Homeಮುಖಪುಟಬಿಜೆಪಿಗಾಗಿ ದೆಹಲಿ ಗವರ್ನರ್ ಯಮುನಾ ಸ್ವಚ್ಛಗೊಳಿಸಲಿಲ್ಲ: ಟಿಎಂಸಿ ಸಂಸದ ಸಾಕೇತ್ ಗೋಖಲೆ

ಬಿಜೆಪಿಗಾಗಿ ದೆಹಲಿ ಗವರ್ನರ್ ಯಮುನಾ ಸ್ವಚ್ಛಗೊಳಿಸಲಿಲ್ಲ: ಟಿಎಂಸಿ ಸಂಸದ ಸಾಕೇತ್ ಗೋಖಲೆ

- Advertisement -
- Advertisement -

ಯಮುನಾ ನದಿ ಸ್ವಚ್ಛ ಮಾಡುವುದು ದೆಹಲಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಕೈಯ್ಯಲ್ಲಿ ಇದ್ದರೂ, ಅವರು ಈ ಹಿಂದೆ ಈ ಕೆಲಸವನ್ನು ಬಿಜೆಪಿಗೆ ಚುನಾವಣೆಯಲ್ಲಿ ಸಹಾಯ ಮಾಡುವ ಸಲುವಾಗಿ ಮಾಡಲಿಲ್ಲ ಎಂದು ಟಿಎಂಸಿ ಸಂಸದ ಸಾಕೇತ್ ಗೋಖಲೆ ಸೋಮವಾರ ಪ್ರತಿಪಾದಿಸಿದ್ದಾರೆ. ಬಿಜೆಪಿಗಾಗಿ ದೆಹಲಿ ಗವರ್ನರ್

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕೆಲವು ದಿನಗಳ ಮೊದಲು, ಮೂರು ವರ್ಷಗಳಲ್ಲಿ ನದಿಯನ್ನು ಭಾರೀ ಮಾಲಿನ್ಯದಿಂದ ಮುಕ್ತಗೊಳಿಸುವ ನಾಲ್ಕು-ಹಂತದ ತಂತ್ರದ ಆಧಾರದ ಮೇಲೆ ಯಮುನಾ ನದಿಯನ್ನು ಸ್ವಚ್ಛಗೊಳಿಸುವ ಕೆಲಸ ಭಾನುವಾರ ಪ್ರಾರಂಭವಾಯಿತು. ಈ ವರದಿಯನ್ನು ಸಾಕೇತ್ ಗೋಖಲೆ ಅವರು ಹೇಳಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಟ್ವಿಟರ್‌ನಲ್ಲಿ ಸುದ್ದಿ ಸಂಸ್ಥೆ ಎಎನ್‌ಐಯ ಟ್ವೀಟ್‌ ಅನ್ನು ರೀಟ್ವೀಟ್ ಮಾಡಿರುವ ಸಾಕೇತ್ ಗೋಖಲೆ, “ದೆಹಲಿ ಸರ್ಕಾರ ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ. ಆದರೆ ಲೆಫ್ಟಿನೆಂಟ್ ಯಮುನಾ ನದಿಯನ್ನು ಸ್ವಚ್ಛಗೊಳಿಸಲು ಪ್ರಾರಂಭಿಸಿದ್ದಾರೆ. ಈ ಅಧಿಕಾರ ಯಾವಾಗನಿಂದಲೂ ಅವರ ಕೈಯಲ್ಲಿತ್ತು ಎಂದು ಇದರ ಅರ್ಥ” ಎಂದು ಹೇಳಿದ್ದಾರೆ.

ಅವರು ಈಗ ಇಷ್ಟೆಲ್ಲಾ ಮಾಡುವಾಗ, ಆಗ ಇದನ್ನೆಲ್ಲ ಮಾಡಲಿಲ್ಲ ಮತ್ತು ದೆಹಲಿ ಸರ್ಕಾರವನ್ನು ಹಾಗೆ ಮಾಡದಂತೆ ತಡೆಯುತ್ತಿದ್ದರು. ಯಾಕೆಂದರೆ ಅವರು ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಹಾಯ ಮಾಡಲು ಮಾತ್ರ ಹಾಗೆ ಮಾಡಿದ್ದರು ಎಂದು ಸಾಕೇತ್ ಅವರು ಆರೋಪಿಸಿದ್ದಾರೆ. ಬಿಜೆಪಿಗಾಗಿ ದೆಹಲಿ ಗವರ್ನರ್

ಅಷ್ಟೆ ಅಲ್ಲದೆ, ನಿನ್ನೆ ರಾತ್ರಿ, ಈ ವ್ಯಕ್ತಿ ದೆಹಲಿಯ ಕಾಲ್ತುಳಿತದಲ್ಲಿ ಜನರು ಸತ್ತಿದ್ದಾರೆ ಎಂದು ಮರೆಮಾಡಲು ತನ್ನ ಟ್ವೀಟ್ ಅನ್ನು ಎಡಿಟ್ ಮಾಡಿದ್ದಾರೆ. ಈ ನಾಚಿಕೆಯಿಲ್ಲದ, ಜನರಿಂದ ಆಯ್ಕೆಯಾಗದ ಬಿಜೆಪಿ ಕಾರ್ಯಕರ್ತ ತನ್ನ ಪಕ್ಷ ಮತ್ತು ತನ್ನ ಯಜಮಾನ ಮೋದಿಗಾಗಿ ಕೆಲಸ ಮಾಡಲು ಸಾಂವಿಧಾನಿಕ ಸ್ಥಾನವನ್ನು ಬಳಸಿದ್ದಾರೆ ಎಂದು ಸಂಸದ ಸಾಕೇತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೆಫ್ಟಿನೆಂಟ್‌ ಗವರ್ನರ್‌ ಕಚೇರಿಯ ಅಧಿಕಾರಿಗಳು ಯಮುನಾ ನದಿಯನ್ನು ಸ್ವಚ್ಛಗೊಳಿಸುವ ಕೆಲಸವು ಕಸ ತೆಗೆಯುವ ಯಂತ್ರಗಳು, ಕಳೆ ಕೊಯ್ಲು ಯಂತ್ರಗಳು ಮತ್ತು ಡ್ರೆಡ್ಜರ್‌ನೊಂದಿಗೆ ಪ್ರಾರಂಭವಾಗಿದೆ ಎಂದು ಭಾನುವಾರ ಹೇಳಿದರು.

ಫೆಬ್ರವರಿ 8 ರಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಲಿನ್ಯ ಮುಕ್ತ ಯಮುನಾ ನದಿಗಾಗಿ ಎಲ್ಲ ಪ್ರಯತ್ನಗಳನ್ನು ಮಾಡುವುದಾಗಿ ಭರವಸೆ ನೀಡಿದ್ದರು.

ಇದನ್ನೂಓದಿ:  ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆದರೆ ತಪ್ಪೇನಿಲ್ಲ: ಸಚಿವ ಶಿವಾನಂದ ಪಾಟೀಲ್

ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆದರೆ ತಪ್ಪೇನಿಲ್ಲ: ಸಚಿವ ಶಿವಾನಂದ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...