Homeಮುಖಪುಟದೆಹಲಿ ಶಾಸಕರ ವೇತನ 90 ಸಾವಿರಕ್ಕೆ ಏರಿಕೆ, ಆದರೂ ದೇಶದಲ್ಲಿ ಕಡಿಮೆ ಸಂಬಳ ಪಡೆಯುವ ಶಾಸಕರಿವರು!

ದೆಹಲಿ ಶಾಸಕರ ವೇತನ 90 ಸಾವಿರಕ್ಕೆ ಏರಿಕೆ, ಆದರೂ ದೇಶದಲ್ಲಿ ಕಡಿಮೆ ಸಂಬಳ ಪಡೆಯುವ ಶಾಸಕರಿವರು!

- Advertisement -
- Advertisement -

ಕೇಂದ್ರ ಸರ್ಕಾರವು ಅನುಮೋದಿಸಿದ ದೆಹಲಿ ನಗರದ ಶಾಸಕರ ಪರಿಷ್ಕೃತ ವೇತನವನ್ನು ದೆಹಲಿ ಸರ್ಕಾರವು ಸ್ವೀಕರಿಸಿದ್ದು, ಇದರ ಅಡಿಯಲ್ಲಿ ವೇತನ ಮತ್ತು ಭತ್ಯೆ ಸೇರಿ ತಿಂಗಳಿಗೆ 90,000 ರೂಪಾಯಿಗಳನ್ನು ಶಾಸಕರು ಪಡೆಯಲಿದ್ದಾರೆ.

ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಅನುಸಾರವಾಗಿ ಶಾಸಕರ ವೇತನ ಹೆಚ್ಚಳಕ್ಕೆ ದೆಹಲಿ ಸಂಪುಟ ಸಭೆ ಮಂಗಳವಾರ ಅನುಮೋದನೆ ನೀಡಿದೆ ಎಂದು ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

“ಕೇಂದ್ರದ ಪ್ರಸ್ತಾವನೆಯಂತೆ ಶಾಸಕರ ವೇತನ ಹೆಚ್ಚಳಕ್ಕೆ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಕ್ಯಾಬಿನೆಟ್ ಅನುಮೋದನೆ ನೀಡಿದೆ. ದೆಹಲಿ ಶಾಸಕರು ಕೇವಲ 30,000 ಸಾವಿರ ಸಂಬಳ ಪಡೆಯುತ್ತಾರೆ.  ದೆಹಲಿಯ ಶಾಸಕರು ಭಾರತದಾದ್ಯಂತ ಕಡಿಮೆ ಸಂಬಳ ಪಡೆಯುವ ಶಾಸಕರಾಗಿ ಮುಂದುವರಿಯಲಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಳೆದ 10 ವರ್ಷಗಳಿಂದ ದೆಹಲಿ ಶಾಸಕರ ಸಂಬಳ ಮತ್ತು ಭತ್ಯೆಯನ್ನು ಹೆಚ್ಚಿಸಿರಲಿಲ್ಲ. ಶಾಸಕರ ಮೂಲ ಮಾಸಿಕ ವೇತನ 12,000 ರೂಪಾಯಿ, ಭತ್ಯೆಗಳು ಸೇರಿ 54,000 ಸಾವಿರ ರೂಪಾಯಿ ಪಡೆಯುತ್ತಿದ್ದರು. ಈಗ ಭತ್ಯೆ ಮತ್ತು ಸಂಬಳ ಸೇರಿ 90,000 ಸಾವಿರ ಪಡೆಯಲಿದ್ದಾರೆ.

ಇದನ್ನೂ ಓದಿ: ಪದ್ಮ ಪ್ರಶಸ್ತಿ: ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಶಿಫಾರಸ್ಸು ಮಾಡಲಿರುವ ದೆಹಲಿ ಸರ್ಕಾರ

 

“ದೆಹಲಿಯಲ್ಲಿ ಜೀವನ ವೆಚ್ಚ ಗಣನೀಯವಾಗಿ ಏರಿಕೆಯಾಗಿದ್ದರೂ, ಕೇಂದ್ರವು ವಿಧಿಸಿರುವ ನಿರ್ಬಂಧವು ದೆಹಲಿಯ ಶಾಸಕರನ್ನು ದೇಶದ ಅತ್ಯಂತ ಕಡಿಮೆ ಆದಾಯದ ಶಾಸಕರಲ್ಲಿ ಒಬ್ಬರನ್ನಾಗಿಸಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳ ಶಾಸಕರು ಸುಮಾರು 1.5 ಲಕ್ಷ ವೇತನ ಪಡೆಯುತ್ತಾರೆ. ಇದು  ದೆಹಲಿಯ ಶಾಸಕರು ಗಳಿಸುವ ಮೊತ್ತಕ್ಕಿಂತ 2 ಪಟ್ಟು ಹೆಚ್ಚು. 2011 ರಿಂದ ದೆಹಲಿಯ ಶಾಸಕರ ಸಂಬಳ ಏರಿಕೆಯಾಗಿಲ್ಲ. ದೆಹಲಿಯ ಶಾಸಕರು ಇತರ ರಾಜ್ಯಗಳ ಶಾಸಕರ ವೇತನ ಸರಿಸಮಾನವಾಗಿರಬೇಕು ಎಂದು ದೆಹಲಿ ಸರ್ಕಾರ MHA ಗೆ ಮನವಿ ಮಾಡಿತ್ತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಒಟ್ಟು 90,000 ರೂಪಾಯಿಗಳಲ್ಲಿ 30,000 ಮೂಲ ವೇತನ, 25,000 ಕ್ಷೇತ್ರ ಭತ್ಯೆ, 15,000 ಸೆಕ್ರೆಟರಿಯಟ್ ಭತ್ಯೆ, ದೂರವಾಣಿ ಮತ್ತು ಸಾರಿಗೆಗಾಗಿ ತಲಾ 10,000 ರೂಪಾಯಿಗಳನ್ನು ಒಳಗೊಂಡಿದೆ ಎಂದು ಸರ್ಕಾರ ತಿಳಿಸಿದೆ.

ಈ ಪ್ರಸ್ತಾವನೆಯು ಕಳೆದ ಐದು ವರ್ಷಗಳಿಂದ ಕೇಂದ್ರದ ಬಳಿಯಿತ್ತು. ಮೂಲ ವೇತನವನ್ನು 54,000 ರೂ.ಗೆ ಏರಿಸಲು ದೆಹಲಿ ಸರ್ಕಾರ ಕೋರಿತ್ತು. ಆದರೆ, ಒಕ್ಕೂಟ ಸರ್ಕಾರ ಮೂಲ ವೇತನವನ್ನು 30,000 ರೂ.ಗೆ ನಿರ್ಬಂಧಿಸಿದೆ ಎಂದು ದೆಹಲಿ ಸರ್ಕಾರವು ಸಂಪುಟ ಸಭೆಯ ನಂತರ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಡೇಟಾಖೋಲಿ; ಉತ್ತರದ ದೆಹಲಿಯ ಪ್ರಶ್ನಾರ್ಥಕ ರಾಜಪ್ರತಿನಿಧಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...