Homeಮುಖಪುಟಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ

ಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ

ದೆಹಲಿಯ ಸರ್ಕಾರಿ ಶಾಲೆಗಳನ್ನು ಇಡೀ ಪ್ರಪಂಚ ಮಟ್ಟದಲ್ಲಿ ಹೆಸರಾಗುವಂತೆ ಮಾಡಿದ ಅತಿಶಿ ಮರ್ಲೀನಾ ತಿಂಗಳಿಗೆ ಪಡೆಯುವ ಸಂಬಳ ಕೇವಲ 1 ರೂ ಅಂದರೆ ನೀವು ನಂಬಲೇಬೇಕು

- Advertisement -
- Advertisement -

ದೆಹಲಿಯ ಸರ್ಕಾರಿ ಶಾಲೆಗಳನ್ನು ಇಡೀ ಪ್ರಪಂಚ ಮಟ್ಟದಲ್ಲಿ ಹೆಸರಾಗುವಂತೆ ಮಾಡಿದ ಅತಿಶಿ ಮರ್ಲೀನಾ ತಿಂಗಳಿಗೆ ಪಡೆಯುವ ಸಂಬಳ ಕೇವಲ 1 ರೂ ಅಂದರೆ ನೀವು ನಂಬಲೇಬೇಕು. ದೆಹಲಿಯ ಸರ್ಕಾರಿ ಶಾಲೆಗಳ ಅತ್ಯುತ್ತಮ ಶಿಕ್ಷಣ ನೀಡುತ್ತಿವೆ. ದೆಹಲಿಯ ಮೊಹಲ್ಲಾ ಕ್ಲಿನಕ್ ಗಳು ಬಡಜನರ ಆರೋಗ್ಯ ಸುಧಾರಿಸಿವೆ. ಜೊತೆಗೆ ಹೈ ಕ್ಲಾಸ್ ಸರ್ಕಾರಿ ಹಾಸ್ಪಿಟಲ್ ಗಳು ತಲೆಎತ್ತಿವೆ. ಇದರ ಹಿಂದಿನ ರೂವಾರಿ ಅಲ್ಲಿನ ಆಪ್ ಸರ್ಕಾರ.

ದೆಹಲಿಯ ಸರ್ಕಾರಿ ಶಾಲೆ

ಆಂದ್ರದ ರಿಷಿ ವ್ಯಾಲಿ ಶಾಲೆಯಲ್ಲಿ ಇತಿಹಾಸ ಪಾಠ ಮಾಡುತ್ತಿದ್ದ ಅತಿಶಿ ಶಾಲೆಯ ಕೆಲಸ ಬಿಟ್ಟು ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ಸಾವಯವ ಕೃಷಿಯಲ್ಲಿ ತೊಡಗಿದ್ದರು. 2011ರಲ್ಲಿ ಭ್ರಷ್ಟಾಚಾರ ವಿರೋಧಿ ಚಳುವಳಿಯಿಂದ ಆಕರ್ಷಿತರಾಗಿ ಅರವಿಂದ ಕೇಜ್ರಿವಾಲ್ ತಂಡವನ್ನು ಸೇರಿದರು. ದೆಹಲಿಯಲ್ಲಿ AAP ಸರ್ಕಾರ ಬಂದಾಗ ಅದರ ನೀತಿ ನಿರೂಪಣಾ ತಂಡದಲ್ಲಿ ಅತಿಶಿ ಇದ್ದರು.

ದೆಹಲಿಯ ಸರ್ಕಾರಿ ಹಾಸ್ಪಿಟಲ್

ಅಧಿಕಾರದ ವಿಕೇಂದ್ರಿಕರಣಕ್ಕಾಗಿ ಅವರು ರೂಪಿಸಿದ ಮೊಹಲ್ಲಾಸಭಾ ಪರಿಕಲ್ಪನೆಯನ್ನು ಲೆಫ್ಟಿನೆಂಟ್ ಗವರ್ನರ್ ತಿರಸ್ಕರಿಸಿದರೂ ಅತಿಶಿ ಗಮನಸೆಳೆದರು. ಶಿಕ್ಷಣ ಸಚಿವ ಸಿಸೋಡಿಯಾರ ಶೈಕ್ಷಣಿಕ ಸಲಹೆಗಾರಳಾಗಿ ಅತಿಶಿ ಅದ್ಭುತವನ್ನೇ ಸಾಧಿಸಿದರು. ದೆಹಲಿಯ ಸರ್ಕಾರಿ ಶಾಲೆಗಳಿಂದು ಗುಣಮಟ್ಟದ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಂಸ್ಥೆಗಳಾಗಿ ರೂಪುಗೊಂಡಿದ್ದರೆ ಅದರ ಶ್ರೇಯ ಅತಿಶಿಯವರಿಗೆ ಸಲ್ಲಬೇಕು ಎನ್ನುತ್ತಾರೆ ಮನಿಷ್ ಸಿಸೋಡಿಯಾ.

ಸರ್ಕಾರಿ ಶಾಲೆಯ ಸಭಾಂಗಣ

ಮರ್ಲೋನಾ ಎಂದರೆ ಮಾಕ್ರ್ಸ್ ಮತ್ತು ಲೆನಿನ್ ಎಂದರ್ಥ. ಎಡಪಂಥೀಯರಾದ ಇವರ ತಂದೆ ತಾಯಿ ಇಟ್ಟ ಹೆಸರು ಮಾಕ್ರ್ಸ್ ಮತ್ತು ಲೆನಿನ್ ಎರಡನ್ನೂ ಸೇರಿ ಮರ್ಲೀನಾ ಅಂತ. ಪೂರ್ವ ದೆಹಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡ ಆಮ್ ಆದ್ಮಿ ಪಕ್ಷದ ಅತಿಶಿ ಮರ್ಲೀನಾರವರು ತಮ್ಮ ಫೇಸ್ ಬುಕ್ ನಲ್ಲಿ ಅಲ್ಲಿನ ಅತ್ಯುತ್ತಮ ಸರ್ಕಾರಿ ಶಾಲೆಗಳ, ಲೈಬ್ರರಿಗಳ, ಸಭಾಂಗಣ, ಊಟದ ಆವರಣ, ಸೆಮಿನಾರ್ ಹಾಲ್ ಮುಂತಾದವುಗಳ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದಾರೆ.

ಸೋಲಿನ ನಂತರದ ಸಭೆಯಲ್ಲಿ ಅತಿಶಿ

ಜೊತೆಗೆ ಹೈ ಕ್ಲಾಸ್ ಹಾಸ್ಪಿಟಲ್ ಗಳ ಚಿತ್ರ, ಇನ್ನು ನಿರ್ಮಾಣ ಹಂತದಲ್ಲಿರುವ ಹಾಸ್ಪಿಟಲ್ ಗಳ ಚಿತ್ರಗಳನ್ನು ಹರಿಬಿಟ್ಟಿದ್ದಾರೆ. ಇದನ್ನು ನೋಡಿದರೆ ನಿಜಕ್ಕೂ ಅವರ ಮೇಲೆ ಅಭಿಮಾನ ಮೂಡುತ್ತದೆ. ಆ ಚಿತ್ರಗಳನ್ನು ನೀವೂ ನೋಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...