Homeಮುಖಪುಟಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿಯಿಂದ ದೆಹಲಿ ಸರ್ಕಾರಕ್ಕೆ ₹2,000 ಕೋಟಿ ನಷ್ಟ : ಸಿಎಜಿ ವರದಿ

ಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿಯಿಂದ ದೆಹಲಿ ಸರ್ಕಾರಕ್ಕೆ ₹2,000 ಕೋಟಿ ನಷ್ಟ : ಸಿಎಜಿ ವರದಿ

- Advertisement -
- Advertisement -

ಮಂಗಳವಾರ (ಫೆ.25) ವಿಧಾನಸಭೆಯಲ್ಲಿ ಮಂಡಿಸಲಾದ ಕಂಟ್ರೋಲರ್ ಆ್ಯಂಡ್ ಆಡಿಟರ್ ಜನರಲ್ (ಸಿಎಜಿ) ವರದಿಯ ಪ್ರಕಾರ, ಈಗ ರದ್ದುಗೊಂಡಿರುವ 2021-22 ಅಬಕಾರಿ ನೀತಿಯಿಂದಾಗಿ ದೆಹಲಿ ಸರ್ಕಾರ 2,000 ಕೋಟಿ ರೂಪಾಯಿಗಳಿಗೂ ಹೆಚ್ಚಿನ ನಷ್ಟವನ್ನು ಅನುಭವಿಸಿದೆ. ಇದಕ್ಕೆ ಮುಖ್ಯವಾಗಿ ‘ದುರ್ಬಲ ನೀತಿ ಚೌಕಟ್ಟು ಮತ್ತು ಅಸಮರ್ಪಕ ಅನುಷ್ಠಾನವೇ ಕಾರಣ’ ಎಂದು ವರದಿಗಳು ಹೇಳಿವೆ.

ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ದೆಹಲಿಯ ಹೊಸ ಸರ್ಕಾರ, ಈ ಹಿಂದಿನ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಕಾರ್ಯಕ್ಷಮತೆಯ ಕುರಿತು ಮಂಡಿಸಿದ 14 ಆಡಿಟ್ ರಿವೀವ್‌ಗಳಲ್ಲಿ ಒಂದಾದ ಈ ವರದಿಯು, ಪರವಾನಗಿ ಪ್ರಕ್ರಿಯೆಯಲ್ಲಿನ ಉಲ್ಲಂಘನೆಗಳನ್ನು ಕೂಡ ಉಲ್ಲೇಖಿಸಿದೆ. ನೀತಿ ಸೂತ್ರೀಕರಣದಲ್ಲಿ ಬದಲಾವಣೆಗಳನ್ನು ಸೂಚಿಸಲು ರಚಿಸಲಾದ ತಜ್ಞರ ಸಮಿತಿಯ ಶಿಫಾರಸುಗಳನ್ನು ಆಗಿನ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವ ಮನೀಶ್ ಸಿಸೋಡಿಯಾ ನಿರ್ಲಕ್ಷಿಸಿದ್ದಾರೆ ಎಂದು ಅದು ಹೇಳಿದೆ.

ಈ ಕಾಯ್ದೆಯ ವ್ಯಾಪ್ತಿಗೆ ಒಳಪಡದ ಪುರಸಭೆ ವಾರ್ಡ್‌ಗಳಲ್ಲಿ ಸೂಕ್ತ ಪರವಾನಿಗೆ ಪಡೆಯದೇ ಮದ್ಯದಂಗಡಿಗಳನ್ನು ತೆರೆದಿರುವುದರಿಂದ ಸರ್ಕಾರ ಬೊಕ್ಕಸಕ್ಕೆ 941.53 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ವರದಿ ಪ್ರತಿಪಾದಿಸಿದೆ. ಈ ಪ್ರದೇಶಗಳಲ್ಲಿ ಭೂ ಬಳಕೆಯ ನಿಯಮಗಳ ಆಧಾರದಲ್ಲಿ ಮದ್ಯದಂಗಡಿ ಆರಂಭಕ್ಕೆ ಅವಕಾಶ ನೀಡುವುದಿಲ್ಲ.

