Homeಮುಖಪುಟದೆಹಲಿ ಶಾಸಕರ ವೇತನ 90 ಸಾವಿರಕ್ಕೆ ಏರಿಕೆ, ಆದರೂ ದೇಶದಲ್ಲಿ ಕಡಿಮೆ ಸಂಬಳ ಪಡೆಯುವ ಶಾಸಕರಿವರು!

ದೆಹಲಿ ಶಾಸಕರ ವೇತನ 90 ಸಾವಿರಕ್ಕೆ ಏರಿಕೆ, ಆದರೂ ದೇಶದಲ್ಲಿ ಕಡಿಮೆ ಸಂಬಳ ಪಡೆಯುವ ಶಾಸಕರಿವರು!

- Advertisement -
- Advertisement -

ಕೇಂದ್ರ ಸರ್ಕಾರವು ಅನುಮೋದಿಸಿದ ದೆಹಲಿ ನಗರದ ಶಾಸಕರ ಪರಿಷ್ಕೃತ ವೇತನವನ್ನು ದೆಹಲಿ ಸರ್ಕಾರವು ಸ್ವೀಕರಿಸಿದ್ದು, ಇದರ ಅಡಿಯಲ್ಲಿ ವೇತನ ಮತ್ತು ಭತ್ಯೆ ಸೇರಿ ತಿಂಗಳಿಗೆ 90,000 ರೂಪಾಯಿಗಳನ್ನು ಶಾಸಕರು ಪಡೆಯಲಿದ್ದಾರೆ.

ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಅನುಸಾರವಾಗಿ ಶಾಸಕರ ವೇತನ ಹೆಚ್ಚಳಕ್ಕೆ ದೆಹಲಿ ಸಂಪುಟ ಸಭೆ ಮಂಗಳವಾರ ಅನುಮೋದನೆ ನೀಡಿದೆ ಎಂದು ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

“ಕೇಂದ್ರದ ಪ್ರಸ್ತಾವನೆಯಂತೆ ಶಾಸಕರ ವೇತನ ಹೆಚ್ಚಳಕ್ಕೆ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಕ್ಯಾಬಿನೆಟ್ ಅನುಮೋದನೆ ನೀಡಿದೆ. ದೆಹಲಿ ಶಾಸಕರು ಕೇವಲ 30,000 ಸಾವಿರ ಸಂಬಳ ಪಡೆಯುತ್ತಾರೆ.  ದೆಹಲಿಯ ಶಾಸಕರು ಭಾರತದಾದ್ಯಂತ ಕಡಿಮೆ ಸಂಬಳ ಪಡೆಯುವ ಶಾಸಕರಾಗಿ ಮುಂದುವರಿಯಲಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಳೆದ 10 ವರ್ಷಗಳಿಂದ ದೆಹಲಿ ಶಾಸಕರ ಸಂಬಳ ಮತ್ತು ಭತ್ಯೆಯನ್ನು ಹೆಚ್ಚಿಸಿರಲಿಲ್ಲ. ಶಾಸಕರ ಮೂಲ ಮಾಸಿಕ ವೇತನ 12,000 ರೂಪಾಯಿ, ಭತ್ಯೆಗಳು ಸೇರಿ 54,000 ಸಾವಿರ ರೂಪಾಯಿ ಪಡೆಯುತ್ತಿದ್ದರು. ಈಗ ಭತ್ಯೆ ಮತ್ತು ಸಂಬಳ ಸೇರಿ 90,000 ಸಾವಿರ ಪಡೆಯಲಿದ್ದಾರೆ.

ಇದನ್ನೂ ಓದಿ: ಪದ್ಮ ಪ್ರಶಸ್ತಿ: ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಶಿಫಾರಸ್ಸು ಮಾಡಲಿರುವ ದೆಹಲಿ ಸರ್ಕಾರ

 

“ದೆಹಲಿಯಲ್ಲಿ ಜೀವನ ವೆಚ್ಚ ಗಣನೀಯವಾಗಿ ಏರಿಕೆಯಾಗಿದ್ದರೂ, ಕೇಂದ್ರವು ವಿಧಿಸಿರುವ ನಿರ್ಬಂಧವು ದೆಹಲಿಯ ಶಾಸಕರನ್ನು ದೇಶದ ಅತ್ಯಂತ ಕಡಿಮೆ ಆದಾಯದ ಶಾಸಕರಲ್ಲಿ ಒಬ್ಬರನ್ನಾಗಿಸಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳ ಶಾಸಕರು ಸುಮಾರು 1.5 ಲಕ್ಷ ವೇತನ ಪಡೆಯುತ್ತಾರೆ. ಇದು  ದೆಹಲಿಯ ಶಾಸಕರು ಗಳಿಸುವ ಮೊತ್ತಕ್ಕಿಂತ 2 ಪಟ್ಟು ಹೆಚ್ಚು. 2011 ರಿಂದ ದೆಹಲಿಯ ಶಾಸಕರ ಸಂಬಳ ಏರಿಕೆಯಾಗಿಲ್ಲ. ದೆಹಲಿಯ ಶಾಸಕರು ಇತರ ರಾಜ್ಯಗಳ ಶಾಸಕರ ವೇತನ ಸರಿಸಮಾನವಾಗಿರಬೇಕು ಎಂದು ದೆಹಲಿ ಸರ್ಕಾರ MHA ಗೆ ಮನವಿ ಮಾಡಿತ್ತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಒಟ್ಟು 90,000 ರೂಪಾಯಿಗಳಲ್ಲಿ 30,000 ಮೂಲ ವೇತನ, 25,000 ಕ್ಷೇತ್ರ ಭತ್ಯೆ, 15,000 ಸೆಕ್ರೆಟರಿಯಟ್ ಭತ್ಯೆ, ದೂರವಾಣಿ ಮತ್ತು ಸಾರಿಗೆಗಾಗಿ ತಲಾ 10,000 ರೂಪಾಯಿಗಳನ್ನು ಒಳಗೊಂಡಿದೆ ಎಂದು ಸರ್ಕಾರ ತಿಳಿಸಿದೆ.

ಈ ಪ್ರಸ್ತಾವನೆಯು ಕಳೆದ ಐದು ವರ್ಷಗಳಿಂದ ಕೇಂದ್ರದ ಬಳಿಯಿತ್ತು. ಮೂಲ ವೇತನವನ್ನು 54,000 ರೂ.ಗೆ ಏರಿಸಲು ದೆಹಲಿ ಸರ್ಕಾರ ಕೋರಿತ್ತು. ಆದರೆ, ಒಕ್ಕೂಟ ಸರ್ಕಾರ ಮೂಲ ವೇತನವನ್ನು 30,000 ರೂ.ಗೆ ನಿರ್ಬಂಧಿಸಿದೆ ಎಂದು ದೆಹಲಿ ಸರ್ಕಾರವು ಸಂಪುಟ ಸಭೆಯ ನಂತರ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಡೇಟಾಖೋಲಿ; ಉತ್ತರದ ದೆಹಲಿಯ ಪ್ರಶ್ನಾರ್ಥಕ ರಾಜಪ್ರತಿನಿಧಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...