಾದ ಈ ವರದಿಯು, ಪರವಾನಗಿ ಪ್ರಕ್ರಿಯೆಯಲ್ಲಿನ ಉಲ್ಲಂಘನೆಗಳನ್ನು ಕೂಡ ಉಲ್ಲೇಖಿಸಿದೆ. ನೀತಿ ಸೂತ್ರೀಕರಣದಲ್ಲಿ ಬದಲಾವಣೆಗಳನ್ನು ಸೂಚಿಸಲು ರಚಿಸಲಾದ ತಜ್ಞರ ಸಮಿತಿಯ ಶಿಫಾರಸುಗಳನ್ನು ಆಗಿನ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವ ಮನೀಶ್ ಸಿಸೋಡಿಯಾ ನಿರ್ಲಕ್ಷಿಸಿದ್ದಾರೆ ಎಂದು ಅದು ಹೇಳಿದೆ.

ಈ ಕಾಯ್ದೆಯ ವ್ಯಾಪ್ತಿಗೆ ಒಳಪಡದ ಪುರಸಭೆ ವಾರ್ಡ್‌ಗಳಲ್ಲಿ ಸೂಕ್ತ ಪರವಾನಿಗೆ ಪಡೆಯದೇ ಮದ್ಯದಂಗಡಿಗಳನ್ನು ತೆರೆದಿರುವುದರಿಂದ ಸರ್ಕಾರ ಬೊಕ್ಕಸಕ್ಕೆ 941.53 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ವರದಿ ಪ್ರತಿಪಾದಿಸಿದೆ. ಈ ಪ್ರದೇಶಗಳಲ್ಲಿ ಭೂ ಬಳಕೆಯ ನಿಯಮಗಳ ಆಧಾರದಲ್ಲಿ ಮದ್ಯದಂಗಡಿ ಆರಂಭಕ್ಕೆ ಅವಕಾಶ ನೀಡುವುದಿಲ್ಲ.

ಈ ವಲಯಗಳ ಪರವಾನಿಗೆಯನ್ನು ಶರಣಾಗತಿ ಮಾಡಿರುವುದರಿಂದ ಹಾಗೂ ಅವುಗಳಿಗೆ ಮರು ಟೆಂಡರ್ ಕರೆಯಲು ಇಲಾಖೆ ವಿಫಲವಾಗಿರುವುದರಿಂದ ಅಬಕಾರಿ ಇಲಾಖೆಗೆ 890.15 ಕೋಟಿ ರೂ. ಪರವಾನಿಗೆ ಶುಲ್ಕ ನಷ್ಟವಾಗಿದೆ ಎಂದು ವರದಿ ಹೇಳಿದೆ. ಸಾಂಕ್ರಾಮಿಕ ರೋಗ ಕೋವಿಡ್ ಸಂದರ್ಭ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಈ ಹಿನ್ನೆಲೆಯಲ್ಲಿ ಪರವಾನಿಗೆದಾರರಿಗೆ ಶುಲ್ಕದಿಂದ ಮನ್ನಾ ಮಾಡಲಾಗಿದೆ. ಇದರಿಂದ 144 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ವರದಿ ಹೇಳಿದೆ.

ನಿಯಮಕ್ಕೆ ಅನುಗುಣವಾಗಿ ಇಲ್ಲದ ಪ್ರದೇಶಗಳಲ್ಲಿ ಮಧ್ಯದಂಗಡಿಗಳನ್ನು ತೆರೆಯುವುದಕ್ಕೆ ಮಾಸ್ಟರ್ ಪ್ಲ್ಯಾನ್ ದಿಲ್ಲಿ-2021 ನಿಷೇಧ ವಿಧಿಸಿತ್ತು. ಆದರೆ, ಅಬಕಾರಿ ನೀತಿ 2021-22 ಪ್ರತಿ ವಾರ್ಡ್‌ಗಳಲ್ಲಿ ಕನಿಷ್ಠ ಎರಡು ಚಿಲ್ಲರೆ ಮದ್ಯದ ಅಂಗಡಿಗಳನ್ನು ತೆರೆಯುವುದನ್ನು ಕಡ್ಡಾಯಗೊಳಿಸಿತ್ತು ಎಂದು ವರದಿ ಹೇಳಿದೆ. ಸರ್ಕಾರದ ಅನುಮತಿ ಇಲ್ಲದೆ, ನಿಯಮಕ್ಕೆ ಅನುಗುಣವಾಗಿ ಇಲ್ಲದ ಪ್ರದೇಶಗಳಲ್ಲಿ ಮದ್ಯದಂಗಡಿಗಳು ಇರುವಂತಿಲ್ಲ ಎಂದು ಟೆಂಡರ್ ದಾಖಲೆ ಹೇಳಿದ್ದವು.

ಆದರೆ, 2021 ಜೂನ್ 28ರಂದು ಟೆಂಡರ್ ಜಾರಿಗೊಳಿಸುವ ಮುನ್ನ ಅಬಕಾರಿ ಇಲಾಖೆ ಅಗತ್ಯವಿರುವ ಅನುಮತಿಯನ್ನು ಕೋರಿರಲಿಲ್ಲ. 2021 ಆಗಸ್ಟ್‌ನಲ್ಲಿ ಪರವಾನಿಗೆ ಮಂಜೂರು ಮಾಡಲಾಗಿತ್ತು. 2021 ನವೆಂಬರ್ 17ರಿಂದ ಮದ್ಯದಂಗಡಿಗಳು ಕಾರ್ಯಾಚರಿಸಲು ಆರಂಭವಾಗಿದ್ದವು. ಆದರೆ, ಈ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) 2021 ನವೆಂಬರ್ 16ರಂದು ಆದೇಶ ಜಾರಿ ಮಾಡಿತ್ತು. ಪರವಾನಿಗೆದಾರರು ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ನ್ಯಾಯಾಲಯ 67 ಸಂತ್ರಸ್ತ ವಾರ್ಡ್‌ಗಳಲ್ಲಿ ಪರವಾನಿ ಶುಲ್ಕ ಪಾವತಿಸುವುದರಿಂದ ಅವರಿಗೆ ವಿನಾಯತಿ ನೀಡಿತ್ತು. ಇದು ದೆಹಲಿ ಸರ್ಕಾರದ ಬೊಕ್ಕಸಕ್ಕೆ 941.53 ಕೋಟಿ ರೂ. ನಷ್ಟವಾಗಲು ಕಾರಣವಾಯಿತು ಎಂದು ವರದಿ ಹೇಳಿದೆ.

ಜುಲೈ 2022ರಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅಬಕಾರಿ ನೀತಿ ಹಗರಣದ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ, ಬಿಜೆಪಿ ಎಎಪಿ ಸರ್ಕಾರದ ಮೇಲೆ ಪದೇ ಪದೇ ಮುಗಿ ಬಿದ್ದಿತ್ತು. ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಸೇರಿದಂತೆ ಹಲವಾರು ಉನ್ನತ ಎಎಪಿ ನಾಯಕರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ತಿಂಗಳುಗಟ್ಟಲೆ ಜೈಲಿನಲ್ಲಿ ಇಡಲಾಗಿತ್ತು.

ಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...