Homeಮುಖಪುಟಬಿಜೆಪಿಗಾಗಿ ದೆಹಲಿ ಗವರ್ನರ್ ಯಮುನಾ ಸ್ವಚ್ಛಗೊಳಿಸಲಿಲ್ಲ: ಟಿಎಂಸಿ ಸಂಸದ ಸಾಕೇತ್ ಗೋಖಲೆ

ಬಿಜೆಪಿಗಾಗಿ ದೆಹಲಿ ಗವರ್ನರ್ ಯಮುನಾ ಸ್ವಚ್ಛಗೊಳಿಸಲಿಲ್ಲ: ಟಿಎಂಸಿ ಸಂಸದ ಸಾಕೇತ್ ಗೋಖಲೆ

- Advertisement -
- Advertisement -

ಯಮುನಾ ನದಿ ಸ್ವಚ್ಛ ಮಾಡುವುದು ದೆಹಲಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಕೈಯ್ಯಲ್ಲಿ ಇದ್ದರೂ, ಅವರು ಈ ಹಿಂದೆ ಈ ಕೆಲಸವನ್ನು ಬಿಜೆಪಿಗೆ ಚುನಾವಣೆಯಲ್ಲಿ ಸಹಾಯ ಮಾಡುವ ಸಲುವಾಗಿ ಮಾಡಲಿಲ್ಲ ಎಂದು ಟಿಎಂಸಿ ಸಂಸದ ಸಾಕೇತ್ ಗೋಖಲೆ ಸೋಮವಾರ ಪ್ರತಿಪಾದಿಸಿದ್ದಾರೆ. ಬಿಜೆಪಿಗಾಗಿ ದೆಹಲಿ ಗವರ್ನರ್

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕೆಲವು ದಿನಗಳ ಮೊದಲು, ಮೂರು ವರ್ಷಗಳಲ್ಲಿ ನದಿಯನ್ನು ಭಾರೀ ಮಾಲಿನ್ಯದಿಂದ ಮುಕ್ತಗೊಳಿಸುವ ನಾಲ್ಕು-ಹಂತದ ತಂತ್ರದ ಆಧಾರದ ಮೇಲೆ ಯಮುನಾ ನದಿಯನ್ನು ಸ್ವಚ್ಛಗೊಳಿಸುವ ಕೆಲಸ ಭಾನುವಾರ ಪ್ರಾರಂಭವಾಯಿತು. ಈ ವರದಿಯನ್ನು ಸಾಕೇತ್ ಗೋಖಲೆ ಅವರು ಹೇಳಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಟ್ವಿಟರ್‌ನಲ್ಲಿ ಸುದ್ದಿ ಸಂಸ್ಥೆ ಎಎನ್‌ಐಯ ಟ್ವೀಟ್‌ ಅನ್ನು ರೀಟ್ವೀಟ್ ಮಾಡಿರುವ ಸಾಕೇತ್ ಗೋಖಲೆ, “ದೆಹಲಿ ಸರ್ಕಾರ ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ. ಆದರೆ ಲೆಫ್ಟಿನೆಂಟ್ ಯಮುನಾ ನದಿಯನ್ನು ಸ್ವಚ್ಛಗೊಳಿಸಲು ಪ್ರಾರಂಭಿಸಿದ್ದಾರೆ. ಈ ಅಧಿಕಾರ ಯಾವಾಗನಿಂದಲೂ ಅವರ ಕೈಯಲ್ಲಿತ್ತು ಎಂದು ಇದರ ಅರ್ಥ” ಎಂದು ಹೇಳಿದ್ದಾರೆ.

ಅವರು ಈಗ ಇಷ್ಟೆಲ್ಲಾ ಮಾಡುವಾಗ, ಆಗ ಇದನ್ನೆಲ್ಲ ಮಾಡಲಿಲ್ಲ ಮತ್ತು ದೆಹಲಿ ಸರ್ಕಾರವನ್ನು ಹಾಗೆ ಮಾಡದಂತೆ ತಡೆಯುತ್ತಿದ್ದರು. ಯಾಕೆಂದರೆ ಅವರು ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಹಾಯ ಮಾಡಲು ಮಾತ್ರ ಹಾಗೆ ಮಾಡಿದ್ದರು ಎಂದು ಸಾಕೇತ್ ಅವರು ಆರೋಪಿಸಿದ್ದಾರೆ. ಬಿಜೆಪಿಗಾಗಿ ದೆಹಲಿ ಗವರ್ನರ್

ಅಷ್ಟೆ ಅಲ್ಲದೆ, ನಿನ್ನೆ ರಾತ್ರಿ, ಈ ವ್ಯಕ್ತಿ ದೆಹಲಿಯ ಕಾಲ್ತುಳಿತದಲ್ಲಿ ಜನರು ಸತ್ತಿದ್ದಾರೆ ಎಂದು ಮರೆಮಾಡಲು ತನ್ನ ಟ್ವೀಟ್ ಅನ್ನು ಎಡಿಟ್ ಮಾಡಿದ್ದಾರೆ. ಈ ನಾಚಿಕೆಯಿಲ್ಲದ, ಜನರಿಂದ ಆಯ್ಕೆಯಾಗದ ಬಿಜೆಪಿ ಕಾರ್ಯಕರ್ತ ತನ್ನ ಪಕ್ಷ ಮತ್ತು ತನ್ನ ಯಜಮಾನ ಮೋದಿಗಾಗಿ ಕೆಲಸ ಮಾಡಲು ಸಾಂವಿಧಾನಿಕ ಸ್ಥಾನವನ್ನು ಬಳಸಿದ್ದಾರೆ ಎಂದು ಸಂಸದ ಸಾಕೇತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೆಫ್ಟಿನೆಂಟ್‌ ಗವರ್ನರ್‌ ಕಚೇರಿಯ ಅಧಿಕಾರಿಗಳು ಯಮುನಾ ನದಿಯನ್ನು ಸ್ವಚ್ಛಗೊಳಿಸುವ ಕೆಲಸವು ಕಸ ತೆಗೆಯುವ ಯಂತ್ರಗಳು, ಕಳೆ ಕೊಯ್ಲು ಯಂತ್ರಗಳು ಮತ್ತು ಡ್ರೆಡ್ಜರ್‌ನೊಂದಿಗೆ ಪ್ರಾರಂಭವಾಗಿದೆ ಎಂದು ಭಾನುವಾರ ಹೇಳಿದರು.

ಫೆಬ್ರವರಿ 8 ರಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಲಿನ್ಯ ಮುಕ್ತ ಯಮುನಾ ನದಿಗಾಗಿ ಎಲ್ಲ ಪ್ರಯತ್ನಗಳನ್ನು ಮಾಡುವುದಾಗಿ ಭರವಸೆ ನೀಡಿದ್ದರು.

ಇದನ್ನೂಓದಿ:  ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆದರೆ ತಪ್ಪೇನಿಲ್ಲ: ಸಚಿವ ಶಿವಾನಂದ ಪಾಟೀಲ್

ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆದರೆ ತಪ್ಪೇನಿಲ್ಲ: ಸಚಿವ ಶಿವಾನಂದ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...