ಈ ವಲಯಗಳ ಪರವಾನಿಗೆಯನ್ನು ಶರಣಾಗತಿ ಮಾಡಿರುವುದರಿಂದ ಹಾಗೂ ಅವುಗಳಿಗೆ ಮರು ಟೆಂಡರ್ ಕರೆಯಲು ಇಲಾಖೆ ವಿಫಲವಾಗಿರುವುದರಿಂದ ಅಬಕಾರಿ ಇಲಾಖೆಗೆ 890.15 ಕೋಟಿ ರೂ. ಪರವಾನಿಗೆ ಶುಲ್ಕ ನಷ್ಟವಾಗಿದೆ ಎಂದು ವರದಿ ಹೇಳಿದೆ. ಸಾಂಕ್ರಾಮಿಕ ರೋಗ ಕೋವಿಡ್ ಸಂದರ್ಭ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಈ ಹಿನ್ನೆಲೆಯಲ್ಲಿ ಪರವಾನಿಗೆದಾರರಿಗೆ ಶುಲ್ಕದಿಂದ ಮನ್ನಾ ಮಾಡಲಾಗಿದೆ. ಇದರಿಂದ 144 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ವರದಿ ಹೇಳಿದೆ.

ನಿಯಮಕ್ಕೆ ಅನುಗುಣವಾಗಿ ಇಲ್ಲದ ಪ್ರದೇಶಗಳಲ್ಲಿ ಮಧ್ಯದಂಗಡಿಗಳನ್ನು ತೆರೆಯುವುದಕ್ಕೆ ಮಾಸ್ಟರ್ ಪ್ಲ್ಯಾನ್ ದಿಲ್ಲಿ-2021 ನಿಷೇಧ ವಿಧಿಸಿತ್ತು. ಆದರೆ, ಅಬಕಾರಿ ನೀತಿ 2021-22 ಪ್ರತಿ ವಾರ್ಡ್‌ಗಳಲ್ಲಿ ಕನಿಷ್ಠ ಎರಡು ಚಿಲ್ಲರೆ ಮದ್ಯದ ಅಂಗಡಿಗಳನ್ನು ತೆರೆಯುವುದನ್ನು ಕಡ್ಡಾಯಗೊಳಿಸಿತ್ತು ಎಂದು ವರದಿ ಹೇಳಿದೆ. ಸರ್ಕಾರದ ಅನುಮತಿ ಇಲ್ಲದೆ, ನಿಯಮಕ್ಕೆ ಅನುಗುಣವಾಗಿ ಇಲ್ಲದ ಪ್ರದೇಶಗಳಲ್ಲಿ ಮದ್ಯದಂಗಡಿಗಳು ಇರುವಂತಿಲ್ಲ ಎಂದು ಟೆಂಡರ್ ದಾಖಲೆ ಹೇಳಿದ್ದವು.

ಆದರೆ, 2021 ಜೂನ್ 28ರಂದು ಟೆಂಡರ್ ಜಾರಿಗೊಳಿಸುವ ಮುನ್ನ ಅಬಕಾರಿ ಇಲಾಖೆ ಅಗತ್ಯವಿರುವ ಅನುಮತಿಯನ್ನು ಕೋರಿರಲಿಲ್ಲ. 2021 ಆಗಸ್ಟ್‌ನಲ್ಲಿ ಪರವಾನಿಗೆ ಮಂಜೂರು ಮಾಡಲಾಗಿತ್ತು. 2021 ನವೆಂಬರ್ 17ರಿಂದ ಮದ್ಯದಂಗಡಿಗಳು ಕಾರ್ಯಾಚರಿಸಲು ಆರಂಭವಾಗಿದ್ದವು. ಆದರೆ, ಈ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) 2021 ನವೆಂಬರ್ 16ರಂದು ಆದೇಶ ಜಾರಿ ಮಾಡಿತ್ತು. ಪರವಾನಿಗೆದಾರರು ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ನ್ಯಾಯಾಲಯ 67 ಸಂತ್ರಸ್ತ ವಾರ್ಡ್‌ಗಳಲ್ಲಿ ಪರವಾನಿ ಶುಲ್ಕ ಪಾವತಿಸುವುದರಿಂದ ಅವರಿಗೆ ವಿನಾಯತಿ ನೀಡಿತ್ತು. ಇದು ದೆಹಲಿ ಸರ್ಕಾರದ ಬೊಕ್ಕಸಕ್ಕೆ 941.53 ಕೋಟಿ ರೂ. ನಷ್ಟವಾಗಲು ಕಾರಣವಾಯಿತು ಎಂದು ವರದಿ ಹೇಳಿದೆ.

ಜುಲೈ 2022ರಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅಬಕಾರಿ ನೀತಿ ಹಗರಣದ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ, ಬಿಜೆಪಿ ಎಎಪಿ ಸರ್ಕಾರದ ಮೇಲೆ ಪದೇ ಪದೇ ಮುಗಿ ಬಿದ್ದಿತ್ತು. ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಸೇರಿದಂತೆ ಹಲವಾರು ಉನ್ನತ ಎಎಪಿ ನಾಯಕರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ತಿಂಗಳುಗಟ್ಟಲೆ ಜೈಲಿನಲ್ಲಿ ಇಡಲಾಗಿತ್ತು.

ಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...